ತಣ್ಣಗಾದ ಸುದೀರ್ಘ‌ ನೀತಿ ಸಂಹಿತೆಯ ಬಿಸಿ

ಇನ್ನು ಮುಂದೆ ಸರಕಾರಿ ಕೆಲಸ-ಕಾರ್ಯಗಳು ಚುರುಕು

Team Udayavani, May 29, 2019, 6:00 AM IST

Voting 1

ಪುತ್ತೂರು: ಲೋಕಸಭಾ ಚುನಾವಣೆಯ ಸುದೀರ್ಘ‌ ಅವಧಿಯ ನೀತಿ ಸಂಹಿತೆಯ ಬಿಸಿ ಮೇ 27ಕ್ಕೆ ತಣ್ಣಗಾಗಿದ್ದು, ಮಂಗಳವಾರದಿಂದಲೇ ಬಹುತೇಕ ಸರಕಾರಿ ಕೆಲಸ-ಕಾರ್ಯಗಳು ಚುರುಕುಗೊಂಡಿವೆ. ಮಾ. 10ರಂದು ಚುನಾವಣೆ ಘೋಷಣೆಯಾಗಿದ್ದು, ಬಹುತೇಕ ಕಾಮಗಾರಿಗಳು ಸ್ಥಗಿತಗೊಂಡಿದ್ದವು.

ಬರೋಬ್ಬರಿ 78 ದಿನಗಳ ಸುದೀರ್ಘ‌ ಅವಧಿಯ ನೀತಿಸಂಹಿತೆ ಜಾರಿಯಲ್ಲಿತ್ತು. ಸಚಿವರು, ಸಂಸದರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಜಿ.ಪಂ. ಸದಸ್ಯರು ಮೊದಲಾದ ಜನಪ್ರತಿನಿಧಿಗಳು ಕಳೆದ ಮಾರ್ಚ್‌ನಲ್ಲೇ ನೆರವೇರಿಸಬೇಕಿದ್ದ ಅಭಿವೃದ್ಧಿ ಕಾರ್ಯಗಳ ಶಿಲಾನ್ಯಾಸ-ಉದ್ಘಾಟನಾ ಸಮಾರಂಭಗಳು ನಿಂತು ಹೋಗಿದ್ದವು.

ಕಾರ್ಯಕ್ರಮದಲ್ಲಿ ಭಾಗಿ
ಈಗ ಚುನಾವಣ ನೀತಿಸಂಹಿತೆ ತೆರವುಗೊಂಡಿದ್ದು, ಇನ್ನು ಜನಪ್ರತಿನಿಧಿಗಳು ಸಭೆ-ಸಮಾರಂಭಗಳಲ್ಲಿ ಬ್ಯುಸಿಯಾಗಲಿದ್ದಾರೆ. ಮೇ 27ಕ್ಕೆ ನೀತಿ ಸಂಹಿತೆ ತೆರವುಗೊಂಡ ಬೆನ್ನಲ್ಲೇ ಮಂಗಳವಾರ ಪುತ್ತೂರು ಶಾಸಕ ಸಂಜೀವ ಮಠಂದೂರು ಹಾಗೂ ಸುಳ್ಯ ಶಾಸಕ ಎಸ್‌. ಅಂಗಾರ ಅವರು ಕಡಬ ಸಿಎ ಬ್ಯಾಂಕ್‌ನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದಾರೆ.

ನೀತಿ ಸಂಹಿತೆಯ ಹಿನ್ನೆಲೆಯಲ್ಲಿ ಗ್ರಾ.ಪಂ., ತಾ.ಪಂ., ಜಿ.ಪಂ. ಸಾಮಾನ್ಯ ಸಭೆಗಳು, ಕೆಡಿಪಿ ಸಭೆಗಳು ಸಹಿತ ಇತರ ಸಭೆಗಳನ್ನು ನಡೆಸುವುದಕ್ಕೆ ಅವಕಾಶವಿರಲಿಲ್ಲ. ಮುಂದಿನ ದಿನಗಳಲ್ಲಿ ಅಂತಹ ಸಭೆಗಳನ್ನು ನಡೆಸುವುದಕ್ಕೆ ಯಾವುದೇ ಅಡ್ಡಿಯಿಲ್ಲ. ಇಂತಹ ಸಭೆಗಳಲ್ಲಿ ಕೆಲವೊಂದು ಗಂಭೀರ ವಿಚಾರಗಳು ಚರ್ಚೆಯಾಗಿ ತತ್‌ಕ್ಷಣದ ಪರಿಹಾರವೂ ಸಿಗುತ್ತದೆ. ಹೀಗಾಗಿ ನನೆಗುದಿಗೆ ಬಿದ್ದಿದ್ದ ಅಭಿವೃದ್ಧಿ ಕಾರ್ಯಗಳು ಚುರುಕು ಪಡೆಯುವ ಸಾಧ್ಯತೆಯೂ ಇದೆ.

ಸರಕಾರಿ ಕಚೇರಿಗಳಲ್ಲಿ ಕೆಲವೊಂದು ಸೇವೆಗಳು ಮಂಗಳವಾರದಿಂದ ಪುನರಾರಂಭಗೊಂಡಿದ್ದು, ಮುಂದೆ ತಾಲೂಕು ಕಚೇರಿ ಸಹಿತ ಹೆಚ್ಚಿನ ಕಡೆ ಜನರ ಸಾಲು ಕಂಡುಬರಲಿದೆ.

ಎಲ್ಲವೂ ಪುನರಾರಂಭಲೋಕಸಭಾ ಚುನಾವಣೆಯ ನೀತಿಸಂಹಿತೆಯಿಂದಾಗಿ ಸ್ಥಗಿತಗೊಂಡಿದ್ದ ಎಲ್ಲ ಸೇವೆಗಳು, ಅಭಿವೃದ್ಧಿ ಕಾರ್ಯಗಳು ಮುಂದಿನ ದಿನಗಳಲ್ಲಿ ಹಿಂದಿನಂತೆ ನಡೆಯಲಿದೆ. ತಾಲೂಕು ಕಚೇರಿಯಲ್ಲೂ ಎಲ್ಲ ಸೇವೆಗಳು ಜನರಿಗೆ ಲಭ್ಯವಾಗಲಿವೆ. ಸಭೆಗಳು, ಕಾರ್ಯಕ್ರಮಗಳು ಯಾವುದೇ ಅಡ್ಡಿಯಿಲ್ಲದೆ ಸಾಗಲಿವೆ. 
ಎಚ್.ಕೆ. ಕೃಷ್ಣಮೂರ್ತಿ ಸಹಾಯಕ ಕಮಿಷನರ್‌, ಪುತ್ತೂರು

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.