ಇನ್ನುಳಿದ ನಾಲ್ಕು ವರ್ಷ ಸಿದ್ದು ಸಿಎಂ ಆಗಲಿ: ಇಕ್ಬಾಲ್ ಅನ್ಸಾರಿ
Team Udayavani, Jun 6, 2019, 3:00 AM IST
ಗಂಗಾವತಿ: ಮೊದಲ ಅವಧಿಯಲ್ಲಿ ಕುಮಾರಸ್ವಾಮಿ ಸಿಎಂ ಆಗಿದ್ದು, ಉಳಿದ ಅವ ಧಿಗೆ ಸಿದ್ದರಾಮಯ್ಯ ಸಿಎಂ ಆಗಬೇಕೆನ್ನುವುದರಲ್ಲಿ ತಪ್ಪಿಲ್ಲ. ಅವರನ್ನು ಸಿಎಂ ಮಾಡುವ ಮೂಲಕ ರಾಜ್ಯದಲ್ಲಿ ಇನ್ನಷ್ಟು ಅಭಿವೃದ್ಧಿಯಾಗಲು ಮೈತ್ರಿ ಪಕ್ಷಗಳ ಎಲ್ಲರೂ ಸಹಕರಿಸಬೇಕು ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ದೇಶದ ಮತದಾರರು ಬಿಜೆಪಿ ಬೆಂಬಲಿಸಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಸೋಲು, ಗೆಲುವು ಸಾಮಾನ್ಯ. ಇದನ್ನು ಸಹಜವಾಗಿ ಸ್ವೀಕರಿಸಬೇಕು ಎಂದರು.
ಸಿದ್ದರಾಮಯ್ಯ ಅವರನ್ನು ಮಾಜಿ ಸಚಿವ ರೋಷನ್ ಬೇಗ್ ಟೀಕಿಸಿದ್ದು ಸರಿಯಲ್ಲ. ಹಿಂದುಳಿದ ಮತ್ತು ಮುಸ್ಲಿಂ ಬಡ ಸಮಾಜಗಳ ಏಳ್ಗೆಗಾಗಿ ಚಿಂತಿಸುವ ಬಹುದೊಡ್ಡ ನಾಯಕ ಸಿದ್ದರಾಮಯ್ಯ. ಅಂತವರನ್ನು ಕ್ಷುಲ್ಲಕ ಕಾರಣಕ್ಕೆ ಟೀಕಿಸುವ ಮೂಲಕ ಬೇಗ್ ಸಣ್ಣವರಾಗಿದ್ದಾರೆ. ಸಚಿವ ಸ್ಥಾನದ ಆಕಾಂಕ್ಷಿಯಾಗಿರುವ ಅವರು ಇಂತಹ ಟೀಕೆ ಮಾಡುತ್ತಿದ್ದಾರೆ.
ಎಲ್ಲರೂ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟರೆ ನೀಡಲು ಸಾಧ್ಯವಿಲ್ಲ. ಬೇಗ್ ಅವರಿಗೆ ವಯಸ್ಸಾಗಿದ್ದು ವಯಸ್ಸಿಗೆ ತಕ್ಕಂತೆ ಬುದ್ಧಿಯೂ ಬೆಳೆಯಬೇಕಿದೆ. ಕೆಲವರು ಸಿದ್ದರಾಮಯ್ಯ ಮೇಲೆ ಮುಗಿ ಬೀಳುವ ಯತ್ನ ನಡೆಸಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗುತ್ತದೆ. ಸಿದ್ದರಾಮಯ್ಯ ಅತ್ಯಂತ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ
PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ