ಸಹಕಾರ ಕ್ಷೇತ್ರವೆ,ದರೆ ಪ್ರಜಾಪ್ರಭುತ್ವದ ತೊಟ್ಟಿಲು: ಎಸ್‌.ಆರ್‌.ಸತೀಶ್ಚಂದ್ರ


Team Udayavani, Jun 2, 2019, 12:25 PM IST

campco

ವಿದ್ಯಾನಗರ:ದೇಶವನ್ನು ಬಡತನದಿಂದ ಸಿರಿತನದೆಡೆಗೆ ಎತ್ತಿಹಿಡಿದ ಸಹಕಾರ ಕ್ಷೇತ್ರದ ಸಾಧನೆ ಮತ್ತು ದೇಶದ ಅಭಿವೃದ್ಧಿಗೆ ನೀಡಿದ ಕೊಡುಗೆ ಅಪಾರವಾದುದು. ಸಹಕಾರಿ ಸಂಘಗಳು ಇಂದು ಪ್ರತಿಯೊಬ್ಬನ ಬದುಕಿನ ಭಾಗವಾಗಿದೆ. ದೇಶ ಬಡತನದ ಪರಾಕಾಷ್ಠೆಯಲ್ಲಿದ್ದಾಗ ಅಮೃತ ದೀಪವನ್ನು ಬೆಳಗಿಸಿ ಲಕ್ಷಾಂತರ ಜನರನ್ನು ಕೈಹಿಡಿದು ಮುನ್ನಡೆಸಿದ ಸಹಕಾರ ಕ್ಷೇತ್ರ ಪ್ರಜಾಪ್ರಭುತ್ವದ ತೊಟ್ಟಿಲು ಎಂದು ಕ್ಯಾಂಪ್ಕೋ ಸಂಸ್ಥೆಯ ಅಧ್ಯಕ್ಷ ಎಸ್‌.ಆರ್‌.ಸತೀಶ್ಚಂದ್ರ ಹೇಳಿದರು.

ಅವರು ಮಹಾಜನ ಸಂಸ್ಕೃತ ಹೈಯರ್‌ ಸೆಕೆಂಡರಿ ಶಾಲೆ ನಿರ್ಚಾಲಿನಲ್ಲಿ ನಡೆದ ಪೆರಡಾಲ ಸೇವಾ ಸಹಕಾರಿ ಬ್ಯಾಂಕ್‌ನ ಶತಮಾನೋತ್ಸವ ಆಚರಣೆ ಸಮಾರಂಭದಲ್ಲಿ ಬ್ಯಾಂಕಿನ ನೂತನ ಕಟ್ಟಡವನ್ನು ಸಾಂಕೇತಿಕವಾಗಿ ಉದ್ಘಾಟಿಸಿ ಮಾತನಾಡಿದರು.

ಸಂಸ್ಕೃತದ ಸುವಾಸನೆಯಿರುವ ನೀರ್ಚಾಲಿನ ಮಣ್ಣಿನಲ್ಲಿ ಬ್ಯಾಂಕ್‌ ಬೆಳೆದು ಬಂದಿರುವುದು ಸಂತಸದ ವಿಷಯ ಎಂದು ಅವರು ತಿಳಿಸಿದರು..ದಾನಿ ಸಾಯಿರಾಂ ಗೋಪಾಲಕೃಷ್ಣ ಭಟ್ ಕಿಳಿಂಗಾರು ಧ್ವಜಾರೋಹಣಗೈದು ಸಮಾರಂಭಕ್ಕೆ ಚಾಲನೆ ನೀಡಿದರು.ಬ್ಯಾಂಕಿನ ಅಧ್ಯಕ್ಷ ಜಯದೇವ ಖಂಡಿಗೆ ಸಮಾರಂಭದ ಅಧ್ಯಕ್ಷತೆ ವಹಿಸಿದರು. ಬ್ಯಾಂಕಿನ ಹಿರಿಯ ಸದಸ್ಯ ಕಾನತ್ತಿಲ ಮಹಾಲಿಂಗ ಭಟ್ ದೀಪ ಬೆಳಗಿಸಿದರು.

ಪೆರಡಾಲ ಸೇವಾ ಸಹಕಾರ ಬ್ಯಾಂಕ್‌ನಲ್ಲಿ ನೂತನವಾಗಿ ಪ್ರಾರಂಭಿಸಿದ ಕೋರ್‌ ಬ್ಯಾಂಕಿಂಗ್‌ ವ್ಯವಸ್ಥೆಯನ್ನು ಉದ್ಘಾಟಿಸಿದ ನಬಾರ್ಡ್‌ ಡಿ.ಡಿ.ಎಂ. ಜ್ಯೋತಿಷ್‌ ಜಗನ್ನಾದ್‌ ಮಾತನಾಡಿ ಕೋರ್‌ ಬ್ಯಾಂಕಿಂಗ್‌ ಎನ್ನುವುದು ಬ್ಯಾಂಕ್‌ಗಳನ್ನು ಪರಸ್ಪರ ಬೆಸೆಯುವ ಜಾಲಬಂಧವಾಗಿದೆ ಎಂದರು.,

ಇಲ್ಲಿ ಗ್ರಾಹಕರು ತಮ್ಮ ಖಾತೆಯನ್ನು ಪ್ರವೇಶಿಸಲು ಮತ್ತು ಯಾವುದೇ ಮೂಲ ವ್ಯವಹಾರಗಳನ್ನು ಯಾವುದೇ ಸದಸ್ಯ ಶಾಖೆಗಳಿಂದ ಮಾಡಬಹುದು.ಬ್ಯಾಂಕಿನ ಸಾಮಾನ್ಯ ವ್ಯವಹಾರಗಳಿಗೆ ವೇಗ ಹೆಚ್ಚಿಸುವ ಮತ್ತು ಚುರುಕು ಮುಟ್ಟಿಸುವ ಬ್ಯಾಂಕಿಂಗ್‌ ವ್ಯವಸ್ಥೆಯನ್ನು ಕಾರ್ಪೊರೇಟ್ ಬ್ಯಾಂಕಿಂಗ್‌ ವಿಭಾಗದ ಮೂಲಕ ನಿರ್ವಹಿಸಲಾಗುತ್ತದೆ ಎಂದರು. ಬ್ಯಾಂಕ್‌ ಭದ್ರತಾ ಕೋಶವನ್ನು ಜೆ.ಆರ್‌.ಕಾಸರಗೋಡು ಮಹಮ್ಮದ್‌ ನೌಶಾದ್‌, ಸಾಮಾನ್ಯ ಭದ್ರತಾ ಕೋಶವನ್ನು ಕಾಸರಗೋಡು ಎ.ಆರ್‌.ಜನರಲ್ ಜಯಚಂದ್ರನ್‌ ಹಾಗೂ ಕ್ಯಾಶ್‌ ಕೌಂಟರ್‌ನ್ನು ಕಾಸರಗೋಡು ಜಿಲ್ಲಾ ಪಂಚಾಯತ್‌ ಸದಸ್ಯ‌ ಅಡ್ವ.ಕೆ.ಶ್ರೀಕಾಂತ್‌ ಉದ್ಘಾಟಿಸಿದರು.

ಬ್ಯಾಂಕ್‌ ಹೊರತಂದ ರೂಪೇಕಾರ್ಡ್‌ ಕೆ.ಡಿ.ಸಿ.ಬ್ಯಾಂಕ್‌ ಜನರಲ್ ಮೇನೇಜರ್‌ ಅನಿಲ್ಕುಮಾರ್‌.ಎ ಬಿಡುಗಡೆಗೊಳಿಸಿದರು.

ಕನ್ನಡದೋಜ ದಿ| ಪೆರಡಾಲ ಕೃಷ್ಣಯ್ಯ ಅವರ ಭಾವಚಿತ್ರವನ್ನು ಬದಿಯಡ್ಕ ಪಂಚಾಯತು ಅಧ್ಯಕ್ಷ‌ ಕೆ,ಎನ್‌.ಕೃಷ್ಣ ಭಟ್, ದಿ| ಈಶ್ವರ ಭಟ್ ಖಂಡಿಗೆ ಅವರ ಭಾವಚಿತ್ರವನ್ನು ವಿ.ಶ್ರೀಕೃಷ್ಣ ಭಟ್, ದಿ| ಮಹಾಲಿಂಗ ಭಟ್ ಅವರ ಭಾವಚಿತ್ರವನ್ನು ಪಡಿಯಡ್ಪು ಶಂಕರ ಭಟ್, ದಿ| ಖಂಡಿಗೆ ನಾರಾಯಣ ಭಟ್ ಕೇರ ಅವರ ಭಾವಚಿತ್ರವನ್ನು ಐತ್ತಪ್ಪ ಶೆಟ್ಟಿ ಕಡಾರು, ದಿ| ಶ್ಯಾಮ ಭಟ್ ಖಂಡಿಗೆ ಭಾವಚಿತ್ರವನ್ನು ಬ್ಯಾಂಕಿನ ಮಾಜಿ ಅಧ್ಯಕ್ಷ ಕೋರಿಕ್ಕಾರು ವಿಷ್ಣು ಭಟ್, ದಿ| ಖಂಡಿಗೆ ಕೃಷ್ಣ ಭಟ್ ಕೇರ ಅವರ ಭಾವಚಿತ್ರವನ್ನು ಶ್ರೀಧರ ಪೈ ಬಳ್ಳಂಬೆಟ್ಟು ಅನಾವರಣಗೊಳಿಸಿದರು.

ಕಾಸರಗೋಡು ಬ್ಲೋಕ್‌ ಪಂಚಾಯತು ಸದಸ್ಯ ಅವಿನಾಶ್‌ ವಿ ರೈ, ಬದಿಯಡ್ಕ ಬ್ಯಾಂಕಿನ ನಿರ್ದೇಶಕಿ ಹಾಗೂ ಗ್ರಾಮ ಪಂಚಾಯತ್‌ ಸದಸ್ಯೆ ಪ್ರೇಮಾ ಕುಮಾರಿ ಶುಭಾಶಂಸನೆಗೈದರು. ಬ್ಯಾಂಕಿನ ಕಾರ್ಯದರ್ಶಿ ಅಜಿತಕುಮಾರಿ ವರದಿ ಮಂಡಿಸಿದರು.

ಸ್ವರ್ಣಲತಾ ಮತ್ತು ಬಳಗ ಪ್ರಾರ್ಥನೆ ಗೀತೆ ಹಾಡಿದರು. ಉಪಾಧ್ಯಕ್ಷ ದಿನೇಶ ಪ್ರಭು ಕರಿಂಬಿಲ ಸ್ವಾಗತಿಸಿ ಬ್ಯಾಂಕ್‌ ನಿರ್ದೇಶಕ ರಾಮಪ್ಪ ಮಂಜೇಶ್ವರ ಧನ್ಯವಾದ ಸಮರ್ಪಿಸಿದರು. ಶತಮನೋತ್ಸವ ಸಂದರ್ಭದಲ್ಲಿ ಹೊರತರಲಾದ ಸ್ಮರಣ ಸಂಚಿಕೆ ಶತ ಸಹಕಾರ ಪಥವನ್ನು ಕೆ.ಎನ್‌.ಕೃಷ್ಣ ಭಟ್ ಬಿಡುಗಡೆಗೊಳಿಸಿದರು.

ಶಾಲಾ ಪರಿಸರವನ್ನು ವರ್ಣ ರಂಜಿತವಾಗಿ ಅಲಂಕರಿಸಲಾಗಿತ್ತು.

ಟಾಪ್ ನ್ಯೂಸ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?

1-wqeqewqe

BJP vs Congress ; ಧಾರವಾಡದಲ್ಲಿ ಯಾರೇ ಗೆದ್ದರೂ ದಾಖಲೆ!

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

Sunidhi Chauhan: ಹಾಡುತ್ತಿರುವಾಗಲೇ ಖ್ಯಾತ ಗಾಯಕಿ ಮೇಲೆ ಬಾಟಲಿ ಎಸೆದ ಅಭಿಮಾನಿ

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Choosing the Best Gambling Enterprise Online Payment Method

Best Online Slots For Best Casino Game

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.