ರಾಜ್ಯದ ಜನರಿಗೆ ವಿದ್ಯುತ್‌ ದರ ಏರಿಕೆ ಶಾಕ್‌


Team Udayavani, May 31, 2019, 3:33 AM IST

rajyada

ಬೆಂಗಳೂರು: ಲೋಕಸಭಾ ಚುನಾವಣೆ, ಎರಡು ವಿಧಾನಸಭೆ ಉಪಚುನಾವಣೆ, 61 ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಮುಗಿಯುತ್ತಿದ್ದಂತೆ ಎಲ್ಲ ಎಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ ಯೂನಿಟ್‌ ವಿದ್ಯುತ್‌ ದರ ಸರಾಸರಿ 33 ಪೈಸೆ ಹೆಚ್ಚಳವಾಗಿದ್ದು, ವಿದ್ಯುತ್‌ ಬಳಕೆದಾರರಿಗೆ ಶಾಕ್‌ ನೀಡಿದಂತಾಗಿದೆ. ಪರಿಷ್ಕೃತ ದರಗಳು ಏ.1ರಿಂದಲೇ ಪೂರ್ವಾನ್ವಯವಾಗಲಿವೆ.

ಬೆಸ್ಕಾಂ ಸೇರಿ ಎಲ್ಲ ಐದು ಎಸ್ಕಾಂಗಳು ಪ್ರತಿ ಯೂನಿಟ್‌ ದರ ಸರಾಸರಿ 1.20 ರೂ. (ಶೇ.17.37) ಹೆಚ್ಚಳಕ್ಕೆ ಸಲ್ಲಿಸಿದ್ದ ಪ್ರಸ್ತಾವಗಳನ್ನು ಪರಿಶೀಲಿಸಿ ವಿಚಾರಣೆ ನಡೆಸಿದ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗವು (ಕೆಇಆರ್‌ಸಿ) ಸರಾಸರಿ 33 ಪೈಸೆ (ಶೇ. 4.8) ಏರಿಕೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. ಕಳೆದ ವರ್ಷ ಪ್ರತಿ ಯೂನಿಟ್‌ ದರ 34 ಪೈಸೆ ಹೆಚ್ಚಳವಾಗಿತ್ತು.

ಆಯೋಗದ ಅಧ್ಯಕ್ಷ ಶಂಭುದಯಾಳ್‌ ಮೀನಾ ಅವರು ಬಳಿಕ ಪತ್ರಿಕಾಗೋಷ್ಠಿಯಲ್ಲಿ ದರ ಪರಿಷ್ಕರಣೆ ವಿವರ ನೀಡಿದರು. ಬೆಸ್ಕಾಂ ವ್ಯಾಪ್ತಿಯ ಗ್ರಾಮ ಪಂಚಾಯ್ತಿ ಅಧೀನದ ಗ್ರಾಮೀಣ ಪ್ರದೇಶದಲ್ಲಿದ್ದ ಐದು ಹಂತದ ಸ್ಲಾéಬ್‌ ದರವನ್ನು ನಾಲ್ಕು ಸ್ಲಾಬ್‌ ಮಾರ್ಪಡಿಸಲಾಗಿದೆ. ಗೃಹ ಬಳಕೆ ಉದ್ದೇಶಕ್ಕೆ ಮೊದಲ 30 ಯೂನಿಟ್‌ವರೆಗಿನ ವಿದ್ಯುತ್‌ ದರ 3.40 ರೂ.ನಿಂದ 3.65 ರೂ.ಗೆ, 31ರಿಂದ 100 ಯೂನಿಟ್‌ವರೆಗಿನ ದರ 4.65 ರೂ.ನಿಂದ 4.90 ರೂ., 101ರಿಂದ 200 ಯೂನಿಟ್‌ವರೆಗಿನ ಬಳಕೆ ವಿದ್ಯುತ್‌ ದರ 6.20 ರೂ.ನಿಂದ 6.45 ರೂ.ಗೆ ಏರಿಕೆಯಾಗಿದೆ.

ಹಾಗೆಯೇ 201ರಿಂದ 300 ಯೂನಿಟ್‌ವರೆಗೆ ಬಳಸುವ ಪ್ರತಿ ಯೂನಿಟ್‌ ದರ 7.05 ರೂ., 300 ಯೂನಿಟ್‌ ಮೇಲ್ಪಟ್ಟ ಬಳಕೆ ದರ 7.10 ರೂ. ಇದ್ದು, ಕ್ರಮವಾಗಿ ಪ್ರತಿ ಯೂನಿಟ್‌ಗೆ 25 ಪೈಸೆ ಹಾಗೂ 20 ಪೈಸೆ ಏರಿಕೆ ಮಾಡಿ ದರವನ್ನು ಪ್ರತಿ ಯೂನಿಟ್‌ಗೆ 7.30 ರೂ.ಗೆ ನಿಗದಿಪಡಿಸಲಾಗಿದೆ.

ಬೆಸ್ಕಾಂ ಹೊರತುಪಡಿಸಿ ಉಳಿದ ನಾಲ್ಕು ಎಸ್ಕಾಂಗಳ ನಗರ ಪಾಲಿಕೆ ಹಾಗೂ ಪುರಸಭೆ ಪ್ರದೇಶಗಳಲ್ಲಿನ ಗೃಹ ಬಳಕೆ ವಿದ್ಯುತ್‌ 30 ಯೂನಿಟ್‌ವರೆಗಿನ ಬಳಕೆಗೆ ಪ್ರತಿ ಯೂನಿಟ್‌ ದರ 3.45 ರೂ. ನಿಂದ 3.70 ರೂ., 31ರಿಂದ 100 ಯೂನಿಟ್‌ವರೆಗಿನ ವಿದ್ಯುತ್‌ ದರ 4.95 ರೂ.ನಿಂದ 5.20 ರೂ., 101 ಯೂನಿಟ್‌ನಿಂದ 200 ಯೂನಿಟ್‌ವರೆಗಿನ ಬಳಕೆ ದರ 6.50 ರೂ.ನಿಂದ 6.75 ರೂ. ಹಾಗೂ 200 ಯೂನಿಟ್‌ ಮೇಲ್ಪಟ್ಟ ಬಳಕೆ ದರ 7.55 ರೂ.ನಿಂದ 7.80 ರೂ.ಗೆ ಹೆಚ್ಚಳ ಮಾಡಲಾಗಿದೆ.

ಎಲ್ಲ ಎಸ್ಕಾಂಗಳ ಗ್ರಾಮ ಪಂಚಾಯ್ತಿಗಳ ಪ್ರದೇಶಗಳಲ್ಲಿನ ಗೃಹ ಬಳಕೆ 30 ಯೂನಿಟ್‌ವರೆಗಿನ ವಿದ್ಯುತ್‌ ದರ 30 ಯೂನಿಟ್‌ವರೆಗೆ 3.35 ರೂ.ನಿಂದ 3.60 ರೂ., 31- 100 ಯೂನಿಟ್‌ವರೆಗಿನ ಬಳಕೆ ದರ 4.65 ರೂ.ನಿಂದ 4.90 ರೂ., 101- 200 ಯೂನಿಟ್‌ವರೆಗಿನ ದರ 6.20 ರೂ.ನಿಂದ 6.45 ರೂ. ಹಾಗೂ 200 ಯೂನಿಟ್‌ ಮೇಲ್ಪಟ್ಟ ಬಳಕೆ ವಿದ್ಯುತ್‌ ದರ 7.05 ರೂ.ನಿಂದ 7.30 ರೂ.ಗೆ ಏರಿಕೆಯಾಗಿದೆ.

ಟಾಪ್ ನ್ಯೂಸ್

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.