ಸಾಫಲ್ಯ ಸೇವಾ ಸಂಘ ಮುಂಬಯಿ: ವಾರ್ಷಿಕ ಸಾಫಲ್ಯ ಕ್ರೀಡಾ ಸ್ಪರ್ಧೆ-2019ಕ್ಕೆ ಚಾಲನೆ


Team Udayavani, May 28, 2019, 11:58 AM IST

2605MUM01

ಮುಂಬಯಿ: ಸಮಾಜದಲ್ಲಿನ ಪ್ರತಿಯೋರ್ವ ಪ್ರತಿಭಾನ್ವಿತರನ್ನು ಗುರುತಿಸುವ ಹೊಣೆ ಸ್ವಸಮಾಜದ್ದಾಗಿದೆ. ಸಮುದಾಯದಲ್ಲಿ ಅವರನ್ನು ಪ್ರೋತ್ಸಾಹಿಸಿದಾಗ ಆ ಪ್ರತಿಭೆಗಳು ತನ್ನಿಂದತಾನೇ ಅವಕಾಶಗಳನ್ನು ಗಿಟ್ಟಿಸಿ ತಮ್ಮನ್ನು ಗುರುತಿಸಿಕೊಳ್ಳಬಹುದು. ಸಮುದಾಯದಲ್ಲಿನ ಪ್ರತಿಭಾನ್ವಿತರೆಲ್ಲರೂ ಸಮಾಜದ ಆಸ್ತಿಯಾಗಿರುತ್ತಾರೆ ಎಂದು ಸಾಫಲ್ಯ ಸೇವಾ ಸಂಘ ಮುಂಬಯಿ ಇದರ ಹಿರಿಯ ಸದಸ್ಯ, ಕೊಡುಗೈದಾನಿ ಕೇಶವ ಬಿ. ಪುತ್ರನ್‌ ನುಡಿದರು.

ಮೇ 26ರಂದು ಬೆಳಗ್ಗೆ ಕಾಂದಿವಲಿ ಪಶ್ಚಿಮದ ಪೊಯಿಸರ್‌ ಜಿಮಾVನಾದ ನೇತಾಜಿ ಸುಭಾಶ್ಚಂದ್ರ ಬೋಸ್‌ ಕ್ರಿಡಾಂಗಣ ಸಾಫಲ್ಯ ಸೇವಾ ಸಂಘವು ಆಯೋಜಿಸಿದ್ದ ಸಾಫಲ್ಯ ಕ್ರೀಡಾ ಸ್ಪರ್ಧೆ-2019ನ್ನು ಉದ್ಘಾಟಿಸಿ ಮಾತನಾಡಿದ ಅವರು ಕ್ರೀಡೆಯನ್ನು ಸ್ಪರ್ಧೆಗಿಂತ ಪ್ರತಿಷ್ಠೆಯಾಗಿ ಸ್ವೀಕರಿಸಬೇಕು. ಸ್ಪರ್ಧೆ, ಪ್ರತಿಭಾನ್ವೇಷಣೆಗೆ ವಯೋಮಿತಿ ತಡೆಯಾಗದು. ಕ್ರೀಡಾಸ್ಫೂರ್ತಿ ಸಮಾಜಕ್ಕೆ ಕೀರ್ತಿ ತರುತ್ತದೆ. ಕ್ರೀಡೆ ಯಾವುದೇ ಆಗಲಿ ಅವರ ಆಯ್ಕೆಯ ಸ್ಪರ್ಧೆಗೆ ನಾವು ಪ್ರೋತ್ಸಾಹ ನೀಡಬೇಕು. ಸಮುದಾಯದ ಸರ್ವೋನ್ನತಿ ಒಬ್ಬರಿಂದ ಅಸಾಧ್ಯ. ಸಾಂಘಿಕವಾಗಿ ಸಮಾಜವನ್ನು ಸಂಘಟಿಸಿ ಮುನ್ನಡೆದಾಗಲೇ ಸಫಲಿಗರಾದ ನಾವು ಎಲ್ಲಾ ಕ್ಷೇತ್ರದಲ್ಲೂ ಸಫಲರಾಗಲು ಸಾಧ್ಯ ಎಂದು ಹೇಳಿದರು.

ಸಂಸ್ಥೆಯ ಉಪಾಧ್ಯಕ್ಷ ಕೃಷ್ಣ ಕುಮಾರ್‌ ಬಂಗೇರ ಅವರು ಶ್ರೀಫಲ ಹೊಡೆದು ಕ್ರೀಡೋತ್ಸವಕ್ಕೆ ವಿಧ್ಯುಕ್ತವಾಗಿ ಚಾಲನೆ ನೀಡಿದರು. ಕ್ರೀಡೋತ್ಸವದಲ್ಲಿ ಅಪಾರ ಸಂಖ್ಯೆಯ ಸಾಫಲ್ಯ ಸಮಾಜ ಬಾಂಧವರು, ಸಂಘದ ಸದಸ್ಯರು, ಯುವಕ-ಯುವತಿಯರು, ಮಕ್ಕಳು ಭಾಗವಹಿಸಿ ಪಥಸಂಚಲನ ನಡೆಸಿದರು. ಅತಿಥಿ-ಗಣ್ಯರು ಬಣ್ಣದ ಬಲೂನ್‌ಗೊಂಚ ಲನ್ನು ಬಾನೆತ್ತರಕ್ಕೆ ಹಾರಿಸಿ ಸಾಂಕೇತಿಕವಾಗಿ ಕ್ರೀಡೋತ್ಸವಕ್ಕೆ ಚಾಲನೆ ನೀಡಿದರು.

ಸಾಫಲ್ಯ ಸೇವಾ ಸಂಘದ ಉಪಾಧ್ಯಕ್ಷ ಕೃಷ್ಣ ಕುಮಾರ್‌ ಬಂಗೇರ ಅಧ್ಯಕ್ಷತೆಯಲ್ಲಿ ನಡೆಸಲ್ಪಟ್ಟ ಕ್ರೀಡೋತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅತಿಥಿ-ಅಭ್ಯಾಗತರಾಗಿ ರಾಷ್ಟ್ರೀಯ ಚಾಂಪಿಯನ್‌ ಕ್ರೀಡಾಪಟು, ಟೀಂ ಇಂಡಿಯಾ ಥ್ರೋಬಾಲ್‌ ತಂಡದ ತರಬೇತುದಾರ ದೀಪಕ್‌ ವಾಸುದೇವ ಕೋಟ್ಯಾನ್‌, ಸಾಫಲ್ಯ ಸಮಾಜದ ಅತ್ಲೆಟಿಕ್‌ಗಳಾದ ಶಂಕರ್‌ ಸಫಲಿಗ ಮತ್ತು ಅಶುತೋಷ್‌ ಸಾಫಲ್ಯ ಮತ್ತು ಕ್ರೀಡೋತ್ಸವದ ಪ್ರಾಯೋಜಕರಾದ ಮಲ್ಲಿಕಾ ಸದಾನಂದ ಸಫಲಿಗ ರಾಜ್‌ಯೋಗ್‌, ಸಂಘದ ಮಹಿಳಾ ವಿಭಾಗಧ್ಯಕ್ಷೆ ಶೋಭಾ ಬಂಗೇರ, ಯುವ ವಿಭಾಗದ ಅಧ್ಯಕ್ಷ ರವಿಕಾಂತ್‌ ಸಫಲಿಗ, ಕ್ರೀಡಾ ಸಂಚಾಲಕ ಹೇಮಂತ್‌ ಬಿ. ಸಫಲಿಗ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರಾದ ಜಯರಾಮ ಸಫಲಿಗ, ಓಂಪ್ರಕಾಶ್‌ ರಾವ್‌, ಮಾಜಿ ಉಪಾಧ್ಯಕ್ಷ ವಿಠಲ್‌ ಸಫಲಿಗ, ಪ್ರೇಮಾ ಜಯರಾಮ್‌, ಸಾಫಲ್ಯ ಸೇವಾ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು. ಸಂಘದ ಜೊತೆ ಕೋಶಾಧಿಕಾರಿ ದಮಯಂತಿ ಸಾಲ್ಯಾನ್‌, ಮಹಿಳಾ ವಿಭಾಗದ ಉಪಾಧ್ಯಕ್ಷೆ ವಿಮಲಾ ಬಂಗೇರ, ಕಾರ್ಯದರ್ಶಿ ಕಲಾ ಬಂಗೇರ ಮತ್ತಿತರರು ಉಪಸ್ಥಿತರಿದ್ದರು.

ಕ್ರೀಡಾ ಸಹ ಸಂಘಟಕರಾದ ಹರ್ಷದ್‌ ಸಫಲಿಗ, ಸಂಜನಾ ಕುಂಜತ್ತೂರು, ಕವಿತಾ ಬಂಗೇರ ಕ್ರೀಡಾ ಮೇಲ್ವಿಚಾರಕರಾದ ಪಿ. ಬಿ. ಪುತ್ರನ್‌, ಅಶೋಕ್‌ ಕುಮಾರ್‌, ಯೋಗೇಶ್‌ ಕಾಂಚನ್‌, ಮಧುಕರ್‌ ಕರ್ಕೇರ, ವಿಜಯಕುಮಾರ್‌ ಹೊಸಕಟ್ಟಿ, ಪ್ರಕಾಶ್‌ ಪುತ್ರನ್‌ ವಿವಿಧ ಕ್ರೀಡೆಗಳನ್ನು ನಡೆಸಿಕೊಟ್ಟರು. ವಿಶೇಷ ಆಕರ್ಷಣೆಯಾಗಿ ಪುರುಷರಿಗಾಗಿ ಕ್ರಿಕೆಟ್‌ ಮತ್ತು ವಾಲಿಬಾಲ್‌ ಪಂದ್ಯಾಟ, ಮಹಿಳೆಯರಿಗಾಗಿ ಥ್ರೋಬಾಲ್‌ ಮತ್ತು ಬಾಕ್ಸ್‌ ಕ್ರಿಕೆಟ್‌ ಸ್ಪರ್ಧೆ, ಎಳೆಯ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಅತ್ಯಾಕರ್ಷಕ ಕ್ರೀಡಾಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ಬರ್ಡ್‌ಗಿಫ್ಟ್‌ ಆಯೋಜಿಸಿ ಕೊನೆಯಲ್ಲಿ ಲಕ್ಕಿ ಡ್ರಾ ನಡೆಸಲಾಯಿತು.

ಕು| ಅಶ್ವಿ‌ನಿ ಸಫಲಿಗ ಮತ್ತು ಕು| ಕವಿತಾ ಬಂಗೇರ ಪ್ರಾರ್ಥನೆಗೈದರು. ಸಂಘದ ಗೌರವ ಪ್ರಧಾನ ಕಾರ್ಯದರ್ಶಿ ಅನುಸೂಯಾ ಕೆಲ್ಲಪುತ್ತಿಗೆ ಸ್ವಾಗತಿಸಿದರು. ಪ್ರತಿಭಾ ಸಫಲಿಗ ಪ್ರಸ್ತಾವನೆಗೈದು ಅತಿಥಿಗಳನ್ನು ಪರಿಚಯಿಸಿದರು. ಸಂಘದ ವಿವಿಧ ಪದಾಧಿಕಾರಿಗಳು ಅತಿಥಿಗಳನ್ನು ಶಾಲು ಹೊದೆಸಿ, ಪುಷ್ಪಗುತ್ಛ, ಸ್ಮರಣಿಕೆ ನೀಡಿ ಗೌರವಿಸಿದರು. ಕು| ನಿಶಾ ಕೆಲ್ಲಪುತ್ತಿಗೆ ಕಾರ್ಯಕ್ರಮ ನಿರೂಪಿಸಿದರು. ಅಶ್ವಿ‌ನಿ ಸಫಲಿಗ ಮತ್ತು ದಿಶಾ ಬಂಗೇರ ಕ್ರೀಡಾ ಸಂಯೋಜನೆಗೈದರು. ಸಂಘದ ಗೌರವ ಕೋಶಾಧಿಕಾರಿ ಭಾಸ್ಕರ್‌ ಸಫಲಿಗ ವಂದಿಸಿದರು.

ಚಿತ್ರ-ವರದಿ : ರೋನ್ಸ್‌ ಬಂಟ್ವಾಳ್‌

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara:ಸಿಟಿ ಆಫ್ ವಿಂಡ್ಸ್‌ ಕ್ಯಾಸ್ಪಿಯನ್‌: ಸಮುದ್ರ ಕಿನಾರೆಯ ಪ್ರವಾಸಿ ತಾಣ ಬಾಕು ನಗರ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮೆರಿಕ-ಸೌರಮಾನ ಯುಗಾದಿ ಆಚರಣೆ

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ಹೆಮ್ಮೆಯ ದುಬೈ ಕನ್ನಡ ಸಂಘ- ಶಾರ್ಜಾ ಮಳೆ ಸಂತ್ರಸ್ಥರಿಗೆ ಸಹಾಯ ಹಸ್ತ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

Desi Swara: ವಸಂತನಾಗಮನ- ಇಂಗ್ಲೆಂಡಿನಲ್ಲಿ ಹರುಷದಿ ಸಂಭ್ರಮಿಸಿದ ಕನ್ನಡ ಜನ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.