ಮಲ್ಲಾರು: ಸೇತುವೆಗಳ ತಳಭಾಗದಲ್ಲಿ ತ್ಯಾಜ್ಯ ಸಂಗ್ರಹ


Team Udayavani, May 28, 2019, 6:10 AM IST

mallar-bridge

ಕಾಪು : ನಗರ ಸ್ವತ್ಛತೆಗೆ ಹೆಚ್ಚಿನ ಒತ್ತು ನೀಡುತ್ತಾ ಸ್ವತ್ಛ ಕಾಪು – ಸುಂದರ ಕಾಪು ಎಂಬ ಘೋಷಣೆಯೊಂದಿಗೆ ಪೌರಾಡಳಿತ ಸಂಸ್ಥೆಗಳ ಪೈಕಿ ರಾಜ್ಯಕ್ಕೇ ಮಾದರಿಯಾಗುವ ರೀತಿಯಲ್ಲಿ ಮುನ್ನಡೆಯುತ್ತಿರುವ ಕಾಪು ಪುರಸಭೆಗೆ ಮಲ್ಲಾರು ಗ್ರಾಮದಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ವಿಲೇವಾರಿಯೇ ಸವಾಲಾಗಿ ಬಿಟ್ಟಿರುವ‌ಂತೆ ಕಾಣುತ್ತಿದೆ.

ಈ ಪುರಸಭೆ ವ್ಯಾಪ್ತಿಗೊಳಪಟ್ಟಿರುವ ಮಲ್ಲಾರು ಗ್ರಾಮದ 16 ಮತ್ತು 17ನೇ ವಾರ್ಡ್‌ನಲ್ಲಿರುವ ಅವಳಿ ಸೇತುವೆಗಳ ತಳಭಾಗವು ಕೊಳೆತ ತ್ಯಾಜ್ಯ ವಸ್ತುಗಳಿಂದಲೇ ತುಂಬಿ ಹೋಗಿದ್ದು, ಸುತ್ತಲೂ ಕೆಟ್ಟ ದುರ್ನಾತ ಬೀರುವ ಮೂಲಕ ಪುರಸಭೆಯ ಪ್ರಸಿದ್ಧಿಗೆ ಅಪಚಾರ ಉಂಟು ಮಾಡುವ ಪ್ರದೇಶಗಳಾಗಿ ಮಾರ್ಪಾಡಾಗುತ್ತಿವೆ.

ಕೊಂಬಗುಡ್ಡೆ ಸೇತುವೆ, ಕೋಟೆರೋಡ್‌ ಸೇತುವೆ
ಕಾಪು ಶ್ರೀ ಲಕೀÒ$¾ ಜನಾರ್ದನ ದೇವಸ್ಥಾನ ಬಳಿಯಲ್ಲಿ ಹಾದು ಹೋಗುವ ಕಾಪು – ಶಿರ್ವ ರಾಜ್ಯ ಹೆದ್ದಾರಿಯಲ್ಲಿರುವ ಬಡಗರಗುತ್ತು ವಾರ್ಡ್‌ ವ್ಯಾಪ್ತಿಗೆ ಬರುವ ಮಲ್ಲಾರು ಕೊಂಬಗುಡ್ಡೆ ಸೇತುವೆ ಮತ್ತು ಜನಾರ್ದನ ದೇವಸ್ಥಾನ ವಾರ್ಡ್‌ ವ್ಯಾಪ್ತಿಗೆ ಬರುವ ರಾಷ್ಟ್ರೀಯ ಹೆದ್ದಾರಿ 66ರಿಂದ ಕೊಪ್ಪಲಂಗಡಿ – ಕೋಟೆ ರೋಡ್‌ನ‌ ಸೇತುವೆಯ ಕೆಳಭಾಗದಲ್ಲಿ ಭರ್ಜರಿಯಾಗಿ ತ್ಯಾಜ್ಯ ಸಂಗ್ರಹಣೆಯಾಗುತ್ತಿದೆ.

ಡಂಪಿಂಗ್‌ ಯಾರ್ಡ್‌ನೂ° ಮೀರಿಸುವಂತಿದೆ
ಮಲ್ಲಾರು ಗ್ರಾಮದ ಎರಡು ಸೇತುವೆಗಳ ತಳಭಾಗದಲ್ಲಿ ಸಂಗ್ರಹವಾಗುತ್ತಿರುವ ಕೊಳೆತ ತ್ಯಾಜ್ಯದ ರಾಶಿಯನ್ನು ಗಮನಿಸಿದಾಗ ಇದು ಕಾಪು ಪುರಸಭೆಯ ಅಧಿಕೃತ ಡಂಪಿಂಗ್‌ ಯಾರ್ಡ್‌ಗಿಂತಲೂ ದೊಡ್ಡಮಟ್ಟದ ತ್ಯಾಜ್ಯ ಸಂಗ್ರಹಣಾ ಕೇಂದ್ರವಾಗಿ ಮಾರ್ಪಟ್ಟಿದ್ದು, ಡಂಪಿಂಗ್‌ ಯಾರ್ಡ್‌ನೂ° ಮೀರಿಸುವಂತಿದೆಯೋ ಎಂಬ ಸಂಶಯ ಸ್ಥಳೀಯರ ಮನಸ್ಸಿನಲ್ಲಿ ಮೂಡಿಬರುವಂತಾಗಿದೆ.

ಕೋಳಿ – ಮಾಂಸಗಳ ತ್ಯಾಜ್ಯದ್ದೇ ಕಾರುಬಾರು
ಮಲ್ಲಾರು ಬಡಗರಗುತ್ತು ಮತ್ತು ಜನಾರ್ದನ ದೇವಸ್ಥಾನ ವಾರ್ಡ್‌ನ ಮಲ್ಲಾರು ಕೋಟೆ ರೋಡ್‌ನ‌ಲ್ಲಿರುವ ಸೇತುವೆಗಳ ಅಡಿ ಭಾಗದಲ್ಲಿ ಕೋಳಿ – ಮಾಂಸದಂಗಡಿಗಳ ಕೊಳೆತ ತ್ಯಾಜ್ಯ, ನಾಯಿ, ಬೆಕ್ಕು ಸಹಿತ ಸಾಕು ಪ್ರಾಣಿಗಳ ಕಳೇಬರಗಳು, ಬಟ್ಟೆ, ಪ್ಲಾಸ್ಟಿಕ್‌, ಗಾಜಿನ ಚೂರುಗಳ ಸಹಿತವಾದ ವಿವಿಧ ತ್ಯಾಜ್ಯ ವಸ್ತುಗಳು, ಕೊಳೆತ ತರಕಾರಿ ವಸ್ತುಗಳು, ಕಾರ್ಯಕ್ರಮಗಳಲ್ಲಿ ಉಳಿಸಿ, ಬಿಸಾಡುವ ಎಂಜಲು ಮತ್ತು ಹಳಸಿದ ಅನ್ನ ಪದಾರ್ಥಗಳು ಹೀಗೆ ನೂರಾರು ಬಗೆಯ ತ್ಯಾಜ್ಯ ವಸ್ತುಗಳು ಎರಡೂ ಸೇತುವೆಗಳ ತಳಭಾಗದಲ್ಲಿ ತುಂಬಿ ಹೋಗಿದ್ದು ಸುತ್ತಲೂ ಕೆಟ್ಟ ದುರ್ನಾತ ಬೀರುತ್ತಿದೆ.

ಎಚ್ಚರಿಕೆ ಫಲಕಕ್ಕೆ ಕೇರೇ ಇಲ್ಲ
ಮಲ್ಲಾರು ಕೊಂಬಗುಡ್ಡೆ ಸೇತುವೆ ಮತ್ತು ಕೋಟೆ ರೋಡ್‌ನ‌ ಸೇತುವೆಯ ತಳಭಾಗವು ಹಿಂದೆ ಗ್ರಾಮ ಪಂಚಾಯತ್‌ ಇರುವ ಕಾಲದಿಂದಲೂ ತ್ಯಾಜ್ಯ ಎಸೆಯುವ ಗುಂಡಿಂಯತೆಯೇ ಭಾಸವಾಗುತ್ತಿತ್ತು. ಇಲ್ಲಿನ ತೋಡಿನಲ್ಲಿ ನೀರು ಸರಾಗವಾಗಿ ಹರಿದು ಹೋಗುವಾಗ ವಾಸನೆ ಗೊತ್ತಾಗುತ್ತಿರಲಿಲ್ಲ. ಆದರೆ ಈಗ ನೀರು ಬತ್ತಿ ಹೋಗಿರುವುದರಿಂದ ತ್ಯಾಜ್ಯದ ವಾಸನೆ ಘಮ್ಮೆಂದು ಹಬ್ಬುತ್ತಿದೆ. ಎರಡೂ ಕಡೆಗಳಲ್ಲಿ ಕಾಪು ಪುರಸಭೆ ಎಚ್ಚರಿಕೆ ಫಲಕ ಹಾಕಿದೆಯಾದರೂ ಜನರು ಮಾತ್ರಾ ಅದಕ್ಕೆ ಡೋಂಡ್‌ ಕೇರ್‌ ಎಂದು ಹೇಳುತ್ತಿದ್ದಾರೆ.

ಮನವಿ ಮಾಡಲಾಗಿದೆ
ಮಲ್ಲಾರು ಕೋಟೆ ರೋಡ್‌ ಸೇತುವೆಯ ತಳಭಾಗದಲ್ಲಿ ಸಂಗ್ರಹವಾಗುತ್ತಿರುವ ತ್ಯಾಜ್ಯದ ಬಗ್ಗೆ ಪುರಸಭೆಗೆ ಹಲವು ಬಾರಿ ದೂರು ನೀಡಲಾಗಿದೆ. ಸೇತುವೆ ತಳಭಾಗದಲ್ಲಿ ಶೇಖರಣೆಯಾಗುವ ತ್ಯಾಜ್ಯ ಅಲ್ಲೇ ಕೊಳೆತು ದುರ್ನಾತ ಬೀರುತ್ತಿದ್ದು, ಜನರು ಜನಪ್ರತಿನಿಧಿಗಳಾದ ನಮ್ಮನ್ನು ದೂರುವಂತಾಗಿದೆ. ಇಲ್ಲಿನ ತ್ಯಾಜ್ಯವನ್ನು ಶುಚಿಗೊಳಿಸಿ, ತೋಡಿನ ಹೂಳೆತ್ತಿದರೆ ಹೇರಳ ಜಲ ಸಂಪನ್ಮೂಲ ದೊರಕುವ ಸಾಧ್ಯತೆಯಿದೆ. ಆ ಮೂಲಕ ಸರಾಗವಾಗಿ ನೀರು ಹರಿಯಲು ಅವಕಾಶ ಮಾಡಿಕೊಟ್ಟಂತಾಗುತ್ತದೆ. ಈ ಬಗ್ಗೆಯೂ ವಿಶೇಷ ಅನುದಾನ ಮೀಸಲಿಟ್ಟು ಹೂಳೆತ್ತುವಿಕೆ ನಡೆಸಲು ಪುರಸಭೆಯ ಮುಖ್ಯಾಧಿಕಾರಿಗಳಿಗೆ ಮನವಿ ಮಾಡಲಾಗಿದೆ.
– ವಿಜಯಲಕೀÒ ¾ಜಿ. ಕೋಟ್ಯಾನ್‌
16ನೇ ಜನಾರ್ದನ ದೇವಸ್ಥಾನ ವಾರ್ಡ್‌ನ ಸದಸ್ಯೆ

ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ
ಮಲ್ಲಾರು ಗ್ರಾಮದ ಕೊಂಬಗುಡ್ಡೆ ಸೇತುವೆ ಮತ್ತು ಕೋಟೆರೋಡ್‌ನ‌ ಸೇತುವೆ ತಳಭಾಗದಲ್ಲಿ ತ್ಯಾಜ್ಯದ ರಾಶಿ ಬೆಳೆದಿರುವ ಬಗ್ಗೆ ದೂರು ಬಂದಿದೆ. ತ್ಯಾಜ್ಯ ವಿಲೇವಾರಿಗೆ ಶೀಘ್ರ ಕ್ರಮ ತಗೆದುಕೊಳ್ಳುತ್ತೇವೆ. ಈಗಾಗಲೇ ಆ ಪ್ರದೇಶಗಳಲ್ಲಿ ಎಚ್ಚರಿಕೆ ಫಲಗಳನ್ನು ಹಾಕಲಾಗಿದ್ದು, ಮುಂದೆ ಸಿಸಿ ಕ್ಯಾಮರಾ ಅಳವಡಿಸಿ ತ್ಯಾಜ್ಯ ತಂದು ಸುರಿಯುವವರನ್ನು ಪತ್ತೆ ಹಚ್ಚಿ, ಹಾಕುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ.
– ರಾಯಪ್ಪ ಮುಖ್ಯಾಧಿಕಾರಿ, ಕಾಪು ಪುರಸಭೆ

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.