ಭಾರತ ಆದ್ಯತೆ ರಾಷ್ಟ್ರವಲ್ಲ

ಸೌಲಭ್ಯವನ್ನು ಹಿಂಪಡೆದ ಟ್ರಂಪ್‌

Team Udayavani, Jun 2, 2019, 6:00 AM IST

c-37

ವಾಷಿಂಗ್ಟನ್‌: ಭಾರತಕ್ಕೆ ಅಮೆರಿಕ ನೀಡಿದ ಆದ್ಯತೆಯ ರಾಷ್ಟ್ರ ಎಂಬ ಪಟ್ಟವನ್ನು ಹಿಂಪಡೆಯಲು ನಿರ್ಧರಿಸಿದ್ದು, ಇದ ರಿಂದಾಗಿ ಅಮೆರಿಕದೊಂದಿಗಿನ ಭಾರತದ ವ್ಯಾಪಾರ ವಹಿ ವಾಟಿನ ಮೇಲೆ ಪರಿಣಾಮ ಬೀರಲಿದೆ. ಅಲ್ಲದೆ, ಅಮೆರಿಕಕ್ಕೆ ಸದ್ಯ ರಫ್ತಾಗುವ ಸ್ಟೀಲ್, ಪೀಠೊ ಪಕರಣ, ಅಲ್ಯೂಮಿನಿಯಂ ಮತ್ತು ಎಲೆಕ್ಟ್ರಿಕ್‌ ಸಾಮಗ್ರಿಗಳ ಉತ್ಪಾದನೆಯಲ್ಲಿ ತೊಡಗಿರುವ ಭಾರತೀಯ ಕಂಪನಿಗಳಿಗೆ ಭಾರಿ ಹೊಡೆತ ಬೀಳಲಿದೆ.

ಅಷ್ಟೇ ಅಲ್ಲ, ಈ ಕ್ಷೇತ್ರದಲ್ಲಿ ಭಾರತದ ಸ್ಪರ್ಧಾತ್ಮಕತೆಗೂ ಹೊಡೆತ ಬೀಳಲಿದೆ. ಜಿಎಸ್‌ಪಿ (ಜನರಲೈಸ್ಡ್ ಸಿಸ್ಟಂ ಆಫ್ ಪ್ರಿಫ‌ರೆನ್ಸಸ್‌) ಎಂದು ಈ ಯೋಜನೆಯನ್ನು ಕರೆಯಲಾಗಿ ದ್ದು, ಇದರ ಅಡಿಯಲ್ಲಿ ಸುಮಾರು 3 ಸಾವಿರ ಸಾಮಗ್ರಿಗಳನ್ನು ತೆರಿಗೆ ಇಲ್ಲದೇ ಅಮೆರಿಕ ಆಮದು ಮಾಡಿಕೊಳ್ಳುತ್ತದೆ.

ಜೂನ್‌ 5 ರಿಂದ ಜಾರಿಗೆ ಬರುವಂತೆ ಈ ಸೌಲಭ್ಯವನ್ನು ಹಿಂಪಡೆಯಲಾಗುತ್ತದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಘೋಷಿಸಿದ್ದಾರೆ. ಈ ಬಗ್ಗೆ ಭಾರತ ತನ್ನ ಆಕ್ಷೇಪಣೆಯನ್ನು ಸಲ್ಲಿಸಿದೆಯಾದರೂ, ಅಮೆರಿಕ ಇದನ್ನು ಮನ್ನಿಸಿಲ್ಲ. 1976 ರಿಂದಲೂ ಈ ಯೋಜನೆ ಚಾಲ್ತಿಯಲ್ಲಿದ್ದು, ಹಲವು ಬಾರಿ ಇದರ ರದ್ದತಿ ಪ್ರಸ್ತಾವ ಬಂದಿತ್ತು. ಆದರೆ, ಮಾತುಕತೆಯ ಬಳಿಕ ಇದಕ್ಕೆ ಪರಿಹಾರ ಕಂಡುಕೊಂಡು, ಸೌಲಭ್ಯವನ್ನು ಮುಂದುವರಿಸಲಾಗಿತ್ತು. ಆದರೆ ಈಗ ಟ್ರಂಪ್‌ ಅಧಿಕಾರಕ್ಕೆ ಬಂದ ನಂತರ, ಅಮೆರಿಕ ಫ‌ರ್ಸ್ಡ್ ಎಂಬ ನೀತಿಯನ್ನು ಅಳವಡಿಸಿಕೊಂಡಿದ್ದು, ಆಮದು ಹಾಗೂ ರಫ್ತಿನ ಮೇಲೆ ಕಠಿಣ ನಿರ್ಬಂಧಗಳನ್ನು ಹೇರುತ್ತಿದ್ದಾರೆ. ಹೀಗಾಗಿ ಈ ಬಾರಿ ವಾಣಿಜ್ಯ ಇಲಾಖೆ ವಿವಿಧ ಪರ್ಯಾಯ ಕ್ರಮಗಳ ಪ್ರಸ್ತಾಪ ಮಾಡಿದ್ದರೂ ಅಮೆರಿಕ ಒಪ್ಪಿಲ್ಲ ಎನ್ನಲಾಗಿದೆ.

ಟ್ರಂಪ್‌ ಹೇಳಿದ್ದೇನು?: ಸಮಾನ ಮತ್ತು ಸೂಕ್ತ ಪಾಲುದಾರಿಕೆಯನ್ನು ಅಮೆರಿಕಕ್ಕೆ ತನ್ನ ಮಾರುಕಟ್ಟೆಯಲ್ಲಿ ಭಾರತ ಒದಗಿಸಿಕೊಡುತ್ತಿಲ್ಲ ಎಂಬುದನ್ನು ನಾನು ಗಮನಿಸಿದ್ದೇನೆ. ಹೀಗಾಗಿ ಜೂನ್‌ 5 ರಿಂದ ಜಾರಿಯಾಗುವಂತೆ ವಿಶೇಷ ಸೌಲಭ್ಯವನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ ಎಂದು ಟ್ರಂಪ್‌ ಹೇಳಿದ್ದಾರೆ.

ಅಮೆರಿಕದ ಸಾಮಗ್ರಿಯ ಮೇಲೆ ಶೇ. 25 ತೆರಿಗೆ

ಬೀಜಿಂಗ್‌: ಅಮೆರಿಕ ಹಾಗೂ ಚೀನಾ ವ್ಯಾಪಾರ ಯುದ್ಧ ತೀವ್ರತೆ ಪಡೆದುಕೊಳ್ಳುತ್ತಿದ್ದು, ಈಗ ಅಮೆರಿಕದ 4 ಲಕ್ಷ ಕೋಟಿ ರೂ. ಮೌಲ್ಯದ ಸಾಮಗ್ರಿಗಳ ಮೇಲೆ ಚೀನಾ ಶೇ. 25 ರಷ್ಟು ತೆರಿಗೆ ಹೆಚ್ಚಳ ಮಾಡಿದೆ. ಕಳೆದ ತಿಂಗಳಷ್ಟೇ ಅಮೆರಿಕವು 12 ಲಕ್ಷ ಕೋಟಿ ರೂ. ಮೌಲ್ಯದ ಚೀನಾ ಸಾಮಗ್ರಿಗಳ ಆಮದಿನ ಮೇಲೆ ಶೇ. 25 ರಷ್ಟು ತೆರಿಗೆ ವಿಧಿಸಿತ್ತು. ಇದಕ್ಕೆ ಪ್ರತೀಕಾರವಾಗಿ ಚೀನಾ ಈ ಕ್ರಮ ಕೈಗೊಂಡಿದೆ. ಕ್ರೀಡಾ ಸಾಮಗ್ರಿ, ಸಂಗೀತ ಸಲಕರಣೆ, ವೈನ್‌, ವಜ್ರ, ಪೀಠೊಪಕರಣ, ಬಟ್ಟೆ ಹಾಗೂ ಆಟಿಕೆಗಳ ಮೇಲೆ ಈ ತೆರಿಗೆ ವಿಧಿಸಲಾಗಿದೆ. ಅಮೆರಿಕದ ನಿರ್ಧಾರಕ್ಕೆ ಈ ಹಿಂದೆಯೇ ಆಕ್ರೋಶ ವ್ಯಕ್ತಪಡಿಸಿದ್ದ ಚೀನಾ, ‘ಅಮೆರಿಕವು ಆರ್ಥಿಕ ಭಯೋತ್ಪಾದನೆ’ ಸೃಷ್ಟಿಸುತ್ತಿದೆ ಎಂದು ಆರೋಪಿಸಿತ್ತು. ಈ ನಡುವೆಯೇ, ಅಮೆರಿಕದೊಂದಿಗಿನ ವ್ಯಾಪಾರ ಮಾತುಕತೆ ಕುರಿತು ತನ್ನ ನಿಲುವಿನ ಬಗ್ಗೆ ಭಾನುವಾರ ಶ್ವೇತಪತ್ರ ಹೊರಡಿಸುವುದಾಗಿ ಚೀನಾ ಹೇಳಿದೆ.

ಪರಿಣಾಮವೇನು?

ಮೂಲಗಳ ಪ್ರಕಾರ ಭಾರತದ ಮೇಲೆ ಅಮೆರಿಕದ ಈ ನಿರ್ಧಾರದಿಂದ ಪರಿಣಾಮ ಅತ್ಯಂತ ಕನಿಷ್ಠ. ಕೇವಲ 5.6 ಶತಕೋಟಿ ಡಾಲರ್‌ ವಹಿವಾಟಿನಲ್ಲಿ 190 ಮಿಲಿಯನ್‌ ಡಾಲರ್‌ ಮೊತ್ತದ ವಹಿವಾಟು ಮಾತ್ರ ಈ ಸೌಲಭ್ಯವನ್ನು ಬಳಸಿಕೊಳ್ಳುತ್ತದೆ. ಭಾರತದ ರಫ್ತು ವಹಿವಾಟು ಲ್ಯಾಟಿನ್‌ ಅಮೆರಿಕ ಮತ್ತು ಆಫ್ರಿಕಾ ದೇಶಗಳಲ್ಲಿ ಹೆಚ್ಚಿದ್ದು, ದಕ್ಷಿಣ ದೇಶಗಳಿಗೂ ಇತ್ತೀಚಿನ ದಿನಗಳಲ್ಲಿ ರಫ್ತು ಪ್ರಮಾಣ ಹೆಚ್ಚುತ್ತಿದೆ. ಆದರೆ ಕೆಲವೇ ವಲಯದ ಆಮದುದಾರರಿಗೆ ಇದರಿಂದ ಪರಿಣಾಮ ಉಂಟಾಗುವ ಸಾಧ್ಯತೆಯಿದೆ.

ಜಾರಿಗೆ ಇನ್ನೂ ಇದೆ ಅವಕಾಶ

ಜೂನ್‌ 5 ರಿಂದಲೇ ಈ ನೀತಿ ಅನ್ವಯವಾಗುವುದಿಲ್ಲ. ಸಾಮಾನ್ಯವಾಗಿ ಇದನ್ನು ಘೋಷಣೆ ಮಾಡಿದ ನಂತರ 60 ದಿನಗಳ ಕಾಲಾವಕಾಶ ಇರುತ್ತದೆ. ಇದಕ್ಕೆ ಅಮೆರಿಕದ ಸಂಸತ್ತು ಅನುಮೋದನೆ ನೀಡಬೇಕಿರುತ್ತದೆ. ಆ ನಂತರವೇ ಇದಕ್ಕೆ ಅಧ್ಯಕ್ಷರು ಸಹಿ ಹಾಕುತ್ತಾರೆ. 2018ರಲ್ಲಿ ಭಾರತದ ಸುಮಾರು 29 ಸಾಮಗ್ರಿಗಳ ಮೇಲೆ ತೆರಿಗೆ ಹೆಚ್ಚಿಸಲು ನಿರ್ಧರಿಸಲಾಗಿತ್ತು. ಆದರೆ ಈ ನಿರ್ಧಾರ ಇನ್ನೂ ಜಾರಿಗೆ ಬಂದಿಲ್ಲ. ವಾಣಿಜ್ಯ ಕಾರ್ಯದರ್ಶಿ ಅನೂಪ್‌ ವಾಧ್ವಾನ್‌ ಹೇಳುವಂತೆ ಭಾರತ ಸರ್ಕಾರವು ಅಮೆರಿಕದೊಂದಿಗೆ ಮಾತುಕತೆ ಮುಂದುವರಿಸಲಿದೆ. ಶೀಘ್ರದಲ್ಲೇ ಇದಕ್ಕೆ ಪರಿಹಾರವನ್ನೂ ಕಂಡುಕೊಳ್ಳುತ್ತೇವೆ. ಈ ಸಂಬಂಧ ಚರ್ಚೆಗೆ ಅಮೆರಿಕ ಎಂದಿಗೂ ಮುಕ್ತವಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.