ಶಾಲೆಗಳಲ್ಲಿ ಸಿಎಂ ಗ್ರಾಮ ವಾಸ್ತವ್ಯ

ಸರ್ಕಾರಿ ಶಾಲೆಗಳಲ್ಲಿ ಎಚ್.ಡಿ. ಕುಮಾರಸ್ವಾಮಿ ಗ್ರಾಮ ವಾಸ್ತವ್ಯ

Team Udayavani, Jun 3, 2019, 6:10 AM IST

cm

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿಕೂಟ ಸೋಲು ಮತ್ತು ಸರ್ಕಾರದ ಅಸ್ಥಿರತೆ ಆತಂಕದ ಬೆನ್ನಲ್ಲೇ, ಮುಖ್ಯಮಂತ್ರಿ ಕುಮಾರಸ್ವಾಮಿ ‘ಗ್ರಾಮ ವಾಸ್ತವ್ಯ’ ಪರಿಕಲ್ಪನೆಯನ್ನು ಮತ್ತೆ ಜಾರಿಗೊಳಿಸಲು ಮುಂದಾಗಿದ್ದಾರೆ. ಹದಿಮೂರು ವರ್ಷಗಳ ಹಿಂದೆ ಜಾರಿಗೊಳಿಸಿದ್ದ ಈ ಯೋಜನೆಯನ್ನು ಈ ಬಾರಿ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಉದ್ದೇಶದೊಂದಿಗೆ ಬದಲಾಯಿಸಲಾಗುತ್ತಿದೆ.

ಈ ಬಗ್ಗೆ ಟ್ವಿಟರ್‌ನಲ್ಲಿ ಭಾನುವಾರ ಅಭಿಪ್ರಾಯ ಹಂಚಿಕೊಂಡಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ‘ಜನರೊಂದಿಗೆ ಬೆರೆಯಲು, ಅವರ ಸಮಸ್ಯೆಗಳನ್ನು ಅರಿಯಲು, ಸರ್ಕಾರದ ಕಾರ್ಯವೈಖರಿ ತಿಳಿಸಲು ನೆರವಾಗುವುದು ಗ್ರಾಮ ವಾಸ್ತವ್ಯ. ಶೀಘ್ರವೇ ನನ್ನ ಗ್ರಾಮ ವಾಸ್ತವ್ಯ ಪ್ರಾರಂಭವಾಗಲಿದೆ. ಸರ್ಕಾರಿ ಶಾಲೆಗಳಲ್ಲಿ,’ ಎಂದು ಹೇಳಿಕೊಂಡಿದ್ದಾರೆ.

ಕುಮಾರಸ್ವಾಮಿಯವರು ಈ ಬಾರಿ ಸರ್ಕಾರಿ ಶಾಲೆಗಳಲ್ಲಿ ವಾಸ್ತವ್ಯ ಹೂಡಲು ನಿರ್ಧರಿಸಿದ್ದಾರೆ. ಭವಿಷ್ಯದ ಉತ್ತಮ ಪ್ರಜೆಗಳನ್ನು ರೂಪಿಸುವ ಜವಾಬ್ದಾರಿ ಹೊತ್ತ ಸರ್ಕಾರಿ ಶಾಲೆಗಳಲ್ಲಿ ಮೂಲ ಸೌಕರ್ಯ ಸೇರಿದಂತೆ ಗುಣಮಟ್ಟದ ಶಿಕ್ಷಣ ವ್ಯವಸ್ಥೆ ಕಲ್ಪಿಸಲು ಹಾಗೂ ಸ್ಥಳೀಯ ರೈತರು, ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕಾರ್ಯಕ್ಕೆ ಈ ಬಾರಿ ಒತ್ತು ನೀಡುವ ನಿರೀಕ್ಷೆ ಇದೆ.

ಲಯಕ್ಕೆ ತರಲು ಕಸರತ್ತು: ಸದ್ಯ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ, ಮೈತ್ರಿ ನಾಯಕರಲ್ಲೇ ಪರಸ್ಪರ ಅಪನಂಬಿಕೆಯಿಂದ ಗೊಂದಲ ಸೃಷ್ಟಿಯಾಗಿದೆ. ಇನ್ನೊಂದೆಡೆ ಕಾಂಗ್ರೆಸ್‌, ಜೆಡಿಎಸ್‌ನ ಕೆಲ ಶಾಸಕರು ಬಿಜೆಪಿಯತ್ತ ಆಕರ್ಷಿತರಾಗಿ ರಾಜೀನಾಮೆ ನೀಡಲು ಮುಂದಾದರೆ ಮೈತ್ರಿ ಸರ್ಕಾರವೇ ಪತನವಾಗುವ ಭೀತಿಯೂ ಆಡಳಿತ ಪಕ್ಷಕ್ಕೆ ಇಲ್ಲದಿಲ್ಲ. ಪ್ರಧಾನಿಯವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಂಡಿದ್ದ ಕುಮಾರಸ್ವಾಮಿಯವರು, ಎಐಸಿಸಿ ಅಧ್ಯಕ್ಷ ರಾಹುಲ್ಗಾಂಧಿಯವರನ್ನೂ ಭೇಟಿಯಾಗಿ ಚರ್ಚಿಸಿದ್ದರು. ಆ ಬಳಿಕ ಗೊಂದಲಗಳಿಗೆ ತೆರೆ ಎಳೆಯಲು ಮುಂದಾದಂತಿರುವ ಮುಖ್ಯಮಂತಿಗಳು ಕ್ರಮೇಣ ಆಡಳಿತ ಯಂತ್ರ ಎಂದಿನ ಕಾರ್ಯ ನಿರ್ವಹಣೆಗೆ ಮರಳುವಂತೆ ಮಾಡುವ ಕಾರ್ಯಕ್ಕೆ ಒತ್ತು ನೀಡಲಾರಂಭಿಸಿದಂತಿದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳೊಂದಿಗೆ ಶನಿವಾರ ಚರ್ಚೆ ನಡೆಸಿದ ಮುಖ್ಯಮಂತ್ರಿಗಳು, ಬರ ಪರಿಸ್ಥಿತಿ ನಿರ್ವಹಣೆ, ಆಯವ್ಯಯದಲ್ಲಿ ಘೋಷಿಸಿರುವ ಕಾರ್ಯಕ್ರಮಗಳನ್ನು ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ. ಅದರ ಬೆನ್ನಲ್ಲೇ ಇದೀಗ ಸರ್ಕಾರಿ ಶಾಲೆಗಳಲ್ಲಿ ವಾಸ್ತವ್ಯ ಹೂಡುವುದಾಗಿ ಪ್ರಕಟಿಸುವ ಮೂಲಕ ತಮ್ಮ ಹಿಂದಿನ ಆಡಳಿತ ವೈಖರಿಯನ್ನು ಮತ್ತೆ ಮುಂದುವರಿಸಲು ನಿರ್ಧರಿಸಿದಂತಿದ್ದು, ಕುತೂಹಲ ಮೂಡಿಸಿದೆ.

ಮೆಚ್ಚುಗೆ: ಈ ಹಿಂದೆ ವಿಜಯಪುರದ ಎಚ್ಐವಿ ಸೋಂಕುಪೀಡಿತರೊಬ್ಬರ ಮನೆಯನ್ನು ಆಯ್ಕೆ ಮಾಡಿಕೊಂಡು ಎಚ್ಐವಿ ಪೀಡಿತರ ಬಗ್ಗೆ ಸಮಾಜದಲ್ಲಿನ ತಪ್ಪು ನಂಬಿಕೆಯನ್ನು ದೂರ ಮಾಡುವ ಪ್ರಯತ್ನ ಮಾಡಿದ್ದರು. ಈ ವಿಷಯ ತಿಳಿದ ಹಾಲಿವುಡ್‌ ನಟ ರಿಚರ್ಡ್‌ ಗೇರ್‌ ಅವರು ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಗ್ರಾಮ ವಾಸ್ತವ್ಯದಿಂದಾಗಿ ಸುಮಾರು ಸಾವಿರ ಪ್ರೌಢಶಾಲೆಗಳು, ಸುಮಾರು 500 ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳ ಸ್ಥಾಪನೆಗೆ ಅನುಕೂಲವಾಯಿತು. ಹಾಗೆಯೇ ಸಾಲ ಮನ್ನಾ, ಸಾರಾಯಿ ನಿಷೇಧ, ಲಾಟರಿ ನಿಷೇಧ ಜತೆಗೆ ವಿಕಲಚೇತನರಿಗೆ ಮಾಸಾಶನ ನೀಡುವ ಸೌಲಭ್ಯ ಕಲ್ಪಿಸಿದ್ದು ಸಹ ಗ್ರಾಮ ವಾಸ್ತವ್ಯದ ಕೊಡುಗೆ ಎಂಬುದು ಮುಖ್ಯಮಂತ್ರಿಗಳ ನಂಬಿಕೆ ಎಂದು ಕಚೇರಿ ಅಧಿಕಾರಿಗಳು ಹೇಳಿದ್ದಾರೆ.

ಮೊದಲು ಜಾರಿಯಾದದ್ದು

– 2006-2007ರಲ್ಲಿ ಬಿಜೆಪಿ ಜತೆಗಿನ ಮೈತ್ರಿ ಅವಧಿಯಲ್ಲಿ ಜಾರಿಯಾಗಿದ್ದ ಪರಿಕಲ್ಪನೆ
– ಮೊದಲ ವಾಸ್ತವ್ಯ: ಅಥಣಿ ತಾಲೂಕಿನ ಪಿ.ಕೆ.ನಾಗನೂರ ಗ್ರಾಮದಲ್ಲಿ
– 20 ತಿಂಗಳಲ್ಲಿ 47 ಗ್ರಾಮ ವಾಸ್ತವ್ಯ
– ಮೊದಲ ಅವಧಿಯ ಗ್ರಾಮ ವಾಸ್ತವ್ಯಕ್ಕೆ ರಾಜ್ಯದ ಹಲವು ಕಡೆಗಳಿಂದ ವ್ಯಕ್ತವಾಗಿತ್ತು ಭಾರಿ ಶ್ಲಾಘನೆ.
ಅಧಿಕಾರಿಗಳ ಪರಿಶೀಲನೆ

ಮುಖ್ಯಮಂತ್ರಿಗಳು ಒಂದು ಗ್ರಾಮ ಇಲ್ಲವೇ ಸರ್ಕಾರಿ ಶಾಲೆಗೆ ಭೇಟಿ ನೀಡಿ ವಾಸ್ತವ್ಯ ಹೂಡುತ್ತಾರೆಂದರೆ ಹಿರಿಯ ಅಧಿಕಾರಿಗಳ ತಂಡ ಪೂರ್ವಭಾವಿಯಾಗಿ ಆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ. ಆ ಗ್ರಾಮ, ಶಾಲೆ ಹಾಗೂ ಸುತ್ತಮುತ್ತಲ ಪ್ರದೇಶದ ಜನರ ಸಮಸ್ಯೆಗಳು, ನಿರೀಕ್ಷೆಗಳು, ಅವುಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಪೂರಕವಾದ ಸಮಗ್ರ ವರದಿಯನ್ನು ಸಿದ್ಧಪಡಿಸಲಿದ್ದಾರೆ. ವಾಸ್ತವ್ಯ ಸಂದರ್ಭದಲ್ಲಿ ಬಹಳಷ್ಟು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕ್ರಮ ಕೈಗೊಳ್ಳುವ ಸಾಧ್ಯತೆ ಇರುತ್ತದೆ. ತಾವು ವಾಸ್ತವ್ಯ ಹೂಡುವ ಗ್ರಾಮ, ಜಿಲ್ಲೆಗೆ ಅಗತ್ಯವಿರುವ ಸೌಲಭ್ಯಗಳು, ಯಾವೆಲ್ಲಾ ಇಲಾಖೆ ಕಾರ್ಯಗಳು ಬಾಕಿ ಉಳಿದಿವೆ ಎಂಬುದನ್ನು ಮನಗಂಡು ಶಾಶ್ವತ ಪರಿಹಾರ ಕಂಡುಕೊಳ್ಳಬೇಕು ಎಂಬುದು ಮುಖ್ಯಮಂತ್ರಿಗಳ ಆಶಯ.
ಏನೇನು ಅನುಕೂಲವಾಗಿತ್ತು?

– ಸಾವಿರ ಪ್ರೌಢಶಾಲೆಗಳ ನಿರ್ಮಾಣ
– 500 ಪ.ಪೂ, ಪದವಿ ಕಾಲೇಜು ನಿರ್ಮಾಣ
– ಸಾರಾಯಿ, ಲಾಟರಿ ನಿಷೇಧ
– ವಿಕಲ ಚೇತನರಿಗೆ ಮಾಸಾಶನ
ರೈತರೇ ಆದ್ಯತಾ ವಲಯ

ಹಿಂದಿನ ಗ್ರಾಮ ವಾಸ್ತವ್ಯದಂತೆ ಈ ಬಾರಿಯೂ ರೈತರೇ ಆದ್ಯತಾ ವಲಯದಲ್ಲಿರುತ್ತಾರೆ. ರೈತರ ಹಿತವನ್ನು ಗಮನದಲ್ಲಿಟ್ಟುಕೊಂಡು ಈವರೆಗಿನ ರೈತಪರ ಕಾರ್ಯಕ್ರಮಗಳಿಂದ ಕಂಡುಕೊಂಡ ಅಂಶಗಳನ್ನು ರೈತರೊಂದಿಗೂ ಹಂಚಿಕೊಳ್ಳಲು ಮುಖ್ಯಮಂತ್ರಿಗಳು ಚಿಂತಿಸಿದ್ದಾರೆ. ಜತೆಗೆ ಆಧುನಿಕ ಕೃಷಿ ಪದ್ಧತಿಗೆ ಪೂರಕ ಸ್ಪಂದನೆ, ಯಾಂತ್ರೀಕೃತ ಕೃಷಿಗೆ ನೆರವು ಹಾಗೂ ರೈತರಿಗೆ ಮಾಹಿತಿ ನೀಡುವುದು ಈ ಬಾರಿಯ ಗ್ರಾಮ ವಾಸ್ತವ್ಯದ ಪ್ರಮುಖ ಆದ್ಯತೆಗಳಾಗಿರಲಿವೆ ಎಂದು ಮುಖ್ಯಮಂತ್ರಿಗಳ ಕಚೇರಿ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.