ಚಿ.ನಾ.ಹಳ್ಳಿಯಲ್ಲಿ ಹನಿ ನೀರಿಗಾಗಿ ಪರದಾಟ

ನೀರು ಪೂರೈಕೆಗೆ ಪುರಸಭೆ ವಿಫ‌ಲ • ಅಧಿಕಾರಿಗಳಿಗೆ ತಿಳಿಸಿದರೂ ಪ್ರಯೋಜನವಿಲ್ಲ

Team Udayavani, Jun 1, 2019, 11:25 AM IST

tumkur-tdy-2..

ಚಿಕ್ಕನಾಯಕನಹಳ್ಳಿ ಪಟ್ಟಣದಲ್ಲಿ ನೀರಿಗಾಗಿ ಟ್ಯಾಂಕರ್‌ ಮುಂದೆ ಕಾಯುತ್ತಿರುವ ಸಾರ್ವಜನಿಕರು.

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ದಿನೇ ದಿನೆ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ವಾರ್ಡ್‌ಗಳಿಗೆ ನೀರು ಪೂರೈಸುವ ಜವಾಬ್ದಾರಿ ಹೊತ್ತಿರುವ ಪುರಸಭೆ ನೀರು ಪೂರೈಸಲು ವಿಫ‌ಲವಾಗಿದೆ. ಹೀಗಾಗಿ ಸಾರ್ವಜನಿಕರು ವಾರ್ಡ್‌ಗಳಲ್ಲಿ ಹನಿ ನೀರಿಗಾಗಿ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದ ಪುರಸಭೆಯ 23 ವಾರ್ಡ್‌ಗಳ ಪೈಕಿ ಬಹುತೇಕ ವಾರ್ಡ್‌ಗಳಲ್ಲಿ ಪುರಸಭೆ ನಲ್ಲಿಗಳಲ್ಲಿ ನೀರು ಪೂರೈಕೆಯಾಗುತ್ತಿಲ್ಲ. ಇದರ ಪರಿಣಾಮವಾಗಿ ಹನಿ ನೀರಿಗಾಗಿ ಸಾರ್ವಜನಿಕರು ಅಲೆದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಪಟ್ಟಣದಲ್ಲಿ ಸುಮಾರು 21 ಸಾವಿರ ಜನಸಂಖ್ಯೆ ಇದ್ದು, 17 ಕೊಳವೆ ಬಾವಿಗಳಲ್ಲಿ ಮಾತ್ರ ಕಡಿಮೆ ಪ್ರಮಾಣದಲ್ಲಿ ನೀರಿದೆ. ಇವುಗಳ ಪೈಕಿ ಕೆಲ ಕೊಳವೆ ಬಾವಿಗಳಲ್ಲಿ ಕೆಲ ಗಂಟೆಗಳ ಕಾಲ ಮಾತ್ರ ನೀರು ಬರುತ್ತಿದೆ. ಇಂತಹ ಪರಿಸ್ಥಿತಿಯಲ್ಲೂ ಸಾರ್ವಜನಿಕರಿಗೆ ನೀರು ಕಲ್ಪಿಸಲು ಪುರಸಭೆ ವಿಫ‌ಲವಾಗುತ್ತಿದೆ ಎಂಬ ಆರೋಪ ಕೇಳಿ ಬರುತ್ತಿದೆ.

ಹಣ ನೀಡಿ ನೀರು ಪೂರೈಕೆ: ಪಟ್ಟಣದ ಮಾರುತಿ ನಗರ, ಮಹಾಲಕ್ಷ್ಮೀ ಬಡಾವಣೆ, ಕೇದಿಗೆಹಳ್ಳಿ, ದೆಬ್ಬೆಗಟ್ಟ ಸೇರಿದಂತೆ ಬಹುತೇಕ ವಾರ್ಡ್‌ಗಳಲ್ಲಿ ನೀರನ ಅಭಾವ ಸೃಷ್ಟಿಯಾಗಿದೆ. ಪುರಸಭೆ ನಲ್ಲಿಗಳಲ್ಲಿ ಬರುತ್ತಿದ್ದ ನೀರು ಸಹ ನಿಂತು ಹೋಗಿದೆ. ಇಲ್ಲಿನ ನಿವಾಸಿಗಳು ಹಣ ನೀಡಿ ಟ್ಯಾಂಕರ್‌ಗಳಿಂದ ನೀರನ್ನು ಖರೀದಿಸುತ್ತಿದ್ದಾರೆ. ಪುರಸಭೆ ಅಧಿಕಾರಿಗಳಿಗೆ ನೀರಿನ ಸಮಸ್ಯೆಯ ಬಗ್ಗೆ ತಿಳಿಸಿದರು ಯಾವ ಪ್ರಯೋ ಜನವಾಗುತ್ತಿಲ್ಲ.

ನೀರು ಸರಬರಾಜಿಗೆ ಟೆಂಡರ್‌: ಚಿಕ್ಕನಾಯಕನ ಹಳ್ಳಿ ಪಟ್ಟಣದ ವಾರ್ಡ್‌ಗಳಿಗೆ ನೀರು ಸರಬ ರಾಜು ಮಾಡಲು ಟ್ಯಾಂಕರ್‌ಗಳಿಗೆ ಟೆಂಡರ್‌ ಮಾಡಿ, ಇಎಂಡಿ ಪಡೆದಿರುವ ಪುರಸಭೆ, ಟೆಂಡರ್‌ ಆಗಿ ಒಂದು ವಾರ ಕಳೆದಿದೆ. ಆದರೂ ಸಹ ಸಾರ್ವಜನಿಕರಿಗೆ ಯಾವ ರೀತಿಯ ಅನುಕೂಲವಾಗಿಲ್ಲ. ನೀರಿನ ಸಮಸ್ಯೆ ಪಟ್ಟಣದಲ್ಲಿ ಮುಗಿಲು ಮುಟ್ಟಿದೆ.

ಅಧಿಕಾರಿಗಳು ಟೆಂಡರ್‌ ಕರೆದು ಒಂದು ವಾರವಾಗಿದ್ದರೂ ಸಹ ಕುಡಿಯುವ ನೀರನ್ನು ವಾರ್ಡ್‌ಗಳಿಗೆ ನೀಡದಿರುವುದು ಸಾರ್ವಜನಿಕರ ಅಕ್ರೋಶಕ್ಕೆ ಕಾರಣವಾಗಿದೆ.

● ಚೇತನ್‌ ಪ್ರಸಾದ್‌

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.