ಜೂಜಾಟಕ್ಕೆ ಪೊಲೀಸರದ್ದೇ ಸಾಥ್‌?

|ಹುಬ್ಬಳ್ಳಿಯಹೋಟೆಲ್ವೊಂದರ ಕೋಣೆಯೇ ಅಡ್ಡಾ |ಎಲೆ ತಟ್ಟುವ ಕೆಲಸದಲ್ಲಿ ಕೆಲ ಸಿಬ್ಬಂದಿ ಭಾಗಿ

Team Udayavani, May 27, 2019, 2:07 PM IST

hubali-tdy-1..

ಸಾಂದರ್ಭಿಕ ಚಿತ್ರ.

ಹುಬ್ಬಳ್ಳಿ: ನಗರದ ಹೋಟೆಲ್ವೊಂದರಲ್ಲಿ ಇಸ್ಪೀಟ್ ಜೂಜಾಟ ಕೇಂದ್ರವೊಂದು ನಡೆಯುತ್ತಿದ್ದು, ವಿಚಿತ್ರವೆಂದರೆ ಇದನ್ನು ತಡೆಯಬೇಕಾದ ಪೊಲೀಸ್‌ ಸಿಬ್ಬಂದಿಯೇ ಇದರ ಸಕ್ರಿಯ ಸದಸ್ಯರಾಗಿದ್ದಾರೆ!

ನಗರದ ಸಿದ್ದಪ್ಪ ಕಂಬಳಿ ಮಾರ್ಗದಲ್ಲಿನ ಹೋಟೆಲ್ವೊಂದರ ಕೋಣೆಯನ್ನೇ ತಮ್ಮ ಜೂಜಾಟದ ಅಡ್ಡೆ ಮಾಡಿಕೊಂಡಿದ್ದು, ಅನೇಕ ಪೊಲೀಸ್‌ ಸಿಬ್ಬಂದಿ ಪ್ರತಿದಿನ ಬೆಳಗ್ಗೆಯಿಂದಲೇ ಈ ಕೇಂದ್ರದಲ್ಲಿ ಎಲೆ ತಟ್ಟುವ ಕಾರ್ಯದಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಈ ಇಸ್ಪೀಟ್ ಜೂಜಾಟಕ್ಕೆ ಸಿಲುಕಿದ ಪೊಲೀಸ್‌ ಸಿಬ್ಬಂದಿಯಲ್ಲಿ ಅನೇಕರು ಹಣ ಕಳೆದುಕೊಂಡಿದ್ದು, ಇದರಿಂದ ಅವರ ಕುಟುಂಬ ತೀವ್ರ ಸಂಕಷ್ಟ ಪಡುವಂತಾಗಿದೆ.

ಪೊಲೀಸ್‌ ಇಲಾಖೆಯ ಎಸ್‌ಬಿ (ವಿಶೇಷ ವಿಭಾಗ) ಡ್ಯೂಟಿ ಮಾಡುವವರು, ರಾತ್ರಿ ಗಸ್ತು ತಿರುಗುವವರು, ಕ್ರೈಂ ಸಿಬ್ಬಂದಿ, ವಾಹನಗಳ ಚಾಲಕರು ಜೂಜಾಟದಲ್ಲಿ ತೊಡಗುತ್ತಿದ್ದಾರೆಂದು ಹೇಳಲಾಗುತ್ತಿದೆ. ನಗರದಲ್ಲಿ ನಡೆಯುವ ಮಟ್ಕಾ, ಜೂಜಾಟದಂತಹ ಅಕ್ರಮ ದಂಧೆಗಳ ಬಗ್ಗೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡುವವರೇ ನಾವು. ನಮ್ಮ ಮಾಹಿತಿ ಅವರಿಗೆ ಹೇಗೆ ಹೋಗಲಿದೆ ಎಂಬ ಮನೋಭಾವ ಇವರದ್ದಾಗಿದೆ ಎನ್ನಲಾಗಿದೆ.

ಜೂಜಾಟಕ್ಕೆ ಸಿಲುಕಿ ಹಣ ಕಳೆದುಕೊಂಡ ಅನೇಕರು ಕುಟುಂಬ ನಿರ್ವಹಣೆ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬ್ಯಾಂಕ್‌ಗಳು ಸೇರಿದಂತೆ ಖಾಸಗಿಯವರಿಂದ ಹೆಚ್ಚಿನ ಬಡ್ಡಿಗೆ ಸಾಲ ಪಡೆದು ಸಾಲ-ಬಡ್ಡಿ ಪಾವತಿಸಲಾಗದೆ ಪರದಾಡುತ್ತಿದ್ದಾರೆ. ಇಸ್ಪೀಟ್, ಜೂಜಾಟ ಇನ್ನಿತರ ಅಕ್ರಮ ದಂಧೆಗಳಲ್ಲಿ ತೊಡಗಿದವರನ್ನು ವಶಕ್ಕೆ ಪಡೆಯುವ ಇಲ್ಲವೆ ಬಂಧಿಸುವ ಕಾರ್ಯ ಮಾಡುವ ಪೊಲೀಸರೇ ಈ ಕಾರ್ಯಗಳಲ್ಲಿ ತೊಡಗಿದ್ದು, ಕ್ರಮ ಕೈಗೊಳ್ಳುವವರು ಯಾರು ಎಂಬುದು ಸಾರ್ವಜನಿಕರ ಪ್ರಶ್ನೆ. ಅಧಿಕಾರಿಗಳು ಇದನ್ನು ತಡೆಗಟ್ಟದಿದ್ದರೆ ಇಲಾಖೆಯ ಮರ್ಯಾದೆ ಹಾಳಾಗುವುದರಲ್ಲಿ ಸಂಶಯವಿಲ್ಲವೆಂದು ಹೆಸರು ಹೇಳಲಿಚ್ಚಿಸದ ಓರ್ವರು ‘ಉದಯವಾಣಿ’ಗೆ ತಿಳಿಸಿದ್ದಾರೆ.

ಉತ್ತರ ಸಿಗದ ಯಕ್ಷಪ್ರಶ್ನೆ:

ನಗರದಲ್ಲಿ ಗೂಂಡಾಗಳು, ರೌಡಿಗಳು, ಕೊಲೆ-ಸುಲಿಗೆಕೋರರು, ಮಟ್ಕಾ-ಜೂಜುಕೋರರ ಮೇಲೆ ಪೊಲೀಸ್‌ ಇಲಾಖೆಯ ಹಿರಿಯ ಅಧಿಕಾರಿಗಳು ದಿಟ್ಟ ಕ್ರಮ ಕೈಗೊಂಡು ಸಾರ್ವಜನಿಕರಿಂದ ಭೇಷ್‌ ಎನಿಸಿಕೊಂಡಿದ್ದಾರೆ. ಆದರೆ ಇಲಾಖೆಯಲ್ಲಿನ ಕೆಲ ಸಿಬ್ಬಂದಿಯೇ ಇಂತಹ ಕೆಟ್ಟ ಅನಿಷ್ಟಗಳಲ್ಲಿ ಭಾಗಿಯಾಗುತ್ತಿದ್ದರೂ ಹಿರಿಯ ಅಧಿಕಾರಿಗಳು ಅವರ ಮೇಲೆ ಏಕೆ ಸೂಕ್ತ ಕ್ರಮ ಕೈಗೊಳ್ಳಲು ಮುಂದಾಗುತ್ತಿಲ್ಲ. ಇದನ್ನು ನಿಯಂತ್ರಿಸುತ್ತಿಲ್ಲವೆಂಬ ಮಾತುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ.
ಬೆಕ್ಕಿಗೆ ಗಂಟೆ ಕಟ್ಟುವವರ್ಯಾರು?:

ಅವಳಿ ನಗರದ ವಿವಿಧ ಠಾಣೆಗಳಲ್ಲಿ ಕ್ರೈಂ, ಎಸ್‌ಬಿ ವಿಭಾಗದಲ್ಲಿ ಹಲವು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಕೆಲ ಪೊಲೀಸರೇ ನಗರದ ಕೆಲ ಆಯಕಟ್ಟಿನ ಸ್ಥಳಗಳಲ್ಲಿ ಕ್ಲಬ್‌ಗಳನ್ನು ನಡೆಸುತ್ತಿದ್ದಾರೆ. ಹೀಗಾಗಿ ನಗರಕ್ಕೆ ಯಾವುದೇ ಅಧಿಕಾರಿಗಳು ಬಂದರೂ ಇವರ ಕ್ಲಬ್‌ಗಳಿಗೆ ಮಾತ್ರ ಯಾವುದೇ ಭಯವಿಲ್ಲ. ಇವು ನಿರಂತರವಾಗಿ, ನಿರ್ಭಿಡೆಯಿಂದ ನಡೆಯುತ್ತವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಸಮಾಜದಲ್ಲಿನ ಅನಿಷ್ಟಗಳನ್ನು ತೊಡೆದು ಹಾಕುವವರೇ ಇಂತಹುದರಲ್ಲಿ ಭಾಗಿಯಾಗಿರುವಾಗ ‘ಬೆಕ್ಕಿಗೆ ಗಂಟೆ ಕಟ್ಟುವವರ್ಯಾರು’ ಎಂಬ ಮಾತುಗಳು ಸಾರ್ವಜನಿಕರಿಂದ ಕೇಳಿಬರುತ್ತಿವೆ.
ನಗರದ ಲಾಡ್ಜ್ವೊಂದರಲ್ಲಿ ಪೊಲೀಸ್‌ ಸಿಬ್ಬಂದಿಯೇ ಜೂಜಾಟದಲ್ಲಿ ತೊಡಗಿಕೊಂಡಿರುವ ಬಗ್ಗೆ ಯಾವುದೇ ಮಾಹಿತಿ ಇಲ್ಲ. ಒಂದು ವೇಳೆ ಭಾಗಿಯಾಗಿದ್ದು ಕಂಡು ಬಂದರೆ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು. -ಎಂ.ಎನ್‌. ನಾಗರಾಜ, ಹು-ಧಾ ಪೊಲೀಸ್‌ ಆಯುಕ್ತ
•ಶಿವಶಂಕರ ಕಂಠಿ

ಟಾಪ್ ನ್ಯೂಸ್

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Neha Hiremath Case ಮೊದಲ ದಿನವೇ ತನಿಖೆ ದಾರಿ ತಪ್ಪಿದೆ: ಬೊಮ್ಮಾಯಿ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

Basavaraj Bommai; ನನ್ನ ಅವಧಿಯಲ್ಲಿ ಮುಸ್ಲಿಂ ಮೀಸಲು ಅಫಿದವಿತ್‌ ಸಲ್ಲಿಸಿಲ್ಲ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್‌ ನಲ್ಲಿ ಪತ್ತೆ!

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.