ಡಿವಿಎಸ್ ಟೀಕೆಗೆ ಟ್ವೀಟ್ ಮೂಲಕ ಸಿಎಂ ತಿರುಗೇಟು
Team Udayavani, Jun 5, 2019, 3:00 AM IST
ಬೆಂಗಳೂರು: ಮೇಕೆದಾಟು ಹಾಗೂ ಸಬ್ಅರ್ಬನ್ ರೈಲು ಯೋಜನೆ ಕುರಿತು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡರ ಟೀಕೆಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ. ಕೇಂದ್ರ ಸಚಿವ ಸದಾನಂದಗೌಡರು ರಾಜ್ಯದ ಯೋಜನೆಗಳ ಬಗ್ಗೆ ಮಾಹಿತಿ ಇಲ್ಲದೆ ಮಾತನಾಡುವುದು ಶೋಭೆಯಲ್ಲ.
ಮೇಕೆದಾಟು ಯೋಜನೆ ಪಿಡಿಆರ್ ಮಾತ್ರವಲ್ಲ, ಕಾರ್ಯ ಸಾಧ್ಯತಾ ವರದಿಯನ್ನೂ ಈಗಾಗಲೇ ಕೇಂದ್ರಕ್ಕೆ ಸಲ್ಲಿಸಿದ್ದೇವೆ. ಸಬ್ ಅರ್ಬನ್ ರೈಲು ಯೋಜನೆಯ ಕುರಿತು ಫೆಬ್ರವರಿ ಕೊನೆಯ ವಾರದಲ್ಲಿ ಸ್ವತಃ ರೈಲ್ವೆ ಸಚಿವ ಪಿಯೂಷ್ ಗೋಯಲ್ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ ಕಾರ್ಯಸಾಧ್ಯತಾ ವರದಿ ಅನುಮೋದನೆಗೆ ಸಂಬಂಧಿಸಿದ ಎಲ್ಲ ತೊಡಕುಗಳನ್ನು ನಿವಾರಿಸುವ ಕುರಿತು ಚರ್ಚೆ ನಡೆಸಿದ್ದರು.
ಅದರಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಆದೇಶ ಮಾರ್ಪಡಿಸಲು ಅನುಮೋದನೆ ನೀಡಲಾಗಿತ್ತು. ರೈಲ್ವೆ ಸಚಿವಾಲಯದ ಮೇ 28ರ ಪತ್ರದಂತೆ ಎಸ್ಪಿವಿ ರಚನೆಗೆ ಅಗತ್ಯ ಕ್ರಮ ವಹಿಸಲಾಗುತ್ತಿದೆ. ನಿಜವಾಗಿಯೂ ಕಾಳಜಿ ಇದ್ದರೆ “ರಾಜಕೀಯ ಬೇಡ’ ಎನ್ನುವ ರಾಜಕೀಯ ಬಿಟ್ಟು ರಾಜ್ಯದ ಯೋಜನೆಗಳಿಗೆ ನೆರವು ಒದಗಿಸುವುದು ಉತ್ತಮ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ