ಬಿಕೋ ಎನ್ನುತ್ತಿದೆ ರೈತ ಸಂಪರ್ಕ ಕೇಂದ್ರ

•ಆಕಾಶದತ್ತ ಮುಖ ಮಾಡಿ ಕುಳಿತ ಅನ್ನದಾತ•ಮುಂಗಾರು ಪೂರ್ವ ಮಳೆ ವಾಡಿಕೆಗಿಂತ ಕಡಿಮೆ

Team Udayavani, Jun 1, 2019, 1:50 PM IST

kopala-tdy-1..

ಕುಷ್ಟಗಿ: ರೈತರಿಲ್ಲದೇ ಬಿಕೋ ಎನ್ನುತ್ತಿದೆ ರೈತ ಸಂಪರ್ಕ ಕೇಂದ್ರ.

ಕುಷ್ಟಗಿ: ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಕಾಲದಲ್ಲಿ ಮಳೆಯಾಗದ ಹಿನ್ನೆಲೆಯಲ್ಲಿ ರೈತರು, ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರದತ್ತ ಮುಖ ಮಾಡದಿರುವುದರಿಂದ ರೈತ ಸಂಪರ್ಕ ಕೇಂದ್ರ ಬಿಕೋ ಎನ್ನುತ್ತಿವೆ.

ಮುಂಗಾರು ಹಂಗಾಮಿಗೆ ಸದ್ಯ ಬಿತ್ತನೆ ದಿನಗಳಾಗಿದ್ದು, ಈ ಸಂದರ್ಭದಲ್ಲಿ ಮಳೆಯಾಗದೇ ಇರುವುದು ರೈತ ಸಂಪರ್ಕ ಕೇಂದ್ರದಲ್ಲಿ ರೈತರ ಸುಳಿವಿಲ್ಲ. ಸದ್ಯ ತಾಲೂಕಿನ ಕುಷ್ಟಗಿ, ಹನುಮಸಾಗರ, ಹನುಮನಾಳ ಹಾಗೂ ತಾವರಗೇರಾ ರೈತ ಸಂಪರ್ಕ ಕೇಂದ್ರಗಳಲ್ಲಿ ಹೆಸರು, ತೊಗರಿ ಬೀಜ ದಾಸ್ತಾನು ಮಾಡಲಾಗಿದೆ. ಕುಷ್ಟಗಿಯಲ್ಲಿ ಹೆಸರು 10.2 ಕ್ವಿಂಟಲ್, ತೊಗರಿ 24 ಕ್ವಿಂಟಲ್, ತಾವರಗೇರಾದಲ್ಲಿ ಹೆಸರು 11.26 ಕ್ವಿಂಟಲ್, ತೊಗರಿ 24 ಕ್ವಿಂಟಲ್, ಹನುಮಸಾಗರದಲ್ಲಿ ಹೆಸರು 6 ಕ್ವಿಂಟಲ್, ತೊಗರಿ 9 ಕ್ವಿಂಟಲ್, ಹನುಮನಾಳ ಹೆಸರು 10 ಕ್ವಿಂಟಲ್, ತೊಗರಿ 5 ಕ್ವಿಂಟಲ್ ಬಿತ್ತನೆ ಬೀಜ ದಾಸ್ತಾನು ಇದೆ. ಹೆಸರು ಬಿತ್ತನೆ ಕಾಲಾವಧಿ ಮುಗಿದಿರುವ ಹಿನ್ನೆಲೆಯಲ್ಲಿ ಯಾರು ಬೀಜ ಕೇಳುತ್ತಿಲ್ಲ. ಇದೀಗ ತೊಗರಿ ಬಿತ್ತನೆ ಬೀಜಕ್ಕೆ ಬೇಡಿಕೆ ಹೆಚ್ಚಿದೆ ಎಂದು ಸಹಾಯಕ ಕೃಷಿ ಅಧಿಕಾರಿ ಬಾಲಪ್ಪ ಜಲಗೇರಿ ತಿಳಿಸಿದರು.

ಪ್ರಸಕ್ತ ಮುಂಗಾರು ಹಂಗಾಮಿಗೆ 65,875 ಹೆಕ್ಟೇರ್‌ ಬಿತ್ತನೆ ಗುರಿ ಹೊಂದಲಾಗಿದ್ದು, 34,875 ಹೆಕ್ಟೇರ್‌ ಏಕದಳ, 17,875 ದ್ವಿದಳ, 15,550 ಎಣ್ಣೆಕಾಳು ಹಾಗೂ 1,200 ವಾಣಿಜ್ಯ ಬೆಳೆಗಳ ಬಿತ್ತನೆ ಗುರಿ ಹೊಂದಲಾಗಿದೆ.

ಮಳೆ ಕೊರತೆ: ಮುಂಗಾರು ಪೂರ್ವ (ಜನವರಿಯಿಂದ ಮೇ ವರೆಗೂ) ವಾಡಿಕೆ ಮಳೆ 86 ಮಿ.ಮೀ. ಕಳೆದ ವರ್ಷ ಮುಂಗಾರು ಪೂರ್ವ 88 ಮಿ.ಮೀ. ಮಳೆಯಾಗಿತ್ತು. ಮುಂಗಾರಿನಲ್ಲಿ 380 ಮೀ.ಮೀ ವಾಡಿಕೆ ಮಳೆ, ಆದರೆ 252 ಮಿ.ಮೀ. ಮಳೆಯಾಗಿದ್ದು, ಶೇ. 34ರಷ್ಟು ಕೊರತೆಯಾಗಿತ್ತು. ಅಕ್ಟೊಬರ್‌-ಡಿಸೆಂಬರ್‌ ಹಿಂಗಾರು ಹಂಗಾಮಿನಲ್ಲಿ 142 ಮಿ.ಮೀ. ವಾಡಿಕೆ ಮಳೆಯಲ್ಲಿ ಶೇ. 61ರಷ್ಟು ಕೊರತೆಯಾಗಿದ್ದು, ಒಟ್ಟಾರೆ ವಾಡಿಕೆ ಮಳೆ 571 ಮಿ.ಮೀ. ವಾಸ್ತವಿಕ 416 ಮೀ.ಮೀ. ಮಳೆಯಾಗಿದ್ದು, ಶೇ. 37 ಕೊರತೆಯಾಗಿತ್ತು. ಅದೇ ಮಳೆ ಕೊರತೆಯ ಪರಸ್ಥಿತಿ ಮುಂದುವರಿದಿದೆ. ಮೇ ತಿಂಗಳಿನಲ್ಲಿ ಕುಷ್ಟಗಿಯಲ್ಲಿ 31 ಮಿ.ಮೀ ವಾಡಿಕೆ ಮಳೆಯಾಗಬೇಕಿದ್ದು, 11 ಮಿ.ಮೀ. ಮಳೆಯಾಗಿದೆ. ಹನುಮನಾಳ 31 ಮಿ.ಮೀ. ನಷ್ಟಿದ್ದ ವಾಡಿಕೆ ಮಳೆ, ಆದರೆ 12 ಮಿ.ಮೀ ಮಳೆಯಗಿದೆ. ಹನುಮಸಾಗರದಲ್ಲಿ 33 ಮಿ.ಮೀ. ನಷ್ಟಿದ್ದ ವಾಡಿಕೆ ಮಳೆ, 12.7 ಮಿ.ಮೀ. ಮಳೆಯಾಗಿದೆ. ತಾವರಗೇರಾದಲ್ಲಿ 31 ಮಿ.ಮೀ. ಆಗಬೇಕಿದ್ದ ಮಳೆ 8.2 ರಷ್ಟು ಸುರಿದಿದೆ.

ಏಪ್ರಿಲ್ ಹಾಗೂ ಮೇ ತಿಂಗಳಿನಲ್ಲಿ ಮಳೆ ಕೊರತೆ ಮುಂದುವರಿದಿದ್ದು, ಮುಂಗಾರು ವಿಳಂಬದ ಬಗ್ಗೆ ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ರೈತರು ಆತಂಕಗೊಂಡಿದ್ದಾರೆ. ಇಷ್ಟೊತ್ತಿಗೆ ಬಿತ್ತನೆ ಕಾರ್ಯ ಚಟುವಟಿಕೆಯಲ್ಲಿ ತಲ್ಲೀನರಾಗಬೇಕಾದ ರೈತರು, ಬಿತ್ತನೆ ಜಮೀನು ಹದಮಾಡಿಕೊಂಡಿದ್ದು ಮಳೆಯ ನಿರೀಕ್ಷೆಯಲ್ಲಿದ್ದಾರೆ.

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

Kushtagi: ಸಿಡಿಲಿಗೆ ಬಿತ್ತನೆ ಕಾರ್ಯ ನಿರತ ರೈತ ಬಲಿ

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

Gangavathi ಸಾಣಾಪೂರ ಕೆರೆಯಲ್ಲಿ ಮುಳುಗಿ ಯುವಕ ಮೃತ್ಯು

1-weewqeqw

Kushtagi:ಬಹಿರ್ದೆಸೆಗೆ ಕುಳಿತ ಇಬ್ಬರ ಬಲಿ ಪಡೆದ ಶೌಚಾಲಯದ ಗೋಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

Shivraj tangadagi

Prajwal Revanna ಬಂಧನಕ್ಕೆ ಕೇಂದ್ರ ಸರಕಾರದಿಂದ ಅಸಹಕಾರ: ಸಚಿವ ತಂಗಡಗಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.