ಕಾವೇರಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರು ಪಾಲು
Team Udayavani, Jun 6, 2019, 3:00 AM IST
ಸೋಮವಾರಪೇಟೆ: ಕಾವೇರಿ ನದಿಯಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರು ಪಾಲಾದ ಘಟನೆ ಕುಶಾಲನಗರದಲ್ಲಿ ಬುಧವಾರ ಮಧ್ಯಾಹ್ನ ನಡೆದಿದೆ. ಮಡಿಕೇರಿಯ ಸರಕಾರಿ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಾದ ಆರ್.ಆಕಾಶ್ (18), ಮ್ಯಾನ್ಸ್ ಕಾಂಪೌಂಡ್ ಬಳಿಯ ಗಗನ್ (18) ಮತ್ತು ಮೇಕೇರಿ ಗ್ರಾಮದ ಶಶಾಂಕ (18) ಮೃತ ದುರ್ದೈವಿಗಳು.
ರಮ್ಜಾನ್ ಆಚರಣೆಗೆಂದು ಸುಂಟಿಕೊಪ್ಪ ಸಮೀಪದ ಸಾಂಡಲ್ಕಾಡ್ನ ಸ್ನೇಹಿತನ ಮನೆಗೆ ಬಂದು ಊಟದ ನಂತರ ಕುಶಾಲನಗರದ ಮಾದಾಪಟ್ಟಣ ಬಳಿ ಕಾವೇರಿ ನದಿಯಲ್ಲಿ ಈಜಲು ತೆರಳಿದ ಸಂದರ್ಭ ಈ ಘಟನೆ ಸಂಭವಿಸಿದೆ. ಒಟ್ಟು 10 ವಿದ್ಯಾರ್ಥಿಗಳು ಮಡಿಕೇರಿಯಿಂದ ಸಾಂಡಲ್ಕಾಡ್ಗೆ ಬಂದಿದ್ದು,
ಈ ಪೈಕಿ ಮೃತ ಮೂವರು ಆಕಾಶ್ಗೆ ಸೇರಿದ ದ್ವಿಚಕ್ರ ವಾಹನದಲ್ಲಿ ಕುಶಾಲನಗರದ ಸರಕಾರಿ ಎಂಜಿನಿಯರಿಂಗ್ ಕಾಲೇಜು ಮುಂಭಾಗ ಕಾವೇರಿ ನದಿಗೆ ತೆರಳಿ ಈಜಲು ಪ್ರಾರಂಭಿಸಿದ್ದರು. ಈ ನಡುವೆ ಉಳಿದ ಸ್ನೇಹಿತರು ಸಾಂಡಲ್ಕಾಡಿನಿಂದ ಮಾದಾಪಟ್ಟಣದವರೆಗೆ ಬಸ್ನಲ್ಲಿ ಬಂದು ನದಿ ತಟಕ್ಕೆ ಬರುವ ಸಂದರ್ಭ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.
ಮುಳುಗುತ್ತಿದ್ದ ಸ್ನೇಹಿತರನ್ನು ಸಮೀಪದಲ್ಲಿದ್ದ ಸ್ಥಳೀಯರು ರಕ್ಷಿಸಲು ಮುಂದಾದರೂ ಪ್ರಯೋಜನವಾಗಿಲ್ಲ. ತಕ್ಷಣ ಕುಶಾಲನಗರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಅಗ್ನಿಶಾಮಕ ತಂಡ ಸ್ಥಳಕ್ಕೆ ಬಂದಿದ್ದು, ಮುಳುಗು ತಜ್ಞ ರಾಮಕೃಷ್ಣ ಸೇರಿ ಮೃತದೇಹಗಳನ್ನು ನದಿಯಿಂದ ಹೊರ ತೆಗೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಆಕಾಶ್, ಮಡಿಕೇರಿಯ ಉಕ್ಕಡ ರಮೇಶ್ ಅವರ ಪುತ್ರನಾಗಿದ್ದು, ಗಗನ್, ಚೆಲುವರಾಜು ಅಲಿಯಾಸ್ ತಂಬಿ ಎಂಬುವರ ಪುತ್ರ. ಶಶಾಂಕ್, ಉಮೇಶ್ ಎಂಬುವರ ಪುತ್ರನಾಗಿದ್ದು, ಎಲ್ಲರೂ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ