ಕೇರಳದಲ್ಲಿ ನಿಫಾ ಭೀತಿ: ಮುನ್ನೆಚ್ಚರಿಕೆ ಕ್ರಮ
Team Udayavani, Jun 4, 2019, 6:00 AM IST
ಕೊಚ್ಚಿ: ಮಾರಣಾಂತಿಕ ನಿಫಾ ಸೋಂಕಿನ ಲಕ್ಷಗಳು ಕೊಚ್ಚಿಯ ಕಾಲೇಜು ವಿದ್ಯಾರ್ಥಿಯೊಬ್ಬನಲ್ಲಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೇರಳ ಸರಕಾರ ಎಚ್ಚೆತ್ತು ಕೊಂಡಿದ್ದು, ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಕಳೆದ ವರ್ಷ 17 ಮಂದಿಯನ್ನು ಬಲಿ ತೆಗೆದುಕೊಂಡ ವೈರಸ್ ಈಗ ಮತ್ತೆ ಕಾಣಿಸಿಕೊಂಡ ಅನುಮಾನ ಮೂಡಿರುವ ಕಾರಣ, ಅದನ್ನು ನಿಯಂತ್ರಿಸಲು ಎಲ್ಲ ರೀತಿಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕೇರಳ ಆರೋಗ್ಯ ಸಚಿವಾಲಯ ತಿಳಿಸಿದೆ.
23 ವರ್ಷದ ಕಾಲೇಜು ವಿದ್ಯಾರ್ಥಿಯಲ್ಲಿ ನಿಫಾ ಲಕ್ಷಣ ಕಂಡುಬಂದಿದ್ದು, ಆತನ ರಕ್ತದ ಮಾದರಿಯನ್ನು ಪುಣೆಯ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಅದರ ವರದಿ ಬಂದ ಅನಂತರವಷ್ಟೇ ಅದು ನಿಫಾ ಸೋಂಕು ಹೌದೋ, ಅಲ್ಲವೋ ಎಂಬುದು ದೃಢವಾಗಲಿದೆ. ಆದರೂ, ಕೊಚ್ಚಿಯ ಕಲಮಶೆÏàರಿ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಗಳನ್ನು ತೆರೆಯಲಾಗಿದೆ. ಉನ್ನತ ಆರೋಗ್ಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಸಭೆಯನ್ನೂ ಕರೆಯಲಾಗಿದೆ. ಸೋಂಕು ತಗುಲಿದೆ ಎನ್ನಲಾದ ವಿದ್ಯಾರ್ಥಿ ಜತೆಗೆ ಸಂಪರ್ಕದಲ್ಲಿದ್ದ 86 ಮಂದಿಯ ಪಟ್ಟಿ ತಯಾರಿಸಲಾಗಿದ್ದು, ಅವರ ಮೇಲೂ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ