ಇದು 153 ಪುಟಗಳ ವಿವಾಹ ಆಮಂತ್ರಣ ಪತ್ರಿಕೆ!

ವಿವಾಹ ಕರೆಯೋಲೆಯಲ್ಲಿದೆ ಉದ್ಯೋಗ ಮಾಹಿತಿ

Team Udayavani, May 27, 2019, 4:43 PM IST

27-May-35

ಬೃಹತ್‌ ವಿವಾಹ ಆಮಂತ್ರಣ ಪತ್ರಿಕೆ.

ಹರಿಯಬ್ಬೆ ಹೆಂಜಾರಪ್ಪ
ಚಿತ್ರದುರ್ಗ:
ಇಲ್ಲೊಬ್ಬರು ಬರೋಬ್ಬರಿ 153 ಪುಟಗಳ ವಿವಾಹ ಆಮಂತ್ರಣ ಪತ್ರಿಕೆಯನ್ನು ಮುದ್ರಿಸುವ ಮೂಲಕ ಅಚ್ಚರಿಗೆ ಕಾರಣರಾಗಿದ್ದಾರೆ. ಇದು ಅಂತಿಂಥಾ ವಿವಾಹ ಕರೆಯೋಲೆ ಅಲ್ಲ. ಮದುವೆಗೆ ಬನ್ನಿ ಎಂಬುದರ ಜತೆಗೆ ಭಾರತೀಯ ಆಡಳಿತಾತ್ಮಕ ಸೇವೆ, ಕರ್ನಾಟಕ ಆಡಳಿತಾತ್ಮಕ ಸೇವೆ ಸೇರಿ 52 ರಾಜ್ಯ ಮತ್ತು ಕೇಂದ್ರ ಸರ್ಕಾರಿ ಇಲಾಖೆಗಳ ಉದ್ಯೋಗ ಮಾರ್ಗದರ್ಶಿ ಈ ಕರೆಯೋಲೆಯಲ್ಲಿದೆ.

ತಮ್ಮ ಪುತ್ರನ ವಿವಾಹದ ನೆಪದಲ್ಲಿ ಸಮಾಜಕ್ಕೇನಾದರೂ ಕೊಡುಗೆ ನೀಡಬೇಕೆಂಬ ಉದ್ದೇಶದಿಂದ ಹಿರಿಯೂರು ತಾಲೂಕಿನ ಬಬ್ಬೂರು ಗ್ರಾಮದ ಹಿರಿಯ ವಕೀಲ ಬಿ.ಎನ್‌.ತಿಪ್ಪೇಸ್ವಾಮಿ ಮತ್ತು ಪತ್ನಿ ಟಿ. ಸುರೇಖಾ 153 ಪುಟಗಳ ವಿವಾಹ ಆಮಂತ್ರಣ ಪತ್ರಿಕೆಯನ್ನು ಮುದ್ರಿಸಿದ್ದಾರೆ. ಈ ದಂಪತಿಯ ಮೊದಲ ಪುತ್ರ ಟಿ.ಸಂಜಯ್‌ ಅವರ ವಿವಾಹ ಜೂನ್‌ 8 ಮತ್ತು 9 ರಂದು ಮೈಸೂರಿನ ಆರ್‌. ಶಿವರಂಜನಿ ಜತೆ ನಡೆಯಲಿದೆ. ವರ ಸಂಜಯ್‌ ಹಾಗೂ ಅವರ ಸ್ನೇಹಿತ ಮಹೇಶ್‌ ಶ್ರಮದಿಂದ ಇಂತಹ ವಿಶಿಷ್ಟ ವಿವಾಹ ಆಮಂತ್ರಣ ಪತ್ರಿಕೆ ಸಿದ್ಧಗೊಂಡಿದೆ.

ಅಂಥದ್ದೇನಿದೆ ಆಮಂತ್ರಣ ಪತ್ರಿಕೆಯಲ್ಲಿ?: ಗಜಗಾತ್ರದ ವಿವಾಹ ಆಮಂತ್ರಣ ಪತ್ರಿಕೆಯ ಮುಖಪುಟ, ಹಿಂಬದಿ ಪುಟಗಳಲ್ಲಿ ಮದುವೆಯ ಕರೆಯೋಲೆ ಇದ್ದರೆ, ಕೊನೆಯ ಪುಟದಲ್ಲಿ ನಾಯಕನಹಟ್ಟಿಯ ಗುರು ತಿಪ್ಪೇರುದ್ರಸ್ವಾಮಿ ಫೋಟೋ ಹಾಗೂ ‘ಮಾಡಿದಷ್ಟು ನೀಡು ಭಿಕ್ಷೆ’ ಎನ್ನುವ ಘೋಷವಾಕ್ಯ ಇದೆ. ಇದರ ಹಿಂಬದಿ ಪುಟದಲ್ಲಿ ಕನ್ನಡದಲ್ಲಿ ವಿವಾಹ ನಡೆಯುವ ಸ್ಥಳ ಹಾಗೂ ಆಹ್ವಾನದ ವಿಷಯಗಳಿವೆ.

ಮುಖಪುಟದ ನಂತರದ ಎರಡು ಪುಟಗಳಲ್ಲಿ ತುಮಕೂರಿನ ಸಿದ್ಧಗಂಗಾ ಮಠದ ಸ್ವಾಮೀಜಿ, ಹಿರೇಹೊಸಳ್ಳಿ ವೇಮಹೇಮ ಸದ್ಗುರು ಪೀಠದ ವೇಮನಾನಂದ ಸ್ವಾಮೀಜಿ, ಚಿತ್ರದುರ್ಗ ವನಶ್ರೀ ಸಂಸ್ಥಾನ ಮಠದ ಬಸವಕುಮಾರ ಸ್ವಾಮೀಜಿಯವರಿಂದ ‘ಪರಿಣಯಕ್ಕೊಂದು ಪದಗಳ ತೋರಣ’ ಎನ್ನುವ ಸಂದೇಶ ಹಾಕಲಾಗಿದೆ.

ಇದರ ಮುಂದಿನ ಪುಟಗಳಲ್ಲೇ ಇದೆ ವಿಶೇಷ. ಸುಮಾರು 145 ಪುಟಗಳಲ್ಲಿ ಭಾರತೀಯ ಆಡಳಿತಾತ್ಮಕ ಸೇವೆ, ಕರ್ನಾಟಕ ಆಡಳಿತಾತ್ಮಕ ಸೇವೆ ಸೇರಿದಂತೆ 52 ರಾಜ್ಯ ಮತ್ತು ಕೇಂದ್ರ ಸರ್ಕಾರಿ ಇಲಾಖೆಗಳ ಉದ್ಯೋಗ ಮಾರ್ಗದರ್ಶಿ ನೀಡಲಾಗಿದೆ. ಪ್ರತಿ ಪುಟದಲ್ಲಿ ಒಂದೊಂದು ಇಲಾಖೆಯ ವೆಬ್‌ಸೈಟ್‌ನೊಂದಿಗೆ ಉದ್ಯೋಗದ ಸಮಗ್ರ ಮಾಹಿತಿ ಒದಗಿಸಲಾಗಿದೆ. ಬಹುಕಾಲ ಬಾಳಿಕೆ ಬರುವಂತ ಗ್ಲೇಜ್ಡ್ ಪೇಪರ್‌ ಬಳಸಿ ಮುದ್ರಣ ಮಾಡಲಾಗಿದೆ. ಹಾಗಾಗಿ ಇದು ಪ್ರತಿಯೊಬ್ಬರೂ ಸಂಗ್ರಹಿಸಿಟ್ಟುಕೊಳ್ಳುವಂತಹ ಉದ್ಯೋಗ ಮಾಹಿತಿ ಪುಸ್ತಕ. ಸುಮಾರು ಎರಡು ಸಾವಿರ ವಿವಾಹ ಆಮಂತ್ರಣ ಪತ್ರಿಕೆ ಮುದ್ರಿಸಿ ಹಂಚಿಕೆ ಮಾಡುತ್ತಿದ್ದಾರೆ. ಇದಕ್ಕಾಗಿ 70 ಸಾವಿರ ರೂ.ಖರ್ಚು ಮಾಡಲಾಗಿದೆ. ನಿರುದ್ಯೋಗಿಗಳು ತಮಗೊಂದು ಇಂತಹ ಆಮಂತ್ರಣ ಪತ್ರಿಕೆ ಬೇಕೆಂದು ಬೇಡಿಕೆ ಇಡುತ್ತಿರುವುದು ವಿಶೇಷ.

ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಯಾವ ಯಾವ ಇಲಾಖೆಗಳಿವೆ, ಖಾಲಿ ಹುದ್ದೆಗಳ ಮಾಹಿತಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಕೇಳಬಹುದಾದ ಪ್ರಶ್ನೆಗಳು, ಪರೀಕ್ಷೆಗಳನ್ನು ಹೇಗೆ ಆತ್ಮವಿಶ್ವಾಸದಿಂದ ಎದುರಿಸಬೇಕೆಂಬ ಸಂಪೂರ್ಣ ಮಾಹಿತಿ ಇದೆ.

ಮದುವೆ ನೆಪದಲ್ಲಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂಬ ಉದ್ದೇಶವಿತ್ತು. ಈ ವಿಷಯವನ್ನು ಸ್ನೇಹಿತ ಮಹೇಶ್‌ ಅವರಲ್ಲಿ ಪ್ರಸ್ತಾಪಿಸಿದೆ. ನಿರುದ್ಯೋಗಿಗಳಿಗೆ ಸಮಗ್ರವಾದ ಉದ್ಯೋಗ ಮಾಹಿತಿ ದೊರೆಯಬೇಕೆಂದು ತಿಳಿಸಿದಾಗ ಅವರು ಮತ್ತಷ್ಟು ಉತ್ಸಾಹದಿಂದ ನಿರುದ್ಯೋಗಿಗಳಿಗೆ ಜೀವನ ಪರ್ಯಂತ ಉಪಯೋಗಕ್ಕೆ ಬರುವಂತಹ ಮಾಹಿತಿಯನ್ನು ಹೆಕ್ಕಿ ತೆಗೆದು ಸುಂದರ ಪುಸ್ತಕ ಹೊರಬರಲು ಶ್ರಮಿಸಿದ್ದಾರೆ. ಮದುವೆ ಆಮಂತ್ರಣ ಪತ್ರಿಕೆಯನ್ನು ಸ್ನೇಹಿತರು, ಬಂಧುಗಳಿಗೆ ಹಂಚಿಕೆ ಮಾಡಲಾಗಿದ್ದು, ನಿರುದ್ಯೋಗಿಗಳು ತಮಗೂ ನೀಡುವಂತೆ ಕೇಳಿಕೊಳ್ಳುತ್ತಿದ್ದಾರೆ. ಹಾಗಾಗಿ ಅವರಿಗೂ ನೀಡುತ್ತಿದ್ದೇವೆ.
ಟಿ. ಸಂಜಯ್‌ ಬಬ್ಬೂರು.

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.