ತುಂಗಭದ್ರಾ ಹೂಳಿನ ಜಾತ್ರೆಗೆ ಚಾಲನೆ

•ರೈತರಿಂದ ಹಸಿರು ಶಾಲು ಪ್ರದರ್ಶನ-ಜಯಘೋಷ •ಹೂಳೆತ್ತುವ ಕಾರ್ಯಕ್ಕೆ ದೇಣಿಗೆ ನೀಡಿ ಜನರ ಬೆಂಬಲ

Team Udayavani, May 31, 2019, 2:59 PM IST

kopala tdy 3

ಹೊಸಪೇಟೆ: ಮೂರನೇ ವರ್ಷವೂ ತುಂಗಭದ್ರಾ ಜಲಾಶಯದ ಹೂಳಿನ ಜಾತ್ರೆಗೆ ಉಜ್ಜಯಿನಿ ಜಗದ್ಗುರು ಶ್ರೀಗಳು ಸೇರಿದಂತೆ ವಿವಿಧ ಜಿಲ್ಲೆಯ ಮಠಾಧೀಶರು ಗುರುವಾರ ಚಾಲನೆ ನೀಡಿದರು. ಈ ಮೂಲಕ ಕಳೆದೆರಡು ವರುಷಗಳಿಂದ ಬೇಸಿಗೆಯಲ್ಲಿ ಇದೇ ರೀತಿ ಹೂಳು ತೆಗೆದು ಸರ್ಕಾರವನ್ನು ಎಚ್ಚರಿಸುವ ಕೆಲಸ ಮುಂದುವರಿಸಿದರು.

ಈ ವೇಳೆ ತುಂಗಭದ್ರಾ ರೈತ ಸಂಘದಿಂದ ವ್ಯಾಸನಕೆರೆಯ ತುಂಗಭದ್ರಾ ಹಿನ್ನೀರಿನ ಪ್ರದೇಶದಲ್ಲಿ ನಡೆದ ಹೂಳೆತ್ತುವ ಜಾತ್ರೆ ಕಾರ್ಯಕ್ರಮದಲ್ಲಿ ಬಳ್ಳಾರಿಯ ಕಲ್ಯಾಣ ಸ್ವಾಮೀಜಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರ್ಕಾರ ಪರಿಸರ ರಕ್ಷಣೆಗೆ ಗಂಭೀರ ಚಿಂತನೆ ನಡೆದ ಹಿನ್ನೆಲೆಯಲ್ಲಿ ಸತತ ಪರಿಸರ ಹಾಗೂ ಜೀವ ಸಂಕುಲ ಅವನತಿ ಹಾದಿಯಲ್ಲಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಸದಾ ಪರಿಸರ ನಾಶಕ್ಕೆ ಕಾರಣವಾಗುವ ಯೋಜನೆಗಳಿಗೆ ಆದ್ಯತೆ ನೀಡುವ ಮೂಲಕ ಪ್ರಕೃತಿ ವಿಕೋಪಕ್ಕೆ ಎಣೆ ಮಾಡಿಕೊಟ್ಟಿದೆ. ಅರಣ್ಯ ಇಲಾಖೆ ಅರಣ್ಯ ಬೆಳೆಸುವ ಇಚ್ಛಾಶಕ್ತಿ ತೋರುತ್ತಿಲ್ಲ. ಕಳೆದ ಕೆಲ ವರ್ಷಗಳಿಂದ ಗಣಿಗಾರಿಕೆಯ ಪ್ರಭಾವದಿಂದ ಸಾಕಷ್ಟು ಅರಣ್ಯ ನಾಶವಾಗಿದೆ. ಆದರೆ ಅರಣ್ಯ ಇಲಾಖೆಯು ಅದನ್ನು ಪುನರ್‌ ನಿರ್ಮಿಸುವ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದರು.

ದೇಶದಲ್ಲಿ ನದಿಗಳ ಜೋಡಣೆಯ ಅವಶ್ಯಕತೆಯಿದ್ದು, ಮುಂದಿನ ದಿನಗಳಲ್ಲಿ ನದಿ ಜೋಡಣೆ ಕಾರ್ಯ ಮಾಡದಿದ್ದರೆ, ಮುಂದಿನ ಭವಿಷ್ಯ ಕರಾಳವಾಗಿರುತ್ತದೆ. ಪರಿಸರ ಸಂರಕ್ಷಣೆ ಹಾಗೂ ನದಿ ಜೋಡಣೆ ಕಾರ್ಯಕ್ಕೆ ರೈತರು, ಮಠಾಧೀಶರು, ಪ್ರಜ್ಞಾವಂತರು ಹೋರಾಟದ ಮೂಲಕ ಸರ್ಕಾರದ ಗಮನ ಸೆಳೆಯಬೇಕು ಎಂದು ಕರೆ ನೀಡಿದರು.

ಪಟ್ಟಣದ ಗುರುಪಾದ ದೇವರಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ತುಂಗಭದ್ರಾ ಜಲಾಶಯದ ಹೂಳು ತೆಗೆಯುವ ಹೋರಾಟಕ್ಕೆ ಕೇಂದ್ರ ಸರ್ಕಾರದ ಗಮನ ಸೆಳೆಯಲು ಪ್ರಧಾನ ಮಂತ್ರಿಗಳ ನಿವಾಸದ ಎದುರು ಪ್ರತಿಭಟನೆ ನಡೆಸಲು ರೈತರೊಂದಿಗೆ ಮಠಾಧೀಶರ ಪರಿಷತ್ತು ಅಣಿಯಾಗಲಿದೆ ಎಂದು ಬೆಂಬಲ ಸೂಚಿಸಿದರು. ನದಿಗಳ ಜೋಡಣೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆಶಯವಾಗಿತ್ತು. ಅದು ಇದುವರೆಗೂ ಈಡೇರಿಸಲು ಸರ್ಕಾರಗಳು ಮುಂದಾಗುತ್ತಿಲ್ಲವೆಂದು ಸರ್ಕಾರಗಳ ನಡೆಗೆ ಬೇಸರ ವ್ಯಕ್ತಪಡಿಸಿದರು.

ಹಾಲಶಂಕರ ಸ್ವಾಮೀಜಿ, ನಂದಿಪುರದ ಮಹೇಶ್ವರ ಸ್ವಾಮೀಜಿ, ಸಿರುಗುಪ್ಪದ ಬಸವಭೂಷಣ ಸ್ವಾಮೀಜಿ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಬಂಗ್ಲೆ ಮಲ್ಲಿಕಾರ್ಜುನ, ಸಾಮಾಜಿಕ ಕಾರ್ಯಕರ್ತರಾದ ಅನುಪಮಶೆಣೈ, ರಾಜಶೇಖರ ಮುಲಾಲಿ ಮಾತನಾಡಿದರು. ಬಳ್ಳಾರಿ ಕನಕದುರ್ಗಮ್ಮ ದೇವಸ್ಥಾನದ ಪ್ರಧಾನ ಅರ್ಚಕ ಗಾದೆಪ್ಪ, ರೈತ ಮುಖಂಡರಾದ ಶ್ರೀಧರ, ಶರಣಪ್ಪ, ವೀರೇಶಯ್ಯ ಇತರರಿದ್ದರು.

ತುಂಗಭದ್ರಾ ಜಲಾಶಯದಲ್ಲಿ 33 ಟಿಎಂಸಿ ಅಡಿ ನೀರಿನ ಸಾಮರ್ಥ್ಯದ ಹೂಳುತುಂಬಿದೆ. ಇದರಿಂದ ಮೂರು ರಾಜ್ಯಗಳಾದ ಕರ್ನಾಟಕ, ಸೀಮಾಂದ್ರ, ತೆಲ್ಲಾಂಗಾಣದ 11 ಜಿಲ್ಲೆಗಳ 11ಲಕ್ಷ ಕೃಷಿ ಭೂಮಿಗೆ ನೀರುಣಿಸುವ ಸಾಮರ್ಥ್ಯವನ್ನು ಜಲಾಶಯ ಕಳೆದುಕೊಂಡಿದೆ .ಕೃಷಿ ಜಮೀನುಗಳಿಗೆ ಹಾಗೂ ಜನರಿಗೆ ಕುಡಿಯಲು ನೀರಿಲ್ಲ. ಆದರೆ ಸರ್ಕಾರ ಜಿಲ್ಲೆಯ ಕಾರ್ಖಾನೆಗಳಿಗೆ ನಿರಂತರ ನೀರು ಧಾರೆ ಎರೆಯುತ್ತಿದೆ. •ದರೂರು ಪುರುಷೋತ್ತಮಗೌಡ, ತುಂಗಭದ್ರಾ ರೈತ ಸಂಘದ ಅಧ್ಯಕ್ಷ

ಟಾಪ್ ನ್ಯೂಸ್

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Water Supply

Water scarcity; ಮಂಗಳೂರು ನಗರಕ್ಕೆ ಎರಡು ದಿನಕ್ಕೊಮ್ಮೆ ನೀರು

HDK (3)

Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ

jameer

Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್

siddanna-2

Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…

1-wqqwqw

Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppal Lok Sabha Constituency: ಹಿಟ್ನಾಳ್‌ಗೆ ಹೊಸ ಮುಖ ಡಾ| ಕ್ಯಾವಟರ್‌ ಸವಾಲು

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

accident

Yellapur: ಟಿಪ್ಪರ್ ಗೆ ಢಿಕ್ಕಿಯಾಗಿ ಬೈಕ್ ಸಹಸವಾರೆ ಬಾಲಕಿ ಮೃತ್ಯು

1——dsadsa

Madikeri; ಮೊಬೈಲ್ ನಿಂದ ಬಡಿದು ಅತ್ತೆ ಹತ್ಯೆಗೈದು ಕಥೆ ಕಟ್ಟಿದ ಸೊಸೆ!

1-qewqeqweqw

CD ಮಾಡುವುದರಲ್ಲಿ ಡಿಕೆಶಿ ನುರಿತವರು: ಬಿಜೆಪಿ ಅಭ್ಯರ್ಥಿ ರಾಜುಗೌಡ ವ್ಯಂಗ್ಯ

1-assas-aa

Rae Bareli ರಣಕಣ; ನಾಮಪತ್ರ ಸಲ್ಲಿಸಿದ ರಾಹುಲ್ ಗಾಂಧಿ: ಗೆಲುವು ಸುಲಭವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.