ಎಂಡೋಸಲ್ಫಾನ್‌ ಪೀಡಿತ ಮಕ್ಕಳಿಗೆ ಸಿಗದ ಗೃಹಾಧಾರಿತ ಶಿಕ್ಷಣ


Team Udayavani, Jun 3, 2019, 3:08 AM IST

endosal

ಬೆಂಗಳೂರು: 2009ರ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆ ಪ್ರಕಾರ ದೈಹಿಕ ಹಾಗೂ ಮಾನಸಿಕ ನ್ಯೂನತೆಯುಳ್ಳ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ಗೃಹಾಧಾರಿತ ಶಿಕ್ಷಣ ನೀಡಬೇಕಿದೆ. ಆದರೆ, ರಾಜ್ಯದ ಎಂಡೋಸಲ್ಫಾನ್‌ ಪೀಡಿತ ಜಿಲ್ಲೆಗಳಲ್ಲಿ ಈವರೆಗೂ ಈ ಮಾದರಿ ಶಿಕ್ಷಣ ಸಮರ್ಪಕವಾಗಿ ಜಾರಿಯಾಗಿಲ್ಲ ಎಂಬ ಅಂಶ ಬೆಳಕಿಗೆ ಬಂದಿದೆ.

ತಮ್ಮದಲ್ಲದ ತಪ್ಪಿನಿಂದ ದೈಹಿಕವಾಗಿ ನ್ಯೂನತೆಗೊಳಗಾಗಿರುವ 10,000ಕ್ಕೂ ಹೆಚ್ಚು ಎಂಡೋಸಲ್ಫಾನ್‌ ಪೀಡಿತರು ರಾಜ್ಯದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಜಿಲ್ಲೆಗಳಲ್ಲಿದ್ದು ಆ ಪೈಕಿ ಶೇ.30ರಷ್ಟು ಮಕ್ಕಳಿದ್ದಾರೆ. ಈ ಮಕ್ಕಳು ಸಾಮಾಜಿಕ ಹಾಗೂ ಆರ್ಥಿಕ ಅಂಶಗಳಿಂದ ಮಾತ್ರವಲ್ಲದೇ ಶೈಕ್ಷಣಿಕ ಅಂಶಗಳಿಂದಲೂ ಸಾಕಷ್ಟು ವಂಚಿತರಾಗುತ್ತಿದ್ದು, ಅವರನ್ನು ಮುಖ್ಯವಾಹಿನಿಗೆ ತರುವಲ್ಲಿ ಸರ್ಕಾರ ಹಿಂದುಳಿಯುತ್ತಿದೆ ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಆಯುಕ್ತಾಲಯದ ಅಧ್ಯಯನದಿಂದ ಪತ್ತೆಯಾಗಿದೆ.

ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಧಿನಿಯಮ-2016ರ ಪ್ರಕಾರ ಎಂಡೊಸಲ್ಫಾನ್‌ ಅಂಗವಿಕಲರ ಪುನರ್ವಸತಿ, ಸರ್ಕಾರದ ಜವಾಬ್ದಾರಿಯಾಗಿದೆ. ಈ ಕುರಿತು ರಾಜ್ಯದ ಎಂಡೋಸಲ್ಫಾನ್‌ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿರುವ ಅಂಗವಿಕಲರ ಅಧಿನಿಯಮ ಆಯುಕ್ತಾಲಯದ ಅಧಿಕಾರಿಗಳ ತಂಡವು ಅಲ್ಲಿನ ಸ್ಥಿತಿಗತಿಗಳ ಅಧ್ಯಯನ ನಡೆಸಿದೆ.

ಮುಖ್ಯವಾಗಿ ಎಂಡೋಸಲ್ಫಾನ್‌ ಪೀಡಿತ ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಗೃಹಾಧಾರಿತ ಶಿಕ್ಷಣ (ಮನೆಯಲ್ಲಿಯೇ ಕೌಶಲ್ಯಾಧಾರಿತ ಶಿಕ್ಷಣ) ಸಿಗುತ್ತಿಲ್ಲ. ಈ ಕುರಿತು ಸಂತ್ರಸ್ತ ಪ್ರದೇಶಗಳಿಗೆ ಇಲಾಖೆಯ ಯಾವೊಬ್ಬ ಅಧಿಕಾರಿಗಳೂ ಭೇಟಿ ನೀಡಿಲ್ಲ ಎಂಬುದನ್ನು ವರದಿಯಲ್ಲಿ ಸ್ಪಷ್ಟಪಡಿಸಿದ್ದಾರೆ. ಸದ್ಯ ಕೆಲ ಪುನರ್ವಸತಿ ಕೇಂದ್ರಗಳಲ್ಲಿ ಮಕ್ಕಳಿಗೆ ಶಿಕ್ಷಣ ನೀಡುತ್ತಿದ್ದು, ಇಲ್ಲಿಯೂ ಸೂಕ್ತ ಸಲಕರಣೆ, ಪರಿಣತ ಸಿಬ್ಬಂದಿ ಇಲ್ಲದಿರುವುದು ಕಂಡು ಬಂದಿದೆ.

ಗೃಹಾಧಾರಿತ ಶಿಕ್ಷಣದಲ್ಲಿ ವಿಶೇಷ ತರಬೇತಿ ಪಡೆದ ಶಿಕ್ಷಕರು ಅಂಗವೈಕಲ್ಯಕ್ಕೆ ಒಳಗಾದ ಮಗುವಿನ ಮನೆಗೆ ತೆರಳಿ ಕೌಶಲ್ಯಾಧಾರಿತ ಶಿಕ್ಷಣ ನೀಡಬೇಕು. ಜತೆಗೆ, ಅವರ ಪೋಷಕರನ್ನು ಸಂಪನ್ಮೂಲ ಕೇಂದ್ರಗಳಿಗೆ ಕರೆ ತಂದು ಭರವಸೆ ತುಂಬಬೇಕು. ಮಕ್ಕಳನ್ನು ನಿಭಾಯಿಸುವ, ಆರೈಕೆ ಮಾಡುವ ಕುರಿತು ಶಿಕ್ಷಣ ನೀಡಬೇಕು.

ಇನ್ನು ಗೃಹಾಧಾರಿತ ಶಿಕ್ಷಣಕ್ಕೊಳಪಡುವ ಮಕ್ಕಳು ಹಾಗೂ ಪೋಷಕರಿಗೆ ವಾರಕ್ಕೆ ಎರಡು ದಿನ ಸಂಪನ್ಮೂಲ ಕೇಂದ್ರಗಳಿಗೆ ಫಿಜಿಯೋ ಥೆರಪಿಗೆ ತೆರಳಲು ಸಾರಿಗೆ ವ್ಯವಸ್ಥೆ ಅಥವಾ ವೆಚ್ಚ ನೀಡಬೇಕು. ಆದರೆ, ಈ ಕಾರ್ಯಕ್ರಮ ಸೂಕ್ತವಾಗಿ ಜಾರಿಯಾಗದೇ ಶೇ.70ರಷ್ಟು ಎಂಡೋಸಲ್ಫಾನ್‌ ಪೀಡಿತ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಆಯುಕ್ತಾಲಯದ ಅಧಿಕಾರಿಗಳು ತಿಳಿಸುತ್ತಾರೆ.

ಆರೋಗ್ಯ ಇಲಾಖೆ ವೈಫ‌ಲ್ಯ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೂಡಾ ಎಂಡೋಸಲ್ಫಾನ್‌ ಸಂತ್ರಸ್ತರ ಪುನ:ಶ್ಚೇತನನಕ್ಕೆ ಹಿಂದೇಟು ಹಾಕುತ್ತಿದ್ದು, ಥೆರಿಪಿಸ್ಟ್‌ಗಳ ಸೇವೆ, ಸೂಕ್ತ ಸಲಕರಣೆ ಒದಗಿಸಿಲ್ಲ. ಅಲ್ಲದೇ ಸಂತ್ರಸ್ತರ ಸೇವೆಯಲ್ಲಿ ನಿರತವಾಗಿರುವ ಸ್ಥಳೀಯ ಸೇವಾ ಟ್ರಸ್ಟ್‌ಗಳಿಗೂ ಅಗತ್ಯ ಮಾರ್ಗದರ್ಶನ ನೀಡುತ್ತಿಲ್ಲ. ಕೇವಲ ಸಂತ್ರಸ್ತರ ಪರಿಹಾರಧನ ವಿತರಣೆಗೆ ಇಲಾಖೆ ಸೀಮಿತವಾಗಿದೆ ಎಂದು ಆಯುಕ್ತಾಲಯದ ಪರಿಶೀಲನೆಯಿಂದ ತಿಳಿದು ಬಂದಿದೆ.

ಪುನರ್ವಸತಿ ಕೇಂದ್ರಗಳ ಉನ್ನತೀಕರಣ ಅಗತ್ಯ: ಸದ್ಯ ಎಂಡೋಸಲ್ಫಾನ್‌ ಪೀಡಿತ ಜಿಲ್ಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪುನರ್ವಸತಿ ಕೇಂದ್ರಗಳಿಗೆ ಫಿಜಿಯೋ ಥೆರಪಿಸ್ಟ್‌, ಥೆರಪಿಗೆ ಅಗತ್ಯ ಸಲಕರಣೆ, ಪರಿಣಿತ/ಅನುಭವಿ ಮಾರ್ಗದರ್ಶಕರು, ತಜ್ಞರ ಅಗತ್ಯವಿದೆ. ಅಲ್ಲದೇ ಕೇಂದ್ರಗಳಲ್ಲಿ ಪೋಷಕರು ಹಾಗೂ ಮಕ್ಕಳು ತೆರಳಲು ಸಾರಿಗೆ ಸೌಲಭ್ಯ, ಕೇಂದ್ರದಲ್ಲಿ ಸಮನ್ವಯ ಶಿಕ್ಷಣ ವ್ಯವಸ್ಥೆ ಕಲ್ಪಿಸಿದರೆ ಸಂತ್ರಸ್ತ ಮಕ್ಕಳು ಕೂಡಾ ಇತರ ಮಕ್ಕಳಂತೆ ಅಭಿವೃದ್ಧಿ ಹೊಂದಿ ಮುಖ್ಯವಾಹಿನಿಗೆ ಬರುತ್ತಾರೆ ಎಂಬುದು ಅಂಗವಿಕಲರ ಅಧಿನಿಯಮ ಆಯುಕ್ತಾಲಯ ಅಧಿಕಾರಿಗಳ ಅಭಿಪ್ರಾಯ.

ಅಂಗವಿಕಲರ ಅಧಿನಿಯಮ ಆಯುಕ್ತಾಲದ ಅಧಿಕಾರಿಗಳ ಪ್ರಮುಖ ಮಾರ್ಗಸೂಚಿ/ಶಿಫಾರಸ್ಸುಗಳು
* ಎಂಡೋಸಲ್ಫಾನ್‌ ಪ್ರದೇಶಗಳ ಮನೆ, ಮನೆ ಗಣತಿ, ಸಂತ್ರಸ್ತರ ಪಟ್ಟಿ ತಯಾರಿ.
* ಸಂತ್ರಸ್ತರ ಮನೆಗಳನ್ನು ಅಂಗವಿಕಲಸ್ನೇಹಿಗೊಳಿಸಿ ಸ್ವಾವಲಂಬನೆ ಕಲ್ಪಿಸುವುದು.
* ಗೃಹಾಧಾರಿತ ಶಿಕ್ಷಣದ ಜತೆಗೆ ಸಂಪನ್ಮೂಲ ಕೇಂದ್ರಗಳಿಗೆ ತೆರಳುವ ಸಂತ್ರಸ್ತರು ಹಾಗೂ ಕುಟುಂಬಕ್ಕೆ ಸಾರಿಗೆ ಸೌಲಭ್ಯ.
* ಪರಿಶೀಲನೆ ಹಾಗೂ ಮಾಸಿಕ ಸಭೆ ಮೂಲಕ ಸರ್ಕಾರದ ಕಾರ್ಯಕ್ರಮವನ್ನು ಸಂತ್ರಸ್ತರ ಕುಟುಂಬಕ್ಕೆ ತಿಳಿಸುವುದು.

ಎಂಡೋಸಲ್ಫಾನ್‌ನಿಂದ ಅಂಗವೈಕಲ್ಯಕ್ಕೆ ತುತ್ತಾದವರಿಗೆ ಸೂಕ್ತ ಸೌಲಭ್ಯವಿಲ್ಲ ಎಂಬ ಕುರಿತು ಸಾಕಷ್ಟು ದೂರುಗಳು ಆಯುಕ್ತಾಲಯಕ್ಕೆ ಬರುತ್ತಿದ್ದವು. ಖುದ್ದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗಿದೆ. ಸಂತ್ರಸ್ತರನ್ನು ಮುಖ್ಯವಾಹಿನಿಗೆ ತರಲು ವಿವಿಧ ಇಲಾಖೆಗಳು ಸೂಕ್ತ ಪುನಶ್ಚೇತನ ಕಾರ್ಯಕ್ರಮಗಳನ್ನು ಕೈಗೊಳ್ಳದಿರುವುದು ತಿಳಿದು ಬಂದಿದ್ದು, ಸರ್ಕಾರಕ್ಕೆ ಅಗತ್ಯ ಮಾರ್ಗಸೂಚಿಯನ್ನು ನೀಡಲಾಗಿದೆ.
-ವಿ.ಎಸ್‌.ಬಸವರಾಜು ಆಯುಕ್ತರು, ಅಂಗವಿಕಲ ವ್ಯಕ್ತಿಗಳ ಅಧಿನಿಯಮ ಆಯುಕ್ತಾಲಯ.

* ಜಯಪ್ರಕಾಶ್‌ ಬಿರಾದಾರ್‌

ಟಾಪ್ ನ್ಯೂಸ್

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.