ಕುಸಿಯುವ ಹಂತದಲ್ಲಿ ಕುಕ್ಕುಜೆ-ಅಳಂಬ ಸಂಪರ್ಕ ಸೇತುವೆ


Team Udayavani, Jun 3, 2019, 6:00 AM IST

z-13

ಅಪಾಯದಂಚಿನಲ್ಲಿರುವ ಕುಕ್ಕುಜೆ-ಅಳಂಬ ಸಂಪರ್ಕ ಸೇತುವೆ.

ಬೆಳ್ತಂಗಡಿ: ನಾರಾವಿ ಗ್ರಾ.ಪಂ. ವ್ಯಾಪ್ತಿಯ ಕುತ್ಲೂರು ಸಮೀಪದ ಅಳಂಬ ಸಂಪರ್ಕಿಸುವ ಕುಕ್ಕುಜೆ ಸೇತುವೆ ತೀರ ಹದೆಗಟ್ಟಿದ್ದು, ಮಳೆಗಾಲದಲ್ಲಿ ಕುಸಿಯುವ ಹಂತದಲ್ಲಿದೆ. ಸೇತುವೆ ಪಿಲ್ಲರ್‌ನ ತಳಭಾಗದ ಕಾಂಕ್ರೀಟ್‌ ಸಂಪೂರ್ಣ ಎದ್ದು ಹೋಗಿ ಕಬ್ಬಿಣದ ಸರಳುಗಳು ಹೊರಬಂದಿವೆ. ಕಳೆದ ಬಾರಿಯಂತೆ ಈ ಬಾರಿ ಅತೀವ ಮಳೆ ಸುರಿದರೆ ನೀರಿನ ರಭಸಕ್ಕೆ ಸೇತುವೆ ಕುಸಿದು ಎರಡು ಬದಿ ಸಂಪರ್ಕವೇ ಕಡಿಯುವ ಭೀತಿಯಲ್ಲಿ ಸ್ಥಳೀಯರಿದ್ದಾರೆ.

ಈ ಕುರಿತು ಗ್ರಾಮಸ್ಥರು ಹಲವು ಬಾರಿ ಶಾಸಕರಿಗೆ ಹಾಗು ಸ್ಥಳೀಯಾಡಳಿತಕ್ಕೆ ಮನವಿ ಸಲ್ಲಿದರೂ ಗಂಭೀರವಾಗಿ ಪರಿಗಣಿಸಿದಂತಿಲ್ಲ. ಕಳೆದ ಬಾರಿ ಪಂಚಾಯತ್‌ರಾಜ್‌ ಎಂಜಿನಿಯರಿಂಗ್‌ ವಿಭಾಗದ ಅಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದ ಹೊರತಾಗಿ ಯಾವುದೇ ಕ್ರಮ ಕೈಗೊಂಡಿಲ್ಲ. ಈಗಾಗಲೇ ಮಳೆ ಆರಂಭವಾಗುವ ಹಂತದಲ್ಲಿದ್ದು, ಕಾಮಗಾರಿ ಆರಂಭಿಸಿದರೂ ಕಾಂಕ್ರೀಟ್‌ ಕಿತ್ತು ಹೋಗುವ ಸಾಧ್ಯತೆ ಇದೆ.

30 ವರ್ಷಕ್ಕೇ ದುಃಸ್ಥಿತಿ
ಗಂಗಾಧರ ಗೌಡರ ಅವಧಿಯಲ್ಲಿ ಕುಕ್ಕುಜೆ ಯಿಂದ ಅಳಂಬಕ್ಕೆ ಸುಮಾರು 15 ಮೀಟರ್‌ ಉದ್ದದ ಸಂಪರ್ಕ ಸೇತುವೆ ನಿರ್ಮಿಸಲಾಗಿತ್ತು. ಸೇತುವೆಗಳಿಗೆ ಕನಿಷ್ಠ 70ರಿಂದ 80 ವರ್ಷ ಬಾಳಿಕೆ ಇದ್ದು, ಈ ಸೇತುವೆ 30 ವರ್ಷಕ್ಕೇ ಶಿಥಿಲಾವಸ್ಥೆ ತಲುಪಿದೆ. ಇದು ಕಳಪೆ ಕಾಮಗಾರಿಗೆ ನಿದರ್ಶನ.

ಘನವಾಹನ ಸಂಚಾರ ನಿಷೇಧ
ಈಗಾಗಲೇ ಶಾಲಾ – ಕಾಲೇಜು ಆರಂಭವಾಗಿದ್ದು, ಮಕ್ಕಳು ಆತಂಕದಲ್ಲಿ ಸಂಚರಿಸುವಂತಾಗಿದೆ. ಸೇತುವೆ ಕುಸಿದು ಬಿದ್ದಲ್ಲಿ ಸುಮಾರು 300 ಮನೆಗೆ ಸಂಪರ್ಕ ಕಡಿದಾಗಲಿದೆ. ಪಂಚಾಯತ್‌ರಾಜ್‌ ಕಿರಿಯ ಎಂಜಿನಿಯರ್‌ ವಿಭಾಗದ ಅಧಿಕಾರಿಗಳು ಘನವಾಹನ ಓಡಾಟ ನಡೆಸದಂತೆ ಸೂಚಿಸಿದ್ದಾರೆ. ಇದರಿಂದ ಕೃಷಿಗೆ ಅಗತ್ಯ ವಸ್ತು ಸಾಗಿಸಲು ತೊಡಕಾಗಲಿದೆ.

ತಡವಾಗಿ ಮಾಹಿತಿ
ಸ್ಥಳೀಯರು ತಡವಾಗಿ ಮಾಹಿತಿ ನೀಡಿದ್ದಾರೆ. ಮಳೆಗಾಲ ಸಮೀಪಿಸಿರುವುದರಿಂದ ದುರಸ್ತಿ ಕಷ್ಟಸಾಧ್ಯ. ದುರಸ್ತಿಗೆ ಕನಿಷ್ಠ 25 ದಿನಗಳು ಬೇಕು. ಮುಂದಿನ ವರ್ಷ ಮಳೆಹಾನಿ ಅನುದಾನದಲ್ಲಿ 3 ಲಕ್ಷ ರೂ. ಮೀಸಲಿರಿಸಿ ಕಾಂಕ್ರೀಟ್‌ ಅಳವಡಿಸಿ ದುರಸ್ತಿಪಡಿಸಲಾಗುವುದು ಎಂದು ಪಂಚಾಯತ್‌ರಾಜ್‌ ವಿಭಾಗ‌ದ ಕಿರಿಯ ಎಂಜಿನಿಯರ್‌ ತಮ್ಮಣ್ಣ ಗೌಡ ಪಾಟೀಲ್‌ತಿಳಿಸಿದ್ದಾರೆ.

ಗ್ರಾ.ಪಂ. ಸಭೆಯಲ್ಲಿ ಚರ್ಚೆ
ತುರ್ತು ಕ್ರಮ ಕೈಗೊಳ್ಳುವ ಕುರಿತಾಗಿ ಕಳೆದ ವಾರ ಗ್ರಾ.ಪಂ. ಸಾಮಾನ್ಯ ಸಭೆಯಲ್ಲಿ ಚರ್ಚೆ ನಡೆದು ಸ್ಥಳೀಯರ ಮುಖೇನ ಶಾಸಕರಿಗೆ ಮನವಿ ಮಾಡಲಾಗಿದೆ. ಶಾಸಕರು ಪ್ಲಾ éನಿಂಗ್‌ ಸಿದ್ಧಪಡಿಸುವಂತೆ ಸೂಚಿಸಿದ್ದು, ಆದರೆ ಅಧಿಕಾರಿಗಳು ಈ ಕುರಿತು ನಿರ್ಲಕ್ಷ್ಯ ತೊರಿದ್ದಾರೆ. ಮಳೆಗಾಲಕ್ಕೂ ಮುನ್ನ ತಾತ್ಕಾಲಿಕ ದುರಸ್ತಿ ಅನಿವಾರ್ಯವಾಗಿದೆ.

ಹೊಸ ಸೇತುವೆಗೆ ಪ್ರಸ್ತಾವ
ಈಗಾಗಲೇ ಗ್ರಾ.ಪಂ.ನಿಂದ ಹೊಸ ಸೇತುವೆ ನಿರ್ಮಿಸುವಂತೆ ಶಾಸಕರಿಗೆ ಮನವಿ ಸಲ್ಲಿಸಲಾಗಿದೆ. ಈಗಿರುವ ಸೇತುವೆ ದುರಸ್ತಿಗೊಳಿಸದರೂ ಮುಂದಿನ ಮಳೆಗಾಲಕ್ಕೆ ಅದೇ ಪರಿಸ್ಥಿತಿ ನಿರ್ಮಾಣವಾಗುವುದರಿಂದ ಹೊಸ ಸೇತುವೆ ನಿರ್ಮಿಸುವ ಪ್ರಸ್ತಾವನೆಯ ಕೂಗು ಕೇಳಿಬಂದಿದೆ.

 ಅನುದಾನ ಬಳಸಲಿ
ಮಳೆಗಾಲದಲ್ಲಿ ಸೇತುವೆ ಕುಸಿದು ಬಿದ್ದು ಜೀವಹಾನಿ ಸಂಭವಿಸಿದಲ್ಲಿ ಯಾರು ಹೊಣೆ ಎಂಬಂತಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಎರಡು ವಾರಗಳಾದರೂ ಕ್ರಮ ಕೈಗೊಂಡಿಲ್ಲ. ಶಾಸಕರ ಅನುದಾನದಿಂದ ದುರಸ್ತಿ ಕೈಗೊಂಡಲ್ಲಿ ತಕ್ಕಮಟ್ಟಿನ ಸಮಸ್ಯೆ ನಿವಾರಣೆಯಾಗಲಿದೆ.
– ರವೀಂದ್ರ ಪೂಜಾರಿ, ಅಧ್ಯಕ್ಷರು, ನಾರಾವಿ ಗ್ರಾ.ಪಂ.

 ಸ್ಥಳಕ್ಕೆ ಭೇಟಿ
ಸೇತುವೆ ದುಃಸ್ಥಿತಿ ಕುರಿತು ಈಗಾಗಲೇ ಮಾಹಿತಿ ಬಂದಿದೆ. ಅಧಿಕಾರಿಗಳು ಸ್ಥಳ ಪರಿಶೀಲಿದ್ದಾರೆ. ಇನ್ನೆರಡು ದಿನಗಳಲ್ಲಿ ಖುದ್ದು ಭೇಟಿ ನೀಡಲಾಗುವುದು.
– ಚೆನ್ನಪ್ಪ ಮೊಲಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್‌, ಪಂಚಾಯತ್‌ರಾಜ್‌ ವಿಭಾಗ

-  ಚೈತ್ರೇಶ್‌ ಇಳಂತಿಲ

ಟಾಪ್ ನ್ಯೂಸ್

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

16

Goldy Brar: ಸಿಧು ಮೂಸೆವಾಲಾ ಹತ್ಯೆಯ ಮಾಸ್ಟರ್‌ ಮೈಂಡ್; ಗೋಲ್ಡಿ ಬ್ರಾರ್‌ ಶೂಟೌಟ್ – ವರದಿ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ಲವೇ…? ಸಂಸದನ ವಿವಾದಾತ್ಮಕ ಹೇಳಿಕೆ

Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

Pushpa 2 First single: ʼಪುಷ್ಪ ಪುಷ್ಪʼ ಎನ್ನುತ್ತಾ ಹಾಡಿನಲ್ಲಿ ಮಿಂಚಿದ ಅಲ್ಲು ಅರ್ಜುನ್

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

BJP-JDS ಒಟ್ಟಾಗಿ ಹೋಗುವುದರಲ್ಲಿ ಎರಡು ಮಾತಿಲ್ಲ… : ಬಿಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.