ಗ್ರಾಮಾಂತರದ ಗ್ರಾಹಕರಿಗೂ ಇನ್ನು ಲಭ್ಯ
ಮೆಸ್ಕಾಂ ಆನ್ಲೈನ್ ಬಿಲ್ ಪಾವತಿ ಸೌಲಭ್ಯ
Team Udayavani, May 29, 2019, 6:00 AM IST
ಮಂಗಳೂರು: ಮಂಗಳೂರು ವಿದ್ಯುತ್ ಸರಬರಾಜು ಕಂಪೆನಿಯು (ಮೆಸ್ಕಾಂ) ಗ್ರಾಮಾಂತರ ಪ್ರದೇಶದ ವಿದ್ಯುತ್ ಗ್ರಾಹಕರಿಗೆ ಆನ್ಲೈನ್ ಮತ್ತು ಪೇಟಿಎಂ ಮೂಲಕ ವಿದ್ಯುತ್ ಬಿಲ್ ಪಾವತಿ ಮಾಡುವ ಸೇವೆಯನ್ನು ಪ್ರಾರಂಭಿಸಿವೆ.
ಗ್ರಾಮಾಂತರ ಪ್ರದೇಶದ ವಿದ್ಯುತ್ ಬಳಕೆದಾರ ಗ್ರಾಹಕರು ನಗರ ಪ್ರದೇಶಕ್ಕೆ ತೆರಳಿ ಸರತಿ ಸಾಲಿನಲ್ಲಿ ಗಂಟೆಗಟ್ಟಲೇ ನಿಂತು ಬಿಲ್ ಪಾವತಿ ಮಾಡುತ್ತಿದ್ದರು. ಇದರಿಂದ ಗ್ರಾಹಕರಿಗೆ ಮುಕ್ತಿ ನೀಡುವ ಕಾರಣದಿಂದ ನಗರದ ಪ್ರದೇಶದ ವಿದ್ಯುತ್ ಗ್ರಾಹಕರಿಗೆ ಮಾತ್ರ ಆನ್ಲೈನ್ ಬಿಲ್ ಪಾವತಿ ಸೌಲಭ್ಯ ನೀಡಿದ್ದ ಮೆಸ್ಕಾಂ ಇದೀಗ ಗ್ರಾಮೀಣ ಪ್ರದೇಶದ ಗ್ರಾಹಕರಿಗೂ ಈ ಸೌಲಭ್ಯವನ್ನು ವಿಸ್ತರಿಸಿವೆ. ಇದರೊಂದಿಗೆ ಮೆಸ್ಕಾಂ ವ್ಯಾಪ್ತಿಯ ಉಡುಪಿ, ದ.ಕ., ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಸುಮಾರು 16 ಲಕ್ಷಕ್ಕೂ ಅಧಿಕ ಗ್ರಾಹಕರು ಈ ಸೌಲಭ್ಯವನ್ನು ಪಡೆಯಲು ಸಾಧ್ಯವಾಗಿದೆ. ಗ್ರಾಹಕರು ಮನೆಯಲ್ಲಿಯೇ ಕುಳಿತು ಆ್ಯಂಡ್ರಾಯ್ಡ ಪೋನ್ ಮೂಲಕ ಬಿಲ್ ಪಾವತಿ ಮಾಡುವ ಸರಳ ವಿಧಾನವನ್ನು ಮೆಸ್ಕಾಂ ಪರಿಚಯಿಸಿದೆ.
ಪಾವತಿ ಹೇಗೆ?
www. mesco.in ವೆಬ್ಸೈಟ್ಗೆ ಹೋದಾಗ ಆಯ್ಕೆ ಪರದೆಯು ತೆರೆದುಕೊಳ್ಳುತ್ತದೆ. ಹಾಗೆಯೇ ಆನ್ಲೈನ್ ಪೇಮೆಂಟ್ ಸಿಸ್ಟಮ್ ಐಕಾನ್ ಕಾಣುತ್ತದೆ. ಅದನ್ನು ಕ್ಲಿಕ್ ಮಾಡಿದರೆ ಆರ್ಎಪಿಡಿಆರ್ ಪಟ್ಟಣ ಹಾಗೂ ಗ್ರಾಮಾಂತರ ಎಂಬ ಆಯ್ಕೆ ತೆರೆದುಕೊಳ್ಳುತ್ತದೆ. ಗ್ರಾಮೀಣ ಭಾಗದ ಗ್ರಾಹಕರು ಗ್ರಾಮಾಂತರ ಎಂಬುದನ್ನು ಆಯ್ಕೆ ಮಾಡಿಕೊಳ್ಳಬೇಕು. ಅನಂತರ ವಿದ್ಯುತ್ ಗ್ರಾಹಕರ ಆರ್ಆರ್ ಸಂಖ್ಯೆ ನಮೂದಿಸಿ ತ್ವರಿತವಾಗಿ ಬಿಲ್ ಪಾವತಿ ಮಾಡಬಹುದು.
ಪೇಟಿಎಂ ಮೂಲಕವೂ ಬಿಲ್ ಪಾವತಿ ಮಾಡುವ ಅವಕಾಶವಿದ್ದು, ಗ್ರಾಹಕರು ಮೊಬೈಲ್ ಸಂಖ್ಯೆ ದಾಖಲು ಮಾಡಿದ್ದರೆ, ಪಾವತಿಸಿದ ಕೂಡಲೇ ಎಸ್ಎಂಸ್ ಸಂದೇಶ ನೀಡುವ ವ್ಯವಸ್ಥೆಯೂ ಇದೆ. ನಗರ ಪ್ರದೇಶದವರು ಭಾರತ್ ಬಿಲ್ ಪೇ ಸರ್ವಿಸ್ (ಬಿಬಿಪಿಎಸ್) ಮೂಲಕವೂ ಬಿಲ್ ಪಾವತಿಸಬಹುದು. ಆದರೆ ಈ ಸೌಲಭ್ಯವು ಗ್ರಾಮೀಣ ಪ್ರದೇಶದ ಗ್ರಾಹಕರಿಗೆ ಸದ್ಯಕ್ಕೆ ಸಿಗುತ್ತಿಲ್ಲ. ಮೇ 16ರಿಂದ ಆನ್ಲೈನ್ ಪಾವತಿ ವ್ಯವಸ್ಥೆಯನ್ನು ಅಧಿಕೃತವಾಗಿ ಆರಂಭಿಸಲಾಗಿದೆ. ಮೆಸ್ಕಾಂನ 24 ಲಕ್ಷ ಗ್ರಾಹಕರ ಪೈಕಿ 16 ಲಕ್ಷಕ್ಕೂ ಅಧಿಕ ಗ್ರಾಮೀಣ ಭಾಗದ ಗ್ರಾಹಕರು ಈ ಸೌಲಭ್ಯ ಪಡೆಯಲಿದ್ದಾರೆ.
ಸಮಯ ವ್ಯರ್ಥ ಇಲ್ಲ
ಬಿಲ್ ಪಾವತಿಗಾಗಿ ಗಂಟೆಗಟ್ಟಲೆ ಸಾಲಿನಲ್ಲಿ ನಿಂತು ಸಮಯ ವ್ಯರ್ಥ ಮಾಡಬೇಕಾಗಿಲ್ಲ. ಮನೆಯಲ್ಲೇ ಮೊಬೈಲ್ ಬಳಕೆ ಮಾಡಿಕೊಂಡು ಆನ್ಲೈನ್ ವ್ಯವಸ್ಥೆಯಿಂದ ಬಿಲ್ ಪಾವತಿಸಬಹುದು.
– ಸ್ನೇಹಲ್ ಆರ್., ಮೆಸ್ಕಾಂ ವ್ಯವಸ್ಥಾಪಕ ನಿರ್ದೇಶಕಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಗಳೂರು: ಬಿಸಿಲ ಧಗೆ ಹೆಚ್ಚಿದ್ದರೂ ಅಗ್ನಿ ಆಕಸ್ಮಿಕ ಪ್ರಮಾಣ ಕಡಿಮೆ
ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ
Tulu Movie ಮೇ 3: “ಗಬ್ಬರ್ ಸಿಂಗ್’ ತುಳು ಸಿನೆಮಾ ತೆರೆಗೆ
Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ
MUST WATCH
ಹೊಸ ಸೇರ್ಪಡೆ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ