ಗಂಗೊಳ್ಳಿ ಬಂದರಿನ ಅಳಿವೆ ಭಾಗದಲ್ಲಿ ತುಂಬಿದೆ ಹೂಳು

ಮೀನುಗಾರರ ಜೀವಕ್ಕೆ ಅಪಾಯವಾಗುವ ಭೀತಿ

Team Udayavani, May 28, 2019, 6:14 AM IST

gangolli

ಗಂಗೊಳ್ಳಿ: ಇಲ್ಲಿನ ಮೀನುಗಾರಿಕಾ ಬಂದರಿನ ಅಳಿವೆ ಪ್ರದೇಶದಲ್ಲಿ ಸಾಕಷ್ಟು ಹೂಳು ತುಂಬಿದ್ದು, 102 ಕೋ.ರೂ. ವೆಚ್ಚದ ಬ್ರೇಕ್‌ ವಾಟರ್‌ ಕಾಮಗಾರಿಯಲ್ಲೇ ಡ್ರೆಜ್ಜಿಂಗ್‌ ಮಾಡಲು ಅವಕಾಶವಿದ್ದರೂ, ಇದಕ್ಕಾಗಿ ಹಣ ವಿನಿಯೋಗಿಸಿಲ್ಲ ಎನ್ನುವ ಆರೋಪ ಮೀನುಗಾರರದ್ದಾಗಿದೆ.

ಇನ್ನು ಬಂದರು ಆಸುಪಾಸಿನ ಸಮುದ್ರ ಭಾಗದಲ್ಲಿ ಡ್ರೆಜ್ಜಿಂಗ್‌ ಮಾಡದ ಕಾರಣ ದೊಡ್ಡ ಬೋಟ್‌ಗಳು ಭವಿಷ್ಯದಲ್ಲಿ ಬೇರೆ ಬಂದರನ್ನು ಆಶ್ರಯಿಸುವ ದುಃಸ್ಥಿತಿ ಕೂಡ ಬರಬಹುದು, ಅದಲ್ಲದೆ ಹೂಳು ತುಂಬಿರುವುದರಿಂದ ಬೋಟು, ದೋಣಿಗಳಲ್ಲಿ ಮೀನುಗಾರಿಕೆಗೆ ತೆರಳುವಾಗ ಜೀವಕ್ಕೂ ಅಪಾಯ ಎದುರಾಗಬಹುದು ಎನ್ನುವ ಆತಂಕ ಮೀನುಗಾರರದ್ದಾಗಿದೆ.

102 ಕೋ. ರೂ. ವೆಚ್ಚದಲ್ಲಿ ಗಂಗೊಳ್ಳಿ ಹಾಗೂ ಕೋಡಿಯಲ್ಲಿ 700 ಮೀ. ಹಾಗೂ 900 ಮೀ. ಉದ್ದದ ಕಡಲ್ಕೊರೆತ ತಡೆಗಾಗಿ ನಿರ್ಮಿಸಲಾದ ಬ್ರೇಕ್‌ ವಾಟರ್‌ ಕಾಮಗಾರಿ ಈಗಾಗಲೇ ಪೂರ್ಣಗೊಂಡಿದೆ.

ಕಾಮಗಾರಿಯ ಗುತ್ತಿಗೆ ವಹಿಸಿಕೊಂಡಿರುವ ಕಂಪೆನಿಗೆ ಯೋಜನೆ ಆರಂಭದಲ್ಲಿಯೇ ಬಂದರಿನ ಅಳಿವೆ ಪ್ರದೇಶ ಹಾಗೂ ಎರಡೂ ಬದಿಯ ತಡೆಗೋಡೆ ಭಾಗದಲ್ಲಿ ಹೂಳೆತ್ತೆಲು ಡ್ರೆಜ್ಜಿಂಗ್‌ ಮಾಡಬೇಕು, ಇದಲ್ಲದೆ ಈ ಕಾಮಗಾರಿಗೆ ಬೇಕಾದ ಸಾಮಗ್ರಿಗಳನ್ನು ಸಾಗಿಸಲು ಗುತ್ತಿಗೆದಾರರು ಇದೇ ರಸ್ತೆಯನ್ನು ಬಳಸಿದ್ದು, ಆ ಹದಗೆಟ್ಟ ರಸ್ತೆಯ ದುರಸ್ತಿ ಮಾಡಿಲ್ಲ. ಇನ್ನು ಬಂದರು ಪ್ರದೇಶದಲ್ಲಿ ಪರಿಸರ ಸಂರಕ್ಷಣೆಗೆ ಚರಂಡಿ ನಿರ್ಮಾಣ, ಪರಿಸರದ ಸ್ವಚ್ಛತೆ, ಮರ – ಗಿಡ ನೆಡುವಂತಹ ಕಾರ್ಯಗಳಿಗೆ 5 ಕೋ.ರೂ. ವಿನಿಯೋಗಿಸಬೇಕು ಎನ್ನುವ ಕರಾರು ಮಾಡಲಾಗಿತ್ತು. ಆದರೆ ಅದ್ಯಾವುದನ್ನೂ ಗುತ್ತಿಗೆದಾರರು ಮಾಡಲು ಮುಂದಾಗಿಲ್ಲ ಎನ್ನುವ ಆರೋಪ ಮೀನುಗಾರರದ್ದು.

ಇನ್ನು ಈ ಕಾಮಗಾರಿಯ ಅರ್ಧದಷ್ಟು ಮಾತ್ರ ಅನುದಾನ ಸರಕಾರದಿಂದ ಗುತ್ತಿಗೆದಾರರಿಗೆ ಮಂಜೂರಾಗಿದ್ದು, ಬಾಕಿ ಅರ್ಧ ಇನ್ನ್ನೂ ಸಿಕ್ಕಿಲ್ಲ ಎನ್ನುವ ಮಾಹಿತಿ ಸಿಕ್ಕಿದ್ದು, ಆ ಕಾರಣಕ್ಕಾಗಿಯೇ ಕಂಪೆನಿಯು ವಿಳಂಬ ಮಾಡುತ್ತಿದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ

– ಪ್ರಶಾಂತ್ ಪಾದೆ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.