ತ್ಯಾಜ್ಯ ಸಮರ್ಪಕ ವಿಂಗಡಣೆಗೆ ಶಿಸ್ತುಕ್ರಮ ಅಗತ್ಯ


Team Udayavani, Jun 6, 2019, 3:06 AM IST

tyjya

ಬೆಂಗಳೂರು: ನಗರದಲ್ಲಿ ತ್ಯಾಜ್ಯ ವಿಂಗಡಣೆ ಸಮರ್ಪಕವಾಗಿ ಆಗಬೇಕಾದರೆ ನಾಗರಿಕರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾದ ಅವಶ್ಯಕತೆಯಿದೆ ಎಂದು ರಾಜ್ಯಪಾಲ ವಿ.ಆರ್‌.ವಾಲಾ ತಿಳಿಸಿದರು.

ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬುಧವಾರ ರಾಜಭವನದಲ್ಲಿ ಆಯೋಜಿಸಿದ್ದ “ನಮ್ಮ ಕಸ ನಮ್ಮ ಜವಾಬ್ದಾರಿ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಿಯಮ ಪಾಲಿಸದವರಿಗೆ ದಂಡ ವಿಧಿಸಿದಾಗ ಮಾತ್ರವೇ ಸಮಾಜದಲ್ಲಿ ಸುಧಾರಣೆ ತರಲು ಸಾಧ್ಯವಾಗುತ್ತದೆ. ಶಿಕ್ಷೆ ಇಲ್ಲದೆ ಸುಧಾರಣೆ ತರುವುದು ಅಸಾಧ್ಯ ಎಂದರು.

ರಾಜಭವನದ ಸುತ್ತಮುತ್ತ ಸೇರಿದಂತೆ ನಗರದ ಹಲವೆಡೆಗಳಲ್ಲಿ ತ್ಯಾಜ್ಯ ಸುರಿಯುತ್ತಾರೆ. ಪಾಲಿಕೆಯವರು ಅದನ್ನು ತೆರವುಗೊಳಿಸುವ ಮೊದಲೇ ಅದಕ್ಕೆ ಬೆಂಕಿ ಹಾಕುತ್ತಿದ್ದು, ಇಂತಹ ಚಟುವಟಿಕೆಗಳಿಗೆ ಪಾಲಿಕೆ ಕಡಿವಾಣ ಹಾಕಬೇಕಿದೆ. ಪರಿಸರ ರಕ್ಷಣೆ ಬಗ್ಗೆ ಮಕ್ಕಳಿಗೆ ಶಿಕ್ಷಣ ನೀಡಿದರೆ ಮುಂದೆ ಎದುರಾಗುವ ಸಮಸ್ಯೆ ನಿವಾರಣೆ ಮಾಡಬಹುದು ಎಂದು ತಿಳಿಸಿದರು.

ನಾಗರಿಕರು ದಿನ ಕಳೆದಂತೆ ಪರಿಸರವನ್ನು ಹಾಳು ಮಾಡುತ್ತಿರುವುದರಿಂದ ಹವಾಮಾನದ ಮೇಲೆ ವ್ಯತಿರಿಕ್ತ ಪರಿಣಾಮ ಉಂಟಾಗುತ್ತಿದ್ದು, ಸರಿಯಾದ ಸಮಯಕ್ಕೆ ಮಳೆ ಬರುತ್ತಿಲ್ಲ. ನಾವು ಪರಿಸರವನ್ನು ರಕ್ಷಿಸಿದರೆ ಮಾತ್ರ ಅದು ನಮ್ಮನ್ನು ರಕ್ಷಿಸುತ್ತದೆ. ಆದ್ದರಿಂದ ನಾವು ಪರಿಸದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಸ್ವತ್ಛಭಾರತ ಅಭಿಯಾನದಿಂದ ಜನರಲ್ಲಿ ಸ್ವತ್ಛತೆ ಕಾಪಾಡುವ ಬಗ್ಗೆ ಕಾಳಜಿ ಮೂಡಿದೆ. ಇದರಿಂದಾಗಿ ದೇಶದ ಶೇ.99ರಷ್ಟು ಜಿಲ್ಲೆಗಳಲ್ಲಿ ಜನರು ಶೌಚಾಲಯಗಳನ್ನು ಬಳಸುತ್ತಿದ್ದು, ರಾಜ್ಯದ ಎಲ್ಲ ಗ್ರಾಮಗಳಲ್ಲಿಯೂ ಶೌಚಾಲಯ ಬಳಸುತ್ತಿದ್ದಾರೆ ಎಂದು ಹೇಳಿದರು.

ರಾಷ್ಟ್ರೀಯ ಹಸಿರು ನ್ಯಾಯಾಧೀಕರಣದ ರಾಜ್ಯ ಸಮಿತಿ ಅಧ್ಯಕ್ಷ ನ್ಯಾ.ಸುಭಾಷ್‌ ಬಿ ಅಡಿ ಮಾತನಾಡಿ, ನಗರದಲ್ಲಿ ಉತ್ಪತ್ತಿಯಾಗುವ ಶೇ.64ರಷ್ಟು ಮಿಶ್ರತ್ಯಾಜ್ಯವನ್ನು ಕ್ವಾರಿಗಳಲ್ಲಿ ಸುರಿಯಲಾಗುತ್ತಿದೆ. ಇದರಿಂದಾಗಿ ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದ್ದು, ಮುಂದಿನ ಪೀಳಿಗೆ ಅನೇಕ ತೊಂದರೆಗಳನ್ನು ಅನುಭವಿಸಬೇಕಾಗುತ್ತದೆ ಎಂದು ಕಳವಳ ವ್ಯಕ್ತಪಡಿಸಿದರು.

ನಗರದಲ್ಲಿ ಉತ್ಪತ್ತಿಯಾಗುವ ಮಿಶ್ರ ತ್ಯಾಜ್ಯವನ್ನು ನಾಗರಿಕರು ಮೂಲದಿಂದಲೇ ವಿಂಗಡಿಸಿ ನೀಡಿದಾಗ ಅದನ್ನು ಸಂಸ್ಕರಿಸಿ ಗೊಬ್ಬರ ತಯಾರಿಸಲು ಅನುಕೂಲವಾಗುತ್ತದೆ. ಜತೆಗೆ ರೈತರಿಗೂ ಗೊಬ್ಬರ ಪೂರೈಕೆಗೆ ಅನುಕೂಲವಾಗುತ್ತದೆ. ಇದಕ್ಕೆ ಮನೋಬಲದ ಅವಶ್ಯಕತೆಯಿದೆ ಎಂದರು.

ಸಮರ್ಪಕವಾಗಿ ತ್ಯಾಜ್ಯವಿಲೇವಾರಿ ಆಗದಿರುವುದಕ್ಕೆ ಸರ್ಕಾರ ಹಾಗೂ ನಾಗರಿಕರ ನಿರ್ಲಕ್ಷ್ಯವೇ ಕಾರಣ. ಸರ್ಕಾರ ಹಲವಾರು ನಿಯಮ ಜಾರಿಗೆ ಬಂದರೂ, ಸಮರ್ಪಕವಾಗಿ ಅನುಷ್ಠಾನವಾಗುವುದಿಲ್ಲ. ಪ್ರತಿಯೊಂದು ಮನೆಗಳಲ್ಲಿಯೇ ಕಸ ವಿಂಗಡಣೆಯಾಗಿ ಸಂಸ್ಕರಣೆಯಾದರೆ, ದೊಡ್ಡ ಕಾಂತ್ರಿಯೇ ಆಗಲಿದೆ.
-ಅಭಯ್‌ ಶ್ರೀನಿವಾಸ್‌ ಓಕಾ, ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ

ಟಾಪ್ ನ್ಯೂಸ್

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

naksal (2)

Chhattisgarh; ನಿಲ್ಲದ ನಕ್ಸಲ್‌ ಬೇಟೆ: ಓರ್ವನ ಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

Crime: ಜಗಳ ವೇಳೆ ತಳ್ಳಿದಾಗ ವಿದ್ಯುತ್‌ ತಂತಿ ಮೇಲೆ ಬಿದ್ದ ಯುವಕ ಸಾವು: 2 ಆರೋಪಿಗಳ ಬಂಧನ

7

ಇನ್‌ಸ್ಪೆಕ್ಟರ್‌ ಹೆಸರಲ್ಲಿ ಸುಲಿಗೆ: ಬೆಸ್ಕಾಂ ಎಂಜಿನಿಯರ್‌ ಸೆರೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: 14 ಲಕ್ಷ ರೂ. ಒಡವೆ ಕದಿದ್ದ ಬಾಲಕ ವಶಕ್ಕೆ

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Bengaluru: ಬೆದರಿಸಲು ನೇಣಿಗೆ ಕೊರಳೊಡ್ಡಿದ ಪತಿ ದಿಢೀರ್‌ ಕುಣಿಕೆ ಬಿಗಿದು ಸಾವು

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

Fraud: ಗೃಹ ಸಚಿವರ ಆಪ್ತ ಎಂದು ನಂಬಿಸಿ ಹಲವರಿಗೆ ವಂಚನೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

ec-aa

Election data ಏರಿಕೆ ಬಗ್ಗೆ ಪ್ರತಿಕ್ರಿಯಿಸಿ: ಇಸಿಗೆ ಸುಪ್ರೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.