ವಿದ್ಯಾರ್ಥಿಗಳು – ಶಿಕ್ಷಕರಿಗೆ ತಲೆನೋವಾಗುತ್ತಿರುವ ಶಾಲೆಗಳ ನೀರು ಸಮಸ್ಯೆ
Team Udayavani, Jun 1, 2019, 6:00 AM IST
ಮಹಾನಗರ: ನಗರದ ಬಹು ತೇಕ ಶಾಲಾ – ಕಾಲೇಜುಗಳಲ್ಲಿ ನೀರಿನ ಅಭಾವದಿಂದಾಗಿ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಹೈರಾಣಾಗಿದ್ದಾರೆ. ನೀರಿಲ್ಲದ ಕಾರಣ ನಗರದ ಖಾಸಗಿ ಶಿಕ್ಷಣ ಸಂಸ್ಥೆ ಯೊಂದು ಶುಕ್ರವಾರ ಮಧ್ಯಾಹ್ನದ ಬಳಿಕ ವಿದ್ಯಾರ್ಥಿ ಗಳಿಗೆ ರಜೆ ನೀಡಿತ್ತು.
ನಗರದಲ್ಲಿ ದಿನದಿಂದ ದಿನಕ್ಕೆ ಕುಡಿಯುವ ನೀರಿನ ಸಮಸ್ಯೆ ಬಿಗಡಾಯಿಸತೊಡಗಿದೆ. ಶಾಲಾ-ಕಾಲೇಜುಗಳಲ್ಲಿ ನೀರಿನ ಸಮಸ್ಯೆ ತುಸು ಹೆಚ್ಚೇ ಇದೆ. ಕೆಲವು ದಿನಗಳ ಹಿಂದಷ್ಟೇ ಪಪೂ ಕಾಲೇಜುಗಳು ಆರಂಭವಾಗಿವೆ. ಮೇ 29ರಂದು ಸರಕಾರಿ, ಅನುದಾನಿತ ಶಾಲೆಗಳೂ ಕಾರ್ಯಾರಂಭಗೊಂಡಿವೆ. ಆದರೆ, ಶಾಲೆ- ಕಾಲೇಜು ಆರಂಭವಾಗುತ್ತಲೇ ವಿದ್ಯಾರ್ಥಿ- ಶಿಕ್ಷಕರಿಗೆ ನೀರಿನ ಸಮಸ್ಯೆ ತಲೆನೋವಾಗಿ ಪರಿಣಮಿಸಿದೆ. ಕೆಲವು ಶಾಲೆಗಳಲ್ಲಿ ಶಾಲಾ ರಂಭದ ದಿನದಿಂದಲೇ ಟ್ಯಾಂಕರ್ ಮೂಲಕ ನೀರು ತರಿಸಿದರೆ, ಇನ್ನು ಕೆಲವೆಡೆ ಏನೂ ಮಾಡಲಾಗದ ಪರಿಸ್ಥಿತಿಯಲ್ಲಿ ಶಿಕ್ಷಕರಿದ್ದಾರೆ.
ಗಾಂಧಿನಗರ ಸ. ಶಾಲೆಯಲ್ಲಿ ಶಾಲಾ ರಂಭದ ದಿನವೇ ಟ್ಯಾಂಕರ್ ಮುಖಾಂತರ ನೀರು ತರಿಸಲಾಗಿದೆ. ಲೇಡಿಹಿಲ್ ವಿಕ್ಟೋ ರಿಯಾ ಆಂ.ಮಾ.ಶಾಲೆ ನೀರಿನ ವಿಪರೀತ ಸಮಸ್ಯೆ ಇದ್ದ ಕಾರಣ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರ ಮಧ್ಯಾಹ್ನದ ಬಳಿಕ ಶಾಲೆಗೆ ರಜೆ ನೀಡಿತ್ತು. ಶನಿವಾರ ಮಧ್ಯಾಹ್ನದ ತನಕ ಶಾಲೆ ಇರುವುದರಿಂದ ನೀರಿನ ಸಮಸ್ಯೆಯಿದ್ದರೂ ತರಗತಿಗಳು ನಡೆಯಲಿವೆ. ಆದರೆ, ಮುಂದಿನ ದಿನಗಳಲ್ಲಿ ಮಳೆ ಬಾರದಿದ್ದಲ್ಲಿ ಹೇಗೆ ತರಗತಿ ನಡೆಸುವುದು ತಿಳಿಯದಾಗಿದೆ ಎನ್ನುತ್ತಾರೆ ಈ ಶಾಲೆಯ ಶಿಕ್ಷಕರು.
ಬಿಕರ್ನಕಟ್ಟೆ: ಹೆಚ್ಚಿದ ಸಮಸ್ಯೆ
ಬಿಕರ್ನಕಟ್ಟೆ ಸ. ಶಾಲೆಯಲ್ಲಿ ನೀರಿನ ಸಮಸ್ಯೆ ಹೆಚ್ಚಿತ್ತು. ಆದರೆ, ಸನಿಹದ ಫ್ಲಾ ್ಯಟ್ ನಲ್ಲಿ ಬೋರ್ವೆಲ್ ಇರುವುದರಿಂದ ಮಕ್ಕಳ ಆವಶ್ಯಕತೆಗೆ ನೀರು ನೀಡುವಂತೆ ಸಂಸ್ಥೆ ಯವರು ಮನವಿ ಮಾಡಿದ್ದರಿಂದ ನೀರು ದೊರಕಿದೆ. ಅಲ್ಲದೆ, ಮಳೆ ಬರುವ ವರೆಗೂ ನೀರು ಪಡೆದುಕೊಳ್ಳಲು ಅವರು ಹೇಳಿರುವುದಾಗಿ ಶಾಲಾ ಮುಖ್ಯ ಶಿಕ್ಷಕರು ತಿಳಿಸಿದ್ದಾರೆ.
ಬಲ್ಮಠ ಶಿಕ್ಷಕರ ತರಬೇತಿ ಸಂಸ್ಥೆ ಪ್ರಾಥಮಿಕ ವಿಭಾಗ ಶಾಲೆಯಲ್ಲಿ ಶಾಲಾರಂಭದ ಮುನ್ನಾ ದಿನವೇ ಅಂದರೆ ಮೇ 28ರಂದು ಸಿಂಟೆಕ್ಸ್ನಲ್ಲಿ ನೀರು ತುಂಬಿಸಿಡಲಾಗಿದ್ದು, ಎರಡು ದಿನಗಳ ಕಾಲ ಅದೇ ನೀರನ್ನು ಬಳಸಲಾಗಿದೆ. ಶುಕ್ರವಾರ ಪಾಲಿಕೆ ನೀರು ಸರಬರಾಜಾಗಿರುವುದರಿಂದ ಸಮಸ್ಯೆ ಆಗಿಲ್ಲ. ಆದರೆ, ನೀರಿನ ಸಮಸ್ಯೆ ಶಾಲೆಯಲ್ಲಿದೆ ಎನ್ನುತ್ತಾರೆ ಮುಖ್ಯ ಶಿಕ್ಷಕಿ ಸೀತಮ್ಮ ಜೆ.
ನಾಲ್ಯಪದವು ಸರಕಾರಿ ಶಾಲೆಯಲ್ಲಿ ನೀರಿನ ಸಮಸ್ಯೆ ಇದೆ. ಆದರೆ, ನೀರು ಕಡಿಮೆ ಯಾದ ಪಾಲಿಕೆಯ ಅಭಿಯಂತರರಿಗೆ ಕರೆ ಮಾಡಿ ತಿಳಿಸಿದರೆ ತತ್ಕ್ಷಣ ಟ್ಯಾಂಕರ್ ನೀರು ಕಳುಹಿಸುತ್ತಾರೆ. ಹಾಗಾಗಿ ಸಮಸ್ಯೆ ಬಿಗಡಾಯಿಸಿಲ್ಲ ಎಂದು ಪ್ರಭಾರ ಮುಖ್ಯ ಶಿಕ್ಷಕಿ ದಾಕ್ಷಾಯಿಣಿ ಹೇಳಿದ್ದಾರೆ.
ಸೈಂಟ್ ಅಲೋಶಿಯಸ್, ಕಪಿತಾನಿಯೋ ಶಾಲೆ, ರೊಸಾರಿಯೋ ಶಾಲೆ, ಶಾರದಾ ವಿದ್ಯಾಲಯ, ಬೆಂದೂರ್ ಸೈಂಟ್ ಆ್ಯಗ್ನೆಸ್ ಶಾಲೆ ಮುಂತಾದೆಡೆ ನೀರಿನ ಸಮಸ್ಯೆ ಇಲ್ಲಿವರೆಗೆ ಎದುರಾಗಿಲ್ಲ ಎಂದು ಶಾಲೆಯ ಮುಖ್ಯಸ್ಥರು ತಿಳಿಸಿದ್ದಾರೆ.
ಕೈ ತೊಳೆಯಲೂ ನೀರಿಲ್ಲ!
ಮುಡಿಪು ಸ.ಪ.ಪೂ. ಕಾಲೇಜಿನಲ್ಲಿ ಕೈ ತೊಳೆಯಲೂ ನೀರಿಲ್ಲ. ಟಿಫಿನ್ ಬಾಕ್ಸ್ನ್ನುತೊಳೆಯದೇ ಮನೆಗೊಯ್ಯಬೇಕಾದ ಪರಿಸ್ಥಿತಿ ಇದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿ ಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ
Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ
Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ
Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ
Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್ ಪಂತ್