ಪುಟ್ಟ ವಿಶ್ವಕಪ್‌ ಮೂಲಕ ಗಮನ ಸೆಳೆದ ಕಾಸರಗೋಡಿನ ಪುಟ್ಟ


Team Udayavani, May 30, 2019, 3:32 PM IST

30-bdk-01a-World-cup

ಬದಿಯಡ್ಕ: ಪುಟ್ಟ ಪುಟ್ಟ ಕಲಾಕೃತಿಗಳನ್ನು ತಯಾರಿಸುವುದರಲ್ಲೇ ಹೆಚ್ಚು ಆಸಕ್ತಿ ಹಾಗೂ ಉತ್ಸಾಹ ತೋರುವ ಮುಳ್ಳೇರಿಯಾ ತಲೆಬೈಲಿನ ವೆಂಕಟೇಶ್‌ ಆಚಾರ್ಯ ಅಥವಾ ಪುಟ್ಟ ಇನ್ನೊಂದು ಪುಟ್ಟ ಕಲಾಕೃತಿಯನ್ನು ತಯಾರಿಸುವ ಮೂಲಕ ಗಮನ ಸೆಳೆದಿದ್ದಾರೆ.

ಮೇ.30ರಂದು ಪ್ರಾರಂಭವಾದ ವಿಶ್ವದೆಲ್ಲೆಡೆ ಅಭಿಮಾನಿಗಳ ಉತ್ಸಾಹಕ್ಕೆ ಗರಿಮೂಡಿಸಿದ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯ ಕೇಂದ್ರಬಿಂದುವಾದ ವಿಶ್ವಕಪ್‌ನ್ನು ಒಂದು ಅಕ್ಕಿಕಾಳು ಗಾತ್ರದಲ್ಲಿ ಕೇವಲ 60 ಮಿಲ್ಲಿಗ್ರಾಂ ತೂಕದ ಚಿನ್ನವನ್ನು ಬಳಸಿ ತಯಾರಿಸಿ ತನ್ನ ಕೈಚಳಕ ಮೆರೆದಿದ್ದಾರೆ. ಸೂಕ್ಷ್ಮ ಕಲಾಕೃತಿಗಳ ಸರದಾರನಾಗಿರುವ ವೆಂಕಟೇಶ್‌ ಈಗಾಗಲೇ ಹತ್ತು ಹಲವು ವೈವಿಧ್ಯಮಯ ಪುಟ್ಟ ಕಲಾಕೃತಿಗಳನ್ನು ರಚಿಸಿದ್ದಾರೆ.

ಜೀವನವೆಂದರೆ ಸೂಕ್ಷ್ಮಾತಿ ಸೂಕ್ಷ್ಮ ವಿಚಾರಗಳ ಸಂತೆ. ಆ ಸೂಕ್ಷ್ಮವನ್ನು ಕಲೆಯ ಕಣ್ಣಿಂದ ನೋಡಿ, ಕಲಾಕೃತಿಯ ಸಷ್ಟಿಗೆ ಪ್ರಯತ್ನಿಸಿ ಅದನ್ನೇ ಒಂದು ಹವ್ಯಾಸವನ್ನಾಗಿ ಮಾಡಿಕೊಂಡಿರುವ ಪುಟ್ಟ ಅವರ ಕೈಯಲ್ಲರಳಿದ ಪುಟ್ಟ ಕಲಾಕೃತಿಗಳಿಗೆ ಲೆಕ್ಕವಿಲ್ಲ. ಕೇವಲ 28 ರೂಪಾಯಿಯ 0.010 ಮಿಲ್ಲಿ ಗ್ರಾಂ ಚಿನ್ನದಲ್ಲಿ ಸ್ವತ್ಛ ಭಾರತ್‌ ಲಾಂಛನವನ್ನು ತಯಾರಿಸಿರುವ ಈ ಕಲಾವಿದನ ಕೈಚಳಕದಲ್ಲಿ ಈ ಹಿಂದೆ 90ಮಿ.ಗ್ರಾಂ. ಚಿನ್ನದಲ್ಲಿ ಕ್ರಿಕೆಟ್‌ ವಿಶ್ವಕಪ್‌ ಮೂಡಿಬಂದಿತ್ತು. ಅಕ್ಕಿ ಕಾಳಿನಲ್ಲಿ ಸ್ವತ್ಛ ಭಾರತ್‌ ಎಂಬುದಾಗಿ ರಾಷ್ಟ್ರ ಭಾಷೆಯಲ್ಲಿ ನಮೂದಿಸಿರುವ ಪುಟ್ಟ ಅವರ ಕಲಾಸಾಧನೆ ವರ್ಣನಾತೀತ.

ಪುಟ್ಟ ಅವರ ಹೆಚ್ಚಿನ ಕಲಾಕೃತಿಗಳೂ ಪೆನ್ಸಿಲ್‌ ಲೆಡ್‌ನ‌ಲ್ಲಿದೆ. ಪೆನ್ಸಿಲ್‌ನ ತುದಿಯಲ್ಲಿ ಯೋಗಾಸನದ ಭಂಗಿ, ಭಾರತ‌ದ ಭೂಪಟ, ದೀಪಾವಳಿ ಲ್ಯಾಂಪ್‌, ವಿಶ್ವಕಪ್‌ ಮೊದಲಾದ ನೂರಾರು ಕಲಾಕೃತಿಗಳನ್ನು ರಚಿಸಿದ್ದು ಇದೀಗ ಬೆಂಕಿ ಕಡ್ಡಿಯ ತುದಿಯಲ್ಲಿ ನಮ್ಮ ಪಾರ್ಲಿಮೆಂಟನ್ನೇ ನಿಲ್ಲಿಸಿದ್ದಾರೆ ಎಂದರೆ ಈ ಸೂಕ್ಷ್ಮ ಕಲಾವಿದನ ಕಲಾನೈಪುಣ್ಯತೆಗೆ ಶರಣು ಎನ್ನಲೇ ಬೇಕು. ಓಟ್‌ ಫಾರ್ ಇಂಡಿಯ ಎನ್ನುವ ಸಂದೇಶವನ್ನು ಹೊತ್ತಿರುವ ಬೆಂಕಿ ಕಡ್ಡಿಯ ತುದಿಯಲ್ಲಿ ಭಾರತದ ಸಂಸತ್ತಿನ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಾಡುತ್ತಿದೆ. ಅದೇ ರೀತಿ ಸೇವ್‌ ಶಬರಿಮಲ ಎಂಬ ಸಂದೇಶದೊಂದಿಗೆ ಶಬರಿಮಲೆಯ ಸೂಕ್ಷ್ಮ ಕಲಾಕೃತಿಯನ್ನೂ ಇದೇ ರೀತಿ ನಿರ್ಮಿಸಿದ್ದರು.

ಚೋಕ್‌, ಸಾಬೂನು ಮೊದಲಾದ ವಸ್ತುಗಳನ್ನು ಬಳಸಿಯೂ ಇವರು ಪುಟ್ಟ ಪುಟ್ಟ ಅತ್ಯಾಕರ್ಷಕ ಕಲಾಕೃತಿಗಳನ್ನು ತಯಾರಿಸಿದ್ದಾರೆ. ಕಲ್ಪನೆಗೆ ಸೂಕ್ಷ್ಮ ಕಲಾಕೃತಿಯ ರೂಪ ನೀಡಿ ಅಚ್ಚರಿ ಮೂಡಿಸುವ ಪುಟ್ಟ ಅಂಚೆ ಕಾರ್ಡ್‌ನಲ್ಲಿ ಓಂ ನಮಃ ಶಿವಾಯ ಎಂದು 6524 ಬಾರಿ ಶಿವ ಪಂಚಾಕ್ಷರಿ ಬರೆದಿದ್ದು, ಈ ಅಕ್ಷರಗಳಿಂದ ಮಾತ್ರ ಶಿವನ ಚಿತ್ರ ಸಹಿತ ಅನೇಕ ಸೂಕ್ಷ್ಮ ಚಿತ್ರಗಳನ್ನೂ ರಚಿಸಿದ್ದಾರೆ.

ಅಂಚೆ ಕಾರ್ಡಿನಲ್ಲಿ 150 ಬಾರಿ ವಿವೇಕಾನಂದ ಎಂದು ಬರೆದು ಸ್ವಾಮಿ ವಿವೇಕಾನಂದರ ಚಿತ್ರರಚನೆ, ಭಾರತದ 29ರಾಜ್ಯಗಳ ಹೆಸರನ್ನು ಬಳಸಿ ಪ್ರಧಾನಿ ಮೋದಿಯವರ ಚಿತ್ರರಚನೆ ಹಾಗೂ ಕೇವಲ ಅರ್ಧ ಇಂಚಿನ ಕಾಗದದಲ್ಲಿ 2014 ಕ್ಯಾಲೆಂಡರ್‌ ಸೃಷ್ಠಿಸಿದ್ದಾರೆ. ಮಾತ್ರವಲ್ಲದೆ ಹಳೆಯ ನಾಣ್ಯಗಳ, ನೋಟುಗಳ ಸಂಗ್ರಹವನ್ನೂ ಹವ್ಯಾಸವಾಗಿಟ್ಟುಕೊಂಡಿರುವ ಇವರ ಕಲಾಭಿಮಾನ ಮಾದರಿಯಾಗಿದೆ. ವೃತ್ತಿಯಲ್ಲಿ ಚಿನ್ನದ ಅಕ್ಕಸಾಲಿಗರಾಗಿದ್ದು ಸೂಕ್ಷ್ಮಾತಿ ಸೂಕ್ಷ್ಮ ಕಲಾಕೃತಿಗಳ ಕೆತ್ತನೆಗೆ ಸಮಯ ಕಂಡುಕೊಳ್ಳುವ ಉತ್ತಮ ಕಲಾವಿದನ ಅನನ್ಯ ಸಾಧನೆಗೆ ಸಂದ ಅದೆಷ್ಟೋ ಗೌರನ ಸಮ್ಮಾನ, ಪ್ರಶಸ್ತಿಗಳು ಅರಸಿ ಬಂದಿವೆ..

ವಿಶ್ವಕಪ್‌ ಕ್ರೀಡೆಯಲ್ಲಿ ಭಾರತ ತಂಡದ ಗೆಲುವಿಗಾಗಿ ಕೋಟ್ಯಾಂತರ ಭಾರತೀಯ ಕ್ರಿಕೆಟ್‌ ಅಭಿಮಾನಿಗಳ ಪ್ರೋತ್ಸಾಹ ಮತ್ತು ಆಶೀರ್ವಾದ ತಂಡಕ್ಕಿರಲಿ ಎಂಬ ಸದಾಶಯದೊಂದಿಗೆ ಈ ಕಲಾಕೃತಿಯನ್ನು ರಚಿಸಿದ್ದೇನೆ. ಈ ಬಾರಿ ನಮ್ಮ ದೇಶ ವಿಶ್ವಕಪ್‌ ಗೆಲ್ಲುವ ಪೂರ್ಣ ಭರವಸೆ ನನಗಿದೆ.
ವೆಂಕಟೇಶ್‌ ಆಚಾರ್ಯ (ಪುಟ್ಟ ಇಚ್ಲಂಗೋಡು)

ಅಖೀಲೇಶ್‌ ನಗುಮುಗಂ

ಟಾಪ್ ನ್ಯೂಸ್

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

1-uu

‘U-WIN’ ಪೋರ್ಟ್‌ಲ್‌ಗೆ ಅಕ್ಟೋಬರ್‌ನಲ್ಲಿ ಚಾಲನೆ

MASIDI

Fiscal Crisis: ಅಯೋಧ್ಯೆ ಮಸೀದಿ ಟ್ರಸ್ಟ್‌ ಸಮಿತಿಗಳ ವಿಸರ್ಜನೆ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ

ಭಕ್ತರ ನಂಬಿಕೆಗೆ ದ್ರೋಹ ಬಗೆದವರಿಗೆ ಶಿಕ್ಷೆಯಾಗಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

Mysuru Dasara ಉದ್ಘಾಟಕರಾಗಿ ಪ್ರೊ| ಹಂಪನಾ: ಮೈಸೂರಿನಲ್ಲಿ ಮುಖ್ಯಮಂತ್ರಿ ಘೋಷಣೆ

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

Lok Adalat: 35.84 ಲಕ್ಷ ಪ್ರಕರಣ ಇತ್ಯರ್ಥ

gold 2

FATF; ಭಾರತದ ಚಿನ್ನೋದ್ಯಮ ಮೂಲಕ ಉಗ್ರರಿಗೆ ನೆರವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.