ಬರಿದಾದ ಅಘನಾಶಿನಿ: ನೀರಿಗಾಗಿ ಗೋಳು

•ವಾರಕ್ಕೊಂದೆರಡು ಬಾರಿಯಷ್ಟೇ ನೀರು ಪೂರೈಕೆ•ಅಗತ್ಯ ಮಾರ್ಗೋಪಾಯ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ

Team Udayavani, May 31, 2019, 12:33 PM IST

uk-tdy-2..

ಕುಮಟಾ: ಅಘನಾಶಿನಿ ನದಿಯಲ್ಲಿ ನೀರಿನ ಹರಿವು ಕಡಿಮೆಯಾಗಿದೆ.

ಕುಮಟಾ: ಕಳೆದ ಸುಮಾರು ಒಂದು ತಿಂಗಳಿಂದ ಕುಮಟಾ ಹಾಗೂ ಹೊನ್ನಾವರ ಪಟ್ಟಣದಲ್ಲಿ ತಲೆದೋರಿರುವ ಭೀಕರ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಶಾಸಕ ದಿನಕರ ಶೆಟ್ಟಿ ಗುರುವಾರ ತಾಲೂಕಿನ ಮರಾಕಲ್ ಕುಡಿಯುವ ನೀರಿನ ಯೋಜನಾ ಘಟಕದ ಪ್ರದೇಶಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಅಘನಾಶಿನಿ ನದಿಯ ನೀರನ್ನು ಮರಾಕಲ್ ನೀರು ಸರಬಾರಾಜು ಯೋಜನೆಯ ಮೂಲಕ ಕುಮಟಾ-ಹೊನ್ನಾವರ ಪಟ್ಟಣಗಳಿಗೆ ನೀರು ಪೂರೈಸಲಾಗುತ್ತಿದೆ. ಆದರೆ ಈ ಬಾರಿ ಅಘನಾಶಿನಿ ನದಿಗೆ ನೀರಿನ ಬರ ಕಾಡಿದ್ದು, ಗಣನೀಯ ಪ್ರಮಾಣದಲ್ಲಿ ನೀರು ಬತ್ತಿದೆ. ಹೀಗಾಗಿ ಪ್ರತಿನಿತ್ಯ ಅವಳಿ ಪಟ್ಟಣಗಳಿಗೆ ನೀರು ಪೂರೈಸುತ್ತಿದ್ದ ಪುರಸಭೆ ಈಗ ವಾರಕ್ಕೊಂದೆರಡು ಬಾರಿ ನೀರನ್ನು ಬಿಡಲಾರಂಭಿಸಿದೆ. ಮಳೆಯ ನಿರೀಕ್ಷೆಯನ್ನು ಇನ್ನಷ್ಟು ದಿನ ಮಾಡಬೇಕಾಗಿರುವುದರಿಂದ ನೀರಿನ ಸಮಸ್ಯೆ ಇನ್ನೂ ಹೆಚ್ಚು ಉಲ್ಭಣಗೊಳ್ಳಲಿದೆ. ಹೀಗಾಗಿ ಜನರಿಗೆ ನೀರಿನ ಕೊರತೆ ಆಗದಂತೆ ಕ್ರಮ ಕೈಗೊಳ್ಳಲು ಶಾಸಕ ದಿನಕರ ಶೆಟ್ಟಿ ಪುರಸಭೆ ಅಧಿಕಾರಿಗಳ ಜೊತೆಗೂಡಿ ನೀರು ಸರಬರಾಜು ಘಟಕ ಪ್ರದೇಶಕ್ಕೆ ತೆರಳಿ ಅಗತ್ಯ ಕ್ರಮ ಕೈಗೊಳ್ಳಲು ಮಾರ್ಗೋಪಾಯ ಸೂಚಿಸಿದರು.

ಪ್ರತಿವರ್ಷ ನೀರಿಗೆ ಹಾಹಾಕಾರ ಹೆಚ್ಚಾಗುತ್ತಿದ್ದು, ಮುಂಬರುವ ವರ್ಷಗಳಲ್ಲಿ ಇನ್ನಷ್ಟು ನೀರಿನ ಬರ ಜನರನ್ನು ಕಾಡಲಿದೆ. ಇಂತಹ ಪರಿಸ್ಥಿತಿಯಲ್ಲಿ ಜನವರಿ ಹಾಗೂ ಫೆಬ್ರುವರಿ ತಿಂಗಳಲ್ಲಿ ನೀರು ಹರಿದು ಪೋಲಾಗುವುದನ್ನು ತಡೆಯಲು ಈಗಾಗಲೇ ನೀರು ಸಂಗ್ರಹಿಸಲು ಕಟ್ಟಿರುವ ಬಂಡನ್ನು ಇನ್ನಷ್ಟು ಎತ್ತರಿಸುವ ನಿರ್ಣಯ ಕೈಗೊಂಡರು. ಈಗಾಗಲೇ ಬಂಡು ವಿಸ್ತರಣೆಗೆ ಶಾಸಕರು 5 ಲಕ್ಷ ರೂ. ಅನುದಾನ ನೀಡಿದ್ದು, ಒಟ್ಟೂ 25 ಲಕ್ಷ ರೂ. ಖರ್ಚು ಮಾಡಲಾಗಿದೆ. ಹೀಗಿದ್ದರೂ ನೀರಿನ ಘಟಕ ಪ್ರದೇಶದಲ್ಲಿ ನೀರಿನ ಪ್ರಮಾಣ ತೀವ್ರ ಕುಸಿದಿದ್ದು ಕಂಡುಬರುತ್ತದೆ. ಆದ್ದರಿಂದ ಪಟ್ಟಣ ವ್ಯಾಪ್ತಿಯಲ್ಲಿ ಟ್ಯಾಂಕರ್‌ ಮೂಲಕ ನೀರು ನೀಡುವಂತೆ ಮುಖ್ಯಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದೇನೆ ಎಂದು ಶಾಸಕರು ತಿಳಿಸಿದರು.

ದೀವಳ್ಳಿಯ ಅಘನಾಶಿನಿ ನದಿಯ ಉತ್ತರದಲ್ಲಿ ಕೈಲೋಡಿ ಗ್ರಾಮಕ್ಕೆ ಜನ ಸಂಚಾರಕ್ಕೆ ಅನುಕೂಲವಾಗುವಂತೆ ಬ್ರಿಡ್ಜ್ ಮತ್ತು ಬ್ಯಾರೇಜ್‌ ಕಟ್ಟಿಕೊಡುವಂತೆ ಗ್ರಾಮಸ್ಥರು ಮನವಿ ಮಾಡಿಕೊಂಡಿದ್ದಾರೆ. ಇದು ನಿರ್ಮಾಣಗೊಂಡರೆ ಜನರ ಓಡಾಟದ ಜೊತೆ ನೀರಿನ ಸಮಸ್ಯೆಯು ಬಗೆಹರಿಯಲಿದೆ. ಹೀಗಾಗಿ ಅತೀ ಶೀಘ್ರದಲ್ಲಿ ಈ ಯೋಜನೆಯ ಮಂಜೂರಾತಿಗೆ ಒತ್ತಾಯಿಸುತ್ತೇನೆ. ಯೋಜನೆಗೆ ಸುಮಾರು 10 ಕೋಟಿ ರೂ. ತಗಲುವ ಅಂದಾಜು ಮಾಡಲಾಗಿದ್ದು, ಇದರ ಪ್ರಸ್ತಾವನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಆರ್‌.ವಿ. ದೇಶಪಾಂಡೆ ಹಾಗೂ ಮುಖ್ಯ ಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಅಲ್ಲದೇ ನೀರಿನ ಬರ ಇನ್ನಷ್ಟು ತೀವ್ರಗೊಳ್ಳುವ ಹಿನ್ನೆಲೆಯಲ್ಲಿ ಜಲ ಮೂಲಗಳಿರುವ ಪ್ರದೇಶಗಳನ್ನು ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಹಾಗೂ ಕೆರಗಳ ಹೂಳೆತ್ತುವುದರಿಂದ ಜಲಮೂಲಗಳನ್ನು ವೃದ್ಧಿಸಬಹುದೆಂದು ಶಾಸಕರು ಅಭಿಪ್ರಾಯಪಟ್ಟರು.

ಮರಾಕಲ್ ತೆರಳುವ ಮಾರ್ಗದಲ್ಲಿ ಶೇಡಿಕುಳಿಯಲ್ಲಿ ಮರಾಕಲ್ ನೀರಿನ ಯೋಜನೆಯ ಪೈಪ್‌ ಮೂಲಕ ಸೋರುತ್ತಿದ್ದ ನೀರನ್ನು ಸ್ಥಳೀಯರು ಸಂಗ್ರಹಿಸುತ್ತಿರುವುದನ್ನು ಕಂಡ ಶಾಸಕ ದಿನಕರ ಶೆಟ್ಟಿ ನೀರಿಗಾಗಿ ಜನರು ಕಷ್ಟಪಡುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದರು. ಸೊಪ್ಪಿನಹೊಸಳ್ಳಿ ಮತ್ತು ಸಂತೇಗುಳಿ ಗ್ರಾಪಂ ವ್ಯಾಪ್ತಿಯಲ್ಲಿ ನೀರಿನ ತತ್ವಾರ ಎದುರಾಗಿದ್ದು, ಪಂಚಾಯತಗಳ ವ್ಯಾಪ್ತಿಯಲ್ಲಿ ನೀರಿನ ಯೋಜನೆ ರೂಪಿಸಬೇಕೆಂದು ಸಂತೇಗುಳಿ ಗ್ರಾಪಂ ಸದಸ್ಯ ವಿನಾಯಕ ಭಟ್ಟ ಶಾಸಕರಲ್ಲಿ ಮನವಿ ಮಾಡಿಕೊಂಡರು.

ಪುರಸಭೆ ಮುಖ್ಯಾಧಿಕಾರಿ ಸುರೇಶ ಎಂ.ಕೆ., ಪುರಸಭೆ ಇಂಜಿನೀಯರ ಪ್ರಶಾಂತ ರೇವಣಕರ್‌, ಗ್ರಾಪಂ ಸದಸ್ಯರು ಹಾಗೂ ಸ್ಥಳೀಯರು ಇದ್ದರು.

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-sirsi

Sirsi: ಯಾರನ್ನೂ ಯಾವತ್ತೂ ಪ್ಲೀಸ್ ಮಾಡಬೇಡಿ, ಪ್ರೀತಿ ಮಾಡಿ ಸಾಕು: ಹುಕ್ಕೇರಿ ಶ್ರೀ

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

ಭಾರತ್‌ ಜೋಡೋದಿಂದ ದೇಶದ ಜನರ ಮನಸ್ಸು ಬೆಸೆದ ರಾಗಾ: ಡಿಕೆಶಿ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.