ಶಾಲೆಗಳಿಗೆ ಸಿಂಗಾರ; ಭವಿಷ್ಯವಾಗಲಿ ಬಂಗಾರ

|ತಳಿರು-ತೋರಣದ ಅಲಂಕಾರ; ಸಿಹಿಯ ಸ್ವಾಗತ |ಮೊದಲ ದಿನವೇ ಮಕ್ಕಳಿಗೆ ಸಿಗಲಿವೆ ಹೊಸ ಪುಸ್ತಕ; ಸಮವಸ್ತ್ರ

Team Udayavani, May 29, 2019, 10:18 AM IST

bg tdy 02

ಬೆಳಗಾವಿ: ಶಾಲಾ ಪ್ರಾರಂಭೋತ್ಸವ ಹಿನ್ನೆಲೆಯಲ್ಲಿ ಮಕ್ಕಳ ಬ್ಯಾಗ್‌ಗಳ ಮಾರಾಟ ಜೋರಾಗಿ ನಡೆದಿದೆ.

ಬೆಳಗಾವಿ: ಬೇಸಿಗೆ ರಜೆ ಮುಗಿದು ಇನ್ನು ಶಾಲೆಗಳತ್ತ ಹೆಜ್ಜೆ ಹಾಕುವ ಮಕ್ಕಳನ್ನು ಅದ್ಧೂರಿಯಾಗಿ ಸ್ವಾಗತಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲೆಯ ಎಲ್ಲ ಸರ್ಕಾರಿ ಶಾಲೆಗಳು ಮಕ್ಕಳನ್ನು ಕೈ ಬೀಸಿ ಕರೆಯುತ್ತಿವೆ. ಶಾಲಾ ಪ್ರಾರಂಭೋತ್ಸವ ವಿನೂತನವಾಗಿ ಆಚರಿಸಲು ಶಿಕ್ಷಕರು ವಿಶೇಷವಾಗಿ ತಯಾರಿ ಮಾಡಿಕೊಂಡಿದ್ದಾರೆ.

ಮೇ 29ರಿಂದ ಆರಂಭವಾಗುವ ಶಾಲೆಗಳು ಮಕ್ಕಳನ್ನು ಕೈ ಬೀಸಿ ಕರೆಯುತ್ತಿವೆ. ಈಗಾಗಲೇ ಎಲ್ಲ ಸಿದ್ಧತೆ ಮಾಡಿಕೊಂಡು ಆಕರ್ಷಣೀಯವಾಗಿ ಶಾಲೆಗಳನ್ನು ಅಲಂಕರಿಸಲಾಗಿದೆ. ಮಕ್ಕಳಿಗೆ ಸಂತಸದ ಅನುಭವ ನೀಡಲು ಎಲ್ಲ ಶಾಲೆಗಳನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿದೆ. ಮಕ್ಕಳಿಗೆ ಸಿಹಿ ಕೊಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಅಜ್ಜಿ, ಅಜ್ಜನ ಊರಿಗೆ ತೆರಳಿ ಭಾರದ ಹೃದಯದಿಂದ ಮನೆಗಳಿಗೆ ವಾಪಸ್ಸಾಗಿರುವ ಮಕ್ಕಳಿಗೆ ಮತ್ತೆ ಶಾಲೆಯ ಸಮಯಕ್ಕೆ ಹೊಂದಿಕೊಳ್ಳುವುದು ಪ್ರಾರಂಭದಲ್ಲಿ ಬೇಜಾರಾಗದಿರಲಿ ಎಂದು ಶಾಲೆಗಳನ್ನು ವಿನೂತನ ಹಾಗೂ ಆಕರ್ಷಕವಾಗಿ ಸಿಂಗಾರಗೊಳಿಸಲಾಗಿದೆ. ಮಕ್ಕಳು ಖುಷಿಯಿಂದ ಶಾಲೆಗಳತ್ತ ಹೆಜ್ಜೆ ಹಾಕಲು ಬೇಕಾಗುವ ಎಲ್ಲ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ. ಮೇ 29ರಂದು ಶಾಲೆಗೆ ಬರುವ ಮಕ್ಕಳಿಗೆ ಪುಸ್ತಕ, ಬಟ್ಟೆ ಹಂಚಿಕೆ ಕಾರ್ಯವೂ ನಡೆಯಲಿದೆ.

ಶಾಲಾ ಪ್ರಾರಂಭೋತ್ಸವಕ್ಕೆ ಶಾಲಾ ಆವರಣ, ಕೊಠಡಿಗಳ ಸ್ವಚ್ಛತೆ, ಶೌಚಾಲಯಗಳ ಸ್ವಚ್ಛತೆ, ಬಿಸಿಲಿನ ಬೇಗೆಯಿಂದ ತತ್ತರಿಸಿರುವ ಶಾಲಾ ಆವರಣದ ಗಿಡ-ಮರಗಳಿಗೆ ನೀರುಣಿಸುವುದು, ಉದ್ಯಾನವನದಲ್ಲಿಯ ಕಸ ಕಡ್ಡಿಗಳನ್ನು ತೆಗೆಯುವುದು ಹೀಗೆ ಅನೇಕ ಸಿದ್ಧತೆಗಳು ಪೂರ್ಣಗೊಂಡಿವೆ. ಶಾಲೆ ಆರಂಭವಾಗುತ್ತಿದ್ದಂತೆ ಮಳೆಗಾಲವೂ ಶುರು ಆಗುತ್ತದೆ. ಹೀಗಾಗಿ ಹಂಚಿನ ಶಾಲೆಗಳಲ್ಲಿ ಮುಂಜಾಗ್ರತ ಕ್ರಮ ಕೈಗೊಂಡು ಸೂರುವ ಶಾಲೆಗಳ ಬಗ್ಗೆ ನಿಗಾ ವಹಿಸಲಾಗಿದೆ.

ಎಸ್‌ಡಿಎಂಸಿ ಹಾಗೂ ಪೋಷಕರನ್ನು ಕರೆಯಿಸಿ ಮಕ್ಕಳನ್ನು ವಿಶೇಷವಾಗಿ ಸ್ವಾಗತಿಸಲಾಗುತ್ತದೆ. ಕೆಲ ಶಾಲೆಗಳಲ್ಲಿ ಬೆಳಗ್ಗೆ ಮೆರವಣಿಗೆ ನಡೆಸಿ ಮಕ್ಕಳನ್ನು ಕರೆ ತರುವ ಕಾರ್ಯಕ್ರಮಗಳನ್ನೂ ಹಾಕಿಕೊಳ್ಳಲಾಗಿದೆ. ಚಕ್ಕಡಿ, ಟ್ರ್ಯಾಕ್ಟರ್‌ಗಳಲ್ಲಿ ಮೆರವಣಿಗೆ ಮಾಡಿಸಿ ಕರೆ ತಂದು ಮಕ್ಕಳಲ್ಲಿ ಉತ್ಸಾಹ ಮೂಡಿಸಲಾಗುವುದು. 29ರಂದು ಮೊದಲನೇ ದಿನ ತರಗತಿ ನಡೆಯದಿದ್ದರೂ ಶಾಲಾ ಪ್ರಾರಂಭೊತ್ಸವದ ಕಾರ್ಯಕ್ರಮದಲ್ಲಿಯೇ ಇಡೀ ದಿನ ಶಿಕ್ಷಕರು ಹಾಗೂ ಮಕ್ಕಳು ಕಳೆಯುತ್ತಾರೆ.

ಮಕ್ಕಳಿಗೆ 34 ಅಂಶಗಳ ಕಲಿಕಾ ಕ್ರಮಗಳಲ್ಲಿ ಶೈಕ್ಷಣಿಕ ಪ್ರಗತಿ ಸಾಧಿಸುವಲ್ಲಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಮಕ್ಕಳಿಗೆ ಮೊದಲು ಪೂರ್ವಭಾವಿಯಾಗಿ ಪರೀಕ್ಷೆ ನಡೆಸಿ ಮಕ್ಕಳಲ್ಲಿನ ಕಲಿಕಾ ನ್ಯೂನತೆಗಳನ್ನು ಗುರುತಿಸಿ ಶಿಕ್ಷಣ ನೀಡುವ ಹಂತದಲ್ಲೂ ವಿಶೇಷವಾಗಿ ಶಿಕ್ಷಕರನ್ನು ಸಜ್ಜುಗೊಳಿಸಲಾಗುತ್ತಿದೆ. ಮಕ್ಕಳ ಶೈಕ್ಷಣಿಕ ಪ್ರಗತಿ ಕುರಿತು ಆಯಾ ಶಾಲೆಗಳಲ್ಲಿ ಪೋಷಕರ ಸಭೆ ಕರೆದು ಮಕ್ಕಳ ಶೈಕ್ಷಣಿಕ ಗುಣಮಟ್ಟದ ಕುರಿತು ತಿಳಿಸುವುದು, ಪೋಷಕರ ಸಹಾಯ ಪಡೆಯುವುದು, ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಮೂಡಿಸುವ ಮೂಲಕ ಸರ್ಕಾರಿ ಶಾಲೆಗಳ ಬಗ್ಗೆ ಪೋಷಕರ ಪ್ರೀತಿ ಬೆಳೆಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೇಸಿಗೆ ರಜೆಯಲ್ಲಿ ಮಜಾ ಮಾಡಿರುವ ಮಕ್ಕಳು ಶಾಲೆಗೆ ಬರಲು ಹಿಂಜರಿಯುತ್ತವೆ. ಇಂಥ ಸಂದರ್ಭದಲ್ಲಿ ಮಕ್ಕಳನ್ನು ವಿಶೇಷವಾಗಿ ಆಹ್ವಾನಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ. ಈ ಸಲ ನಮ್ಮ ಶಾಲೆಯಲ್ಲಿ ಚಕ್ಕಡಿಯನ್ನು ಸಿಂಗರಿಸಿ ಮಕ್ಕಳನ್ನು ಚಕ್ಕಡಿಯಲ್ಲಿ ಕೂರಿಸಿ ಮೆರವಣಿಗೆ ಮೂಲಕ ಶಾಲೆಗೆ ಕರೆ ತರಲಾಗುವುದು. ಮಕ್ಕಳ ಬೇಸರ ಕಳೆದು ಶಾಲಾ ಪ್ರಾರಂಭೋತ್ಸವದಂದು ಸಿಹಿ ನೀಡುವ ರೂಢಿ ಬೆಳೆದುಕೊಂಡು ಬಂದಿದೆ. • ಉಮೇಶಕುಮಾರ ಬಿರಾದಾರ, ಶಾಲಾ ಮುಖ್ಯೋಪಾಧ್ಯಾಯರು, ಸುಳೇಭಾವಿ
ಮೊಳಗಲಿವೆ ಘೋಷಣೆಗಳು:
ಮಕ್ಕಳನ್ನು ಶಾಲೆಗೆ ಕರೆ ತರಲು ಶಿಕ್ಷಣ ಇಲಾಖೆ ಕೆಲವು ಘೋಷಣೆಗಳನ್ನು ಸಿದ್ಧಗೊಳಿಸಿದೆ. ಪ್ರಭಾತ ಫೇರಿ ನಡೆಸಿ ಮಕ್ಕಳನ್ನು ಶಾಲೆಗೆ ಆಹ್ವಾನಿಸುವ ಘೋಷಣೆಗಳು ಮೊಳಗಲಿವೆ. ಮಕ್ಕಳನ್ನು ಶಾಲೆಗೆ ಕಳುಹಿಸಲು ಸಿದ್ಧರಾಗೋಣ, ಕಲಿತವರು ಕಲಿಸಿರಿ, ಕಲಿಯದವರು ಕಲಿಯಿರಿ, ಶಿಕ್ಷಣ ಕೊಡಿಸಿರಿ ಮಕ್ಕಳ ಬಾಳು ಬೆಳಗಿಸಿರಿ, ಅರಿವೇ ಗುರು-ಗುರುವೇ ಶಿಕ್ಷಣ, ಅರಿವಿಗೆ ಆಧಾರ ಶಿಕ್ಷಣ, ಸಮೃದ್ಧ ಸಮಾಜ ಕಟ್ಟಲು ಉತ್ತಮ ಶಿಕ್ಷಣ ಬೇಕು, ಶಾಲೆ ಆರಂಭವಾಗಿದೆ ವಿದ್ಯಾರ್ಥಿಗಳು ಶಾಲೆಗೆ ಬನ್ನಿ ಹೀಗೆ ವಿವಿಧ ಘೋಷಣೆಗಳು ಮೊಳಗಲಿವೆ.
•ಭೈರೋಬಾ ಕಾಂಬಳೆ

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.