ಪ್ರೀತಿಸದಿದ್ದರೂ ಬೆದರಿಕೆಗೆ ಹೆದರಿ ಬಾಲಕಿ ಆತ್ಮಹತ್ಯೆ

ಪ್ರೀತಿ ನಿರಾಕರಿಸಿದ್ದಕ್ಕಾಗಿ ವಿಷ ಸೇವಿಸಿದ ಯುವಕ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು

Team Udayavani, Jun 4, 2019, 7:53 AM IST

kolar-tdy-2..

ಅಪ್ರಾಪ್ತ ಬಾಲಕಿ ವಾಣಿ ಶವ ಪರೀಕ್ಷೆ ಮಾಡಿಕೊಡಬೇಕೆಂದು ಪ್ರತಿಭಟನೆಗೆ ಮುಂದಾದ ಪೋಷಕರನ್ನು ಸಮಾಧಾನ ಮಾಡಿದ ಎಎಸ್‌ಪಿ ಜಾನವಿ.

ಶ್ರೀನಿವಾಸಪುರ: ಬಾಲಕಿಯನ್ನು ಪ್ರೀತಿಸಿ ವಿಷ ಸೇವಿಸಿದ ಮೂರ್ತಿ (18) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪ್ರೀತಿಸದಿದ್ದರೂ ಅಪಪ್ರಚಾರ ಮಾಡಿ ಅವಮಾನಿಸಿದ್ದರಿಂದ ಮನ ನೊಂದ ವಾಣಿ (14) ನೇಣಿಗೆ ಶರಣಾಗಿರುವ ಘಟನೆ ತಾಲೂಕಿನ ಶಿವಪುರ ಗ್ರಾಮದಲ್ಲಿ ಸಂಭವಿಸಿದೆ.

ಇತ್ತೀಚೆಗೆ ನಡೆದ ಬೆಳವಣಿಗೆಗಳಲ್ಲಿ ಹುಡುಗ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಹುಡುಗನ ಪೋಷಕರು ನಮ್ಮ ಮಗ ಸತ್ತರೆ ನಿಮ್ಮ ಕತೆ ನೋಡುತ್ತೇವೆ ಎಂದು ಬಾಲಕಿಯ ಮನೆಯವರಿಗೆ ಧಮಿಕಿ ಹಾಕಿದ್ದಾರೆ. ಘಟನೆಗೂ ನನಗೂ ಸಂಬಂಧವೇ ಇಲ್ಲದಿದ್ದರೂ ನನ್ನ ಮೇಲೆ ಅಪಪ್ರಚಾರ ಮಾಡಿದ್ದಾರೆ ಎಂದು ಬಾಲಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆ ಹಿನ್ನೆಲೆ: 9ನೇ ತರಗತಿ ವಿದ್ಯಾರ್ಥಿನಿ ವಾಣಿಯನ್ನು ಆಕೆ ಒಪ್ಪಿಗೆ ಇಲ್ಲದೆ ಮೂರ್ತಿ (18) ಎಂಬಾತ ನಿನ್ನನ್ನು ಪ್ರೀತಿಸಿದ್ದೇನೆ ಎಂದು ಬುಧವಾರ ಹೇಳಿದಾಗ ಹುಡುಗಿ ನಿರಾಕರಿಸಿದ್ದಾಳೆ. ತನ್ನ ಪ್ರೀತಿ ನಿರಾಕರಿಸಿದ್ದರಿಂದ ಯುವಕ ವಿಷ ಸೇವಿಸಿದ್ದು, ವಿಷಯವರಿತ ಪೋಷಕರು ಅವನನ್ನು ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಕೊಡಿಸುತ್ತಿದ್ದಾರೆ.ಯುವಕನ ಸಂಬಂಧಿಕರು ನಮ್ಮವನು ಸತ್ತರೆ ನಿಮ್ಮ ಕತೆ ನೋಡುತ್ತೇವೆ. ನಿಮ್ಮ ಹುಡುಗಿ ನಮ್ಮವನೊಂದಿಗೆ ಮಾತಾಡಿರುವುದೆಲ್ಲ ರೆಕಾರ್ಡ್‌ ಆಗಿದೆ ಎಂದು ಶನಿವಾರ ಬಾಲಕಿ ಮನೆ ಬಳಿ ಹೋಗಿ ಯುವಕನ ಪೋಷಕರು ಧಮಿಕಿ ಹಾಕಿದ್ದಾರೆನ್ನಲಾಗಿದೆ.

ನಾನು ಏನು ತಪ್ಪು ಮಾಡದಿದ್ದರೂ ನಮ್ಮ ಮನೆ ಬಳಿ ಬಂದು ನಮ್ಮವರಿಗೆ ಅವಮಾನ ಮಾಡಿದ್ದಾರೆ, ನನ್ನಿಂದ ಯಾರಿಗೂ ತೊಂದರೆ ಆಗಬಾರದೆಂದು ಸೋಮವಾರ ಮಧ್ಯಾಹ್ನ ಯಾರು ಇಲ್ಲದ ವೇಳೆ ಮನೆಯಲ್ಲೇ ನೇಣಿಗೆ ಶರಣಾಗಿದ್ದಾಳೆ.

ದೂರು: ಮೃತ ಯುವತಿ ತಂದೆ ಕೊನಪ್ಪರೆಡ್ಡಿ ಬೆಳಗ್ಗೆ ನಮ್ಮ ಮನೆ ಬಳಿ ಬಂದ ಮೂರ್ತಿ ಸಂಬಂಧಿಕರು ಶ್ರೀನಿವಾಸ್‌ ಮತ್ತು ವೆಂಕಟೇಶ್‌, ವಿಷ ಸೇವಿಸಿರುವುದು ವಾಣಿಯಿಂದಲೆ, ಅವನು ಸತ್ತರೆ ನಿಮ್ಮನ್ನು ಉಳಿಸುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದರು.

ಇದರಿಂದ ಮತ್ತು ನಿಂದಿಸಿದ್ದರಿಂದ ಅವಳು ಸಾವಿಗೀಡಾಗಿದ್ದಾಳೆ. ಅವಳ ಸಾವಿಗೆ ಕಾರಣರಾದವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಶ್ರೀನಿವಾಸಪುರ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಠಾಣೆ ಎದುರು ಪ್ರತಿಭಟನೆ: ರಾತ್ರಿಯಾದರೂ ಸತ್ತ ಬಾಲಕಿಯ ಮರಣೋತ್ತರ ಪರೀಕ್ಷೆ ಮಾಡದೆ ಬೆಳಗ್ಗೆ ಶವ ಪರೀಕ್ಷೆ ಮಾಡಿ ಕೊಡುತ್ತೇವೆಂದು ಪೊಲೀಸರು ಹೇಳಿದ್ದರಿಂದ ಮೃತಳ ಸಂಬಂಧಿಕರು ಠಾಣೆ ಎದುರು ಪ್ರತಿಭಟನೆಗೆ ಮುಂದಾದರು.

ಉದ್ರಿಕ್ತ ಪರಿಸ್ಥಿತಿ ನಿರ್ಮಾಣವಾದ ಕೂಡಲೇ ಸ್ಥಳಕ್ಕೆ ಅಡಿಷನಲ್ ಎಸ್ಪಿ ಜಾಹ್ನವಿ ಬಂದು ಎಲ್ಲರನ್ನು ಸಮಾಧಾನ ಮಾಡಿ ಈಗಲೇ ಶವಪರೀಕ್ಷೆ ಮುಗಿಸಿ, ನಿಮಗೆ ಕಳುಹಿಸುತ್ತೇವೆಂದು ಹೇಳಿ ನಂತರ ಸಮಾಧಾನ ಪಡಿಸಿದರು. ಈ ಸಂದರ್ಭದಲ್ಲಿ ಡಿವೈಎಸ್ಪಿ ಉಮೇಶ್‌ ಹಾಗೂ ಸಿಬ್ಬಂದಿ ಹಾಜರಿದ್ದರು.

ಟಾಪ್ ನ್ಯೂಸ್

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.