ದ.ಕ: ಸಂಭ್ರಮದ ರಂಜಾನ್ ; ಸಚಿವ ಖಾದರ್ ವಿಶೇಷ ಪ್ರಾರ್ಥನೆ
Team Udayavani, Jun 5, 2019, 11:51 AM IST
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಸ್ಲಿಂ ಬಾಂಧವರು ಸಂಭ್ರಮದಿಂದ ಈದ್ ಉಲ್ ಫಿತ್ರ ಹಬ್ಬವನ್ನು ಆಚರಿಸುತ್ತಿದ್ದಾರೆ. ಬೆಳಗ್ಗೆ ಎಲ್ಲಾ ಮಸೀದಿಗಳಲ್ಲಿ ವಿಶೇಷ ನಮಾಜ್ ಸಲ್ಲಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್ ಅವರು ಉಳ್ಳಾಲ ದರ್ಗಾದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಬಳಿಕ ತಂದೆ ಯು.ಟಿ.ಫರೀದ್ ಅವರ ಸಮಾಧಿಗೂ ನಮಿಸಿದರು.
ಜಿಲ್ಲೆಯ ಎಲ್ಲಾ ಮುಸ್ಲಿಂ ಬಾಂಧವರಿಗೆ ಸಚಿವರು ರಂಜಾನ್ ಶುಭ ಕೋರಿದರು.