ಜಲಾಶಯ ಹೂಳೆತ್ತಿದರೆ ರೈತರಿಗೆ ಲಾಭ
ತುಂಗಭದ್ರಾ ನೀರಾವರಿ ಮಂಡಳಿ ಅಧಿಕಾರಿಗಳು ಸಹಕಾರ ನೀಡಲಿ: ರಾಘವೇಂದ್ರ ಹಿಟ್ನಾಳ
Team Udayavani, Jun 5, 2019, 1:24 PM IST
ಕೊಪ್ಪಳ: ಶಿವಪುರ ಸಮೀಪದ ತುಂಗಭದ್ರಾ ಜಲಾಶಯದಲ್ಲಿ ಹೂಳೆತ್ತುವ ರೈತರ ಕ್ರಿಯಾ ಸಮಿತಿಯಿಂದ ಮಂಗಳವಾರ ಆಯೋಜಿಸಿದ್ದ ತುಂಗಭದ್ರಾ ಜಲಾಶಯ ಹೂಳೆತ್ತುವ ಕಾರ್ಯಕ್ಕೆ ಶಾಸಕ ರಾಘವೇಂದ್ರ ಹಿಟ್ನಾಳ ಚಾಲನೆ ನೀಡಿದರು
ಕೊಪ್ಪಳ: ಜಲಾಶಯಗಳ ಹೂಳೆತ್ತುವಿನಿಂದ ರೈತರಿಗೆ ಲಾಭವಾಗಲಿದೆ ಎಂದು ಸಂಸದೀಯ ಕಾರ್ಯದರ್ಶಿ ಹಾಗೂ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹೇಳಿದರು.
ತಾಲೂಕಿನ ಶಿವಪುರ ಸಮೀಪದ ತುಂಗಭದ್ರಾ ಜಲಾಶಯದಲ್ಲಿ ಹೂಳೆತ್ತುವ ರೈತರ ಕ್ರಿಯಾ ಸಮಿತಿಯಿಂದ ಮಂಗಳವಾರ ಆಯೋಜಿಸಿದ್ದ ತುಂಗಭದ್ರಾ ಜಲಾಶಯ ಹೂಳೆತ್ತುವ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಜಲಾಶಯದ ಹೂಳೆತ್ತುವಿನಿಂದ ರೈತರಿಗೆ ಲಾಭವಾಗುವುದರ ಜೊತೆ ಹೆಚ್ಚಿನ ನೀರು ಸಂಗ್ರಹವಾಗಲಿದೆ. 30 ಟಿಎಂಸಿ ಅಡಿ ಹೂಳು ತುಂಬಿರುವುದರ ಹಿನ್ನೆಲೆಯಲ್ಲಿ ಬಳ್ಳಾರಿ-ಕೊಪ್ಪಳ-ರಾಯಚೂರು ಜಿಲ್ಲೆಗಳ ರೈತರು ಹೂಳೆತ್ತುವುದಕ್ಕೆ ಕೈ ಜೋಡಿಸಿದ್ದಾರೆ. ರೈತರಿಗೆ ನೆರವಾಗಲು ತುಂಗಭದ್ರಾ ನೀರಾವರಿ ಮಂಡಳಿ ಅಧಿಕಾರಿಗಳು ಸಹಕಾರ ನೀಡಬೇಕು ಎಂದರು.
ಮುಂದಿನ ದಿನಗಳಲ್ಲಿ ಜಲಾಶಯ ಉಳಿಸುವ ಜವಾಬ್ದಾರಿ ನಮ್ಮ ಮೇಲಿದೆ. ಪ್ರತಿಯೊಬ್ಬರೂ ಈ ಕಾರ್ಯಕ್ಕೆ ಕೈ ಜೋಡಿಸಿ ಕೆಲಸ ನಿರ್ವಹಿಸಬೇಕು. ಇಲ್ಲದಿದ್ದರೆ ಮುಂದಿನ ದಿನದಲ್ಲಿ ತುಂಗಭದ್ರಾ ಜಲಾಶಯ ಕೇವಲ ಕುಡಿವ ನೀರಿಗೆ ಮಾತ್ರ ಸೀಮಿತವಾಗಲಿದೆ. ಈಗಾಗಲೇ ಜಲಾಶಯದಲ್ಲಿ ಹೂಳು ತುಂಬಿದ ಕಾರಣ ನಮ್ಮ ರೈತರು ಕೇವಲ ಒಂದೇ ಬೆಳೆ ಬೆಳೆಯುವಂತಾಗಿದೆ. ಹಾಗಾಗಿ ಈಗಿನಿಂದಲೇ ನಾವು ಜಾಗೃತರಾಗಬೇಕು ಎಂದು ಹೇಳಿದರು.
ಹೂಳೆತ್ತುವ ಕಾರ್ಯಕ್ಕೆ ಪಕ್ಷಾತೀತವಾಗಿ ಎಲ್ಲರೂ ಕೈ ಜೋಡಿಸಬೇಕು. ಜಲಾಶಯದ ಹೂಳೆತ್ತುವ ಬಗ್ಗೆ ಜನರಲ್ಲಿ ಆಸಕ್ತಿ ಹಾಗೂ ಜಾಗೃತಿ ಮೂಡಿದರೆ ಯಾವ ಕೆಲಸವೂ ಅಸಾಧ್ಯವಲ್ಲ ಎಂದರು.
ಜಿಪಂ ಮಾಜಿ ಅಧ್ಯಕ್ಷ ಟಿ. ಜರ್ನಾದನ ಹುಲಗಿ ಮಾತನಾಡಿ, 2017 ಪ್ರಾರಂಭವಾದ ಈ ತುಂಗಭದ್ರಾ ಜಲಾಶಯ ಹೂಳೆತ್ತುವ ಕಾರ್ಯವೂ ಕಳೆದ ವರ್ಷ ವಿಧಾನಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ಹೂಳೆತ್ತುವ ಕಾರ್ಯ ಮುಂದುವರಿಸಲು ಆಗಲಿಲ್ಲ. ಆದರೆ, ಈ ವರ್ಷ ರೈತರಿಂದ ಹೂಳೆತ್ತಲು ಉತ್ತಮ ಸ್ಪಂದನೆ ದೊರೆತ ಹಿನ್ನೆಲೆಯಲ್ಲಿ ಹೂಳೆತ್ತುವ ಕಾರ್ಯಕ್ಕೆ ಅಣಿ ಮಾಡಲಾಗಿದೆ. ಎಂದು ಹೇಳಿದರು.
ಹೂಳೆತ್ತುವುದರಿಂದ ನಮ್ಮ ಭಾಗದ ರೈತರ ಸುದೀರ್ಘವಾಗಿ ವರ್ಷದಲ್ಲಿ ಎರಡು ಬಾರಿ ಬೆಳೆಯನ್ನು ಬೆಳೆಯಲು ಸಾಧ್ಯವಾಗಲಿದೆ. ಜಿಲ್ಲೆಯಲ್ಲಿರುವ ಅನೇಕ ರೈತರು ಈ ಕಾರ್ಯಕ್ಕೆ ತಮ್ಮ ಕೈಲಾದ ಸಹಾಯ ಮಾಡತ್ತಿರುವುದು ನಿಜಕ್ಕೂ ಹರ್ಷ ತಂದಿದೆ ಎಂದರು.
ಅಭಿಯಂತರ ರಾಮಣ್ಣ, ತುಂಗಭದ್ರಾ ನೀರಾವರಿ ಮಂಡಳಿ ಇಒ ಮಧುಸೂದನ್, ಜಿಪಂ ಮಾಜಿ ಅಧ್ಯಕ್ಷರಾದ ಎಸ್.ಬಿ. ನಾಗರಳ್ಳಿ, ರಾಜಶೇಖರ ಹಿಟ್ನಾಳ್ ಸೇರಿದಂತೆ ಹಲವು ಗಣ್ಯರು, ರೈತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!
Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು
Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್ ಗರಿ
D.K,Udupi ಸಿಎನ್ಜಿ ಇಂಧನ ಕೊರತೆ: ಬಂಕ್ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು
MUST WATCH
ಹೊಸ ಸೇರ್ಪಡೆ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ