ನೌಕರಿ ಖಾಯಂಗಾಗಿ ಆಗ್ರಹ : ಗ್ರಾಮ ಪಂಚಾಯತ್‌ ನೌಕರರ ಪ್ರತಿಭಟನೆ


Team Udayavani, Jun 5, 2019, 6:10 AM IST

naukari-kayam

ಮಡಿಕೇರಿ : ಗ್ರಾಮ ಪಂಚಾಯತ್‌ ನೌಕರರನ್ನು ಏಕಕಾಲದಲ್ಲಿ ಖಾಯಂಗೊಳಿಸುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕೊಡಗು ಜಿಲ್ಲೆಯ ಗ್ರಾ.ಪಂ ನೌಕರರು ಜಿ.ಪಂ. ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಿದರು.

ಕರ್ನಾಟಕ ರಾಜ್ಯ ಗ್ರಾ.ಪಂ ನೌಕರರ ಸಂಘದ ಜಿಲ್ಲಾಧ್ಯಕ್ಷ ಪಿ.ಆರ್‌. ಭರತ್‌ ಮಾತನಾಡಿ, ಗ್ರಾ.ಪಂ.ಗಳು ಸ್ವತಂತ್ರವಾಗಿ ಸ್ವಯಂ ಆಡಳಿತ ನಡೆಸಬೇಕೆಂಬ ಆದೇಶ ವಿದ್ದರೂ, ಪಂಚಾಯತ್‌ ನೌಕರರ ಬಗ್ಗೆ ಮಲತಾಯಿ ಧೋರಣೆ ಅನುಸರಿ ಸಲಾಗುತ್ತಿದೆ.

ರಾಜ್ಯದಲ್ಲಿ 61 ಸಾವಿರ ನೌಕರರಿಗೆ ಈಗಿನ ಕನಿಷ್ಠ ವೇತನ ಮತ್ತು ತುಟ್ಟಿಭತ್ಯೆ ಸೇರಿ ಸುಮಾರು 830 ಕೋಟಿ ರೂ. ಬೇಕಿದೆ. ಆದರೆ ವೇತನಕ್ಕಾಗಿ ಕಳೆದ ವರ್ಷ ನಿಗದಿಯಾಗಿದ್ದ ಹಣವನ್ನು ರೈತರ ಸಾಲ ಮನ್ನಾ ನೆಪದಲ್ಲಿ 312 ಕೋಟಿ ರೂಪಾಯಿಯನ್ನು ಸರಕಾರ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದರು.

ಪಂಚಾಯತ್‌ ನೌಕರರಿಗೆ ಸರಕಾರ ನಿಗದಿಪಡಿಸಿದ ವೇತನ ಹಾಗೂ ಇತರ ಸೌಲಭ್ಯಗಳನ್ನು ನೀಡಬೇಕೆಂದು ಸರ ಕಾರದ ಸ್ಪಷ್ಟ ನಿರ್ದೇಶನವಿದ್ದರೂ, ಬಹುತೇಕ ಪಂಚಾಯತ್‌ಗಳಲ್ಲಿ ನೌಕರರಿಗೆ ವೇತನ ನೀಡದೆ ಆಡಳಿತ ಮಂಡಳಿ ಹಾಗೂ ಅಭಿವೃದ್ಧಿ ಅಧಿಕಾರಿಗಳು ಸತಾಯಿಸುತ್ತಿದ್ದಾರೆ ಎಂದು ಟೀಕಿಸಿದರು.

ಬೇಡಿಕೆಗಳು
ಅಪರ ಕಾರ್ಯದರ್ಶಿ ಸ್ವಾಮಿ ಅವರ ವರದಿಯಂತೆ ಎಲ್ಲ ನೌಕರರನ್ನು ಏಕಕಾಲದಲ್ಲಿ ಅನುಮೋದನೆ ಮಾಡ ಬೇಕು. ಎಲ್ಲ ನೌಕರರಿಗೆ ಸೇವಾ ಪುಸ್ತಕ ತೆರೆಯಬೇಕು. ಬಹಳ ದಿನಗಳಿಂದ ನೆನೆಗುದಿಗೆ ಬಿದ್ದಿರುವ ಸೇವಾ ನಿಯಮಾವಳಿ ರಚಿಸಬೇಕು. ನಿವೃತ್ತಿ ವೇತನ, ಗಳಿಕೆ ರಜೆ, ವಾರಕ್ಕೊಂದು ವೇತನ ಸಹಿತ ರಜೆ. ವೈದ್ಯಕೀಯ ವೆಚ್ಚ, ಸರಕಾರಿ ನೌಕರರಿಗೆ ನೀಡುವಂತೆ ಎಲ್ಲ ಗ್ರಾಮ ಪಂಚಾಯತ್‌ ನೌಕರರಿಗೂ ನೀಡಬೇಕು, ಪಂಚಾಯತ್‌ ನೌಕರರಿಂದ ಹೊಸ ಬಿಲ್‌ ಕಲೆಕ್ಟರ್‌ ಹುದ್ದೆಗೆ ಬಡ್ಡಿ ನೀಡಬೇಕು.

ಹೊಸ ಬಿಲ್‌ ಕಲೆಕ್ಟರ್‌ ಹುದ್ದೆಗೆ ನೇರ ನೇಮಕಾತಿ ಮಾಡಬಾರದು. ಬಿಲ್‌ ಕಲೆಕ್ಟರ್‌ ಹುದ್ದೆಯಿಂದ ಗ್ರೇಡ್‌2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ಬಡ್ಡಿ ನೀಡಲು 2019ರ ಜೇಷ್ಠತಾ ಪಟ್ಟಿ ಸಿದ್ಧಪಡಿಸಬೇಕು.

ಸುಪ್ರೀಂಕೋರ್ಟ್‌ ತೀರ್ಪಿನ ಅನ್ವಯ ಪಿಡಿಒ ಭಡ್ತಿ, ಗ್ರೇಡ್‌1 ಭಡ್ತಿ ನೀಡಿ ಖಾಲಿಯಾದ ಗ್ರೇಡ್‌2 ಕಾರ್ಯದರ್ಶಿ ಮತ್ತು ಲೆಕ್ಕ ಸಹಾಯಕ ಹುದ್ದೆಗೆ ನೇಮಕಾತಿ ಮಾಡು ವಂತಾಗಬೇಕು. ಕ್ಲರ್ಕ್‌ ಕಂ ಡಾಟಾ ಎಂಟ್ರಿ ಆಪರೇಟರ್‌ಗಳನ್ನು ಬಡ್ತಿಗೆ ಪರಿಗಣಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಮನವಿ ಪತ್ರವನ್ನು ಪ್ರತಿಭಟನಾಕಾರರು ಜಿ.ಪಂ ಅಧಿಕಾರಿಗಳಿಗೆ ನೀಡಿದರು.

ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ರಾಮಕೃಷ್ಣ, ಉಪಾಧ್ಯಕ್ಷ ಟಿ.ಕೆ.ಮೂರ್ತಿ, ತಾ. ಖಜಾಂಚಿ ವಂಸತ್‌, ಕಾರ್ಯದರ್ಶಿ ಪವಿತ್ರಾ, ಸದಸ್ಯ ವಿಜಯ್‌ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

ಗಡಿ ನಿರ್ಬಂಧ ತೆರವುಗೊಳಿಸಲು ಆಗ್ರಹ

Malayali

12 ವರ್ಷಗಳಿಂದ ಮನೆಯಲ್ಲೇ ಕೃಷಿ ಮಾಡುವ ತಿರುವನಂತಪುರದ ದಂಪತಿ

ಕಾಸರಗೋಡು: 7 ಮಂದಿಗೆ ಸೋಂಕು

ಕಾಸರಗೋಡು: 7 ಮಂದಿಗೆ ಸೋಂಕು

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ಕಡಿಮೆ ಖರ್ಚಿನಲ್ಲಿ ಅಟೋಮ್ಯಾಟಿಕ್‌ ವೆಂಟಿಲೇಟರ್‌ ಆವಿಷ್ಕರಿಸಿದ ಪ್ರಾಧ್ಯಾಪಕ

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

ನಾಲ್ಕೇ ತಾಸುಗಳಲ್ಲಿ ಮನೆಗೆ ಬಂತು ಅಕ್ಕಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.