ಬಸ್‌ ಪಾಸ್‌ ದರ ಏರಿಕೆಗೆ ಸರ್ಕಾರಕ್ಕೆ ಪ್ರಸ್ತಾವನೆ


Team Udayavani, Jun 3, 2019, 3:09 AM IST

bus

ಬೆಂಗಳೂರು: ಬಸ್‌ ಪ್ರಯಾಣ ದರ ಏರಿಕೆಗೆ ಇದುವರೆಗೆ ಮುಹೂರ್ತ ಕೂಡಿಬಾರದ ಹಿನ್ನೆಲೆಯಲ್ಲಿ ಕೊನೆಪಕ್ಷ ವಿದ್ಯಾರ್ಥಿಗಳ ಬಸ್‌ ಪಾಸ್‌ ದರವನ್ನಾದರೂ ಹೆಚ್ಚಳ ಮಾಡುವಂತೆ ದುಂಬಾಲು ಬಿದ್ದಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ), ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ.

ಪ್ರತಿ ವಿದ್ಯಾರ್ಥಿ ರಿಯಾಯ್ತಿ ಪಾಸಿನ ದರವನ್ನು ನೂರು ರೂಪಾಯಿ ಹೆಚ್ಚಳಕ್ಕೆ ಅನುಮತಿ ನೀಡುವಂತೆ ನಿಗಮವು ಪ್ರಸ್ತಾವನೆ ಸಲ್ಲಿಸಿದ್ದು, “ಸೇವಾ ಶುಲ್ಕ’ದ ರೂಪದಲ್ಲಿ ಈ ದರವನ್ನು ವಸೂಲಿ ಮಾಡಲು ಉದ್ದೇಶಿಸಿದೆ. ಸಾಧ್ಯವಾದರೆ ಪ್ರಸಕ್ತ ಶೈಕ್ಷಣಿಕ ಸಾಲಿನಿಂದಲೇ ಈ ಪರಿಷ್ಕೃತ ದರ ಜಾರಿಗೊಳಿಸಲು ಚಿಂತನೆ ನಡೆಸಿದೆ. ಹಾಗೊಂದು ವೇಳೆ ಸರ್ಕಾರ ಅನುಮತಿ ನೀಡಿದರೆ, ವಿದ್ಯಾರ್ಥಿಗಳಿಗೆ ದರ ಏರಿಕೆ ಬರೆ ನಿಶ್ಚಿತ.

ಹೆಚ್ಚಳಕ್ಕೆ ಸಕಾಲ?: ಉಪ ಚುನಾವಣೆಗಳು, ಸ್ಥಳೀಯ ಸಂಸ್ಥೆ ಚುನಾವಣೆ, ಲೋಕಸಭಾ ಚುನಾವಣೆಗಳು ಮುಗಿದಿವೆ. ಏರಿಕೆ ನಿರ್ಧಾರದಿಂದ ಸರ್ಕಾರದ ಮೇಲೆ ಯಾವುದೇ ಪರಿಣಾಮ ಬೀರದು. ಅಷ್ಟಕ್ಕೂ ನೀರಿನ ಶುಲ್ಕ, ವಿದ್ಯುತ್‌ ಶುಲ್ಕ ಪರಿಷ್ಕರಣೆ ಆಗುತ್ತಿವೆ. ಈ ಎಲ್ಲ ಹಿನ್ನೆಲೆಯಲ್ಲಿ ಇದು ಸಕಾಲ ಎಂಬುದು ನಿಗಮದ ಅಧಿಕಾರಿಗಳ ಲೆಕ್ಕಾಚಾರ. ಪ್ರಸ್ತಾವನೆ ಈಗಾಗಲೇ ನಿಗಮದ ಆಡಳಿತ ಮಂಡಳಿ ಸಭೆಯಲ್ಲಿ ಮಂಡನೆ ಆಗಿದ್ದು, ಸರ್ಕಾರಕ್ಕೂ ಕಳುಹಿಸಲಾಗಿದೆ ಎಂದು ಮೂಲಗಳು “ಉದಯವಾಣಿ’ಗೆ ತಿಳಿಸಿವೆ.

ಆದರೆ, ದಿಢೀರ್‌ ನಿರ್ಧಾರ ತೆಗೆದುಕೊಂಡಲ್ಲಿ ವಿದ್ಯಾರ್ಥಿ ವಲಯದಿಂದ ತೀವ್ರ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ಕಳೆದ ಏಳೆಂಟು ವರ್ಷಗಳಿಂದ ವಿದ್ಯಾರ್ಥಿ ರಿಯಾಯ್ತಿ ಬಸ್‌ ಪಾಸಿನ ದರ ಹೆಚ್ಚಿಸಿಲ್ಲ. ಇತ್ತ ಪ್ರಯಾಣ ದರ ಏರಿಕೆ ಪ್ರಸ್ತಾವನೆಯೂ ನನೆಗುದಿಗೆ ಬಿದ್ದಿದೆ. ಈ ಮಧ್ಯೆ ನಿಗಮವು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ. ಹೀಗಿರುವಾಗ, ಪಾಸಿನ ದರ ಪರಿಷ್ಕರಣೆಗೆ ಅನುಮತಿ ನೀಡಿದಲ್ಲಿ ಕೊಂಚ ಆರ್ಥಿಕ ಚೇತರಿಕೆಗೆ ಅನುಕೂಲ ಆಗುತ್ತದೆ ಎಂದು ನಿಗಮ ಸಮಜಾಯಿಷಿ ನೀಡಿದೆ. ಈ ಪರಿಷ್ಕರಣೆಯಿಂದ ನಿಗಮವು ವಾರ್ಷಿಕ ಸುಮಾರು 15ರಿಂದ 20 ಕೋಟಿ ರೂ. ಹೆಚ್ಚುವರಿ ಆದಾಯ ನಿರೀಕ್ಷಿಸಿದೆ.

ಕೆಎಸ್‌ಆರ್‌ಟಿಸಿ ವ್ಯಾಪ್ತಿಯಲ್ಲಿ ಪ್ರತಿ ವರ್ಷ 6.25 ಲಕ್ಷ ವಿದ್ಯಾರ್ಥಿಗಳು ರಿಯಾಯ್ತಿ ಬಸ್‌ ಪಾಸುಗಳನ್ನು ಹೊಂದುತ್ತಾರೆ. ಪಾಸಿನ ದರ ಹತ್ತು ತಿಂಗಳಿಗೆ ಪ್ರಸ್ತುತ ಕನಿಷ್ಠ 600ರಿಂದ ಗರಿಷ್ಠ 1,400 ರೂ. ಇದಲ್ಲದೆ, 100 ರೂ. ಸೇವಾ ಶುಲ್ಕ ಹಾಗೂ ತಿಂಗಳಿಗೆ ಅಪಘಾತ ಪರಿಹಾರ ನಿಧಿಗೆ 5 ರೂ. ಪಡೆಯಲಾಗುತ್ತಿದೆ. ಇದರಿಂದ ಒಟ್ಟಾರೆ 35-40 ಕೋಟಿ ರೂ. ಬರುತ್ತಿದೆ. ಆದರೆ, ವಾಸ್ತವವಾಗಿ ವೆಚ್ಚ ಆಗುತ್ತಿರುವುದು 650 ಕೋಟಿ ರೂ. ಸರ್ಕಾರದಿಂದ 300 ಕೋಟಿ ರೂ. ಬರುತ್ತದೆ. ಬಹುತೇಕ ಉಳಿದ ಹಣವನ್ನು ನಿಗಮವೇ ಭರಿಸಬೇಕಾಗಿದೆ. ಆದ್ದರಿಂದ ಹೆಚ್ಚಳ ಅಗತ್ಯವಾಗಿದೆ ಎಂದು ನಿಗಮ ಸಮರ್ಥನೆ ನೀಡಿದೆ.

ಲೆಕ್ಕಾಚಾರ ಹೀಗೆ: ರಿಯಾಯ್ತಿ ಪಾಸಿನಲ್ಲಿ ಪ್ರತಿ ವಿದ್ಯಾರ್ಥಿಗೆ 60 ಕಿ.ಮೀ.ವರೆಗೂ ಪ್ರಯಾಣಿಸಲು ಅವಕಾಶ ಇರುತ್ತದೆ. ಸರಾಸರಿ 40ಕಿ.ಮೀ. ಹಿಡಿದರೂ ಹೋಗಿ-ಬರುವುದು ಸೇರಿಸಿ 80 ಕಿ.ಮೀ. ಆಗುತ್ತದೆ. ಒಬ್ಬ ವಿದ್ಯಾರ್ಥಿ ತಿಂಗಳಲ್ಲಿ 25 ದಿನ ಸಂಚಾರ ಮಾಡುತ್ತಾನೆ. ಅಂದರೆ ಎರಡು ಸಾವಿರ ರೂ. ಆಗುತ್ತದೆ. ಹತ್ತು ತಿಂಗಳಿಗೆ 20 ಸಾವಿರ ರೂ. ಆಗುತ್ತದೆ. ರಿಯಾಯ್ತಿ ಪಾಸಿನ ಲೆಕ್ಕಾಚಾರದ ಪ್ರಕಾರ ಪಾಸಿಗೆ ತಗಲುವ ವೆಚ್ಚದಲ್ಲಿ ಶೇ.50ರಷ್ಟು ಮೊತ್ತವನ್ನು ಸರ್ಕಾರ ಭರಿಸಬೇಕು.

ಉಳಿದದ್ದನ್ನು ನಿಗಮ ಮತ್ತು ವಿದ್ಯಾರ್ಥಿಗಳು ತಲಾ ಶೇ.25ರಷ್ಟನ್ನು ಭರಿಸಬೇಕು. ಆದರೆ, 20 ಸಾವಿರ ರೂ. ವೆಚ್ಚದಲ್ಲಿ ಶೇ.25ರಷ್ಟು ಅಂದರೆ 5 ಸಾವಿರ ರೂ. ವಿದ್ಯಾರ್ಥಿ ನೀಡಬೇಕಾಗುತ್ತದೆ. ಆದರೆ, ಶೇ.7ರಿಂದ 8ರಷ್ಟೂ ನಿಗಮ ಪಡೆಯುತ್ತಿಲ್ಲ ಎಂದು ಹೆಸರು ಹೇಳಲಿಚ್ಚಿಸದ ಕೆಎಸ್‌ಆರ್‌ಟಿಸಿ ಅಧಿಕಾರಿಯೊಬ್ಬರು ತಿಳಿಸುತ್ತಾರೆ.

ವಿದ್ಯಾರ್ಥಿ ಬಸ್‌ ಪಾಸ್‌ನ ಸೇವಾ ಶುಲ್ಕ ಹೆಚ್ಚಳಕ್ಕೆ ಸಂಬಂಧಿಸಿದಂತೆ ಪ್ರಸ್ತಾವನೆ ಬಂದಿದೆ. ಶುಲ್ಕ ಹೆಚ್ಚಿಸುವ ಚಿಂತನೆಯಿದೆ. ಇದಲ್ಲದೆ, ಪ್ರಯಾಣ ದರವನ್ನೂ ಶೇ.15ರಷ್ಟು ಏರಿಕೆ ಮಾಡುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇದು ಮುಖ್ಯಮಂತ್ರಿಗಳ ಮುಂದಿದೆ. ಈ ಬಗ್ಗೆ ಸ್ವತಃ ಅವರೇ ತೀರ್ಮಾನ ಕೈಗೊಳ್ಳಲಿದ್ದಾರೆ.
-ಡಿ.ಸಿ. ತಮ್ಮಣ್ಣ, ಸಾರಿಗೆ ಸಚಿವ.

* ವಿಜಯಕುಮಾರ್‌ ಚಂದರಗಿ

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.