ಶಿಕಾರಿಪುರ ಪುರಸಭೆ ಚುನಾವಣೆ: ಶೇ. 67 ಮತದಾನ


Team Udayavani, May 30, 2019, 3:37 PM IST

30-May-39

ಶಿಕಾರಿಪುರ: ಪುರಸಭೆಗೆ ಸಂಸದ ಬಿ.ವೈ. ರಾಘವೇಂದ್ರ ಕುಟುಂಬ ಸಹಿತ 14 ನೇ ವಾರ್ಡ್‌ನಲ್ಲಿ ಮತ ಚಲಾಯಿಸಿದರು.

ಶಿಕಾರಿಪುರ: ಬುಧವಾರ ನಡೆದ ಪಟ್ಟಣದ ಪುರಸಭೆ ಚುನಾವಣೆ ಅತ್ಯಂತ ಶಾಂತಿಯುತವಾಗಿ ಪೂರ್ಣಗೊಂಡಿದ್ದು, 23 ವಾರ್ಡ್‌ಗಳಲ್ಲಿ ಬಿಜೆಪಿ, ಕಾಂಗ್ರೆಸ್‌ ಹಾಗೂ ಪಕ್ಷೇತರ 68 ಅಭ್ಯರ್ಥಿಗಳ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ.

23 ಸದಸ್ಯ ಬಲದ ಪುರಸಭೆಗೆ ಬುಧವಾರ ನಡೆದ ಚುನಾವಣೆಯಲ್ಲಿ ಶೇ.67.26 ಮತ ಚಲಾವಣೆಯಾಗಿದೆ. ಹಲವೆಡೆ ಆಡಳಿತಾರೂಢ ಬಿಜೆಪಿಗೆ ಕಾಂಗ್ರೆಸ್‌ ಜತೆ ಪಕ್ಷೇತರರು ಪ್ರಬಲ ಪೈಪೋಟಿ ನೀಡಿರುವ ಸಾದ್ಯತೆ ದಟ್ಟವಾಗಿದೆ.

ಬೆಳಗ್ಗೆ 7 ಕ್ಕೆ ನೀರಸವಾಗಿ ಆರಂಭವಾದ ಮತದಾನ ನಂತರದಲ್ಲಿ ತೀವ್ರತೆ ಪಡೆಯಿತು. ಅಭ್ಯರ್ಥಿಗಳು ಮತದಾರರನ್ನು ಆಟೋ ಮತ್ತಿತರ ವಾಹನಗಳಲ್ಲಿ ಕರೆತರುವ ದೃಶ್ಯ ಸಾಮಾನ್ಯವಾಗಿತ್ತು.

ಕಳೆದ ಚುನಾವಣೆಯಲ್ಲಿ 17 ಸ್ಥಾನ ಗಳಿಸುವ ಮೂಲಕ ಪುರಸಭೆಯಲ್ಲಿ ಸ್ಪಷ್ಟ ಬಹುಮತ ಗಳಿಸಿದ್ದ ಬಿಜೆಪಿ ಈ ಬಾರಿ ಮೋದಿ ಅಲೆ ಹಾಗೂ ಯಡಿಯೂರಪ್ಪನವರು ಮುಖ್ಯಮಂತ್ರಿಯಾದ ಅವಧಿಯಲ್ಲಿ ಪಟ್ಟಣದ ಸಮಗ್ರ ಅಭಿವೃದ್ದಿಗೆ ಕೈಗೊಂಡ ಶಾಶ್ವತ ಕಾಂಕ್ರೀಟ್ ರಸ್ತೆ, ದೀಪ, ನೀರು ಸಹಿತ ಸಕಲ ಸಮುದಾಯಕ್ಕೆ ಪುರಸಭೆ ವತಿಯಿಂದ ವಿವಿಧ ಯೋಜನೆಯಡಿ ಅನುದಾನ ಮತ್ತಿತರ ಅಭಿವೃದ್ದಿ ಕಾಮಗಾರಿಯಿಂದ ಮತದಾರ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಬೆಂಬಲಿಸುವ ವಿಶ್ವಾಸವನ್ನು ಹೊಂದಿದ್ದಾರೆ.

ಈ ಬಾರಿಯ ಚುನಾವಣೆಯಲ್ಲಿ ಹಲವು ಪಕ್ಷೇತರರು ಬಿಜೆಪಿ ಕಾಂಗ್ರೆಸ್‌ ಪಕ್ಷಕ್ಕೆ ತೀವ್ರ ರೀತಿಯಲ್ಲಿ ಸಡ್ಡು ಹೊಡೆದು ಜಯ ಗಳಿಸುವ ವಿಪರೀತ ಹುಮ್ಮಸ್ಸಿನಲ್ಲಿದ್ದಾರೆ. ಗೆಲುವಿನ ಏಕೈಕ ಗುರಿ ಬೆನ್ನಟ್ಟಿ ಮತದಾರರ ಓಲೈಕೆಗೆ ರಾಜಕೀಯ ಪಕ್ಷಗಳಿಗೆ ಸಮಾನವಾಗಿ ಸಕಲ ರೀತಿಯಲ್ಲಿ ಭರವಸೆ ನೀಡಿ ಪುರಸಭೆಯಲ್ಲಿ ಪ್ರಾಬಲ್ಯ ಮೆರೆಯಲು ಸಿದ್ಧರಾಗಿದ್ದಾರೆ.

ಪಟ್ಟಣದ 14 ನೇ ವಾರ್ಡ್‌ ತಾಪಂ ವಿಕಾಸಸೌಧದಲ್ಲಿ ಸಂಸದ ರಾಘವೇಂದ್ರ, ಪತ್ನಿ ತೇಜಸ್ವಿನಿ, ಪುತ್ರ ಭಗತ್‌, ಸಹೋದರ- ರಾಜ್ಯ ಬಿಜೆಪಿ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಬಿ.ವೈ. ವಿಜಯೇಂದ್ರ ಜತೆ ಮತ ಚಲಾಯಿಸಿ ರಾಜ್ಯಾದ್ಯಂತ ಅತಿ ಹೆಚ್ಚು ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿಯ ಆಡಳಿತದ ಚುಕ್ಕಾಣಿಯನ್ನು ಬಿಜೆಪಿ ವಶಪಡಿಸಿಕೊಳ್ಳುವ ವಿಶ್ವಾಸ ವ್ಯಕ್ತಪಡಿಸಿದರು.

ಮತದಾನದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬುಧವಾರ ನಡೆದ ರಾಜ್ಯದ 100 ಕ್ಕಿಂತ ಅಧಿಕ ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಚುನಾವಣೆಯಲ್ಲಿ ಕಳೆದ ಲೋಕಸಭಾ ಚುನಾವಣೆಯ ಫ‌ಲಿತಾಂಶ ಸ್ಪಷ್ಟವಾದ ಪ್ರಬಾವ ಬೀರಲಿದೆ. ಇದರೊಂದಿಗೆ ಪ್ರಧಾನಿ ನರೇಂದ್ರ ಮೋದಿ ಅಲೆ ಹಾಗೂ ಯಡಿಯೂರಪ್ಪನವರು ರಾಜ್ಯದ ಮುಖ್ಯಮಂತ್ರಿಯಾದ ಅವಧಿಯಲ್ಲಿ ನಗರೋತ್ಥಾನ ಯೋಜನೆಯಡಿ ಕೋಟ್ಯಂತರ ವೆಚ್ಚದಲ್ಲಿ ನಗರ ಪಟ್ಟಣ ಪ್ರದೇಶದ ಅಭಿವೃದ್ಧಿ, ಸ್ಮಾರ್ಟ್‌ ಸಿಟಿ ಯೋಜನೆಯಡಿ ಬೃಹತ್‌ ನಗರ ಸಂಪೂರ್ಣ ಅಭಿವೃದ್ಧಿಯಿಂದ ಮತದಾರರು ಬಿಜೆಪಿ ಬೆಂಬಲಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೇಂದ್ರ ಹಾಗೂ ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದ ಸಂದರ್ಬದಲ್ಲಿ ನಗರ ಪ್ರದೇಶದ ಅಭಿವೃದ್ಧಿಗೆ ಮೂಲ ಸೌಲಭ್ಯ ಕಲ್ಪಿಸಲು ಕೈಗೊಂಡ ಸಂಕಲ್ಪ ಮತದಾರರ ಮನ ಗೆಲ್ಲುವಲ್ಲಿ ಸಹಕಾರಿಯಾಗಿದೆ ಎಂದ ಅವರು, ಪಟ್ಟಣದ ಅಭಿವೃದ್ಧಿ, ಕುಡಿಯುವ ನೀರು ಮತ್ತಿತರ ಮೂಲ ಸೌಲಭ್ಯದಿಂದ ಈ ಬಾರಿ ಅತಿ ಹೆಚ್ಚು ಸ್ಥಾನ ಗಳಿಸಿ ಪುರಸಭೆಯ ಗದ್ದುಗೆಯನ್ನು ಬಿಜೆಪಿ ಪುನಃ ವಶಪಡಿಸಿಕೊಳ್ಳಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪೊಲೀಸರ ಜತೆ ವಾಗ್ವಾದ: ಹಳೆ ಹೊನ್ನಾಳಿ ರಸ್ತೆಯ ವಾರ್ಡ್‌ ಸಂಖ್ಯೆ 15 ರಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಉಳ್ಳಿ ದರ್ಶನ್‌ ಮತಗಟ್ಟೆ ಬಳಿ ಮತ ಯಾಚಿಸುತ್ತಿದ್ದಾರೆ ಎಂದು ವಿರೋಧ ಪಕ್ಷದ ಆರೋಪಕ್ಕೆ ಪೊಲೀಸರು ಮಧ್ಯ ಪ್ರವೇಶಿಸಿ ಅಭ್ಯರ್ಥಿಯನ್ನು ಹೊರ ಕಳುಹಿಸಿದರು. ಅಭ್ಯರ್ಥಿಯನ್ನು ಪೊಲೀಸರು ತಳ್ಳಿದರು ಎಂದು ಅಭ್ಯರ್ಥಿ ತೀವ್ರವಾಗಿ ಆಕ್ಷೇಪಿಸಿದಾಗ ಕೆಲ ಕಾಲ ಸ್ಥಳದಲ್ಲಿ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.