ನರ್ಸಿಂಗ್ ಮಾಡುವವರಿಗೂ ವೈದ್ಯ ಶಿಕ್ಷಣಕ್ಕೆ ಅವಕಾಶ ಕೊಡಿ
Team Udayavani, Jun 6, 2019, 6:10 AM IST
ಹೊಸದಿಲ್ಲಿ: ಕೇಂದ್ರ ಸರಕಾರಕ್ಕೆ ಇಸ್ರೋ ಮಾಜಿ ಅಧ್ಯಕ್ಷ ಡಾ.ಕೆ.ಕಸ್ತೂರಿ ರಂಗನ್ ನೇತೃತ್ವದ ಸಮಿತಿ ಸಲ್ಲಿಸಿದ ರಾಷ್ಟ್ರೀಯ ಶಿಕ್ಷಣ ನೀತಿಯಲ್ಲಿ ವೈದ್ಯಕೀಯ ಶಿಕ್ಷಣದಲ್ಲೂ ಆಮೂಲಾಗ್ರ ಬದಲಾವಣೆಗೆ ಶಿಫಾರಸು ಮಾಡಲಾಗಿದೆ. ವೈದ್ಯ ಶಿಕ್ಷಣ ಕೋರ್ಸ್ಗೆ ದಂತ ವೈದ್ಯ, ನರ್ಸಿಂಗ್ ಕೋರ್ಸ್ ಮಾಡುವವ ರಿಗೆ ಲ್ಯಾಟರಲ್ ಎಂಟ್ರಿಗೆ (ನೇರಪ್ರವೇಶ)ಅವಕಾಶ ಮಾಡಿಕೊಡಬಹುದು ಎಂದು ಸಲಹೆ ಮಾಡಲಾಗಿದೆ.
ಶಿಕ್ಷಣ ನೀತಿಯ ಪ್ರಕಾರ ನರ್ಸಿಂಗ್, ದಂತ ವೈದ್ಯ, ವೈದ್ಯಕೀಯ ಕೋರ್ಸ್ಗಳಿಗೆ ಪ್ರವೇಶ ಪಡೆವ ಮುನ್ನ ಮೊದಲ 2 ವರ್ಷಗಳಲ್ಲಿ ಸಮಾನವಾಗಿರುವ ಶಿಕ್ಷಣ ಇರಬೇಕು. ಅನಂತರ ಅವರಿಗೆ ಬೇಕಾದ ಕ್ಷೇತ್ರ ಆಯ್ಕೆ ಮಾಡಿಕೊಳ್ಳಬಹುದು ಎಂದು ಹೇಳಲಾಗಿದೆ.
ಇದರ ಜತೆಗೆ ಎಂಬಿಬಿಎಸ್ ಪದವಿ ಮುಕ್ತಾಯಕ್ಕಾಗಿ ಇರುವ ಪರೀಕ್ಷೆ (ಎಕ್ಸಿಟ್ ಎಕ್ಸಾಮ್), ಸ್ನಾತಕೋತ್ತರ ವೈದ್ಯ ಕೋರ್ಸ್ಗೆ ಪ್ರವೇಶ ಪಡೆಯಲು ಇರುವ ಪರೀಕ್ಷೆಯೂ ಆಗಬೇಕು ಎಂದು ಸಲಹೆ ಮಾಡಲಾಗಿದೆ. ನಾಲ್ಕನೇ ವರ್ಷದ ಮುಕ್ತಾಯದಲ್ಲಿ ಈ ಪರೀಕ್ಷೆ ನಡೆಸಬೇಕು. ಈ ಮೂಲಕ ಪ್ರತ್ಯೇಕವಾಗಿ ಪರೀಕ್ಷೆಗೆ ಸಿದ್ಧತೆ ನಡೆಸುವ ಹೊರೆ ತಪ್ಪಿಸಿದಂತಾಗುತ್ತದೆ. ಈ ಅವಧಿಯನ್ನು ಪ್ರಾಯೋಗಿಕ ತರಬೇತಿ ಪಡೆಯಲು ಬಳಕೆ ಮಾಡಬಹುದು. ದೇಶದಲ್ಲಿ ವೈದ್ಯರ ಕೊರತೆ ಹಿನ್ನೆಲೆಯಲ್ಲಿ ಈ ಅಂಶವನ್ನು ಸಮಿತಿ ಸಲಹೆ ಮಾಡಿದೆ. ಶಿಕ್ಷಣ ಸಂಸ್ಥೆಗಳು ಸರಕಾರ ಸಿದ್ಧಪಡಿಸಿದ ಸೂಚಿಗೆ ಅನುಗುಣವಾಗಿ ತಮ್ಮದೇ ಆಗಿರುವ ಪಠ್ಯಕ್ರಮ ಸಿದ್ಧಪಡಿಸಲೂ ಅನುಮತಿ ನೀಡಬಹುದಾಗಿದೆ ಎಂದು ‘ದ ಟೈಮ್ಸ್ ಆಫ್ ಇಂಡಿಯಾ’ ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ