ಜಮ್ಮುವಿನಲ್ಲಿ ಭಾರೀ ಬೆಂಕಿ: ವಲಸೆ ಕಾರ್ಮಿಕರ 200ಕ್ಕೂ ಅಧಿಕ ಗುಡಿಸಲು ಭಸ್ಮ
Team Udayavani, Jun 3, 2019, 3:23 PM IST
ಜಮ್ಮು : ಜಮ್ಮುವಿನ ತ್ರಿಕೂಟನಗರದಲ್ಲಿ ಭಾರೀ ಬೆಂಕಿ ಅವಘಡ ಸಂಭವಿಸಿ ಕಾರ್ಮಿಕ 200ಕ್ಕೂ ಹೆಚ್ಚು ಗುಡಿಸಲುಗಳು ಸುಟ್ಟು ಭಸ್ಮವಾದವು. ಆದರೆ ಇಷ್ಟೊಂದು ದೊಡ್ಡ ಬೆಂಕಿ ಅನಾಹುತದಲ್ಲಿ ಯಾವುದೇ ಜೀವ ಹಾನಿ ಸಂಭವಿಸಿಲ್ಲ ಎಂದು ವರದಿಗಳು ತಿಳಿಸಿವೆ.
ತ್ರಿಕೂಟನಗರ ರೈಲು ನಿಲ್ದಾಣ ಸಮೀಪದ ಮರಾಠಾ ಕ್ಲಸ್ಟರ್ ಸಮೀಪ ನಸುಕಿನ 1 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿತು. ಬಲವಾಗಿ ಬೀಸುತ್ತಿದ್ದ ಗಾಳಿಯಿಂದಾಗಿ ಬೆಂಕಿ ಕ್ಷಣಾರ್ಧದಲ್ಲಿ ವ್ಯಾಪಿಸಿಕೊಂಡು ಕಾರ್ಮಿಕ 200ಕ್ಕೂ ಅಧಿಕ ಗುಡಿಸಲುಗಳು ಸುಟ್ಟು ಭಸ್ಮವಾದವು. ಈ ಗುಡಿಸಲು ಬಿಹಾರ ಮತ್ತು ಉತ್ತರ ಪ್ರದೇಶದ ವಲಸೆ ಕಾರ್ಮಿಕರಿಗೆ ಸೇರಿದವುಗಳಾಗಿದ್ದು ಇಲ್ಲಿ ಕೆಲವು ರೊಹಿಂಗ್ಯಾಗಳು ಕೂಡ ವಾಸವಾಗಿದ್ದಾರೆ.
ಬೆಂಕಿ ಅನಾಹುತದಲ್ಲಿ ತನ್ನ ಗುಡಿಸಲು ಮತ್ತು ಅದರೊಳಗಿನ ಎಲ್ಲ ಸೊತ್ತುಗಳನ್ನು ಕಳೆದುಕೊಂಡಿರುವ ಪಶ್ಚಿಮ ಬಂಗಾಲದ ಸರೋಜಿನಿ ದೇವಿ ಹೇಳಿರುವ ಪ್ರಕಾರ ಬೆಂಕಿಯಲ್ಲಿ 400ರಿಂದ 500 ಗುಡಿಸಲು ಸುಟ್ಟು ಹೋಗಿವೆ.
ಅಗ್ನಿ ಶಾಮಕಗಳು ಮೂರು ತಾಸುಗಳಿಗೂ ಹೆಚ್ಚು ಕಾಲ ಶ್ರಮಿಸಿ ಬೆಂಕಿಯನ್ನು ನಂದಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
Goa ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮತದಾನ ಆಗಿದೆ: ಸಿಎಂ ಪ್ರಮೋದ್ ಸಾವಂತ್
Adani-Ambaniಯಿಂದ ಎಷ್ಟು ಕಪ್ಪು ಹಣ ಪಡೆದಿದ್ದೀರಿ? ರಾಹುಲ್ ವಿರುದ್ಧ ಮೋದಿ ವಾಗ್ದಾಳಿ
Heavy Rain: ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್ಮೆಂಟ್ನ ಗೋಡೆ ಕುಸಿದು 7 ಮಂದಿ ಸಾವು
ಏಕಾಏಕಿ ಯು-ಟರ್ನ್ ತೆಗೆದ ಟ್ರಕ್ ಚಾಲಕ… ಕಾರು ಡಿಕ್ಕಿ ಹೊಡೆದು 6 ಮಂದಿ ಸ್ಥಳದಲ್ಲೇ ಮೃತ್ಯು
MUST WATCH
ಹೊಸ ಸೇರ್ಪಡೆ
Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು
ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ
Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ
ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ
Sangeeth Sivan: ಮಾಲಿವುಡ್, ಬಾಲಿವುಡ್ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ