ರೈಲ್ವೆ ಅಂಡರ್‌ಪಾಸ್‌ ಜಲಾವೃತ, ಸಂಚಾರ ಅಸ್ತವ್ಯಸ್ತ

ರೈಲ್ವೆ ಅಧಿಕಾರಿಗಳಿಂದ ಎರಡು ದಿನಗಳಲ್ಲಿ ಅವ್ಯವಸ್ಥೆ ಸರಿಪಡಿಸುವ ಭರವಸೆ

Team Udayavani, Jun 5, 2019, 1:55 PM IST

5-June-34

ಬಂಗಾರಪೇಟೆ ಪಟ್ಟಣದ ತಿಮ್ಮಾಪುರ ಗೇಟ್‌ ಬಳಿ ಇರುವ ರೈಲ್ವೆ ಅಂಡರ್‌ಪಾಸ್‌ ನಲ್ಲಿ ತುಂಬಿದ ಮಳೆ ನೀರನ್ನು ರೈಲ್ವೆ ಇಲಾಖೆ ಅಧಿಕಾರಿಗಳು ಹಾಗೂ ರೈತ ಸಂಘದ ಅಧ್ಯಕ್ಷ ಮರಗಲ್‌ ಶ್ರೀನಿವಾಸ್‌ ಪರಿಶೀಲಿಸಿದರು.

ಬಂಗಾರಪೇಟೆ: ಬಂಗಾರಪೇಟೆ-ಕೋಲಾರ ರೈಲ್ವೆ ಮುಖ್ಯ ರಸ್ತೆಯ ತಿಮ್ಮಾಪುರ ಗೇಟ್ ಬಳಿಯ ಅಂಡರ್‌ಪಾಸ್‌ ಜಲಾವೃತವಾಗಿದ್ದು, ರೈತರು ಹಾಗೂ ಜನಸಾಮಾನ್ಯರು ಓಡಾಡಲು ತೀವ್ರ ಕಷ್ಟಕರವಾಗಿದೆ.

ಬಂಗಾರಪೇಟೆ-ಕೋಲಾರ ರೈಲ್ವೆ ಮಾರ್ಗದಲ್ಲಿ ಬರುವ ಬಹುತೇಕ ಅಂಡರ್‌ಪಾಸ್‌ಗಳಿಂದ ಜನರಿಗೆ ಅನುಕೂಲಕ್ಕಿಂತ ಅನಾನುಕೂಲವೇ ಹೆಚ್ಚಾಗಿದೆ. ಗಂಗಮ್ಮನಪಾಳ್ಯ, ಕುಂಬಾರಪಾಳ್ಯ, ತಿಮ್ಮಾಪುರ, ಬಾವರಹಳ್ಳಿ, ಹುದುಕುಳ ಗ್ರಾಮಗಳ ಬಳಿ ಇರುವ ಅಂಡರ್‌ಪಾಸ್‌ಗಳು ಕಳಪೆ ಕಾಮಗಾರಿಯಿಂದ ಕೂಡಿದ್ದು, ಮಳೆ ಬಂದರೇ ಜಲಾವೃತಗೊಂಡು ಜನ ಓಡಾಡಲು ಕಷ್ಟಪಡುವಂತಾಗಿದೆ.

ರೈತ ಸಂಘದ ಜಿಲ್ಲಾಧ್ಯಕ್ಷ ಮರಗಲ್ ಶ್ರೀನಿವಾಸ್‌ ಮಾತನಾಡಿ, ರೈಲ್ವೆ ಇಲಾಖೆಯು ಅವೈಜ್ಞಾನಿಕವಾಗಿ ನಿರ್ಮಾಣ ಮಾಡಿರುವ ಅಂಡರ್‌ಪಾಸ್‌ನಲ್ಲಿ ಶನಿವಾರ ಬಿದ್ದ ಭಾರೀ ಮಳೆ ನೀರು ಹೊರಗೆ ಹೋಗದೆ ಮಡುಗಟ್ಟಿದೆ. ವಾಹನಗಳ ಜೊತೆಗೆ ಸಾರ್ವಜನಿಕರೂ ಓಡಾಡಲು ತೀವ್ರ ಕಷ್ಟವೇ ಆಗಿ ಎಂದು ದೂರಿದರು. ಬಂಗಾರಪೇಟೆಯಿಂದ ಕೋಲಾರದ ಮಾರ್ಗದ ರೈಲ್ವೆ ಹಳಿಯ ಮೇಲೆ ಸಾರ್ವಜನಿಕರು ಓಡಾಡಲು ಕಷ್ಟವಾಗಿದೆ. ಹೀಗಾಗಿ ಪಟ್ಟಣದ ಗಂಗಮ್ಮನಪಾಳ್ಯ, ಕುಂಬಾರಪಾಳ್ಯಕ್ಕೆ, ಹುದುಕುಳ, ಚಿಕ್ಕಅಂಕಂಡಹಳ್ಳಿ ಹಾಗೂ ಬಾವರಹಳ್ಳಿ ಗ್ರಾಮಗಳಿಗೆ ಹಾದು ಹೋಗಲು ಅಂಡರ್‌ಪಾಸ್‌ ನಿರ್ಮಾಣ ಮಾಡಲಾಗಿದೆ. ಆದರೆ, ಅವು ಅವೈಜ್ಞಾನಿಕವಾಗಿವೆ ಎಂದು ಆರೋಪಿಸಿದರು.

ನಾಲ್ಕು ವರ್ಷಗಳ ಹಿಂದೆ ನಿರ್ಮಾಣ ಮಾಡಿರುವ ರೈಲ್ವೆ ಅಂಡರ್‌ಪಾಸ್‌ಗಳನ್ನು ಕಾಟಾಚಾರಕ್ಕೆ ಮಾಡಲಾಗಿದೆ. ರೈಲ್ವೆ ಹಳಿಗಳ ಕೆಳಗೆ ಭಾರೀ ವಾಹನಗಳು ಓಡಾಡಲು ಕಷ್ಟವಾಗುತ್ತಿದೆ. ಮಳೆ ನೀರು ಶೇಖರಣೆ ಆದ ನಂತರ ಅದನ್ನು ಬೇರೆಡೆಗೆ ಸಾಗಿಸಲು ಯಾವುದೇ ಕ್ರಮಕೈಗೊಂಡಿಲ್ಲ. ನೀರು ಬೇಗ ಹೀರಿಕೊಳ್ಳದ ಕಾರಣ ಸಾರ್ವಜನಿಕರು ಬದಲಿ ಮಾರ್ಗದಲ್ಲಿ ಓಡಾಡಬೇಕಿದೆ. ಗುತ್ತಿಗೆದಾರರ ಆಮಿಷಕ್ಕೆ ಒಳಾಗಾಗಿರುವ ರೈಲ್ವೆ ಇಲಾಖೆಯವರು, ಈ ಕೂಡಲೆ ರಸ್ತೆಗೆ ಅಡ್ಡಲಾಗಿರುವ ಪಟ್ಟಿಗಳನ್ನು ತೆರವುಗೊಳಿಸಿ ಸುಗಮವಾಗಿ ರಸ್ತೆ ಮಾರ್ಗ ಮಾಡಿಕೊಡಲು ಮನವಿ ಮಾಡಿದರು.

ರೈಲ್ವೆ ಇಲಾಖೆಯ ಸಹಾಯಕ ಎಂಜಿನಿಯರ್‌ ಎಸ್‌.ಎಸ್‌.ರಂಜನ್‌ ಸ್ಥಳಕ್ಕೆ ದಾವಿಸಿ ಪರಿಶೀಲನೆ ಮಾಡಿ ಮಾತನಾಡಿ, ಎರಡು ದಿನಗಳಲ್ಲಿ ರಸ್ತೆ ಮಾರ್ಗವನ್ನು ಸರಿಪಡಿಸಲು ಮೇಲಧಿಕಾರಿಗಳಿಗೆ ವರದಿ ಸಲ್ಲಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.