ಕೇಂದ್ರ ಸಚಿವ ಸ್ಥಾನ: ಲೋಪ ಹುಡುಕುವುದು ಸಲ್ಲ-ಅಂಗಡಿ
Team Udayavani, Jun 5, 2019, 3:04 AM IST
ಬೆಂಗಳೂರು: ಸಂಸತ್ತಿನಲ್ಲಿ ಒಟ್ಟು 65 ಬ್ರಾಹ್ಮಣ ಸಮುದಾಯದ ಸಂಸದರಿದ್ದಾರೆ. ಆದರೆ ಲಿಂಗಾಯತ ಸಂಸದರ ಸಂಖ್ಯೆ ಕೇವಲ 9. ಹೀಗಿರುವಾಗ ನನ್ನೊಬ್ಬನಿಗೆ ಸಚಿವ ಸ್ಥಾನ ನೀಡಿರುವುದು, ಅದರಲ್ಲೂ ರಾಜ್ಯ ಖಾತೆ ನೀಡಿರುವುದು ಸರಿಯಾಗಿಯೇ ಇದೆ. ಇದರಲ್ಲಿ ಲೋಪ ಹುಡುಕುವುದು ಸರಿಯಲ್ಲ ಎಂದು ಹೇಳುವ ಮೂಲಕ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಅವರಿಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಪರೋಕ್ಷವಾಗಿ ತಿರುಗೇಟು ನೀಡಿದರು.
ರೈಲ್ವೆ ಖಾತೆ ರಾಜ್ಯ ಸಚಿವರಾದ ಬಳಿಕ ಅವರು ಮಂಗಳವಾರ ಮೊದಲ ಬಾರಿಗೆ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದ ವೇಳೆ ಸುದ್ದಿಗಾರರ ಜತೆ ಮಾತನಾಡಿದರು. ಸಾಮಾನ್ಯ ಪ್ರಯಾಣಿಕರ ಸಮಸ್ಯೆ ತಿಳಿಯುವ ಸಲುವಾಗಿ ಬೆಳಗಾವಿಯಿಂದ ಬೆಂಗಳೂರಿಗೆ ಸಾಮಾನ್ಯ ಬೋಗಿಯಲ್ಲಿ ಪ್ರಯಾಣಿಸಿದ್ದೇನೆ. ಸಾಮಾನ್ಯರ ಬೋಗಿಯಲ್ಲಿ ಸ್ವತ್ಛತೆ ಇಲ್ಲದಿರುವುದು ಕಂಡುಬಂತು. ಇನ್ನು ಮುಂದೆ ಸಾಮಾನ್ಯ ಬೋಗಿಗಳಲ್ಲಿ ಕಸ, ಗಲೀಜು ಕಂಡು ಬಂದರೆ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಸಬ್ ಅರ್ಬನ್ ರೈಲ್ವೆ ಯೋಜನೆಗೆ ಸಂಬಂಧಪಟ್ಟಂತೆ ಚರ್ಚಿಸಲು ಅಧಿಕಾರಿಗಳ ಸಭೆ ಕರೆಯಲಾಗಿದೆ. ಯೋಜನೆಯ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದು ಮುಂದೆ ಕೈಗೊಳ್ಳಬೇಕಿರುವ ಕ್ರಮಗಳ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಈ ವೇಳೆ ರಾಜ್ಯ ಬಿಜೆಪಿ ಕಾರ್ಯದರ್ಶಿ ಜಗದೀಶ್ ಹಿರೇಮನಿ ಸೇರಿ ಇತರೆ ಮುಖಂಡರು ಸಸಿ ನೀಡಿ ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ಭಾರತ ಮಾತೆಗೆ ಪುಷ್ಪಾರ್ಚನೆ ಮಾಡಿದ ಸುರೇಶ್ ಅಂಗಡಿ, ಬಳಿಕ ಜಗನ್ನಾಥ ಜೋಶಿಯವರ ಪುತ್ಥಳಿಗೆ ಗೌರವ ಸಲ್ಲಿಸಿದರು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ನೂತನ ಸಚಿವರಿಗೆ ಸಿಹಿ ತಿನ್ನಿಸಿ ಅಭಿನಂದನೆ ಸಲ್ಲಿಸಿದರು. ಸಂಸದ ಡಾ.ಉಮೇಶ್ ಜಾಧವ್ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
MUST WATCH
ಹೊಸ ಸೇರ್ಪಡೆ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ