ಮಳೆ ಹಾನಿ ಎದುರಿಸಲು ಸರ್ವ ಸನ್ನದ್ಧ; ಕಾಮಗಾರಿ ಚುರುಕು
Team Udayavani, May 27, 2019, 3:07 PM IST
ಮೂಲ್ಕಿ: ಇಲ್ಲಿನ ನ.ಪಂ.ವ್ಯಾಪ್ತಿಯ ನಾಲ್ಕು ಗ್ರಾಮಗಳ ವ್ಯಾಪ್ತಿಯಲ್ಲಿ ಮಳೆಗಾಲದಲ್ಲಿ ಆಗಬಹುದಾದ ಅನಾಹುತಗಳನ್ನು ಎದುರಿಸುವಲ್ಲಿ ಸಂಪೂರ್ಣವಾಗಿ ತಯಾರಾಗಿದ್ದು, ತರಾತುರಿಯಲ್ಲಿ ಕಾಮಗಾರಿ, ಸಭೆಗಳನ್ನು ನಡೆಸಲಾಗುತ್ತಿದೆ.
ಮೂಲ್ಕಿಯ ನಾಲ್ಕು ಗ್ರಾಮಗಳ 16 ಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆಯ 80 ಕಿ.ಮೀ. ಉದ್ದದ ಪೈಪ್ಲೈನ್ ಕಾಮಗಾರಿಯೂ ಆಮೆ ಗತಿಯಲ್ಲಿ ನಡೆಯುತ್ತಿದೆ. ಕಾಮಗಾರಿಯ ಕೆಲಸವೂ ಚುರುಕು ಕಾಣದೇ ಇರುವುದಕ್ಕೆ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.
ಮೂಲ್ಕಿ ನ. ಪಂ. ಕಳೆದ ವರ್ಷದ ಮಳೆಗಾಲದ ಕೆಲವು ನಿರ್ವಹಣೆಯ ವ್ಯತ್ಯಯಗಳನ್ನು ಕಂಡು ಮುಂಜಾಗ್ರತೆಯ ಕ್ರಮವಾಗಿ ಎಪ್ರಿಲ್ ತಿಂಗಳಿನಿಂದಲೇ ನೀರು ಹರಿದು ಆತಂಕದ ಪರಿಸ್ಥಿತಿ ಉಂಟು ಮಾಡುವ ಎಲ್ಲ ಚರಂಡಿಗಳ ಹೂಳೆತ್ತುವ ಕೆಲಸ ಆರಂಭಿಸಿ ರಸ್ತೆಗಳನ್ನು ಸುಸ್ಥಿರಗೊಳಿಸಲಾಗುತ್ತಿದೆ.
ಚರಂಡಿ ಕಾಮಗಾರಿಗೆ ಅಗೆದ ಹೂಳಿನ ಮಣ್ಣನ್ನು ರಸ್ತೆ ಬದಿಯಲ್ಲಿ ಹಾಕುತ್ತಿದ್ದು, ಇದನ್ನು ಸುವ್ಯವಸ್ಥಿತವಾಗಿ ಮುಚ್ಚಲು ತಿಂಗಳುಗಟ್ಟಲೇ ತೆಗೆದುಕೊಳ್ಳಲಾಗುತ್ತಿದೆ. ಈ ಬಗ್ಗೆ ನ. ಪಂ.ಗೆ ಸಾರ್ವಜನಿಕರ ದೂರುಗಳು ಕೇಳಿ ಬಂದಿವೆ. ರಸ್ತೆ ಬದಿಯಿರುವ ಹೂಳನ್ನು ಮುಚ್ಚದೇ ಹೋದರೆ ಪರಿಣಾಮ ಎದುರಿಸಬೇಕಾಗುತ್ತದೆ ಎಂಬುದು ಸಾರ್ವಜನಿಕರ ವಾದ.
ನ. ಪಂ. ವ್ಯಾಪ್ತಿಯಲ್ಲಿ ಸಾಧಾರಣ 75 ಕಿ.ಮೀ. ನಷ್ಟು ಉದ್ದಕ್ಕೆ ಇರುವ ಚರಂಡಿಗಳಲ್ಲಿ ಒಟ್ಟು 26 ಕಿ.ಮೀ. ಚರಂಡಿಗಳು ಮಳೆಗಾಲದ ಪರಿಸ್ಥಿತಿಯನ್ನು ಅಭದ್ರಗೊಳಿಸುವಂತದ್ದು. ಅದಕ್ಕಾಗಿ ಈಗಾಗಲೇ 18 ಕಿ.ಮೀ. ಚರಂಡಿಗಳ ಹೂಳೆತ್ತುವ ಕೆಲಸ ಮುಗಿದಿದೆ.
– ಮಾಣಿಕ್ಯ ಎಂ., ವಿಶೇಷ ತಹಶಿಲ್ದಾರರು, ನಾಡ ಕಚೇರಿ
ಸರ್ವೋತ್ತಮ ಅಂಚನ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
U. T. Khader ಮಂಗಳೂರಿನಿಂದ ಹಜ್ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ
MUST WATCH
ಹೊಸ ಸೇರ್ಪಡೆ
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ