ಕೂಲಿ ಕಾರ್ಮಿಕರ ಗುಳೆ ತಪ್ಪಿಸಲು ನರೇಗಾ ಸಹಕಾರಿ

ಹೆಣ್ಣು-ಗಂಡು ಎಂಬ ಭೇದವಿಲ್ಲದೆ ಸಮಾನ ವೇತ‌ನ ಸೌಲಭ್ಯ

Team Udayavani, May 28, 2019, 12:40 PM IST

haveri-tdy-2…

ಶಿಗ್ಗಾವಿ: ಹಿರೇಮಣಕಟ್ಟಿ ಹಾಗೂ ಹಿರೇಬೆಂಡಿಗೇರಿಯಲ್ಲಿ ನಡೆಯುತ್ತಿರುವ ಕಾಲುವೆ ಹೂಳೆತ್ತುವ ಕಾಮಗಾರಿ ಸ್ಥಳಕ್ಕೆ ಜಿಪಂ ಸಿಇಒ ಕೆ. ಲೀಲಾವತಿ ಭೇಟಿ ನೀಡಿ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.

ಶಿಗ್ಗಾವಿ: ಬರಗಾಲ ಬವಣೆಗಾಗಿ ಕೂಲಿ ಕಾರ್ಮಿಕರು ದುಡಿಮೆ ಹುಡುಕಿಕೊಂಡು ಗುಳೆ ಹೋಗುವುದನ್ನು ತಪ್ಪಿಸಲು ಹಾಗೂ ಸ್ವಂತ ಗ್ರಾಮದಲ್ಲಿ ಉದ್ಯೋಗ ಸೃಷ್ಟಿಸಿ ಕಾರ್ಮಿಕರ ಜೀವನಕ್ಕೆ ಭದ್ರತೆ ನೀಡಲು ನರೇಗಾ ಯೋಜನೆಯಡಿ ಉದ್ಯೋಗ ಖಾತ್ರಿ ಸಹಕಾರಿಯಾಗಿದೆ ಎಂದು ಜಿಲ್ಲಾ ಪಂಚಾಯತ್‌ ಸಿಇಒ ಕೆ. ಲೀಲಾವತಿ ಹೇಳಿದರು.

ಸೋಮವಾರ ತಾಲೂಕಿನ ಹಿರೇಮಣಕಟ್ಟಿ ಹಾಗೂ ಹಿರೇಬೆಂಡಿಗೇರಿ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ನರೇಗಾ ಯೋಜನೆಯಡಿ ಕೈಗೊಂಡ ಹಿರೇಮಣಕಟ್ಟಿ ಗ್ರಾಮದಲ್ಲಿ ಕಾಲುವೆ ಹೂಳೆತ್ತುವ ಕಾಮಗಾರಿ ಪರಿಶೀಲಿಸಿ ಮಾತನಾಡಿದ ಅವರು, ಸಮುದಾಯ ಆಧಾರಿತ ಬಹುಪಯೋಗಿ ನೀರಿನ ಸಂಪನ್ಮೂಲ ಸಂರಕ್ಷಣಾ ಕ್ರಮವಾಗಿ, ಕೆರೆಗಳ ಪುನಶ್ಚೇತನಕ್ಕೆ ಕಾಲುವೆಗಳ ದುರಸ್ತಿ, ಕೆರೆಗಳ ಅಚ್ಚುಕಟ್ಟು ಕಾಮಗಾರಿ, ಮಲ್ಟಿಚೆಕ್‌ ಡ್ಯಾಂ ನಿರ್ಮಾಣ ಮಾಡುವುದರಿಂದ ಅಂತರ್ಜಲ ಪುನಃಶ್ಚೇತನ ಮಾಡಬಹುದಾಗಿದೆ. ಅಲ್ಲದೇ ಬದುಗಳಲ್ಲಿ ಗಿಡಮರಗಳನ್ನು ನೆಡುವುದು, ಕೃಷಿ ಭೂಮಿಯಲ್ಲಿ ಬದುಗಳ ನಿರ್ಮಾಣ, ಮಣ್ಣು ಬಸಿಯದಂತೆ ತಡೆಗಟ್ಟುವುದು, ಜಮೀನುಗಳಲ್ಲಿ ಕೃಷಿ ಹೊಂಡ ನಿರ್ಮಾಣ, ಪ್ರತಿಯೊಂದು ಮನೆಗೆ ಶೌಚಾಲಯ ನಿರ್ಮಾಣದಂತಹ ಕಾಮಗಾರಿಗಳಲ್ಲಿ ವೈಯಕ್ತಿಕ ಕೆಲಸಗಳ ಮೂಲಕ ಉದ್ಯೋಗ ಸೃಷ್ಟಿ ಮಾಡಬಹುದಾಗಿದೆ ಎಂದ‌ರು.

ಜೂನ್‌ 11 ರಂದು ಮಾನ್ಸುನ್‌ ಮಾರುತದ ಮಳೆಗಾಲ ಆರಂಭದಲ್ಲಿ ಜಲಾಮೃತ ಯೋಜನೆಯಡಿ ತಾಲೂಕಿನ ಸರ್ಕಾರಿ ಕಚೇರಿಗಳ ಕಂಪೌಂಡ್‌ಗಳ ಒಳಗೆ, ರಸ್ತೆ ಬದಿಗಳಲ್ಲಿ ಸಸಿಗಳನ್ನು ನೆಡುವ, ಅದನ್ನು ನಿರ್ವಹಣೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.

ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಚಂದ್ರು ಪೂಜಾರ ಮಾತನಾಡಿ, ನಿರಂತರ ಮಾನವ ಚಟುವಟಿಕೆಯಿಂದ ಹಾನಿಯಾಗುತ್ತಿರುವ ಪರಿಸರ ರಕ್ಷಿಸಲು ಸರ್ಕಾರದ ಯಶಸ್ವಿ ಯೋಜನೆಯಾದ ನರೇಗಾದಂತಹ ಕಾರ್ಯಕ್ರಮ ಸಹಕಾರಿಯಾಗಿವೆ. ಪ್ರತಿಯೊಬ್ಬ ಕಾರ್ಮಿಕನಿಗೂ ಅದರ ತಿಳಿವಳಿಕೆ ಅಗತ್ಯವಿದೆ. ನರೇಗಾ ಯೋಜನೆಯಡಿ ಕೂಲಿ ವೇತನದಲ್ಲಿ ಹೆಣ್ಣು-ಗಂಡು ಎಂಬ ಭೇದ ಭಾವಗಳಿಲ್ಲ. ಎಲ್ಲರೂ ಸಮಾನ ಕೂಲಿ ಪಡೆಯಬಹುದಾಗಿದೆ. ಅಲ್ಲದೇ ತೋಟಗಾರಿಕೆ ಹಾಗೂ ಕೃಷಿ ಇಲಾಖೆಯಡಿ ಹಲವಾರು ಕಾರ್ಯಕ್ರಮಗಳನ್ನು ನರೇಗಾ ಯೋಜನೆ ಮೂಲಕ ಸಂಯೋಜಿಸಲಾಗಿದ್ದು, ಪ್ರತಿಯೊಬ್ಬ ಕಾರ್ಮಿಕರೂ ಪ್ರಯೋಜನೆ ಫಲ ಪಡೆಯಬಹುದಾಗಿದೆ ಎಂದರು.

ನಂತರ ಹಿರೆಬೆಂಡಿಗೇರಿ ಗ್ರಾಮಕ್ಕೆ ತೆರಳಿ ಪಂಚಾಯತಿ ವ್ಯಾಪ್ತಿಯ ಗೂಗಿಮಡ್ಡಿಯಿಂದ ಕಾಡಗಟ್ಟಿಯವರೆಗೆ ನೀರುಗಾಲುವೆ ಹೂಳೆತ್ತುವ ಕಾಮಗಾರಿ ವೀಕ್ಷಣೆ ಮಾಡಿದರು.

ಜಿಲ್ಲಾ ಎಂಐಎಸ್‌ ಸಂಯೋಜಕ ಪ್ರಶಾಂತ ಬಳಿಗಾರ, ದೀಪಕ, ತಾಪಂ ಎಂಐಎಸ್‌ ಸಂಯೋಜಕ ಮಹದೇವ ಬಿ., ಐಇಸಿ ಸಂಯೋಜಕಿ ಹೂಗಾರ, ರಾಜೇಶ್ವರಿ ಬಿ.ಎನ್‌., ತಾಂತ್ರಿಕ ಸಂಯೋಜಕ ಎಂ.ಎಂ. ಪಾಟೀಲ, ಗ್ರಾಪಂ ಮಣಕಟ್ಟಿ ಗ್ರಾಮದ ಪಿಡಿಒ ಬಸವರಾಜ ಮದನಬಾವಿ, ಹಿರೆಬೆಂಡಿಗೇರಿ ಪಿಡಿಒ ಬಸವರಾಜ ಪೂಜಾರ ಹಾಗೂ ಸರ್ವ ಸದಸ್ಯರು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

1-qweewqe

Prajwal Case; ತಮ್ಮ ಹೆಸರು ಬಳಸದಂತೆ ಕೋರ್ಟ್ ತಡೆ ತಂದ ಎಚ್ ಡಿಡಿ, ಎಚ್ ಡಿಕೆ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ

ಕೊರಗಜ್ಜ, ಕಲ್ಲುರ್ಟಿ ದೈವಗಳಿಗೆ ‘ಫಸ್ಟ್ ಲುಕ್’ ತೋರಿಸಿ ಅನುಮತಿ ಪಡೆದ ‘ಕೊರಗಜ್ಜ’ ಚಿತ್ರತಂಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

34 ಸಾವಿರ ರೂ. ಬರ ಪರಿಹಾರಕ್ಕೆ ಒತ್ತಾಯ: ಮಲ್ಲಿಕಾರ್ಜುನ ಬಳ್ಳಾರಿ

7-haveri

Haveri: ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ; ವಿಡಿಯೋ ವೈರಲ್

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’

Interview: “ಈ ಭಾಗದಲ್ಲಿ  ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

ಬಿಜೆಪಿ ಸೇರಿದಾಕ್ಷಣ ಶುದ್ಧರಾಗಲು ಆ ಪಕ್ಷ ವಾಷಿಂಗ್‌ ಮಶೀನಾ: ರಮಾನಾಥ ರೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.