ಮಣ್ಣು ಕುಸಿದು ಮೂವರು ಕಾರ್ಮಿಕರ ದುರ್ಮರಣ
Team Udayavani, May 28, 2019, 6:15 AM IST
ಬೆಳಗಾವಿ: ಗೋವಾ-ಬೆಳಗಾವಿ ಮಹಾ ಮಾರ್ಗದಲ್ಲಿ ರಸ್ತೆ ಕಾಮಗಾರಿ ವೇಳೆ ಬ್ರಿಜ್ ನಿರ್ಮಾಣ ಮಾಡುತ್ತಿದ್ದಾಗ ಮಣ್ಣು ಕುಸಿದು ಜಾರ್ಖಂಡ್ ಮೂಲದ ಮೂವರು ಕಾರ್ಮಿಕರು ಮೃತಪಟ್ಟ ಘಟನೆ ತಾಲೂಕಿನ ದೇಸೂರ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಜಾರ್ಖಂಡ್ ಮೂಲದ ಅರ್ಜುನ ಸಿಂಗ್(36), ದುರ್ಗೇಶ ಕುಮಾರ(26) ಹಾಗೂ ಸುಖಾನ್ ರಾಮ(25) ಮೃತಪಟ್ಟವರು.
ಸೇತುವೆ ನಿರ್ಮಾಣ ಮಾಡುವಾಗ ಕೆಳ ಭಾಗದಲ್ಲಿ ಕೆಲಸದಲ್ಲಿ ನಿರತ ರಾಗಿದ್ದ ಇವರ ಮೇಲೆ ಏಕಾಏಕಿ ಮಣ್ಣು ಕುಸಿದಿದೆ. ಮಣ್ಣಿನ ಕೆಳ ಭಾಗದಲ್ಲಿ ಸಿಲುಕಿಕೊಂಡ ಇವರು ಉಸಿರುಗಟ್ಟಿ ಅಸುನೀ ಗಿದ್ದಾರೆ. ಮಣ್ಣಿನ ಗುಡ್ಡೆ ಕುಸಿಯುತ್ತಿದ್ದಂತೆ ಮೂವರು ಮಣ್ಣಿನಡಿ ಸಿಕ್ಕಿ ಹಾಕಿಕೊಂಡಿದ್ದರು. ಕೂಡಲೇ ಜೆಸಿಬಿಯಿಂದ ಮಣ್ಣು ತೆಗೆದು ಇಬ್ಬರ ಮೃತದೇಹಗಳನ್ನು ಹೊರ ತೆಗೆಯಲಾಯಿತು. ನಂತರ ಇನ್ನೊಬ್ಬ ಕಾರ್ಮಿಕನ ಶವ ಹೊರ ತೆಗೆಯಲಾಯಿತು. ಸ್ಥಳಕ್ಕೆ ಗ್ರಾಮೀಣ ಠಾಣೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Drought Relief: ಕಾಂಗ್ರೆಸ್-ಬಿಜೆಪಿ ಬರ ಪರಿಹಾರ ಜಟಾಪಟಿ
Drought Relief: ಎಕ್ಸ್ (ಟ್ವಿಟರ್)ನಲ್ಲೂ ಕಾಂಗ್ರೆಸ್-ಬಿಜೆಪಿ ವಾಕ್ಸಮರ
Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್ ಏಜೆಂಟ್ ಟ್ರಿಫ್’: ಬಿಜೆಪಿ ಆರೋಪ
HDK ಪೆನ್ಡ್ರೈವ್ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ
Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್.ಡಿ. ಕುಮಾರಸ್ವಾಮಿ