ಬಿಜೆಪಿ-ಟಿಎಂಸಿ ಜೈ ಶ್ರೀ ರಾಂ ವಾಗ್ಯುದ್ಧ
Team Udayavani, Jun 3, 2019, 5:50 AM IST
ಕೋಲ್ಕತ್ತಾ: ‘ಜೈ ಶ್ರೀ ರಾಮ್’ ಘೋಷಣೆಗೆ ಸಂಬಂಧಿಸಿ ಬಿಜೆಪಿ -ತೃಣಮೂಲ ಕಾಂಗ್ರೆಸ್ ನಡುವಿನ ಮಾತಿನ ಚಕಮಕಿ ಮುಂದುವರಿದಿದೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿಗೆ ಜೈ ಶ್ರೀ ರಾಂ ಎಂದು ಬರೆದ 25 ಲಕ್ಷ ಪೋಸ್ಟ್ಕಾರ್ಡ್ ಗಳನ್ನು ಕಳುಹಿಸಿದ ಬೆನ್ನಲ್ಲೇ ಈ ವಾಕ್ಸಮರ ತೀವ್ರಗೊಂಡಿದೆ. ಭಾನು ವಾರ ಈ ಕುರಿತು ಮಾತನಾಡಿರುವ ದೆಹಲಿ ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್, ‘ಮಮತಾ ಅವರೇ, ನೀವು ಭಗವಾನ್ ಶ್ರೀ ರಾಮನ ಹೆಸರನ್ನು ಪಠಿಸಲು ಆರಂಭಿಸಿ. ಆಗ ನಿಮ್ಮ ಮೇಲೆ ದುಷ್ಟಶಕ್ತಿಗಳ ಪರಿಣಾಮ ಕಡಿಮೆಯಾಗುತ್ತದೆ’ ಎಂದು ಹೇಳಿದ್ದಾರೆ. ಜತೆಗೆ, ದೀದಿಗೆ ಪತ್ರವೊಂದನ್ನು ಬರೆದಿದ್ದು, ಅದರಲ್ಲಿ ಶ್ರೀರಾಮನ ನಾಮ ಮಂತ್ರವನ್ನೂ ಉಲ್ಲೇಖೀಸಿದ್ದೇನೆ. ಅದನ್ನು ಟೇಬಲ್ ಬಳಿ ಇಟ್ಟುಕೊಳ್ಳುವಂತೆ ಸಲಹೆ ನೀಡಿದ್ದೇನೆ ಎಂದಿದ್ದಾರೆ. ಇದೇ ವೇಳೆ, ಪ್ರತಿಕ್ರಿಯಿಸಿರುವ ಮಮತಾ, ‘ಜೈ ಶ್ರೀ ರಾಂ ವಿಚಾರ ಪ್ರಸ್ತಾಪಿಸುವ ಮೂಲಕ ಬಿಜೆಪಿಯು ಧರ್ಮವನ್ನು ರಾಜಕೀಯದ ಜತೆ ಬೆರೆಸುತ್ತಿದೆ. ನಾವು ಜನರ ಭಾವನೆಗಳನ್ನು ಗೌರವಿಸುತ್ತೇವೆ. ಆದರೆ, ಯಾವುದನ್ನೂ ಹೇರಲು ಹೋಗುವುದಿಲ್ಲ’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ
Mahadev Betting App Case; ಮುಂಬೈ ಪೊಲೀಸರಿಂದ ನಟ ಸಾಹಿಲ್ ಖಾನ್ ಬಂಧನ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ
Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !