ಕಬ್ಬು ಬೆಳೆಗಾರರ ಮೊಗದಲ್ಲಿ ಚಿಗುರೊಡೆದ ಆಸೆ

ಈಡೇರುವುದೇ ಮುಖಂಡರ ಭರವಸೆ

Team Udayavani, May 29, 2019, 9:46 AM IST

29-May-1

ಚಿಂಚೋಳಿ: ಎರಡು ದಶಕಗಳಿಂದ ನನೆಗುದಿಗೆ ಬಿದ್ದಿರುವ ಚಿಂಚೋಳಿ ಸಕ್ಕರೆ ಕಾರ್ಖಾನೆ.

ಶಾಮರಾವ ಚಿಂಚೋಳಿ
ಚಿಂಚೋಳಿ:
ಮೀಸಲು ಚಿಂಚೋಳಿ ವಿಧಾನಸಭೆ ಮತಕ್ಷೇತ್ರಕ್ಕೆ ಮೇ 19 ರಂದು ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಮತ್ತು ಬಿಜೆಪಿ ಮುಖಂಡರು ಉಪ ಚುನಾವಣೆಯಲ್ಲಿ ನಮ್ಮ ಪಕ್ಷ ಗೆದ್ದರೆ ತಾಲೂಕಿನಲ್ಲಿ ಹೊಸದಾಗಿ, ಇಲ್ಲವೇ ನನೆಗುದಿಗೆ ಬಿದ್ದಿರುವ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲಾಗುವುದು ಎನ್ನುವ ಭರವಸೆಗಳ ಸುರಿಮಳೆಯನ್ನೇ ಸುರಿಸಿದ್ದರಿಂದ ಇಲ್ಲಿನ ಕಬ್ಬು ಬೆಳೆಗಾರ ಮೊಗದಲ್ಲಿ ಆಸೆ ಚಿಗುರೊಡಿದೆ.

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಚುನಾವಣೆ ಸಂದರ್ಭದಲ್ಲಿ ಹಿಂದುಳಿದ ಭಾಗದಲ್ಲಿ ಸಕ್ಕರೆ ಕಾರಖಾನೆ ಪ್ರಾರಂಭಿಸಲು ಎಲ್ಲ ಅನುಕೂಲತೆ ಮಾಡಿಕೊಡುತ್ತೇನೆ. ಮೂಲ ಸೌಕರ್ಯ ಒದಗಿಸಲು ಚಿಂಚೋಳಿ ತಾಲೂಕನ್ನು ದತ್ತು ತೆಗೆದುಕೊಳ್ಳುತ್ತೇನೆ ಎನ್ನುವ ಭರವಸೆ ನೀಡಿದ್ದರು. ಬೀದರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೆಪಿಸಿಸಿ (ಐ) ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ಚುನಾವಣೆ ನಂತರ ಹೊಸದಾಗಿ ಸಕ್ಕರೆ ಕಾರ್ಖಾನೆ ಸ್ಥಾಪಿಸುವ ಭರವಸೆಯನ್ನು ರೈತರಿಗೆ ನೀಡಿದ್ದರು. ಆದರೆ ಬೀದರ ಲೋಕಸಭೆ ಮತ್ತು ಚಿಂಚೋಳಿ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುಭಾಶ ರಾಠೊಡ ಪರಾಜಯ ಆಗಿದ್ದರಿಂದ ಕಾಂಗ್ರೆಸ್‌ ಪಕ್ಷದ ಮುಖಂಡರಿಗೆ ಈ ಕುರಿತು ಬೇಡಿಕೆ ಇಡಲು ಸಾಧ್ಯವಿಲ್ಲ ಎನ್ನುವ ಚರ್ಚೆಗಳು ಸಾರ್ವಜನಿಕ ವಲಯದಲ್ಲಿ ಆರಂಭವಾಗಿದೆ. ಪಟ್ಟಣ ಹೊರ ವಲಯದ ಚಿಂಚೋಳಿ-ಕಲಬುರಗಿ ರಾಜ್ಯ ಹೆದ್ದಾರಿಯಲ್ಲಿ ಕಳೆದ ಎರಡು ದಶಕಗಳಿಂದ ನನೆಗುದಿಗೆ ಬಿದ್ದಿರುವ ಚಿಂಚೋಳಿ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಬೇಕಾಗುವ ನೆರವು, ಸಹಕಾರ ನೀಡಲಾಗುವುದು. ಇಲ್ಲವೇ ಹೊಸ ಕಾರ್ಖಾನೆ ಸ್ಥಾಪಿಸಿ ರೈತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಕೇಂದ್ರ ಮಾಜಿ ಸಚಿವ ಬಸವನಗೌಡ ಪಾಟೀಲ ಯತ್ನಾಳ ಭರವಸೆ ನೀಡಿದ್ದರು. ಅಲ್ಲದೇ ಬಿಜೆಪಿಯ ಅಭ್ಯರ್ಥಿಗಳಾಗಿದ್ದ ಡಾ| ಉಮೇಶ ಜಾಧವ, ಡಾ| ಅವಿನಾಶ ಜಾಧವ ಭರವಸೆಗಳ ಮಹಾಪೂರವನ್ನೇ ಹರಿಸಿದ್ದರು. ಬಿಜೆಪಿ ಅಭ್ಯರ್ಥಿ ಡಾ| ಅವಿನಾಶ ಜಾಧವ ಉಪ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ್ದರಿಂದ ಚಿಂಚೋಳಿಯಲ್ಲಿ ನನೆಗುದಿಗೆ ಬಿದ್ದ ಸಕ್ಕರೆ ಕಾರ್ಖಾನೆ ಪ್ರಾರಂಭವಾಗುವುದೇ ಇಲ್ಲವೇ ನೂತನ ಕಾರ್ಖಾನೆ ಆರಂಭವಾಗುವುದೇ ಎನ್ನುವ ಕುತೂಹಲ ರೈತರಲ್ಲಿ ಮನೆಮಾಡಿದೆ.

1998ರಲ್ಲಿ ಚಿಂಚೋಳಿ ಸಕ್ಕರೆ ಕಾರ್ಖಾನೆಗೆ ಆಗಿನ ಕೇಂದ್ರದ ಮಾಜಿ ಸಚಿವ ಪಿ.ಚಿದಂಬರ ಅಡಿಗಲ್ಲು ಸಮಾರಂಭ ನೇರವೇರಿಸಿದ್ದರು. 200 ಎಕರೆ ಜಮೀನು ಪ್ರದೇಶ ಹೊಂದಿರುವ ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಚೆನ್ನೈ ಕೊಯಮತ್ತೂರ ರಾಜಶ್ರೀಪತಿ ಮತ್ತು ಹೈದ್ರಾಬಾದ್‌ನ ಟರ್ಬೋ ಕಂಪನಿಗೆ ನೀಡಲಾಗಿತ್ತು. ಎರಡು ಕಂಪನಿಗಳು ಸಕ್ಕರೆ ಕಾರ್ಖಾನೆ ಪ್ರಾರಂಭಿಸಲು ಅತ್ಯಾಧುನಿಕ ಯಂತ್ರೋಪಕರಣಗಳನ್ನು ಅಳವಡಿಸಿದ ಕೆಲವು ದಿನಗಳ ನಂತರ ಹಣಕಾಸಿನ ಸಮಸ್ಯೆಯಿಂದಾಗಿ ಎಲ್ಲ ಕೆಲಸಗಳನ್ನು ಮಧ್ಯೆದಲ್ಲಿಯೇ ಬಿಟ್ಟು ಹೋಗಿದ್ದರು. ಹೀಗಾಗಿ ಕಾರ್ಖಾನೆ ಎರಡು ದಶಕಗಳಿಂದ ನಿರ್ಲಕ್ಷ್ಯಕ್ಕೆ ಒಳಗಾಗಿದೆ.

ಕುಂಚಾವರಂ ಗಡಿಭಾಗದಲ್ಲಿ ಬರುವ ಶಾದಿಪುರ, ಜಿಲವರ್ಷ, ವೆಂಕಟಾಪುರ, ಶಿವರಾಮಪುರ, ಮಗದಂಪುರ, ಪೋಚಾವರಂ, ಲಚಮಾಸಾಗರ, ಅಂತಾವರಂ, ಶಾದೀಪುರ, ಬೋನಸಪುರ, ಶಿವರೆಡ್ಡಿಪಳ್ಳಿ ಗ್ರಾಮಗಳಲ್ಲಿ ಅತಿ ಹೆಚ್ಚು ಕಬ್ಬು ಬೆಳೆಸಲಾಗುತ್ತಿದೆ. ಅಲ್ಲದೇ ಚಿಮ್ಮನಚೋಡ, ಚಿಂಚೋಳಿ, ಸುಲೇಪೇಟ, ದೇಗಲಮಡಿ, ಐನೋಳಿ, ಚಂದ್ರಂಪಳ್ಳಿ, ಅಣವಾರ, ಮೋತಕಪಳ್ಳಿ ಇನ್ನಿತರ ಗ್ರಾಮಗಳಲ್ಲಿ ಅಂದಾಜು 3500 ಹೆಕ್ಟೇರ್‌ ಜಮೀನು ಪ್ರದೇಶದಲ್ಲಿ ಕಬ್ಬು ಬೆಳೆಸಲಾಗುತ್ತಿದೆ. ಈ ಕಬ್ಬನ್ನು ಹುಮನಾಬಾದನ ಹಳ್ಳಿಖೇಡ, ಯಾದಗಿರಿ ಮತ್ತು ಮನ್ನಾಎಕ್ಕೆಳ್ಳಿಗೆ ಮಾರಾಟಕ್ಕಾಗಿ ಸಾಗಿಸುವಂತಾಗಿದೆ. ಚಿಂಚೋಳಿ ಪಟ್ಟಣದಲ್ಲಿಯೇ ಹೊಸದಾಗಿ ಸಕ್ಕರೆ ಕಾರ್ಖಾನೆ ಪ್ರಾರಂಭಿಸಿದರೇ ಕಬ್ಬು ಬೆಳೆದ ರೈತರಿಗೆ ಅನುಕೂಲವಾಗುತ್ತದೆ.

ಟಾಪ್ ನ್ಯೂಸ್

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.