ಕೈ ಶಾಸಕರ್ಯಾರೂ ಪಕ್ಷ ಬಿಡಲ್ಲ
ಜೂ.1ರಂದು ಬಿಎಸ್ವೈ ಸಿಎಂ ಆಗದಿದ್ದರೆ ನಿವೃತ್ತಿ ಘೋಷಿಸಲಿ: ಸಿದ್ದು
Team Udayavani, May 28, 2019, 6:00 AM IST
ಮೈಸೂರು: ಮಾಜಿ ಸಚಿವ ರಮೇಶ ಜಾರಕಿಹೊಳಿ ಸೇರಿ ಕಾಂಗ್ರೆಸ್ನ ಯಾವುದೇ ಶಾಸಕರು ಪಕ್ಷ ತೊರೆಯಲ್ಲ ಎಂದು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಈ ನಡುವೆ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧವೂ ತೀವ್ರ ವಾಗ್ಧಾಳಿ ನಡೆಸಿದರುವ ಅವರು, ಜೂ.1ರಂದು ಮುಖ್ಯಮಂತ್ರಿಯಾಗು ವುದಾಗಿ ಹೇಳಿರುವ ಯಡಿಯೂರಪ್ಪ ಅಂದು ಮುಖ್ಯಮಂತ್ರಿಯಾಗದಿದ್ದರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ಘೋಷಣೆ ಮಾಡಲಿ ಎಂದು ತಿರುಗೇಟು ನೀಡಿದರು.
ಖಾಸಗಿ ಕಾರ್ಯಕ್ರಮ ನಿಮಿತ್ತ ಸೋಮವಾರ ಮೈಸೂರಿಗೆ ಆಗಮಿಸಿದ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದರು. ಲೋಕಸಭೆ ಚುನಾ ವಣೆಗೂ ರಾಜ್ಯಸರ್ಕಾರಕ್ಕೂ ಸಂಬಂಧವಿಲ್ಲ. ಕೇಂದ್ರ ದಲ್ಲಿ ಯಾರು ಸರ್ಕಾರ ಮಾಡಬೇಕು ಎಂದು ಜನ ಮತ ನೀಡಿದ್ದಾರೆ. ಯಾರು ಸರ್ಕಾರ ಮಾಡಬೇಕೆಂದು 2018ರಲ್ಲೇ ಜನ ಮತ ನೀಡಿ ಆಗಿದೆ. ಹೀಗಾಗಿ ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯಸರ್ಕಾರದ ಮೇಲೆ ಪರಿಣಾಮ ಬೀರಲ್ಲ ಎಂದರು.
ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಈಗಲೂ ಅನುಮಾನ ಇದ್ದೇ ಇದೆ ಎಂದು ಪುನರುಚ್ಚರಿಸಿದ ಸಿದ್ದರಾಮಯ್ಯ, ಆದರೆ ಜನರ ತೀರ್ಪನ್ನು ಅಲ್ಲಗಳೆಯಲು ಹೋಗಲ್ಲ. ಇವಿಎಂ ಬಗ್ಗೆ ಪರಿಣಿತರ ಜತೆ ಮಾತನಾಡಬೇಕೆಂದು ಹೇಳಿದರು.
ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಮನೆಯಲ್ಲಿ ರಾಜ್ಯ ಬಿಜೆಪಿ ನಾಯಕರ ಜತೆಯಲ್ಲಿ ಕಾಂಗ್ರೆಸ್ ಶಾಸಕರು ಕಾಣಿಸಿಕೊಂಡಿರುವುದು ಕಾಕತಾಳೀಯ. ಶಾಸಕ ಸುಧಾಕರ ಮನೆಗೆ ರಮೇಶ್ ಜಾರಕಿಹೊಳಿ ಹೋದಾಗ ಅವರು ಎಸ್.ಎಂ.ಕೃಷ್ಣ ಅವರ ಮನೆಗೆ ಹೊರಟಿದ್ದರು, ಹೀಗಾಗಿ ಸುಧಾಕರ್ ಜತೆಯಲ್ಲಿ ರಮೇಶ್ ಕೂಡ ಕೃಷ್ಣ ಅವರ ಮನೆಗೆ ಹೋಗಿದ್ದಾರೆ. ಅದೇ ಸಮಯಕ್ಕೆ ಯಡಿಯೂರಪ್ಪ, ಆರ್.ಅಶೋಕ, ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಕೂಡ ಎಸ್.ಎಂ.ಕೃಷ್ಣ ಅವರ ಮನೆಗೆ ಹೋಗಿದ್ದಾರೆ ಅಷ್ಟೇ, ಇದೊಂದು ಕಾಕತಾಳೀಯ ಎಂದರು.
ರಾಜ್ಯ ಸಚಿವ ಸಂಪುಟವನ್ನು ಪುನಾರಚನೆ ಮಾಡು ವುದಿಲ್ಲ. ಸದ್ಯ ಮೂರು ಸಚಿವ ಸ್ಥಾನಗಳು ಖಾಲಿ ಯಿದ್ದು, ಈ ಪೈಕಿ ಶಿವಳ್ಳಿ ನಿಧನದಿಂದ ಖಾಲಿಯಾಗಿ ರುವ ಕಾಂಗ್ರೆಸ್ನ ಒಂದು ಸ್ಥಾನವನ್ನು ಶೀಘ್ರ ಭರ್ತಿ ಮಾಡುತ್ತೇವೆ. ಎರಡು ಸ್ಥಾನ ಖಾಲಿ ಉಳಿಸಿಕೊಂ ಡಿರುವ ಜೆಡಿಎಸ್ನವರು ಯಾವಾಗ ಭರ್ತಿ ಮಾಡು ತ್ತಾರೋ ಗೊತ್ತಿಲ್ಲ. ಅಸಮಾಧಾನಿತ ಶಾಸಕರನ್ನು ಸಮಾಧಾನಪಡಿಸಲು ಸಂಪುಟ ಪುನಾರಚನೆ ಮಾಡಲಾಗುತ್ತದೆ ಎಂಬುದೆಲ್ಲ ಸುಳ್ಳು, ಆ ರೀತಿಯ ಯಾವುದೇ ಯೋಜನೆ ನಮ್ಮ ಮುಂದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
MUST WATCH
ಹೊಸ ಸೇರ್ಪಡೆ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು