ಜೆಡಿಎಸ್ ಶಾಸಕರ ಸಭೆ ಇಂದು
Team Udayavani, Jun 4, 2019, 3:00 AM IST
ಬೆಂಗಳೂರು: ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಂಗಳವಾರ ಪಕ್ಷದ ಶಾಸಕರು ಹಾಗೂ ಪರಿಷತ್ ಸದಸ್ಯರ ಸಭೆ ಕರೆದಿದ್ದಾರೆ. ಜೆಪಿ ನಗರದ ನಿವಾಸದಲ್ಲಿ ಸಂಜೆ ಸಭೆ ನಿಗದಿಯಾಗಿದ್ದು, ಲೋಕಸಭೆ ಚುನಾವಣೆ ಫಲಿತಾಂಶ, ಮುಂದೆ ಪಕ್ಷ ಸಂಘಟನೆ, ಆಡಳಿತ ಯಂತ್ರ ಚುರುಕುಗೊಳಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗಿದೆ.
ಮುಖ್ಯಮಂತ್ರಿಯವರು ಪಕ್ಷದ ಶಾಸಕರ ಕೈಗೆ ಸಿಗುವುದಿಲ್ಲ. ನಮ್ಮ ಕ್ಷೇತ್ರದ ಕೆಲಸ ಕಾರ್ಯಗಳು ಆಗುತ್ತಿಲ್ಲ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಎಲ್ಲರನ್ನೂ ಕರೆದು ಚರ್ಚಿಸಿ ಇನ್ಮುಂದೆ ಸರ್ಕಾರ ಸುಸೂತ್ರವಾಗಿ ನಡೆಯಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಸಮಾಲೋಚನೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ. ಸಂಪುಟ ವಿಸ್ತರಣೆ ಕುರಿತು ಶಾಸಕರ ಜತೆ ಚರ್ಚಿಸುವ ಸಾಧ್ಯತೆಯಿದೆ.
ಜೆಡಿಎಸ್ ಕೋಟಾದಡಿ ಖಾಲಿ ಇರುವ 2 ಸ್ಥಾನ ಕಾಂಗ್ರೆಸ್ಗೆ ಬಿಟ್ಟುಕೊಡಬೇಕಾದ ಅನಿವಾರ್ಯತೆ ಇರುವುದು, ಸರ್ಕಾರ ಉಳಿಸಿಕೊಳ್ಳಲು ಕೆಲವು ಕ್ರಮಗಳ ಅನಿವಾರ್ಯತೆ ಬಗ್ಗೆ ಶಾಸಕರ ಜತೆ ಚರ್ಚಿಸಲಿದ್ದಾರೆ. ಜೆಡಿಎಸ್ ಶಾಸಕರು ಎರಡು ಸ್ಥಾನದಲ್ಲಿ ಒಂದು ಸ್ಥಾನ ಬಿಟ್ಟುಕೊಟ್ಟು ಮತ್ತೂಂದು ಜೆಡಿಎಸ್ನ ಶಾಸಕರಿಗೆ ಅವಕಾಶ ನೀಡಬೇಕೆಂಬ ಒತ್ತಾಯವೂ ಇದೆ. ಹೀಗಾಗಿ, ಎಲ್ಲ ವಿಚಾರಗಳ ಬಗ್ಗೆ ಸಮಗ್ರವಾಗಿ ಚರ್ಚಿಸಲು ಸಭೆ ಕರೆಯಲಾಗಿದೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್