ಬತ್ತಿ ಶಿಲಾ ಹಂದರವಾಗಿದೆ  ಜೀವನದಿ!

ತುಂಬೆಯಲ್ಲಿರುವುದು 2.54 ಮೀ. ನೀರು * ಬಳಕೆಗೆ ಸಿಗುವುದು 1 ಮೀ. ಮಾತ್ರ!

Team Udayavani, Jun 3, 2019, 9:38 AM IST

tumbe

ಬಂಟ್ವಾಳ: ಜಿಲ್ಲೆಯ ಜೀವ ನದಿ ನೇತ್ರಾವತಿಯ ಹರಿವು ಬರಿದಾಗಿ ನದಿಪಾತ್ರ ಶಿಲಾಹಂದರದಂತೆ ಕಾಣುತ್ತಿದೆ. 160 ಕಿ.ಮೀ. ಉದ್ದದ ನೇತ್ರಾವತಿ ನದಿ ಅಕ್ಷರಶಃ ತನ್ನ ಮೂಲದಿಂದ ಮುಕ್ತಾಯದ ತನಕ ಬರಿದಾಗಿದೆ. ತುಂಬೆಯಲ್ಲಿ ನೀರಿನ ಸಂಗ್ರಹ ಕಡಿಮೆಯಾಗುತ್ತಿದ್ದು, ಕೇವಲ 1 ಮೀ. ನೀರು ಮಾತ್ರ ಬಳಕೆಗೆ ಸಿಗಬಹುದು.

ಪ್ರಸ್ತುತ ಎರಡು ಪಂಪ್‌ಗ್ಳು ಚಾಲನೆಯಲ್ಲಿವೆ. 2 ಮೀ.ಗಿಂತಲೂ ನೀರು ಕೆಳಕ್ಕೆ ಇಳಿದರೆ ಪಂಪಿಂಗ್‌ ಕಷ್ಟ ಆಗಲಿದೆ. ಬಳಿಕ ಜ್ಯಾಕ್‌ವೆಲ್‌ಗೆ ಹರಿಯದ ನೀರನ್ನು ಪ್ರತ್ಯೇಕ ಮೋಟಾರ್‌ ಮೂಲಕ ಜ್ಯಾಕ್‌ವೆಲ್‌ಗೆ ಹರಿಸಬೇಕಿದೆ.

3ನೇ ಬಾರಿ
ಮನಪಾ ಅಂಕಿ-ಅಂಶದಂತೆ ನೇತ್ರಾವತಿ ನದಿ ಇದು 3ನೇ ಬಾರಿಗೆ ಸಂಪೂರ್ಣ ಬರಿದಾಗಿದೆ. ಡ್ಯಾಂ 4 ಮೀ. ಎತ್ತರ ಇದ್ದಾಗ 2003ರಲ್ಲಿ ಬರಿದಾಗಿತ್ತು. ಆಗ ನೀರಿನ ಮಟ್ಟ 3.2 ಮೀ. ಇಳಿದು ಉಪಯೋಗ ಶೂನ್ಯವಾಗಿತ್ತು. ನದಿ ಪಾತ್ರದ ಜನರು ಕಂಗಾಲಾಗಿದ್ದರು. ತೀರಾ ತಡವಾಗಿ ಜೂ. 13ಕ್ಕೆ ಮಳೆ ಬಂದಿತ್ತು. ಡ್ಯಾಂಗೆ ನೀರು ಹರಿದುಬಂದದ್ದು ಜೂ. 15ರಂದು. ಆಗ ಆಳದ ನೀರನ್ನು ಡೀಸೆಲ್‌ ಪಂಪ್‌ ಬಳಸಿ ಹರಿಸುವ ಪ್ರಯತ್ನ ನಡೆಸಲಾಗಿತ್ತು. ಅಂತಿಮವಾಗಿ ಕುದುರೆ ಮುಖ ಅದಿರನ್ನು ಮಂಗಳೂರಿಗೆ ತರಿಸಿಕೊಳ್ಳುವ ಪೈಪ್‌ಲೈನ್‌ ಮೂಲಕ ಲಕ್ಯಾ ಡ್ಯಾಂನಿಂದ ನೀರು ತರಿಸಲಾಗಿತ್ತು.

2016ರ ಮೇ ತಿಂಗಳ ಮೊದಲ ವಾರದಲ್ಲಿ ಒಮ್ಮೆಲೇ ಬಿರುಸಾದ ಮಳೆ ಬಂದ ಕಾರಣ ತುಂಬೆ ಕಿರು ಡ್ಯಾಂ ಮೇಲಿಂದ ನೀರು ಹರಿದಿತ್ತು. ನೂತನ ಡ್ಯಾಂ ನಿರ್ಮಾಣ ಸಾಮಗ್ರಿಗಳು ಕೊಚ್ಚಿ ಹೋಗಿದ್ದವು. ಇದರಿಂದಾಗಿ ಮನಪಾ ಅಧಿಕಾರಿಗಳು ಡ್ಯಾಂನ ಹಲಗೆಗಳನ್ನು ತೆಗೆಸಿದ್ದರು. ನೀರು ಹೊರಹರಿದ ಬಳಿಕ ಮೇಲಿಂದ ಒರತೆ ಇಲ್ಲದೆ ನದಿ ಬರಿದಾಗಿತ್ತು. ಅಧಿಕಾರಿ ವರ್ಗದ ಎಡವಟ್ಟಿನಿಂದ ಮೇ ಕೊನೆಯ ವಾರದಲ್ಲಿ ಕುಡಿಯುವ ನೀರಿಗೆ ತತ್ವಾರ ಉಂಟಾಗಿತ್ತು.

ಮಳೆ ನಿರೀಕ್ಷೆಯಲ್ಲಿ
ಜೂನ್‌ ತಿಂಗಳ ಮಳೆಯನ್ನು ನಿರೀಕ್ಷಿಸಿ ಜೀವ ಹಿಡಿದುಕೊಂಡಂತಹ ಸ್ಥಿತಿಯಲ್ಲಿ ಜನತೆ ಇದೆ. ಪ್ರಸ್ತುತ ಹವಾಮಾನ ಮುನ್ಸೂಚನೆಯಂತೆ ಜಿಲ್ಲೆಗೆ ಜೂ. 6ರ ಬಳಿಕ ಮಳೆ ಬರುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಇದೇ ನೀರನ್ನು ನಂಬಿರುವುದು ಕಷ್ಟ.

ಲಕ್ಯಾದಲ್ಲೂ ನೀರಿಲ್ಲ
ಹಿಂದೆ 2003ರಲ್ಲಿ ಲಕ್ಯಾದಿಂದ ನೀರು ತರಿಸಲಾಗಿತ್ತು. ಆದರೆ ಈ ಬಾರಿ ಅಲ್ಲೂ ಕಡಿಮೆಯಾಗಿದೆ. ಪಂಪಿಂಗ್‌ ಮೂಲಕ ನೀರು ಹಾಯಿಸಲು ಕೋರ್ಟ್‌ ಅನುಮತಿ ಇಲ್ಲ. ಕುಡಿಯುವ ಉದ್ದೇಶಕ್ಕಾಗಿ ಗುರುತ್ವಾಕರ್ಷಣ ಶಕ್ತಿ ಮೂಲಕ ಹರಿಸಲು ಮಾತ್ರ ಅನುಮತಿ ಇದೆ. ಆದರೆ ಕೊಳವೆಯಲ್ಲಿ ಹಾವಸೆ, ತುಕ್ಕಿ ನಿಂದಾಗಿ ಗುರುತ್ವಾಕರ್ಷಣದಿಂದ ಸರಾಗವಾಗಿ ಹರಿಯುವುದಿಲ್ಲ. ಈ ಕಾರಣ ಲಕ್ಯಾದ ನೀರನ್ನು ಮಂಗಳೂರಿಗೆ ತರಿಸಲು ಅಸಾಧ್ಯವಾಗಿದೆ.

ಹೂಳಿನಿಂದಲೂ ಸಮಸ್ಯೆ
ಲಭ್ಯ ಮಾಹಿತಿಯಂತೆ ನದಿಯಲ್ಲಿ ಕನಿಷ್ಠ ಎರಡು ಮೀ. ಹೂಳು ತುಂಬಿದೆ. ನದಿಯಲ್ಲಿ ಸಾಂಪ್ರದಾಯಿಕವಾಗಿ ಮರಳು ಎತ್ತುವುದಕ್ಕೆ ಸರಕಾರ ತಡೆಯುಂಟು ಮಾಡಿದ್ದು ದೊಡ್ಡ ಸಮಸ್ಯೆಗೆ ಕಾರಣ. ದಶಕದ ಹಿಂದೆ ಸ್ಥಳೀಯ
ನದಿ ದಂಡೆಯಲ್ಲಿ ಜಮೀನು ಇದ್ದವರು ಮರಳು ಎತ್ತುವ ಗುತ್ತಿಗೆಯನ್ನು ಸ್ಥಳೀಯ ಪುರಸಭೆ ಅಥವಾ ಗ್ರಾ.ಪಂ.ನಿಂದ ಪಡೆದು ರಾತ್ರಿ ಹಗಲೆನ್ನದೆ ಕೆಲಸ ನಿರ್ವಹಿಸುತ್ತಿದ್ದರು. ಅನಂತರ ಅದೊಂದು ದಂಧೆಯಾಯಿತು. ಸ್ಪರ್ಧೆ ಆರಂಭಗೊಂಡಿತ್ತು. ಜಿಲ್ಲೆ, ತಾಲೂಕು ವ್ಯಾಪ್ತಿಯಲ್ಲಿ ಇದ್ದ ಮರಳಿನ ವ್ಯವಹಾರ ರಾಜ್ಯ ಮಟ್ಟಕ್ಕೆ ವಿಸ್ತರಿಸಿತು. ಪ್ರಸ್ತುತ ಸರಕಾರಕ್ಕೂ ನಿಭಾಯಿಸಲಾಗದ ಸ್ವರೂಪಕ್ಕೆ ಸಮಸ್ಯೆ ಬೆಳೆದು ನಿಂತಿದೆ.

ತುಂಬೆಯಲ್ಲಿ ನೀರೆಷ್ಟು?
ಜೂ. 2ರಂದು ರಾತ್ರಿ 10 ಗಂಟೆ ವೇಳೆಗೆ ನೀರಿನ ಮಟ್ಟ 2.54 ಮೀಟರ್‌ನಲ್ಲಿದೆ. ರೇಷನಿಂಗ್‌ ಪ್ರಕಾರ ಶುಕ್ರವಾರ ಬೆಳಗ್ಗಿನಿಂದ ಪಂಪ್‌ ಚಾಲೂ ಇದ್ದು, ಮಂಗಳೂರಿಗೆ ಸರಬರಾಜು ಮಾಡಲಾಗುತ್ತಿದೆ. ಇನ್ನೂ ಎರಡು ದಿನ ಅಂದರೆ ಮಂಗಳವಾರ ಬೆಳಗ್ಗಿನ ತನಕ ನೀರೆತ್ತಲಾಗುತ್ತದೆ.

ಪಂಪಿಂಗ್‌ ಮಾಡುವ ಸಂದರ್ಭ 1 ದಿನದಲ್ಲಿ ಸುಮಾರು 14ರಿಂದ 15 ಸೆಂ.ಮೀ.ನಷ್ಟು ನೀರು ಖಾಲಿಯಾಗುತ್ತದೆ. ಅಂದರೆ 4 ದಿನದಲ್ಲಿ ಸುಮಾರು 60 ಸೆಂ.ಮೀ.ನಷ್ಟು ನೀರು ಖಾಲಿಯಾಗುತ್ತದೆ. ಉಳಿದಂತೆ ತಳಮಟ್ಟದ ನೀರು ಜ್ಯಾಕ್‌ವೆಲ್‌ಗೆ ಹರಿದು ಬರುವುದಿಲ್ಲ. ಜ್ಯಾಕ್‌ವೆಲ್‌ನಿಂದ ನೀರೆತ್ತುವ ಪೈಪಿನ ಫುಟ್‌ವಾಲ್‌ ಅರ್ಧಕ್ಕೂ ಹೆಚ್ಚು ಭಾಗ ನೀರಿನಿಂದ ಮೇಲಕ್ಕೆ ಕಾಣುತ್ತಿದೆ. ಮುಂದಿನ ಅವಧಿಯಲ್ಲಿ ಎರಡು ದಿನ ನೀರೆತ್ತಲು ಸಾಧ್ಯವಾಗಬಹುದು. ಅಷ್ಟರೊಳಗೆ ಜೋರಾಗಿ ಮಳೆ ಬಾರದೇ ಇದ್ದರೆ ಸಮಸ್ಯೆ ಗಂಭೀರ ಸ್ಥಿತಿಗೆ ತಲುಪಲಿದೆ.

ದಿನಕ್ಕೆ ಹೆಚ್ಚುಕಡಿಮೆ 14 ಸೆಂ.ಮೀ. ನಂತೆ ನೀರಿನ ಮಟ್ಟ ಇಳಿಯುತ್ತಿದೆ. ಮಂಗಳವಾರ ಬೆಳಗ್ಗೆ ಪಂಪಿಂಗ್‌ ನಿಲುಗಡೆ ಆಗಲಿದೆ. ಆಗ ನೀರಿನ ಮಟ್ಟ 2 ಮೀಟರ್‌ಗೆ ಇಳಿಯಬಹುದೆಂದು ನಿರೀಕ್ಷಿಸಲಾಗಿದೆ. ಮತ್ತೆ ಪ್ರಯತ್ನಪಟ್ಟರೆ ಅರ್ಧ ಮೀ. ನೀರು ಸಿಗಬಹುದು. ಅಷ್ಟರಲ್ಲಿ ದೇವರ ಕೃಪೆಯಲ್ಲಿ ಮಳೆ ಬಂದರೆ ಪರಿಸ್ಥಿತಿ ಸುಧಾರಿಸಬಹುದು.
ಲಿಂಗೇ ಗೌಡ, ಮನಪಾ ಕಾ.ನಿ. ಎಂಜಿನಿಯರ್‌, ಮಂಗಳೂರು

ರಾಜಾ ಬಂಟ್ವಾಳ

ಟಾಪ್ ನ್ಯೂಸ್

kರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

ರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

Patla Foundation ಉದಾತ್ತ ಗುಣ: ಒಡಿಯೂರು ಶ್ರೀ

Patla Foundation ಉದಾತ್ತ ಗುಣ: ಒಡಿಯೂರು ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

1-qqw-qwewqewqeqwe

IPL 2024; ಅಮೋಘ ಆಟವಾಡಿ ಮೂರನೇ ಬಾರಿ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಕೆಆರ್

1-aaaa

Delhi ಹಸುಗೂಸುಗಳ ದುರಂತ: ಆಸ್ಪತ್ರೆಯ ಮಾಲಕ, ವೈದ್ಯ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Patla Foundation ಉದಾತ್ತ ಗುಣ: ಒಡಿಯೂರು ಶ್ರೀ

Patla Foundation ಉದಾತ್ತ ಗುಣ: ಒಡಿಯೂರು ಶ್ರೀ

ಎಲ್ಲ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣ ದಾಖಲು

ಎಲ್ಲ ಠಾಣೆಗಳಲ್ಲಿಯೂ ಸೈಬರ್‌ ಪ್ರಕರಣ ದಾಖಲು

beಬೀಚ್‌ಗಳಲ್ಲಿ ಪ್ರವಾಸಿಗರ ರಕ್ಷಣೆಗೆ 26 ಗೃಹರಕ್ಷಕ ಸಿಬಂದಿ

ಬೀಚ್‌ಗಳಲ್ಲಿ ಪ್ರವಾಸಿಗರ ರಕ್ಷಣೆಗೆ 26 ಗೃಹರಕ್ಷಕ ಸಿಬಂದಿ

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

Kateel ಮೇಳಗಳ ತಿರುಗಾಟ ಮುಕ್ತಾಯ; ದಿನಕ್ಕೆರಡರಂತೆ ಸೇವೆಯಾಟ ಬುಕ್ಕಿಂಗ್‌!

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

ಕರಾವಳಿಯಲ್ಲಿ ಮೋಡದ ವಾತಾವರಣ, ಸಾಧಾರಣ ಮಳೆ; ಕೆಲವೆಡೆ ಹಾನಿ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

kರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

ರಾಷ್ಟ್ರಪತಿ ಆಳ್ವಿಕೆಗೆ ಅವಕಾಶ ಮಾಡಿಕೊಡಬೇಡಿ : ಮಾಜಿ ಡಿಸಿಎಂ ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

Rayanna Brigade ಪುನಾರಂಭಕ್ಕೆ ಚಿಂತನೆ; ಕೆ.ಎಸ್‌. ಈಶ್ವರಪ್ಪ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

ಕರ್ನಾಟಕದಲ್ಲಿ ಬಿಹಾರದ ಪರಿಸ್ಥಿತಿ ನಿರ್ಮಾಣ: ವಿಜಯೇಂದ್ರ

Patla Foundation ಉದಾತ್ತ ಗುಣ: ಒಡಿಯೂರು ಶ್ರೀ

Patla Foundation ಉದಾತ್ತ ಗುಣ: ಒಡಿಯೂರು ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Udupi ಧರ್ಮ ಸಂರಕ್ಷಣೆಯಲ್ಲಿ ಪುರೋಹಿತರು, ವಿದ್ವಾಂಸರ ಪಾತ್ರ ಅಪಾರ: ಪುತ್ತಿಗೆ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.