ಆರಂಭಕ್ಕೆ ವಿರೋಧ 30ಕ್ಕೆ ಅಂಗನವಾಡಿ ನೌಕರರ ಪ್ರತಿಭಟನೆ: ಸುಜಾತಾ
ಬೆಂಗಳೂರಲ್ಲಿನ ಪ್ರತಿಭಟನೆಗೆ ಜಿಲ್ಲೆಯಿಂದ 2 ಸಾವಿರ ಮಂದಿ ಭಾಗಿ
Team Udayavani, May 28, 2019, 8:18 AM IST
ಚಾಮರಾಜನಗರ: ರಾಜ್ಯ ಸರ್ಕಾರ ಪ್ರಾಥಮಿಕ ಶಾಲೆಗಳಲ್ಲೇ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಿರುವುದನ್ನು ವಿರೋಧಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಮೇ 30ರಂದು ಬೆಂಗಳೂರಿನ ವಿಧಾನಸೌಧದ ಮುಂಭಾಗ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದ್ದು ಜಿಲ್ಲಾ ಸಮಿತಿ ವತಿಯಿಂದ 2000 ಮಂದಿ ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಸಮಿತಿ ಅಧ್ಯಕ್ಷೆ ಕೆ.ಸುಜಾತಾ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪೂರ್ವ ಪ್ರಾಥಮಿಕ ತರಗತಿಗಳಾದ ಎಲ್ಕೆಜಿ, ಯುಕೆಜಿಗಳನ್ನು ಅಂಗನವಾಡಿ ಕೇಂದ್ರಗಳಲ್ಲಿಯೇ ಸ್ಥಾಪಿಸಬೇಕೆಂದು ರಾಜ್ಯ ಸರ್ಕಾರಕ್ಕೆ ಹಲವಾರು ಬಾರಿ ಮನವಿ ನೀಡಿದ್ದರೂ ಸರ್ಕಾರ ಇದಕ್ಕೆ ಕಿವಿಗೊಟ್ಟಿಲ್ಲ. ಈಗ ಪ್ರಾಥಮಿಕ ಶಾಲೆಗಳಲ್ಲೇ ಯುಕೆಜಿ, ಎಲ್ಕೆಜಿ ಶಿಕ್ಷಣ ಪ್ರಾರಂಭಿಸಿದ್ದು ಪೊಷಕರು ಅಂಗನವಾಡಿ ಕೇಂದ್ರಗಳಿಗೆ ಮಕ್ಕಳನ್ನು ಕಳುಹಿಸದೇ ಯುಕೆಜಿ, ಎಲ್ಕೆಜಿ ಶಿಕ್ಷಣಕ್ಕೆ ದಾಖಲು ಮಾಡುತ್ತಿದ್ದಾರೆ. ಇದರಿಂದ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳ ಹಾಜರಾತಿ ಕಡಿಮೆಯಾಗಿದೆ ಎಂದರು.
ಅಂಗನವಾಡಿ ಕೇಂದ್ರ ಖಾಲಿ ಖಾಲಿ: ರಾಜ್ಯ ಸರ್ಕಾರ, ಪ್ರಾಥಮಿಕ ಶಾಲೆಯಲ್ಲಿ ಯುಕೆಜಿ, ಎಲ್ಕೆಜಿ ಶಿಕ್ಷಣ ಪ್ರಾರಂಭಿಸಿ ಅಂಗನವಾಡಿ ಕೇಂದ್ರಗಳಿಗೆ ಮಕ್ಕಳು ಬಾರದಂತೆ ಮಾಡಿ ಅಂಗನವಾಡಿ ಕೇಂದ್ರಗಳನ್ನು ಕುಗ್ಗಿಸುತ್ತಿದೆ. ಯುಕೆಜಿ, ಎಲ್ಕೆಜಿ ಶಿಕ್ಷಣಕ್ಕೆ ಮಕ್ಕಳು ದಾಖಲಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರಗಳು ಖಾಲಿ ಖಾಲಿಯಾಗುತ್ತಿದ್ದು, 3 ವರ್ಷದಿಂದ 6 ವರ್ಷದ ಮಕ್ಕಳು ಅಂಗನವಾಡಿಗೆ ದಾಖಲಾಗದೇ ಯುಕೆಜಿ ಎಲ್ಕೆಜಿ ಶಿಕ್ಷಣಕ್ಕೆ ದಾಖಲಾಗುತ್ತಿದ್ದಾರೆಂದರು.
ಸಂಘದಿಂದ ವಿರೋಧ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರನ್ನು ಹಾಗೂ ಶಿಕ್ಷಣ ಇಲಾಖೆ ಸಚಿವರನ್ನು ಕರೆದು ಸಭೆ ನಡೆಸದೇ ಮುಖ್ಯಮಂತ್ರಿಯವರು ಈ ತೀರ್ಮಾನ ಕೈಗೊಂಡಿರುವುದನ್ನು ರಾಜ್ಯ ಅಂಗನವಾಡಿ ನೌಕರರ ಸಂಘ ವಿರೋಧಿಸುತ್ತದೆ ಎಂದು ಹೇಳಿದರು.
ಶಿಶುಪಾಲನಾ ಕೇಂದ್ರವಾಗಿ ಪರಿವರ್ತಿಸಿ: ಅಂಗನವಾಡಿ ಕೇಂದ್ರಗಳಲ್ಲೇ ಯುಕೆಜಿ-ಎಲ್ಕೆಜಿ ಶಿಕ್ಷಣ ಪ್ರಾರಂಭಿಸಿ ಅಂಗನವಾಡಿ ಕೇಂದ್ರಗಳನ್ನು ಶಿಶುಪಾಲನಾ ಕೇಂದ್ರಗಳಾಗಿ ಪರಿವರ್ತಿಸಿ ಅಂಗನವಾಡಿ ಕೇಂದ್ರದಿಂದಲೇ ಮುಂದಿನ ತರಗತಿಗೆ ವರ್ಗಾವಣೆ ಪತ್ರ ರವಾನಿಸುವ ವ್ಯವಸ್ಥೆ ಮಾಡಬೇಕು. ಶಾಸನ ಬದ್ದವಾಗಿ ಕನಿಷ್ಠ ವೇತನ ನಿಗದಿ ಮಾಡಬೇಕು, ಕೊಥಾರಿ ಕಮಿಷನ್ ವರದಿ ಸಂಪೂರ್ಣವಾಗಿ ಜಾರಿಯಾಗಬೇಕು ಎಂದು ಒತ್ತಾಯಿಸಿದರು.
ಅಂಗನವಾಡಿ ನೌಕರರ ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ನಾಗಮಣಿ, ತಾಲೂಕು ಅಧ್ಯಕ್ಷೆ ರೇವಮ್ಮ, ತಾಲೂಕು ಕಾರ್ಯದರ್ಶಿ ಶಾಹಿದಾ ಬಾನು, ಖಜಾಂಚಿ ಯಶೋದಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
MUST WATCH
ಹೊಸ ಸೇರ್ಪಡೆ
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ