ಮೀನುಗಾರಿಕೆ ಪ್ರಮಾಣ, ಮೌಲ್ಯ ಎರಡೂ ಕುಸಿತ

ಮೀನುಗಾರಿಕೆ ಋತು ಪೂರ್ಣಕ್ಕೆ ದಿನಗಣನೆ: 3,166 ಕೋಟಿ ರೂ. ವಹಿವಾಟು

Team Udayavani, May 28, 2019, 6:15 AM IST

meenugarike

ಮಂಗಳೂರು: ಈ ವರ್ಷದ ಮೀನುಗಾರಿಕೆ ಋತು ಅಂತ್ಯ ಗೊಳ್ಳಲು ಕೆಲವೇ ದಿನಗಳಿದ್ದು, ಒಟ್ಟು 3,166 ಕೋ.ರೂ. ಮೌಲ್ಯದ 2,77,747 ಟನ್‌ ಮೀನು ಹಿಡಿಯಲಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿಯ ಮೀನುಗಾರಿಕೆ ಪ್ರಮಾಣ ಮತ್ತು ಮೌಲ್ಯ- ಎರಡೂ ದೃಷ್ಟಿಯಿಂದ ಕುಸಿದು, ಸುಮಾರು 70 ಕೋ.ರೂ.ಗಳಷ್ಟು ಕಡಿಮೆಯಾಗಿದೆ. ಕಳೆದ ಋತುವಿನಲ್ಲಿ 3,236.99 ಕೋ.ರೂ. ಮೌಲ್ಯದ 2,92,061 ಟನ್‌ ಮೀನು ಹಿಡಿಯಲಾಗಿತ್ತು.

ಕರಾವಳಿಯಲ್ಲಿ ಈ ವರ್ಷದ ಮೀನುಗಾರಿಕೆ ಋತು ಪೂರ್ಣಗೊಳ್ಳಲು ಇನ್ನು 1 ವಾರಕ್ಕೂ ಕಡಿಮೆ ಅವಧಿ ಬಾಕಿಇವೆ. ಈ ಬಾರಿ ಎರಡೂ ಜಿಲ್ಲೆಗಳಲ್ಲಿ ಮೀನಿನ ಪ್ರಮಾಣ ಮತ್ತು ಮೌಲ್ಯದಲ್ಲಿಆಗಿರುವ ಕುಸಿತ ಮೀನುಗಾರರಲ್ಲಿ ನಿರಾಶೆ ಮೂಡಿಸಿದೆ. ಹೀಗಾಗುವುದಕ್ಕೆ ಹೆಚ್ಚು ಬೇಡಿಕೆಯಿಲ್ಲದ ಒಂದೇ ಜಾತಿಯ ಮೀನು ಲಭ್ಯವಾಗಿರುವುದು ಮತ್ತು ನಾನಾ ಕಾರಣಗಳಿಗೆಬೋಟ್‌ಗಳು ಸಮುದ್ರಕ್ಕಿಳಿಯಲು ಸಾಧ್ಯವಾಗದಿರುವುದೇ ಕಾರಣ ಎನ್ನುವುದು ಮೀನು ಗಾರರ ಅಭಿಪ್ರಾಯ.

ಬಂಗುಡೆ, ಬೂತಾಯಿ ಕಡಿಮೆ

ಈ ಋತುವಿನಲ್ಲಿ ಬಂಗುಡೆ, ಬೂತಾಯಿ, ಕೊಡ್ಡಾಯಿ, ಅಂಜಲ್ ದೊರೆತಿರುವುದು ಕಡಿಮೆ. ಕಪ್ಪು ಬಣ್ಣದಕ್ಲಾಟಿ ಮೀನು ಸಿಕ್ಕಿದ್ದೇ ಹೆಚ್ಚು. ಜತೆಗೆ ಮದ್ಮಾಲ್, ಅರೆಣೆ ಸಿಕ್ಕಿವೆ ಎನ್ನುತ್ತಾರೆ ಮೀನುಗಾರರು. ಮೀನುಗಾರಿಕೆ ಇಲಾಖೆಯ ಮೂಲಗಳ ಪ್ರಕಾರ ದ.ಕ., ಉಡುಪಿ ಮತ್ತು ಉತ್ತರ ಕನ್ನಡ ಸೇರಿದಂತೆ ಒಟ್ಟು 8,456 ಮೋಟರೀಕೃತ ನಾಡದೋಣಿ, 447 ಯಾಂತ್ರೀಕೃತ ದೋಣಿ ಮತ್ತು 8,999 ನಾಡದೋಣಿಗಳು ಕಾರ್ಯಾಚರಿಸುತ್ತಿವೆ.

ದೋಣಿ ನಿಲುಗಡೆ ಅಪಾಯಕಾರಿ!

ಮಂಗಳೂರು ಮೀನುಗಾರಿಕೆ ಧಕ್ಕೆಯ ವ್ಯಾಪ್ತಿಯಲ್ಲಿ ಮೋಟರೀಕೃತ ನಾಡದೋಣಿ, ಯಾಂತ್ರೀಕೃತ ದೋಣಿ ಸೇರಿ ಸುಮಾರು 2,000ಕ್ಕೂ ಅಧಿಕ ದೋಣಿಗಳಿವೆ. ಈಗಿನ ಧಕ್ಕೆ 600 ಮೀ. ಉದ್ದವಿದೆ. ಇದರಲ್ಲಿ ಒಂದು ಸಾಲಿನಲ್ಲಿ ಹೆಚ್ಚು ಕಡಿಮೆ 350 ಬೋಟುಗಳಿಗೆ ನಿಲ್ಲಲು ಮಾತ್ರ ಅವಕಾಶ. ಉಳಿದವುಇತರೆಡೆ ಹೊಂದಾಣಿಕೆ ಮಾಡ ಬೇಕು. ಹೀಗಾಗಿ ಒಂದರ ಹಿಂದೆಇನ್ನೊಂದರಂತೆ 7 ಸಾಲು ನಿಲ್ಲುವ ಪರಿಸ್ಥಿತಿ ಇದೆ. ಇದರಿಂದ ಹಾನಿ ಆಗು ತ್ತಿದೆ ಎಂಬ ಗೋಳು ಕೇಳುವವರಿಲ್ಲ.

61 ದಿನ ರಜೆ

ಪಶ್ಚಿಮ ಕರಾವಳಿಯಲ್ಲಿ 2015ಕ್ಕಿಂತ ಹಿಂದೆ 57 ದಿನ (ಜೂ. 15ರಿಂದ ಆ.10) ಮೀನುಗಾರಿಕೆ ನಿಷೇಧವಿತ್ತು. 2015ರಲ್ಲಿ ಕೇಂದ್ರ ಸರಕಾರ ಪಶ್ಚಿಮ ಕರಾವಳಿಗೆ ಏಕರೂಪದ 61 ದಿನ ನಿಷೇಧ ವಿಧಿಸಿ ಆದೇಶ ಹೊರಡಿಸಿತ್ತು. ಅದರಂತೆ ಗುಜರಾತ್‌, ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳಗಳಲ್ಲಿ ಒಂದೇ ಅವಧಿಯ ಮೀನುಗಾರಿಕೆ ನಿಷೇಧವಿದೆ
5 ಲಕ್ಷದ ಮೀನು- ಅಷ್ಟೇ ಖರ್ಚು!
ಮೀನುಗಾರ ಮುಖಂಡರೊಬ್ಬರ ಪ್ರಕಾರ, ಒಂದು ಬೋಟು ಕಡಲಿಗಿಳಿದರೆ ಕನಿಷ್ಠ 5 ಲಕ್ಷ ರೂ. ಮೌಲ್ಯದ ಮೀನು ತರಬಲ್ಲುದು. ಹಿಂದೆ ಮೀನುಗಾರರಿಗೆ ಸಂಬಳ ನೀಡುತ್ತಿದ್ದರೆ ಈಗ ಹಿಡಿದ ಮೀನಿನ ಶೇ.25ರಷ್ಟು ಮೊತ್ತವನ್ನು ಕಮಿಷನ್‌ ಆಗಿ ನೀಡಲಾಗುತ್ತದೆ. ಅಂದರೆ 5 ಲಕ್ಷ ರೂ. ಮೌಲ್ಯದ ಮೀನು ಹಿಡಿದಿದ್ದರೆ ಸುಮಾರು 1.15 ಲಕ್ಷ ರೂ. ಕಮಿಷನ್‌ಗೆ ವ್ಯಯವಾಗುತ್ತದೆ. 6ರಿಂದ 10 ದಿನಗಳ ಮೀನುಗಾರಿಕೆಗೆ ತೆರಳುವ ಟ್ರಾಲ್ ಬೋಟ್‌ಗಳಲ್ಲಿ ಒಮ್ಮೆಗೆ ಸುಮಾರು 4 ಲಕ್ಷ ರೂ. ಮೌಲ್ಯದ 6,000 ಲೀ.ನಷ್ಟು ಡೀಸೆಲ್ ಬೇಕು. ಜತೆಗೆ, 28,000 ರೂ. ಮೌಲ್ಯದ 450 ಬಾಕ್ಸ್‌ ಮಂಜುಗಡ್ಡೆಯೂ ಅಗತ್ಯ.
– ದಿನೇಶ್‌ ಇರಾ 

ಟಾಪ್ ನ್ಯೂಸ್

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

11

Politics: ಪ್ರಜ್ವಲ್‌ ರೇವಣ್ಣ ಪ್ರಕರಣಕ್ಕೆ ಡಿಕೆಶಿಯೇ ಮಾಸ್ಟರ್ ಮೈಂಡ್; ಸಿ.ಪಿ.ಯೋಗೇಶ್ವರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

Mangaluru Central, ಜಂಕ್ಷನ್‌ನಲ್ಲಿ ಕಾದಿರಿಸದ ಟಿಕೆಟ್‌ ವಿತರಿಸಲು ಎಟಿವಿಎಂ

ಕರಾವಳಿಯ ವಿವಿಧೆಡೆ ಮಳೆ; ಮಾನ್ಯ: ಸಿಡಿಲು ಬಡಿದು ಗಾಯ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

Foreign Cruise: ಕ್ರೂಸ್‌ ರಿವೇರಾ ಮಂಗಳೂರಿಗೆ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರನಿಗೆ ಸ್ಥಳದಲ್ಲೇ ಸಾವು

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

Bhupal: ʼಭೂಪೇಂದ್ರ ಜೋಗಿʼ ರೀಲ್ಸ್‌ ಖ್ಯಾತಿಯ ವ್ಯಕ್ತಿಗೆ ಅಪರಿಚಿತರಿಂದ ಚಾಕುವಿನಿಂದ ಹಲ್ಲೆ

1-wwewewqe

Haryana ಬಿಜೆಪಿ ಸರಕಾರಕ್ಕೆ ಶಾಕ್: ಕೈಗೆ ಬೆಂಬಲ ನೀಡಿದ 3 ಪಕ್ಷೇತರರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

ವರದಿ ಮಾಡಲು ಹೋದವರ ಮೇಲೆ ಕಾಡಾನೆ ದಾಳಿ… ಕ್ಯಾಮೆರಾಮೆನ್ ಮೃತ್ಯು, ವರದಿಗಾರ, ಚಾಲಕ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.