ಐದು ಸಾವಿರ ಕೋಟಿ ರೂ. ವೆಚ್ಚದಲ್ಲಿ ನೆಲದಡಿ ಕೇಬಲ್ ಅಳವಡಿಕೆ

ಮರ ಬಿದ್ದು ವಿದ್ಯುತ್‌ ಸಂಪರ್ಕ ಕಡಿತ ಆಗುವುದನ್ನು ತಡೆಯಲು ಕ್ರಮ: ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌

Team Udayavani, May 28, 2019, 7:17 AM IST

benglre-tdy-2..

ಬೆಂಗಳೂರು: ಮರಗಳು ಉರುಳಿ ವಿದ್ಯುತ್‌ ಕೇಬಲ್ ಕಡಿತಗೊಂಡು ಆಗುತ್ತಿರುವ ಅನಾಹುತಗಳ ತಡೆಗೆ ಮುಂದಾಗಿರುವ ಸರ್ಕಾರ, ಐದು ಸಾವಿರ ಕೋಟಿ ರೂ. ವೆಚ್ಚದಲ್ಲಿ ನೆಲದಡಿ ವಿದ್ಯುತ್‌ ಅಳವಡಿಸುವ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದೆ.

ನಗರದಲ್ಲಿ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ನೂರಾರು ಮರಗಳು ಧರೆಗುರುಳಿವೆ. ಪರಿಣಾಮ ಬೃಹದಾಕಾರದ ಮರಗಳು ವಿದ್ಯುತ್‌ ಕಂಬ, ತಂತಿಗಳ ಮೇಲೆ ಬಿದ್ದ ಪರಿಣಾಮ ಕಂಬಗಳು ಮುರಿದು, ತಂತಿ ತುಂಡಾಗಿ ರಸ್ತೆಗೆ ಬಿದ್ದು ಸಾವು-ನೋವುಗಳು ಸಂಭವಿಸಿವೆ. ಆ ಹಿನ್ನೆಲೆಯಲ್ಲಿ ವಿದ್ಯುತ್‌ ಕೇಬಲ್ಗಳನ್ನು ನೆಲದಡಿ ಅಳವಡಿಸುವ ಯೋಜನೆ ಸರ್ಕಾರ ಕೈಗೆತ್ತಿಕೊಂಡಿದೆ.

ಎರಡು ದಿನಗಳಿಂದ ನಗರದಲ್ಲಿ ಸುರಿದ ಮಳೆಯಿಂದ ವಿಜಯನಗರದ ಆರ್‌ಪಿಸಿ ಬಡಾವಣೆ ಹಾಗೂ ಮಲ್ಲೇಶ್ವರದ ಸಂಪಿಗೆ ರಸ್ತೆ, 14ನೇ ಅಡ್ಡರಸ್ತೆ, ಪಶ್ಚಿಮ ಕಾರ್ಡ್‌ ರಸ್ತೆ ಸೇರಿದಂತೆ ಹಲವು ಪ್ರದೇಶಗಳಲ್ಲಿ ಉಂಟಾಗಿರುವ ಅನಾಹುತಗಳನ್ನು ಪರಿಶೀಲಿಸಿದ ಉಪಮುಖ್ಯಮಂತ್ರಿ ಹಾಗೂ ನಗರಾಭಿವೃದ್ಧಿ ಸಚಿವ ಡಾ.ಜಿ.ಪರಮೇಶ್ವರ್‌, ಸ್ಥಳೀಯ ಸಂಸ್ಥೆಗಳು ಸಮನ್ವಯತೆಯಿಂದ ಕೆಲಸ ಮಾಡುವಂತೆ ಸೂಚಿಸಿದರು.

ಮಳೆಯಿಂದ ಸಾರ್ವಜನಿಕರಿಗೆ ತೊಂದರೆ ಉಂಟಾಗದಂತೆ ಬಿಬಿಎಂಪಿ, ಜಲಮಂಡಳಿ ಹಾಗೂ ಬೆಸ್ಕಾಂ ಅಧಿಕಾರಿಕಗಳು ಹೊಂದಾಣಿಕೆಯಿಂದ ಕೆಲಸ ಮಾಡಬೇಕು. ಜತೆಗೆ ಉರುಳಿದ ಮರಗಳನ್ನು ಶೀಘ್ರ ತೆರವುಗೊಳಿಸಬೇಕು ಹಾಗೂ ಮುರಿದ ವಿದ್ಯುತ್‌ ಕಂಬಗಳನ್ನು ಆದಷ್ಟು ಬೇಗ ಸರಿಪಡಿಸಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಬೆಸ್ಕಾಂ ಹಾಗೂ ಬಿಬಿಎಂಪಿ ಸಿಬ್ಬಂದಿ ಎಚ್ಚರ ವಹಿಸಬೇಕು ಎಂದು ಸೂಚನೆ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮರಗಳು ಬಿದ್ದ ಸಂದರ್ಭದಲ್ಲಿ ಹೆಚ್ಚಾಗಿ ವಿದ್ಯುತ್‌ ಕೇಬಲ್ಗಳು ತುಂಡಾಗಿ, ವಿದ್ಯುತ್‌ ಸಂಪರ್ಕ ಕಡಿತಗೊಂಡು ಸಮಸ್ಯೆಯಾಗುತ್ತದೆ. ಭವಿಷ್ಯದಲ್ಲಿ ಅಂತಹ ಸಮಸ್ಯೆ ಆಗಬಾರದು ಎಂಬ ಉದ್ದೇಶದಿಂದ 5 ಸಾವಿರ ಕೋಟಿ ರೂ. ವೆಚ್ಚದಲ್ಲಿ ನೆಲದಡಿ ವಿದ್ಯುತ್‌ ಕೇಬಲ್ ಅಳವಡಿಕೆ ಕಾಮಗಾರಿ ಆರಂಭಿಸಲಾಗುತ್ತಿದೆ. ಮುಂದಿನ ಎರಡು ತಿಂಗಳಲ್ಲಿ ಬೆಸ್ಕಾಂನ 11 ವಿಭಾಗಗಳಲ್ಲಿ ಮೊದಲ ಹಂತದ ಕಾಮಗಾರಿ ಆರಂಭವಾಗಲಿದೆ ಎಂದು ತಿಳಿಸಿದ್ದಾರೆ.

ಬೆಸ್ಕಾಂ ಸಹಾಯವಾಣಿ ಕೇಂದ್ರ ಸಮರ್ಪಕವಾಗಿ: ಕಾರ್ಯನಿರ್ವಹಿಸದಿರುವ ಬಗ್ಗೆ ಕೇಳಿಬಂದಿರುವ ದೂರುಗಳ ಕುರಿತು ಇದೇ ವೇಳೆ ಪ್ರತಿಕ್ರಿಯಿಸಿದ ಪರಮೇಶ್ವರ್‌, ಈ ಬಗ್ಗೆ ಪರಿಶೀಲಿಸಲಾಗುವುದು. ಜತೆಗೆ ಪರಿಹಾರ ಕಾರ್ಯಕ್ಕೆ ಹೆಚ್ಚಿನ ಸಿಬ್ಬಂದಿ ಅವಶ್ಯಕವಾಗಿದ್ದರೆ ನೇಮಕ ಮಾಡಿಕೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಿದರು.

ಪರಿಶೀಲನೆ ವೇಳೆ ಮೇಯರ್‌ ಗಂಗಾಂಬಿಕೆ, ಆಯುಕ್ತ ಎನ್‌.ಮಂಜುನಾಥ್‌ ಪ್ರಸಾದ್‌, ಶಾಸಕ ಎಂ.ಕೃಷ್ಣಪ್ಪ, ಸಚಿವ ಡಿ.ಸಿ.ತಮ್ಮಣ್ಣ, ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ ಶಿಖಾ ಹಾಜರಿದ್ದರು.

ಸಮಸ್ಯೆಗಳಿಗೆ ಶೀಘ್ರ ಸ್ಪಂದನೆ: ಎರಡು ದಿನಗಳಿಂದ ನಗರದಲ್ಲಿ ಗಾಳಿ ಸಹಿತ ಮಳೆಯಾಗಿದ್ದು, ನೂರಾರು ಮರಗಳು ಧರೆಗುರುಳಿವೆ. ಪರಿಣಾಮ ಹಲವಾರು ವಾಹನಗಳು ಜಖಂಗೊಂಡಿದ್ದು, ವಿದ್ಯುತ್‌ ಕಂಬಗಳು ಮುರಿದಿವೆ. ಆ ಹಿನ್ನೆಲೆಯಲ್ಲಿ ಬಿಬಿಎಂಪಿ, ಬೆಸ್ಕಾಂ ಸೇರಿ ಇತರೆ ಇಲಾಖೆಗಳು 61 ತಂಡಗಳನ್ನು ರಚಿಸಿಕೊಂಡು ಪರಿಹಾರ ಕಾರ್ಯಗಳನ್ನು ಮಾಡುತ್ತಿದ್ದು, ಪಾಲಿಕೆಯ ಸಹಾಯವಾಣಿ ಇರುವುದರಿಂದ ಸಮಸ್ಯೆ ಬಂದ ಕೂಡಲೇ ಪರಿಹಾರ ಕಾರ್ಯ ನಡೆಸಲಾಗುತ್ತಿದೆ ಎಂದು ಪರಮೇಶ್ವರ್‌ ಹೇಳಿದರು.

ಕೆಲವೇ ದಿನಗಳಲ್ಲಿ ಆರಂಭವಾಗಲಿರುವ ಮುಂಗಾರು ಮಳೆಗೆ ಬಿಬಿಎಂಪಿ ಸಿದ್ಧವಾಗಿದ್ದು, ತಿಂಗಳ ಮೊದಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಪಾಲಿಕೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಅದರ ಪರಿಣಾಮ ನಗರದಲ್ಲಿ ಮಳೆಯಾದರೂ ತಗ್ಗು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿಲ್ಲ ಎಂದರು.

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.