ಪುರಸಭೆ ಅಭಿವೃದ್ಧಿ ರೂಪರೇಷೆ

•ಅಭ್ಯರ್ಥಿ ದೃಷ್ಟಿಕೋನದಲ್ಲಿ ಅಭಿವೃದ್ಧಿ ಮುನ್ನೋಟ•ವ್ಯಕ್ತಿ ನೋಡಿ ಮತ ಹಾಕುವ ಅನಿವಾರ್ಯತೆ

Team Udayavani, May 27, 2019, 3:07 PM IST

gadaga-tdy-3..

ಮುಂಡರಗಿ ಪುರಸಭೆ ಕಾರ್ಯಾಲಯ.

ಮುಂಡರಗಿ: ಪುರಸಭೆ ಚುನಾವಣೆಗಳು ಮೇ 29ರಂದು ನಡೆಯಲಿದ್ದು, ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌, ಪಕ್ಷೇತರರು ಸೇರಿದಂತೆ 72 ಅಭ್ಯರ್ಥಿಗಳು ಸ್ಪರ್ಧಾ ಕಣದಲ್ಲಿದ್ದಾರೆ. 72 ಅಭ್ಯರ್ಥಿಗಳಲ್ಲಿ 23 ಅಭ್ಯರ್ಥಿಗಳು ಆಯ್ಕೆಯಾಗಿ ಪುರಸಭೆಯಲ್ಲಿ ಐದು ವರ್ಷಗಳವರೆಗೆ ಆಡಳಿತ ನಡೆಸಬೇಕಿದೆ.

ಪುರಸಭೆ 23 ವಾರ್ಡುಗಳಲ್ಲಿ 9836 ಪುರುಷರು, 10,067 ಮಹಿಳಾ ಮತದಾರರು ಸೇರಿದಂತೆ ಒಟ್ಟಾರೆಯಾಗಿ 19,903 ಮತದಾರರು ಇದ್ದಾರೆ. ಪುರಸಭೆಯ 23 ವಾರ್ಡುಗಳಲ್ಲಿ ಮುಂದಿನ ಐದು ವರ್ಷಗಳಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಆಡಳಿತ ನಡೆಸಲಿರುವ ಜನಪ್ರತಿನಿಧಿಗಳ ದೃಷ್ಟಿಕೋನದಲ್ಲಿ ಮುನ್ನೋಟವು ಏನಾಗಿರಬೇಕು ಎನ್ನುವುದು ಚರ್ಚಿಸಬೇಕಾಗಿರುವ ಅನಿವಾರ್ಯವಾದ ವಿಷಯವಾಗಿದೆ.

ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌, ಬಿಎಸ್‌ಪಿ, ಪಕ್ಷೇತರ ಅಭ್ಯರ್ಥಿಗಳು ತಮ್ಮ ಆಯ್ಕೆಗಾಗಿ ಚುನಾವಣೆಯ ಕರಪತ್ರಗಳಲ್ಲಿ ವಾರ್ಡಿನ ಸರ್ವತೋಮುಖ ಅಭಿವೃದ್ಧಿ ಮತ್ತು ಮತದಾರರ ಸೇವೆ ಮಾಡುವ ಕಳಕಳಿಯ ಮನವಿಯನ್ನು ಮಾಡಿಕೊಂಡಿದ್ದಾರೆ. ಸರ್ವತೋಮುಖ ಅಭಿವೃದ್ಧಿ ಎಂಬ ಒಂದೇ ವಾಕ್ಯವು ಮುಂದಿನ ಐದು ವರ್ಷಗಳಲ್ಲಿ ವಾರ್ಡಿನಲ್ಲಿ ಆಗಬೇಕಿರುವ ಕೆಲಸ-ಕಾರ್ಯಗಳು, ಮಾಡಬೇಕಿರುವ ಕಾಮಗಾರಿಗಳು, ಮೂಲಭೂತ ಸೌಲಭ್ಯಗಳ ಕುರಿತಾಗಿ ಸ್ಪಷ್ಟವಾದ ಮಾಹಿತಿಯನ್ನು ನೀಡದೇ ಅಪೂರ್ಣವಾಗಿರುವುದು ಖೇದಕರ ಸಂಗತಿಯಾಗಿದೆ.

ಈ ಹಿನ್ನೆಲೆಯಲ್ಲಿ ಪುರಸಭೆಯ 23 ವಾರ್ಡುಗಳಲ್ಲಿ ಸಮಗ್ರವಾದ ಅಭಿವೃದ್ಧಿಯ ಮುನ್ನೋಟವನ್ನು ನೀಡುವ ಕುರಿತು ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌, ಬಿಎಸ್‌ಪಿ ಪಕ್ಷಗಳು ಕನಿಷ್ಠ ಒಂದು ಪ್ರಣಾಳಿಕೆಯನ್ನು ಬಿಡುಗಡೆ ಮಾಡಬೇಕಾಗಿತ್ತು. ಆದರೇ ಮುಂದಿನ ಐದು ವರ್ಷಗಳ ಪುರಸಭೆಯ ಸಮಗ್ರವಾದ ಅಭಿವೃದ್ಧಿ ಎಂಬುದು ಮುಖ್ಯ ವಿಷಯವಾಗದೇ, ಚುನಾವಣೆಯು ಬರೀ ವ್ಯಕ್ತಿ ಮತ್ತು ಪಕ್ಷದ ಪ್ರತಿಷ್ಠೆಯ ಮಟ್ಟಕ್ಕೆ ಬಂದು ನಿಂತಿರುವದು ಗೋಚರವಾಗುತ್ತದೆ.

ಪುರಸಭೆಯ 23 ವಾರ್ಡುಗಳಲ್ಲಿ ಕುಡಿಯುವ ನೀರಿಗೆ ಆದ್ಯತೆ, ಸ್ವಚ್ಛತೆ ಕಡೆಗೆ ಗಮನ, ರಸ್ತೆ, ಚರಂಡಿಗಳ ನಿರ್ಮಾಣ, ಬೀದಿ ದೀಪಗಳ ನಿರ್ವಹಣೆ, ಅಂತರಜಲ ಮಟ್ಟವನ್ನು ಹೆಚ್ಚಿಸಲು ಮಳೆ ಕೊಯ್ಲು ಯೋಜನೆ ಅನುಷ್ಠಾನ, ಪುರಸಭೆ ಆಡಳಿತವು ಪಾರದರ್ಶಕ ಆಗಿರಲು ಕಾಗದ ರಹಿತ ಆಡಳಿತ ಜಾರಿಗೆ, ಪುರಸಭೆಯ ಆದಾಯ ಹೆಚ್ಚಿಸಲು ಆದಾಯದ ಮೂಲಗಳ ಕ್ರೊಡೀಕರಣ, ಸ್ವಚ್ಛ, ನಿರ್ಮಲವಾದ ಪರಿಸರ ನಿರ್ಮಿಸಲು ಗಿಡಗಳ ನೆಡುವ, ಉದ್ಯಾನವನಗಳ ನಿರ್ವಹಣೆ ಮಾಡುವ, ಕಸ ವಿಲೇವಾರಿಯಲ್ಲಿ ನಾಗರಿಕರ ಪಾತ್ರ, ಸಾರ್ವಜನಿಕ ಮಹಿಳಾ ಶೌಚಾಲಯಗಳು, ವೈಯಕ್ತಿಕ ಶೌಚಾಲಯಗಳು, ಕನಕರಾಯನ ಗುಡ್ಡದ ಮೇಲೆ ಪ್ರವಾಸಿತಾಣ ಮಾಡಲು ಉದ್ಯಾನವನ ನಿರ್ಮಾಣ, ಗುಡ್ಡದ ಮೇಲಿರುವ ಐತಿಹಾಸಿಕ ಕೋಟೆಯನ್ನು ಉಳಿಸಿಕೊಳ್ಳಲು ಮಾಡಬೇಕಿರುವ ಕಾಮಗಾರಿ, ಬಡವರಿಗೆ ಹಂಚಬೇಕಿರುವ ಆಶ್ರಯ ನಿವೇಶನಗಳು, ಸ್ಮಶಾನಗಳಲ್ಲಿ ಮಾಡಬೇಕಿರುವ ಅಭಿವೃದ್ಧಿ ಮತ್ತು ಪರಿಸರಕ್ಕಾಗಿ ಗಿಡಗಳು ಹಚ್ಚಿ ನಿರ್ಮಲವಾದ ವಾತಾವರಣ ನಿರ್ಮಿಸುವ ಈ ಎಲ್ಲ ಸಂಗತಿಗಳು ಚುನಾವಣೆಯಲ್ಲಿ ಚರ್ಚೆಯ ಮುನ್ನೆಲೆಗೆ ಬರಬೇಕಿದ್ದ ವಿಷಯಗಳು ಆಗಿದ್ದವು.

ಆದರೇ ಮುಖ್ಯವಾಗಿ ಚರ್ಚಿಸಬೇಕಿದ್ದ ಪಟ್ಟಣದ ಸಮಗ್ರವಾದ ಅಭಿವೃದ್ಧಿಯು ತೆರೆಮರೆಗೆ ಸರಿದು, ವ್ಯಕ್ತಿಗಳ ಮುಖ ನೋಡಿ ಮತದಾನ ಮಾಡುವ ಅನಿವಾರ್ಯತೆಯು ಮತದಾರರಿಗೆ ಬಂದಿದೆ. ಮತದಾರರು ಕೂಡಾ ಸಮಗ್ರವಾದ ಅಭಿವೃದ್ಧಿಗಾಗಿ ಸಮಾಜದಲ್ಲಿರುವ ವೈದ್ಯರು, ಇಂಜನಿಯರ್‌ಗಳು, ಶಿಕ್ಷಕರು, ಸಮಾಜ ಸೇವಕರು, ಪತ್ರಕರ್ತರನ್ನು ಒಳಗೊಂಡಿರುವ ಸಮಿತಿಯ ಮೂಲಕ ಹಕ್ಕೊತ್ತಾಯಗಳು ಮಂಡಿಸಬೇಕಾಗಿತ್ತು.

•ಹು.ಬಾ.ವಡ್ಡಟ್ಟಿ

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.