ನದಿ ಜೋಡಣೆಯಿಂದ ರಾಜ್ಯಕ್ಕೆ ಅನ್ಯಾಯ: ನಿರಾಣಿ
Team Udayavani, May 31, 2019, 3:00 AM IST
ಮುಧೋಳ: ಕರ್ನಾಟಕದ ಕೃಷ್ಣಾ, ಆಂಧ್ರದ ಗೋದಾವರಿ ನದಿಗಳ ರಾಷ್ಟ್ರೀಯ ನದಿ ಜೋಡಣೆ ಯೋಜನೆಗೆ ಕೇಂದ್ರ ಸರ್ಕಾರ ತಾತ್ವಿಕವಾಗಿ ಒಪ್ಪಿ ಯೋಜನೆ ಕೈಗೆತ್ತಿಕೊಂಡಿದೆ. ಆದರೆ ಈ ಯೋಜನೆಯಿಂದ ಕರ್ನಾಟಕಕ್ಕೆ ಭಾರೀ ಅನ್ಯಾಯವಾಗಲಿದೆ.
ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ಕಾಳಜಿ ವಹಿಸಿ ಕರ್ನಾಟಕಕ್ಕೆ ನ್ಯಾಯ ಒದಗಿಸಬೇಕೆಂದು ಉದ್ಯಮಿ ಹಾಗೂ ಕಾಳಿ ನದಿ ಜೋಡಣೆ ವರದಿ ರೂವಾರಿ ಸಂಗಮೇಶ ನಿರಾಣಿ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಗೋದಾವರಿ ಪಾತ್ರದಿಂದ ನೀರನ್ನು ಕೃಷ್ಣಾ ಕಣಿವೆಗೆ ತಿರುಗಿಸುವ ಯೋಜನೆಯಲ್ಲಿ ಒಂದು ಹನಿ ನೀರೂ ರಾಜ್ಯಕ್ಕೆ ದೊರೆಯುವುದಿಲ್ಲ.
1980ರಲ್ಲಿ ಮಹಾನದಿ ಹಾಗೂ ಗೋದಾವರಿ ನದಿ ಪಾತ್ರದಿಂದ ಕರ್ನಾಟಕಕ್ಕೆ 283 ಟಿಎಂಸಿ ನೀರು ಹಂಚಿಕೆಯಾಗಿತ್ತು. ಇದನ್ನು 2000ರಲ್ಲಿ ಮರುಪರಿಶೀಲನೆ ಮಾಡಿ ಈ ಪ್ರಮಾಣವನ್ನು 164 ಟಿಎಂಸಿಗೆ ತಗ್ಗಿಸಲಾಯಿತು.
ಇನ್ನೂ ನೋವಿನ ಸಂಗತಿಯೆಂದರೆ, 2010ರಲ್ಲಿ ನಡೆದ ತೃತೀಯ ಪರಿಕರಣೆಯಲ್ಲಿ ಕರ್ನಾಟಕದ ಹಕ್ಕಿನ ಪಾಲನ್ನು ಸಂಪೂರ್ಣವಾಗಿ ರದ್ದು ಮಾಡಲಾಯಿತು. ಈ ಬಗ್ಗೆ ರಾಜ್ಯದ ಜನತೆ, ಸರ್ಕಾರ ಹಾಗೂ ಸಂಸದರು ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !