ಬಸನಗೌಡ ಗಿರಡ್ಡಿ ಸರ್ಕಾರಿ ಕಾಲೇಜು ಸ್ಥಳಾಂತರ ಖಂಡಿಸಿ ಪ್ರತಿಭಟನೆ

ಆದೇಶ ಹಿಂಪಡೆಯುವಂತೆ ಆಗ್ರಹಿಸಿ ರಾಜ್ಯ ಸರ್ಕಾರಕ್ಕೆ ಮನವಿ

Team Udayavani, Jun 4, 2019, 7:59 AM IST

gadaga-tdy-1..

ರೋಣ: ಪಟ್ಟಣದ ಬಸನಗೌಡ ಗಿರಡ್ಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜನ್ನು ಗುಳೇದಗುಡ್ಡಕ್ಕೆ ಸ್ಥಳಾಂತರಗೊಂಡಿರುವುದನ್ನು ಖಂಡಿಸಿ ಹಳೆಯ ವಿದ್ಯಾರ್ಥಿಗಳ ನೇತೃತ್ವದಲ್ಲಿ ಪಟ್ಟಣದ ಮುಖಂಡರು ಹಾಗೂ ಅತಿಥಿ ಉಪನ್ಯಾಸಕರು ಪಟ್ಟಣದ ಸಿದ್ಧಾರೂಢ ಮಠದಿಂದ ತಹಶೀಲ್ದಾರ್‌ ಕಚೇರಿಯವರೆಗೆ ಬೃಹತ್‌ ಪ್ರತಿಭಟನೆ ನಡೆಸಿದರು. ಸ್ಥಳಾಂತರ ಆದೇಶ ಹಿಂಪಡೆಯಬೇಕು ಎಂದು ಆಗ್ರಹಿಸಿ ತಹಶೀಲ್ದಾರ್‌ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಸನಗೌಡ ಗಿರಡ್ಡಿ ಕಾಲೇಜಿನ ಹಳೆಯ ವಿದ್ಯಾರ್ಥಿ ಅನಿಲಕುಮಾರ ನವಲಗುಂದ ಮಾತನಾಡಿ, ಪಟ್ಟಣದಲ್ಲಿದ್ದಂತಹ ಬಸನಗೌಡ ಗಿರಡ್ಡಿ ಸರ್ಕಾರಿ ಪ್ರಥಮ ದರ್ಜೆಯ ಕಾಲೇಜು ಬೇರೆ ಕಡೆಗೆ ಸ್ಥಳಾಂತರಗೊಂಡಿರುವುದು ಬಡ ವಿದ್ಯಾರ್ಥಿಗಳಿಗೆ ತೀವ್ರ ಆಘಾತವನ್ನುಂಟುಮಾಡಿದೆ. ರೋಣ ಪಟ್ಟಣವು ತಾಲೂಕು ಕೇಂದ್ರ ಸ್ಥಾನವಾಗಿದ್ದು, ಕೇವಲ ಇಲ್ಲಿ ಒಂದೇ ಒಂದು ಸರ್ಕಾರಿ ಪದವಿ ಕಾಲೇಜು ಇತ್ತು. ಸರ್ಕಾರಿ ಕಾಲೇಜು ಇದ್ದುದ್ದರಿಂದ ಬಡವಿದ್ಯಾರ್ಥಿಗಳಿಗೆ ಅನುಕೂಲವಾಗಿತ್ತು. ಆದರೆ ಇಂದು ಸರ್ಕಾರಿ ಕಾಲೇಜು ಸ್ಥಾಳಾಂತರಗೊಂಡಿದ್ದು, ಇಲ್ಲಿನ ಬಡವಿದ್ಯಾರ್ಥಿಗಳಿಗೆ ತೀವ್ರ ನೋವುಂಟು ಮಾಡಿದೆ ಎಂದರು.

ಪಟ್ಟಣದಲ್ಲಿ ಸರ್ಕಾರಿ ಪದವಿ ಕಾಲೇಜು ಇದ್ದರೂ ವಿಶ್ವವಿದ್ಯಾಲಯವು ಕೂಗಳತೆಯ ದೂರದಲ್ಲಿ ಮತ್ತೂಂದು ಖಾಸಗಿ ಪದವಿ ಕಾಲೇಜಿಗೆ ಅನುಮತಿ ನೀಡಿದ ಪರಿಣಾಮದಿಂದಾಗಿ ಸರ್ಕಾರಿ ಪದವಿ ಕಾಲೇಜಿನ ಸಂಖ್ಯಾ ಬಲವು ಕುಸಿಯುತ್ತ ಹೋಯಿತು. ವಿಶ್ವವಿದ್ಯಾಲಯ ತೆಗೆದುಕೊಂಡ ಈ ದ್ವಂದ ನಿಲುವೇ ಇಂದು ಕಾಲೇಜು ಸ್ಥಳಾಂತರಗೊಳ್ಳಲು ಮುಖ್ಯ ಕಾರಣವಾಗಿದೆ ಎಂದು ಆರೋಪಿಸಿದರು.

ಕೂಡಲೇ ಸರ್ಕಾರಿ ಪದವಿ ಕಾಲೇಜು ಸ್ಥಳಾಂತರ ಆದೇಶವನ್ನು ಹಿಂಪಡೆದುಕೊಂಡು, ರೋಣ ಪಟ್ಟಣದಲ್ಲಿಯೇ ಈ ಕಾಲೇಜು ಮುಂದುವರೆಸಬೇಕು. ಇಲ್ಲವಾದಲ್ಲಿ ಮುಂದಿನ ದಿನಮಾನದಲ್ಲಿ ಹಳೆಯ ವಿದ್ಯಾರ್ಥಿಗಳು, ರೋಣ ಪಟ್ಟಣದ ನಾಗರಿಕರು, ಶಿಕ್ಷಣ ಪ್ರೇಮಿಗಳು ಹಾಗೂ ವಿವಿಧ ಸಂಘಟನೆಗಳ ಸಹಕಾರದೊಂದಿಗೆ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಅರ್ಜುನ ಕೊಪ್ಪಳ, ಎಸ್‌.ಬಿ. ಜಗಾಪುರ, ಆರ್‌.ಎನ್‌. ಉಮಚಗಿ, ಎಸ್‌.ಕೆ.ವಿರಕ್ತಮಠ, ಸಂಗನಗೌಡ ಕಲ್ಲನಗೌಡ್ರ, ಯಲ್ಲಪ್ಪ ಕಿರೇಸೂರ, ಗಂಗಾಧರ ಗಡಗಿ, ಹನುಮಂತ ಚಲುವಾದಿ, ಸಂತೋಷ ಚಿತ್ರಗಾರ, ಮಲ್ಲು ಅಚ್ಚನಗೌಡ್ರ, ಶಂಕರ ಮನ್ನೇರಿ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.