ವಿಪಕ್ಷಕ್ಕಾಗಿ ಕಾಂಗ್ರೆಸ್ನಲ್ಲಿ ಎನ್ಸಿಪಿ ವಿಲೀನ?
Team Udayavani, May 31, 2019, 3:29 AM IST
ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಗುರುವಾರ ನವದೆಹಲಿಯಲ್ಲಿ ಎನ್ಸಿಪಿ ಮುಖಂಡ ಶರದ್ ಪವಾರ್ರನ್ನು ಭೇಟಿ ಮಾಡಿದ್ದು, ಲೋಕಸಭೆಯಲ್ಲಿ ವಿಪಕ್ಷ ಸ್ಥಾನಮಾನ ಗಳಿಸುವ ಉದ್ದೇಶಕ್ಕೆ ಎನ್ಸಿಪಿಯನ್ನು ಕಾಂಗ್ರೆಸ್ನಲ್ಲಿ ವಿಲೀನ ಮಾಡುವ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ.
ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹೀನಾಯ ಸೋಲಿನ ನಂತರ ಪಕ್ಷದ ಅಧ್ಯಕ್ಷ ಹುದ್ದೆ ತೊರೆಯುತ್ತೇನೆ ಎಂದು ಪಟ್ಟು ಹಿಡಿದಿದ್ದ ರಾಹುಲ್, ಪಕ್ಷದ ಯಾವ ಮುಖಂಡರನ್ನೂ ಭೇಟಿ ಮಾಡುತ್ತಿರಲಿಲ್ಲ. ಆದರೆ ಗುರುವಾರ ಸ್ವತಃ ಶರದ್ ಪವಾರ್ ಮನೆಗೆ ತೆರಳಿದ ಅವರು, ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು.
ಸದ್ಯ ಕಾಂಗ್ರೆಸ್ 52 ಸದಸ್ಯ ಬಲವನ್ನು ಲೋಕಸಭೆಯಲ್ಲಿ ಹೊಂದಿದೆ. ಆದರೆ ವಿಪಕ್ಷ ಸ್ಥಾನಮಾನ ಪಡೆಯಲು 55 ಸದಸ್ಯ ಬಲ ಅಗತ್ಯವಿದೆ. ಎನ್ಸಿಪಿ 5 ಸದಸ್ಯರನ್ನು ಹೊಂದಿದ್ದು, ಎನ್ಸಿಪಿಯನ್ನು ಕಾಂಗ್ರೆಸ್ನಲ್ಲಿ ವಿಲೀನ ಮಾಡಿದಲ್ಲಿ ವಿಪಕ್ಷ ಸ್ಥಾನಮಾನ ಪಡೆಯಬಹುದು.
ಮೂಲ ಕಾಂಗ್ರೆಸ್ಸಿಗರೇ ಆಗಿದ್ದ ಪವಾರ್, 1999 ರಲ್ಲಿ ಕಾಂಗ್ರೆಸ್ನಿಂದ ಹೊರಬಿದ್ದು ಎನ್ಸಿಪಿ ಸ್ಥಾಪಿಸಿಕೊಂಡಿದ್ದರು. ಫಲಿತಾಂಶ ಹೊರಬೀಳು ವುದಕ್ಕೂ ಮುನ್ನ ವಿವಿಧ ಪ್ರಾದೇಶಿಕ ಪಕ್ಷಗಳನ್ನು ಒಗ್ಗೂಡಿ ಸುವಲ್ಲಿ ಪವಾರ್ ಪ್ರಮುಖ ಪಾತ್ರವನ್ನೂ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ